ETV Bharat / state

ಬೀದರ್​ನಲ್ಲಿ ಸರಳ ಬಸವ ಜಯಂತಿ ಆಚರಣೆ

author img

By

Published : Apr 26, 2020, 3:52 PM IST

ರಾಜ್ಯದಲ್ಲಿ ಕೋವಿಡ್​​​​​ ಭೀತಿಯಿಂದಾಗಿ ಜಗಜ್ಯೋತಿ ಬಸವೇಶ್ವರರ ಜಯಂತಿಯನ್ನು ಸರಳವಾಗಿ ಆಚರಿಸಲಾಗುತ್ತಿದೆ. ಬೀದರ್​ನಲ್ಲಿ ಸಚಿವ ಪ್ರಭು ಚೌವ್ಹಾಣ್, ಬಸವೇಶ್ವರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಸರಳವಾಗಿ ಜಯಂತಿ ಆಚರಿಸಿದರು.

basava-jayanti-celebration-in-bidar
ಬಸವೇಶ್ವರರ ಜಯಂತಿ

ಬೀದರ್: ಕೊರೊನಾ ವೈರಸ್ ಅಟ್ಟಹಾಸದ ನಡುವೆ ಗಡಿ ಜಿಲ್ಲೆಯಲ್ಲಿ ಸರಳ ಹಾಗೂ ಸಾಂಕೇತಿಕವಾಗಿ ಬಸವ ಜಯಂತಿ ಆಚರಿಸಲಾಯಿತು.

ನಗರದ ಬಸವೇಶ್ವರ ವೃತದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚೌವ್ಹಾಣ, ಬಸವೇಶ್ವರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಈ ಬಾರಿ ಕೊರೊನಾ ವೈರಸ್ ಹಾವಳಿಯಿಂದಾಗಿ ಸಂಭ್ರಮಗಳಿಗೆ ಅವಕಾಶವಿಲ್ಲದಿದ್ದರೂ ಮಹಾತ್ಮರ ಜಯಂತಿ ಆಚರಣೆ ಮಾಡುವುದು ಕರ್ತವ್ಯವಾಗಿದೆ. ಹೀಗಾಗಿ ಸಾಮಾಜಿಕ ನ್ಯಾಯ, ಮಾನವೀಯ ಮೌಲ್ಯಗಳು ಎತ್ತಿ ಹಿಡಿದ ಬಸವಣ್ಣನವರ ಜೀವನ ನಮ್ಮ ಸಮಾಜಕ್ಕೆ ಮಾದರಿಯಾಗಿದೆ ಎಂದರು.

ಬೀದರ್​ನಲ್ಲಿ ಸರಳ ಬಸವೇಶ್ವರ ಜಯಂತಿ ಆಚರಣೆ

ಶಾಸಕ ಬಂಡೆಪ್ಪ ಕಾಶೆಂಪೂರ್, ಸಂಸದ ಭಗವಂತ ಖೂಬಾ, ಜಿಲ್ಲಾಧಿಕಾರಿ ಡಾ. ಹೆಚ್.ಆರ್.ಮಹದೇವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ್ ಡಿ.ಎಲ್. ಹಾಗೂ ಜಿಲ್ಲಾ ಪಂಚಾಯತ್​ ಅಧ್ಯಕ್ಷೆ ಗೀತಾ ಚಿದ್ರಿ ಉಪಸ್ಥಿತರಿದ್ದರು.

ಬೀದರ್: ಕೊರೊನಾ ವೈರಸ್ ಅಟ್ಟಹಾಸದ ನಡುವೆ ಗಡಿ ಜಿಲ್ಲೆಯಲ್ಲಿ ಸರಳ ಹಾಗೂ ಸಾಂಕೇತಿಕವಾಗಿ ಬಸವ ಜಯಂತಿ ಆಚರಿಸಲಾಯಿತು.

ನಗರದ ಬಸವೇಶ್ವರ ವೃತದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚೌವ್ಹಾಣ, ಬಸವೇಶ್ವರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಈ ಬಾರಿ ಕೊರೊನಾ ವೈರಸ್ ಹಾವಳಿಯಿಂದಾಗಿ ಸಂಭ್ರಮಗಳಿಗೆ ಅವಕಾಶವಿಲ್ಲದಿದ್ದರೂ ಮಹಾತ್ಮರ ಜಯಂತಿ ಆಚರಣೆ ಮಾಡುವುದು ಕರ್ತವ್ಯವಾಗಿದೆ. ಹೀಗಾಗಿ ಸಾಮಾಜಿಕ ನ್ಯಾಯ, ಮಾನವೀಯ ಮೌಲ್ಯಗಳು ಎತ್ತಿ ಹಿಡಿದ ಬಸವಣ್ಣನವರ ಜೀವನ ನಮ್ಮ ಸಮಾಜಕ್ಕೆ ಮಾದರಿಯಾಗಿದೆ ಎಂದರು.

ಬೀದರ್​ನಲ್ಲಿ ಸರಳ ಬಸವೇಶ್ವರ ಜಯಂತಿ ಆಚರಣೆ

ಶಾಸಕ ಬಂಡೆಪ್ಪ ಕಾಶೆಂಪೂರ್, ಸಂಸದ ಭಗವಂತ ಖೂಬಾ, ಜಿಲ್ಲಾಧಿಕಾರಿ ಡಾ. ಹೆಚ್.ಆರ್.ಮಹದೇವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ್ ಡಿ.ಎಲ್. ಹಾಗೂ ಜಿಲ್ಲಾ ಪಂಚಾಯತ್​ ಅಧ್ಯಕ್ಷೆ ಗೀತಾ ಚಿದ್ರಿ ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.