ETV Bharat / state

ಸ್ಥಳೀಯರಿಗೆ ಸಿಗದ ಬಿಜೆಪಿ ಟಿಕೆಟ್: ಸ್ವಾಭಿಮಾನಿ ಬಳಗದಿಂದ ಸಭೆ

ಬಸವಕಲ್ಯಾಣ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಥಳೀಯರಿಗೆ ಬಿಜೆಪಿ ಟಿಕೆಟ್​ ನೀಡದ ಹಿನ್ನೆಲೆಯಲ್ಲಿ ಸ್ವಾಭಿಮಾನಿ ಬಳಗ ಹಾಗೂ ಬಿಜೆಪಿ ಪಕ್ಷದ ಅಸಮಾಧಾನಿತ ಕಾರ್ಯಕರ್ತರು ಸಭೆ ನಡೆಸಿದರು. ಈ ಸಭೆಯಲ್ಲಿ ಬಂಡಾಯ ಅಭ್ಯರ್ಥಿಯೊಬ್ಬರನ್ನು ಕಣಕ್ಕಿಳಿಸಿ, ಬೆಂಬಲಿಸಲು ತೀರ್ಮಾನಿಸಲಾಯಿತು.

author img

By

Published : Mar 26, 2021, 10:41 PM IST

Updated : Mar 26, 2021, 10:50 PM IST

basavakalyana by election
ಸ್ವಾಭಿಮಾನಿ ಬಳಗದಿಂದ ಸಭೆ

ಬಸವಕಲ್ಯಾಣ: ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಸ್ಥಳೀಯರನ್ನು ಕೈ ಬಿಟ್ಟು ಹೊರಗಿನಿಂದ ಬಂದ ಅಭ್ಯರ್ಥಿಗೆ ಟಿಕೆಟ್ ನೀಡಲಾಗಿದೆ ಎಂದು ಆರೋಪಿಸಿ ಇಲ್ಲಿಯ ಬಸವಕಲ್ಯಾಣ ಸ್ವಾಭಿಮಾನಿ ಬಳಗ ಹಾಗೂ ಬಿಜೆಪಿ ಪಕ್ಷದ ಅಸಮಾಧಾನಿತ ಕಾರ್ಯಕರ್ತರು ಸಭೆ ನಡೆಸಿದರು. ಸ್ವಾಭಿಮಾನಿ ಬಳಗದಿಂದ ಬಂಡಾಯ ಅಭ್ಯರ್ಥಿಗೆ ಕಣಕ್ಕಿಳಿಸುವ ಮೂಲಕ ಬಿಜೆಪಿಗೆ ಬಿಸಿ ಮುಟ್ಟಿಸಲು ನಿರ್ಣಯ ಕೈಗೊಳ್ಳಲಾಯಿತು.

ಸ್ವಾಭಿಮಾನಿ ಬಳಗದಿಂದ ಸಭೆ

ನಗರದ ಬಸವೇಶ್ವರ ದೇವಸ್ಥಾನದ ದಾಸೋಹ ನಿವಾಸದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಪಾಲ್ಗೊಂಡ ಯುವಕರು ಹಾಗೂ ಪ್ರಮುಖರು, ಬಂಡಾಯ ಅಭ್ಯರ್ಥಿಯೊಬ್ಬರನ್ನು ಕಣಕ್ಕಿಳಿಸಿ, ಬೆಂಬಲಿಸಲು ತೀರ್ಮಾನಿಸಿದರು. ಸಭೆ ನಂತರ ಕೆಲ ಕಾಲ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಪ್ರತಿಭಟನೆ ನಡೆಸಿದ ಯುವಕರು, ಬಿಜೆಪಿ ವರಿಷ್ಠರ ಹಾಗೂ ಸಂಸದ ಭಗವಂತ ಖೂಬಾ ವಿರುದ್ಧ ಘೋಷಣೆಯನ್ನು ಕೂಗುವ ಮೂಲಕ ತಮ್ಮ ಆಕ್ರೋಶ ಹೊರಹಾಕಿದರು. ಇದೇ ವೇಳೆ ಸಂಸದ ಭಗವಂತ ಖೂಬಾ ಅವರ ಭಾವಚಿತ್ರವಿದ್ದ ಬ್ಯಾನರ್‌ಗೆ ಬೆಂಕಿ ಹಚ್ಚಿ ಅಸಮಧಾನ ಹೊರಹಾಕಿದರು.

ಸಂಸದ ಭಗವಂತ ಖೂಬಾ ಬಿಜೆಪಿ ಟಿಕೆಟ್ ಮಾರಿಕೊಂಡಿದ್ದಾರೆ ಎಂದು ಆರೋಪಿಸಿ ಸಂಸದರು ಹಾಗೂ ಪಕ್ಷದ ಅಭ್ಯರ್ಥಿ ಶರಣು ಸಲಗರ ವಿರುದ್ಧ ಯುವಕರು ಆಕ್ರೋಶ ವ್ಯಕ್ತಪಡಿಸಿದರು. ಸ್ಥಳೀಯರಿಗೆ ಟಿಕೆಟ್ ನೀಡದೆ ಕ್ಷೇತ್ರದ ಹೊರಗಿನವರಿಗೆ ಟಿಕೆಟ್ ನೀಡಿದ್ದಾರೆ. ಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸಬೇಕು ಜೊತೆಗೆ ಇನ್ನಷ್ಟು ಮತದಾರರಿಗೆ ಬಿಜೆಪಿ ಪಕ್ಷಕ್ಕೆ ಮತ ಹಾಕದಿರಲು ಪ್ರಚಾರ ಕೈಗೊಳ್ಳಬೇಕು ಎಂದು ಸಭೆಯಲ್ಲಿ ಒಮ್ಮತದ ನಿರ್ಧಾರ ಪ್ರಕಟಿಸಲಾಯಿತು.

