ETV Bharat / state

ಅಯೋಧ್ಯೆ ತೀರ್ಪು: ಸುಪ್ರೀಂಕೋರ್ಟ್‌ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಲು ಮನವಿ

author img

By

Published : Dec 6, 2019, 10:44 PM IST

ಬಾಬರಿ ಮಸೀದಿ ಧ್ವಂಸ ಹಿನ್ನೆಲೆಯಲ್ಲಿ ಬಾಬರಿ ಮಸೀದಿ ಕ್ರಿಯಾ ಸಮಿತಿಯಿಂದ ಕೈಗೆ ಕಪ್ಪು ಪಟ್ಟಿ ಧರಿಸಿ ಬಸವಕಲ್ಯಾಣಲ್ಲಿ ಕರಾಳ ದಿನ ಆಚರಣೆ ನಡೆಯಿತು.

ಅರ್ಜಿಗೆ ಮನವಿ
ಅರ್ಜಿಗೆ ಮನವಿ

ಬಸವಕಲ್ಯಾಣ: ಅಯೋಧ್ಯೆಯಲ್ಲಿ ಬಾಬರಿ ಮಸೀದಿ ಧ್ವಂಸ ಹಿನ್ನೆಲೆಯಲ್ಲಿ, ಬಾಬರಿ ಮಸೀದಿ ಕ್ರಿಯಾ ಸಮಿತಿಯಿಂದ ನಗರದಲ್ಲಿ ಕೈಗೆ ಕಪ್ಪು ಪಟ್ಟಿ ಧರಿಸುವ ಮೂಲಕ ಕರಾಳ ದಿನ ಆಚರಿಸಲಾಯಿತು.

ಸಮಿತಿ ಪ್ರಮುಖ ಸದಸ್ಯರ ನಿಯೋಗದಿಂದ ಹಳೆ ತಹಶೀಲ್ ಕಚೇರಿ ಆವರಣದಲ್ಲಿ ಕೆಲ ಕಾಲ ಕೈಗೆ ಕಪ್ಪು ಬಟ್ಟೆ ಧರಿಸಿ ಕರಾಳ ದಿನ ಆಚರಿಸಲಾಯಿತು. ಈ ವೇಳೆ ಅಯೋಧ್ಯೆ ತೀರ್ಪು ಸಂಬಂಧ ಸುಪ್ರೀಂಗೆ ಮೇಲ್ಮನವಿ ಅರ್ಜಿ ಸಲ್ಲಿಕೆ ಸಂಬಂಧ ಪ್ರಧಾನ ಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು ಸ್ಥಳಕ್ಕೆ ಭೇಟಿ ನೀಡಿದ ಉಪ ತಹಸೀಲ್ದಾರ ರಾಜಕುಮಾರ ಮರ್ತುರಕರ್ ಅವರಿಗೆ ಸಲ್ಲಿಸಲಾಯಿತು.

ಸುಪ್ರೀಂಕೋರ್ಟ್‌ ತೀರ್ಪು ಮರುಪರಿಶೀಲನಾ ಅರ್ಜಿಗೆ ಮನವಿ

ಕ್ರೀಯಾ ಸಮಿತಿ ಮುಖಂಡ ಇಕ್ರಾಮೋದ್ದಿನ್ ಖಾದಿವಾಲೆ ಮಾತನಾಡಿ, ಅಯೋಧ್ಯೆ ತೀರ್ಪು ಮುಸ್ಲಿಂ ಸಮುದಾಯದಲ್ಲಿ ನೋವು ಉಂಟು ಮಾಡಿದೆ. ಸುಪ್ರೀಂಕೋರ್ಟ್ ಕಳೆದ ತಿಂಗಳ 9ನೇ ತಾರೀಖಿನಂದು ನೀಡಿರುವ ತೀರ್ಪು ಪ್ರಶ್ನಿಸಿ ಜಾಮಾತ್ ಉಲೇಮಾ-ಎ-ಹಿಂದ್ ಸಲ್ಲಿಸಿರುವ ಮರುಪರಿಶೀಲನಾ ಅರ್ಜಿ ಬೆಂಬಲಿಸಿ ಮನವಿ ಪತ್ರ ನೀಡಲಾಗುತ್ತಿದೆ ಎಂದರು.

