ETV Bharat / state

ವೈದ್ಯಕೀಯ ಶಿಕ್ಷಣ ಪಡೆಯಲು ಉಕ್ರೇನ್​ಗೆ ತೆರಳಿದ್ದ ಬೀದರ್ ಯುವಕನ ಕಿಡ್ನಾಪ್​!

author img

By

Published : Jan 20, 2021, 9:50 AM IST

ವೈದ್ಯಕೀಯ ಶಿಕ್ಷಣಕ್ಕಾಗಿ ಉಕ್ರೇನ್ ದೇಶಕ್ಕೆ ಹೋಗಿದ್ದ ಬೀದರ್ ಜಿಲ್ಲೆಯ ಹುಕ್ಯಾಳ ತಾಂಡದ ಯುವಕ ಅಪಹರಣಕ್ಕೊಳಗಾಗಿದ್ದ ಘಟನೆ ಬೆಳಕಿಗೆ ಬಂದಿದೆ. ಉಕ್ರೇನ್ ರಾಯಭಾರಿ ಕಚೇರಿಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಸಂಕಷ್ಟದಲ್ಲಿದ್ದ ಯುವಕನನ್ನು ರಕ್ಷಿಸಲಾಗಿದೆ.

bidar-youth-kidnaped-in-ukraine
ಉಕ್ರೇನ್​ನಲ್ಲಿ ಬೀದರ್ ಯುವಕನ ಅಪಹರಣ!

ಬೀದರ್: ವೈದ್ಯಕೀಯ ಶಿಕ್ಷಣಕ್ಕಾಗಿ ಉಕ್ರೇನ್ ದೇಶಕ್ಕೆ ಹೋಗಿದ್ದ ಜಿಲ್ಲೆಯ ಔರಾದ್ ತಾಲೂಕಿನ ಹುಕ್ಯಾಳ ತಾಂಡದ ಯುವಕ ಅಪಹರಣಕ್ಕೊಳಗಾಗಿದ್ದ ಘಟನೆ ಬೆಳಕಿಗೆ ಬಂದಿದೆ.

ಹುಲ್ಯಾಳ ತಾಂಡಾದ 21 ವರ್ಷದ ಅಜಯ್​ ರಾಠೋಡ್​ ಡಿಸೆಂಬರ್ 14ರಂದು ವೈದ್ಯಕೀಯ ಶಿಕ್ಷಣಕ್ಕಾಗಿ ಉಕ್ರೇನ್ ದೇಶಕ್ಕೆ ಹೋಗಿದ್ದ. ಜನವರಿ 16ರಂದು ಅಜಯ್​ನನ್ನು ಅಪಹರಿಸಿದ ದುಷ್ಕರ್ಮಿಗಳು, ಹುಲ್ಯಾಳ ತಾಂಡದಲ್ಲಿರುವ ಆತನ ಸಂಬಂಧಿಕರಿಗೆ ಫೋನ್ ಮಾಡಿ 1 ಕೋಟಿ ರೂ. ನೀಡುವಂತೆ ಬೆದರಿಕೆ ಕರೆ ಮಾಡಿದ್ದರು. ಯುವಕನ ಸಂಬಂಧಿಕರು ಈ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ್ ಡಿ.ಎಲ್ ಅವರ ಗಮನಕ್ಕೆ ತಂದಿದ್ದಾರೆ.

ದುಷ್ಕರ್ಮಿಗಳು ಆ ಬಳಿಕ ಅಜಯ್​ನನ್ನು ಕಿರ್ಗಿಸ್ತಾನ್​ಗೆ ಕರೆದುಕೊಂಡು ಹೋಗಿ 1 ಕೋಟಿ ನೀಡದಿದ್ದಲ್ಲಿ ಅಫ್ಘಾನಿನಿಸ್ತಾನ ಗಡಿಯಲ್ಲಿ ಬಿಸಾಕುವ ಬೆದರಿಕೆ ಕರೆ ಮಾಡುವುದರ ಜೊತೆಗೆ ಆತನ ಕೈ-ಕಾಲುಗಳನ್ನ ಕಟ್ಟಿ ಹಾಕಿರುವ ಫೋಟೋ ರವಾನಿಸಿದ್ದಾರೆ. ಎರಡು ಬಾರಿ ವಿಡಿಯೋ ಕಾಲ್ ಮೂಲಕ ಕುಟುಂಬ ಸದಸ್ಯರಿಗೆ ಬೆದರಿಕೆ ಹಾಕಿದ್ದಾರೆ.

