ಬೀದರ್: ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ 32 ಕೋಟಿ ರೂ.ಗಳ ಅವ್ಯವಹಾರ ನಡೆದಿದೆ ಎಂದು ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್ ಅವರಿಗೆ ದೂರು ನೀಡಲಾಗಿದೆ.
ಅಂತಹ ಯಾವುದೇ ಅವ್ಯವಹಾರ ವಿವಿಯಲ್ಲಿ ನಡೆದಿಲ್ಲ ಎಂದು ಉಪ ಕುಲಪತಿ ಸ್ಪಷ್ಟನೆ ನೀಡಿದ್ದರೂ ಸಮಾಧಾನಗೊಳ್ಳದ ಸಚಿವರು, ತನಿಖಾ ವರದಿ ನೀಡುವಂತೆ ಸೂಚಿಸಿದರು.
ಒಂದು ವೇಳೆ ಅವ್ಯವಹಾರ ನಡೆದಿರುವುದು ಸಾಬೀತಾದಲ್ಲಿ ಕುಲಪತಿಯವರ ಮೇಲೆ ಕ್ರಮ ಜರುಗಿಸಲು ರಾಜ್ಯಪಾಲರಿಗೆ ಪತ್ರ ಬರೆಯುವುದಾಗಿ ಭರವಸೆ ನೀಡಿದ್ದಾರೆ. ಈ ಬಳಿಕ ಅಚಿವರು ವಿದ್ಯಾರ್ಥಿಗಳ ವಸತಿ ನಿಲಯಗಳಿಗೆ ಭೇಟಿ ನೀಡಿ, ಅಲ್ಲಿನ ಸೌಲಭ್ಯಗಳ ಕುರಿತು ಮಾಹಿತಿ ಪಡೆದುಕೊಂಡರು.