ಬೀದರ್: 72 ನೇಯ ಗಣರಾಜ್ಯೋತ್ಸವ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಅವರು ಧ್ವಜಾರೋಹಣ ನೆರವೇರಿಸಿದರು.
ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಅವರು ಧ್ವಜಾರೋಹಣ ನೆರವೇರಿಸಿದರು. ಈ ವೇಳೆಯಲ್ಲಿ ಪೊಲೀಸ್ ತುಕಡಿ, ಅಬಕಾರಿ ತುಕಡಿ, ಕೆ.ಎಸ್ ಆರ್ ಪಿ ತುಕಡಿ ಹಾಗೂ ನಾಗರೀಕ ಸೇವಾ ತುಕಡಿ ಸೇರಿದಂತೆ 7 ತಂಡಗಳ ಕವಾಯತು ಗಮನ ಸೆಳೆಯಿತು.
ಕಾರ್ಯಕ್ರಮದಲ್ಲಿ ಸಂಸದ ಭಗವಂತ ಖೂಬಾ, ಶಾಸಕರಾದ ಬಂಡೆಪ್ಪ ಕಾಶೆಂಪೂರ್, ರಹಿಂಖಾನ್, ಪರಿಷತ್ ಸದಸ್ಯರಾದ ಅರವಿಂದ ಅರಳಿ, ರಘುನಾಥ್ ಮಲ್ಕಾಪೂರೆ, ಜಿಲ್ಲಾಧಿಕಾರಿ ರಾಮಚಂದ್ರನ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.
ಓದಿ : ರೈತರು- ಪೊಲೀಸರ ಮಧ್ಯ ಮಾರಾಮಾರಿ; ದೆಹಲಿ, ಹರಿಯಾಣದಲ್ಲಿ ಲಾಠಿ ಚಾರ್ಜ್