ಬೀದರ್: ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಮತ್ತೆ ಮೂವರು ಕೊರೊನಾಗೆ ಬಲಿಯಾಗಿದ್ದಾರೆ. 114 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.
ಜಿಲ್ಲೆಯ ಹುಮನಾಬಾದ್, ಬೀದರ್, ಔರಾದ್, ಭಾಲ್ಕಿ, ಬಸವಕಲ್ಯಾಣ ತಾಲೂಕಿನಲ್ಲಿ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಇಂದು ಮೂವರು ಸಾವನಪ್ಪಿದ್ದಾರೆ. ಮೃತಪಟ್ಟವರೆಲ್ಲರಲ್ಲೂ ಕೊವಿಡ್-19 ಇರುವುದು ದೃಢಪಟ್ಟಿದೆ.
ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 2562ಕ್ಕೆ ಮತ್ತು ಮೃತರ ಸಂಖ್ಯೆ 85ಕ್ಕೆ ತಲುಪಿದೆ. ಈವರೆಗೆ ಒಟ್ಟು 1692 ಜನರು ಸಂಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.