ಓದಿ: ಸೆಕ್ಯೂರಿಟಿ ಗಾರ್ಡ್ ಮೇಲೆ ಹಲ್ಲೆ ನಡೆಸಿ ಬೈಕ್​, ಹಣ ಕಿತ್ತು ಪರಾರಿಯಾದ ಬಾಲಕರು

ಇದಾದ ನಂತರ ಜಿಲ್ಲಾ ಪೊಲೀಸರು, ಭಾರತ ರಾಯಭಾರಿ ಕಚೇರಿ ಅಧಿಕಾರಿಗಳ ಸಹಕಾರದಿಂದ ಉಕ್ರೇನ್ ರಾಯಭಾರಿ ಕಚೇರಿಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಸಂಕಷ್ಟದಲ್ಲಿದ್ದ ಯುವಕನನ್ನು ರಕ್ಷಿಸಿದ್ದಾರೆ. ಕೆಲವೇ ದಿನಗಳಲ್ಲಿ ಅಜಯ್​ ಭಾರತಕ್ಕೆ ಮರಳಲಿದ್ದಾನೆ ಎಂದು ಸಂಬಂಧಿಕರು ತಿಳಿಸಿದ್ದಾರೆ.

ಬೀದರ್: ವೈದ್ಯಕೀಯ ಶಿಕ್ಷಣಕ್ಕಾಗಿ ಉಕ್ರೇನ್ ದೇಶಕ್ಕೆ ಹೋಗಿದ್ದ ಜಿಲ್ಲೆಯ ಔರಾದ್ ತಾಲೂಕಿನ ಹುಕ್ಯಾಳ ತಾಂಡದ ಯುವಕ ಅಪಹರಣಕ್ಕೊಳಗಾಗಿದ್ದ ಘಟನೆ ಬೆಳಕಿಗೆ ಬಂದಿದೆ.

ಹುಲ್ಯಾಳ ತಾಂಡಾದ 21 ವರ್ಷದ ಅಜಯ್​ ರಾಠೋಡ್​ ಡಿಸೆಂಬರ್ 14ರಂದು ವೈದ್ಯಕೀಯ ಶಿಕ್ಷಣಕ್ಕಾಗಿ ಉಕ್ರೇನ್ ದೇಶಕ್ಕೆ ಹೋಗಿದ್ದ. ಜನವರಿ 16ರಂದು ಅಜಯ್​ನನ್ನು ಅಪಹರಿಸಿದ ದುಷ್ಕರ್ಮಿಗಳು, ಹುಲ್ಯಾಳ ತಾಂಡದಲ್ಲಿರುವ ಆತನ ಸಂಬಂಧಿಕರಿಗೆ ಫೋನ್ ಮಾಡಿ 1 ಕೋಟಿ ರೂ. ನೀಡುವಂತೆ ಬೆದರಿಕೆ ಕರೆ ಮಾಡಿದ್ದರು. ಯುವಕನ ಸಂಬಂಧಿಕರು ಈ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ್ ಡಿ.ಎಲ್ ಅವರ ಗಮನಕ್ಕೆ ತಂದಿದ್ದಾರೆ.

ದುಷ್ಕರ್ಮಿಗಳು ಆ ಬಳಿಕ ಅಜಯ್​ನನ್ನು ಕಿರ್ಗಿಸ್ತಾನ್​ಗೆ ಕರೆದುಕೊಂಡು ಹೋಗಿ 1 ಕೋಟಿ ನೀಡದಿದ್ದಲ್ಲಿ ಅಫ್ಘಾನಿನಿಸ್ತಾನ ಗಡಿಯಲ್ಲಿ ಬಿಸಾಕುವ ಬೆದರಿಕೆ ಕರೆ ಮಾಡುವುದರ ಜೊತೆಗೆ ಆತನ ಕೈ-ಕಾಲುಗಳನ್ನ ಕಟ್ಟಿ ಹಾಕಿರುವ ಫೋಟೋ ರವಾನಿಸಿದ್ದಾರೆ. ಎರಡು ಬಾರಿ ವಿಡಿಯೋ ಕಾಲ್ ಮೂಲಕ ಕುಟುಂಬ ಸದಸ್ಯರಿಗೆ ಬೆದರಿಕೆ ಹಾಕಿದ್ದಾರೆ.

ಓದಿ: ಸೆಕ್ಯೂರಿಟಿ ಗಾರ್ಡ್ ಮೇಲೆ ಹಲ್ಲೆ ನಡೆಸಿ ಬೈಕ್​, ಹಣ ಕಿತ್ತು ಪರಾರಿಯಾದ ಬಾಲಕರು

ಇದಾದ ನಂತರ ಜಿಲ್ಲಾ ಪೊಲೀಸರು, ಭಾರತ ರಾಯಭಾರಿ ಕಚೇರಿ ಅಧಿಕಾರಿಗಳ ಸಹಕಾರದಿಂದ ಉಕ್ರೇನ್ ರಾಯಭಾರಿ ಕಚೇರಿಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಸಂಕಷ್ಟದಲ್ಲಿದ್ದ ಯುವಕನನ್ನು ರಕ್ಷಿಸಿದ್ದಾರೆ. ಕೆಲವೇ ದಿನಗಳಲ್ಲಿ ಅಜಯ್​ ಭಾರತಕ್ಕೆ ಮರಳಲಿದ್ದಾನೆ ಎಂದು ಸಂಬಂಧಿಕರು ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.