ಬಸವಕಲ್ಯಾಣ (ಬೀದರ್): ಸಾಲಬಾಧೆ ತಾಳಲಾರದೆ ರೈತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹುಲಸೂರ ತಾಲೂಕಿನ ಹಾಲಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಸತೀಶ್ ದೇಶಮುಖ ಶಾಹು (45) ಆತ್ಮಹತ್ಯೆ ಮಾಡಿಕೊಂಡ ರೈತ. ಈತ ಹುಲಸೂರು ಎಸ್ಬಿಐ ಬ್ಯಾಂಕ್ನಲ್ಲಿ 1.80 ಲಕ್ಷ ಹಾಗೂ ಡಿಸಿಸಿ ಬ್ಯಾಂಕ್ ಸಾಲ ಮಾಡಿಕೊಂಡಿದ್ದ. ಸಾಲ ಮಾಡಿ ಬೆಳೆದ ಹೆಸರು ಬೆಳೆಯೂ ಕೈಕೊಟ್ಟಿದ್ದರಿಂದ ಮನನೊಂದು ತನ್ನ ಜಮೀನಿನಲ್ಲಿರುವ ಬೇವಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈ ಕುರಿತು ಹುಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪಿಎಸ್ಐ ಗೌತಮ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದ್ದಾರೆ.