ಬಸವಕಲ್ಯಾಣ: ಅಯೋಧ್ಯೆಯಲ್ಲಿ ಬಾಬರಿ ಮಸೀದಿ ಧ್ವಂಸ ಹಿನ್ನೆಲೆಯಲ್ಲಿ, ಬಾಬರಿ ಮಸೀದಿ ಕ್ರಿಯಾ ಸಮಿತಿಯಿಂದ ನಗರದಲ್ಲಿ ಕೈಗೆ ಕಪ್ಪು ಪಟ್ಟಿ ಧರಿಸುವ ಮೂಲಕ ಕರಾಳ ದಿನ ಆಚರಿಸಲಾಯಿತು.

ಸಮಿತಿ ಪ್ರಮುಖ ಸದಸ್ಯರ ನಿಯೋಗದಿಂದ ಹಳೆ ತಹಶೀಲ್ ಕಚೇರಿ ಆವರಣದಲ್ಲಿ ಕೆಲ ಕಾಲ ಕೈಗೆ ಕಪ್ಪು ಬಟ್ಟೆ ಧರಿಸಿ ಕರಾಳ ದಿನ ಆಚರಿಸಲಾಯಿತು. ಈ ವೇಳೆ ಅಯೋಧ್ಯೆ ತೀರ್ಪು ಸಂಬಂಧ ಸುಪ್ರೀಂಗೆ ಮೇಲ್ಮನವಿ ಅರ್ಜಿ ಸಲ್ಲಿಕೆ ಸಂಬಂಧ ಪ್ರಧಾನ ಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು ಸ್ಥಳಕ್ಕೆ ಭೇಟಿ ನೀಡಿದ ಉಪ ತಹಸೀಲ್ದಾರ ರಾಜಕುಮಾರ ಮರ್ತುರಕರ್ ಅವರಿಗೆ ಸಲ್ಲಿಸಲಾಯಿತು.

ಸುಪ್ರೀಂಕೋರ್ಟ್‌ ತೀರ್ಪು ಮರುಪರಿಶೀಲನಾ ಅರ್ಜಿಗೆ ಮನವಿ

ಕ್ರೀಯಾ ಸಮಿತಿ ಮುಖಂಡ ಇಕ್ರಾಮೋದ್ದಿನ್ ಖಾದಿವಾಲೆ ಮಾತನಾಡಿ, ಅಯೋಧ್ಯೆ ತೀರ್ಪು ಮುಸ್ಲಿಂ ಸಮುದಾಯದಲ್ಲಿ ನೋವು ಉಂಟು ಮಾಡಿದೆ. ಸುಪ್ರೀಂಕೋರ್ಟ್ ಕಳೆದ ತಿಂಗಳ 9ನೇ ತಾರೀಖಿನಂದು ನೀಡಿರುವ ತೀರ್ಪು ಪ್ರಶ್ನಿಸಿ ಜಾಮಾತ್ ಉಲೇಮಾ-ಎ-ಹಿಂದ್ ಸಲ್ಲಿಸಿರುವ ಮರುಪರಿಶೀಲನಾ ಅರ್ಜಿ ಬೆಂಬಲಿಸಿ ಮನವಿ ಪತ್ರ ನೀಡಲಾಗುತ್ತಿದೆ ಎಂದರು.

Intro:

( ಈ ಸುದ್ದಿ ಬಸವಕಲ್ಯಾಣ ಡೇಟ್ ಲೈನ್ ಮೇಲೆ ಹಾಕಿ ಸರ್)


ವಿಡಿಯೊ ಕಳಿಸಲಾಗಿದೆ


ಬಸವಕಲ್ಯಾಣ: ಅಯೋಧ್ಯೆಯಲ್ಲಿಯ ಬಾಬ್ರಿ ಮಸೀದಿ ಕಟ್ಟಡ ಧ್ವಂಸ ಘಟನೆ ಹಿನ್ನೆಲೆಯಲ್ಲಿ ಬಾಬ್ರಿ ಮಸೀದಿ ಕ್ರೀಯಾ ಸಮಿತಿಯಿಂದ ನಗರದಲ್ಲಿ ಕೈಗೆ ಕಪ್ಪು ಪಟ್ಟಿ ಧರಿಸುವ ಮೂಲಕ ಕರಾಳ ದಿನ ಆಚರಿಸಲಾಯಿತು.
ಸಮಿತಿ ಪ್ರಮುಖರ ನಿಯೋಗದಿಂದ ಹಳೆ ತಹಸಿಲ್ ಕಚೇರಿ ಆವರಣದಲ್ಲಿ ಕೆಲ ಕಾಲ ಕೈಗೆ ಕಪ್ಪು ಬಟ್ಟೆ ಧರಿಸಿ ಕರಾಳ ದಿನವನ್ನಾಗಿ ಆಚರಿಸಲಾಯಿತು. ಬೇಡಿಕೆ ಸಂಬAಧ ದೇಶದ ಪ್ರಧಾನ ಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು ಸ್ಥಳಕ್ಕೆ ಭೇಟಿ ನೀಡಿದ ಉಪ ತಹಸೀಲ್ದಾರ ರಾಜಕುಮಾರ ಮರ್ತುರಕರ್ ಅವರಿಗೆ ಸಲ್ಲಿಸಲಾಯಿತು.
ಕ್ರೀಯಾ ಸಮಿತಿ ಮುಖಂಡ ಇಕ್ರಾಮೋದ್ದಿನ್ ಖಾದಿವಾಲೆ ಮಾತನಾಡಿ, ಆಯೋಧ್ಯೆ ತೀರ್ಪು ಮುಸ್ಲಿಂ ಸಮುದಾಯದಲ್ಲಿ ನೋವು ತಂದಿದೆ. ಸುಪ್ರೀಂ ಕೋರ್ಟ್ ೯ರಂದು ನೀಡಿರುವ ತೀರ್ಪನ್ನು ಪ್ರಶ್ನಿಸಿ ಜಾಮಿಯತ್ ಉಲೇಮಾ-ಎ-ಹಿಂದ್ ಸಲ್ಲಿಸಿರುವ ಮರುಪರಿಶೀಲನಾ ಅರ್ಜಿ ಬೆಂಬಲಿಸಿ ಮನವಿ ಪತ್ರ ನೀಡಲಾಗುತ್ತಿದೆ ಎಂದರು.
ಪ್ರಮುಖರಾದ ಖಾಜಾ ಮೈನೋದ್ದಿನ್, ಜುಬೇರ ನವಾಜಭಾಯಿ, ಎಂಡಿ ಜುಬೇರ, ಬಿಲಾಲ್ ಅಹ್ಮದ, ಕರೀಮಸಾಬ, ಶೇಕ್ ನಯುಮ, ಸೈಯದ ಇಪ್ತಾರಲಿ, ಖಲೀಲಮಿಯಾ, ಅಫ್ಸರ್ ಅಲಿ, ಕರೀಮ ಹಸನ್ ಸೇರಿದಂತೆ ಪ್ರಮುಖರು ಭಾಗವಹಿಸಿದ್ದರು.



ವರದಿ
ಉದಯಕುಮಾರ ಮುಳೆ
ಈ ಟಿವಿ ಭಾರತ
ಬಸವಕಲ್ಯಾಣ





Body:UDAYAKUMAR MULEConclusion:BASAVAKALYAN
ETV Bharat Logo

Copyright © 2024 Ushodaya Enterprises Pvt. Ltd., All Rights Reserved.