ಇದನ್ನೂ ಓದಿ: ಉಪಚುನಾವಣೆಗೆ ಬಸವಕಲ್ಯಾಣ ಕ್ಷೇತ್ರದಲ್ಲಿ ಮಾತ್ರ ಅಭ್ಯರ್ಥಿ ಕಣಕ್ಕೆ: ಹೆಚ್​ಡಿಕೆ

ಕ್ಷೇತ್ರದ ಹೊರಗಿನವರಿಗೆ ಟಿಕೆಟ್ ನೀಡಿದ್ದರಿಂದ ಸ್ಥಳೀಯ ಟಿಕೆಟ್ ಆಕಾಂಕ್ಷಿಗಳಲ್ಲಿ ಒಬ್ಬರು ಪಕ್ಷೇತರರಾಗಿ ಉಪಚುನಾವಣೆಯಲ್ಲಿ ಸ್ಪರ್ಧಿಸಬೇಕು ಎಂದು ಬಸವಕಲ್ಯಾಣ ಸ್ವಾಭಿಮಾನಿ ಬಳಗ ಹಾಗೂ ಬಿಜೆಪಿ ಪಕ್ಷದ ಕಾರ್ಯಕರ್ತರು ಒತ್ತಾಯಿಸಿದರು. ಸ್ಥಳೀಯ ಟಿಕೆಟ್ ಆಕಾಂಕ್ಷಿಗಳು ಸ್ಪರ್ಧೆಗೆ ಹಿಂದೇಟು ಹಾಕಿದ್ದಲ್ಲಿ ಸ್ವಾಭಿಮಾನಿ ಬಳಗದ ಯುವಕರಲ್ಲಿ ಒಬ್ಬರನ್ನು ಬಿಜೆಪಿ ಬಂಡಾಯ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿ ಕ್ಷೇತ್ರದ ಮತದಾರರಲ್ಲಿ ಚುನಾವಣೆಗೆ ದೇಣಿಗೆ ಸಂಗ್ರಹಿಸಲು ನಿರ್ಧರಿಸಿ ಸರ್ಕಾರಕ್ಕೆ ತಕ್ಕ ಪಾಠ ಕಲಿಸಲು ಒಮ್ಮತದ ನಿರ್ಧಾರ ಕೈಗೊಳ್ಳಲಾಯಿತು.

ಪ್ರತಿಜ್ಞಾವಿಧಿ ಬೋಧನೆ:

ಇದೇ ಸಂದರ್ಭದಲ್ಲಿ ಸಭೆಯಲ್ಲಿ ಪಾಲ್ಗೊಂಡ ಯುವಕರಿಗೆ ಪ್ರಜ್ಞಾವಿಧಿ ಬೋಧಿಸಲಾಯಿತು. ನಾನು ಈ ದೇಶದ ಅಭಿಮಾನಿ, ನಾನು ಸ್ವಾಭಿಮಾನಿ, ನಾನು ಮೋದಿ ಅಭಿಮಾನಿ, ಆದರೆ ಈ ಸಲ ನಾನು ನನ್ನ ತಂದೆ ತಾಯಿಯ ಮೇಲೆ, ಗುರು ಬಸವಣ್ಣನವರ ಮೇಲೆ, ಮನೆಯ ದೇವರ ಮೇಲೆ ಪ್ರಮಾಣ ಮಾಡುತ್ತೇನೆ ಟಿಕೆಟ್ ಮಾರಿಕೊಂಡ ಬಿಜೆಪಿಗೆ ಮತ ನೀಡುವುದಿಲ್ಲ. ನನಗೆ ಬೇಕಾದ ವ್ಯಕ್ತಿ ಅಥವಾ ಅನ್ಯ ಪಕ್ಷಕ್ಕೆ ಮತ ನೀಡುತ್ತೇನೆ ಎಂದು ಪ್ರತಿಜ್ಞಾವಿಧಿ ಬೋಧಿಸಲಾಯಿತು. ಯುವ ಮುಖಂಡ ಮಹೇಶ ಸುಂಟನೂರೆ ಪ್ರತಿಜ್ಞಾವಿಧಿ ಬೋಧಿಸಿದರು.

ಬಸವಕಲ್ಯಾಣ: ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಸ್ಥಳೀಯರನ್ನು ಕೈ ಬಿಟ್ಟು ಹೊರಗಿನಿಂದ ಬಂದ ಅಭ್ಯರ್ಥಿಗೆ ಟಿಕೆಟ್ ನೀಡಲಾಗಿದೆ ಎಂದು ಆರೋಪಿಸಿ ಇಲ್ಲಿಯ ಬಸವಕಲ್ಯಾಣ ಸ್ವಾಭಿಮಾನಿ ಬಳಗ ಹಾಗೂ ಬಿಜೆಪಿ ಪಕ್ಷದ ಅಸಮಾಧಾನಿತ ಕಾರ್ಯಕರ್ತರು ಸಭೆ ನಡೆಸಿದರು. ಸ್ವಾಭಿಮಾನಿ ಬಳಗದಿಂದ ಬಂಡಾಯ ಅಭ್ಯರ್ಥಿಗೆ ಕಣಕ್ಕಿಳಿಸುವ ಮೂಲಕ ಬಿಜೆಪಿಗೆ ಬಿಸಿ ಮುಟ್ಟಿಸಲು ನಿರ್ಣಯ ಕೈಗೊಳ್ಳಲಾಯಿತು.

ಸ್ವಾಭಿಮಾನಿ ಬಳಗದಿಂದ ಸಭೆ

ನಗರದ ಬಸವೇಶ್ವರ ದೇವಸ್ಥಾನದ ದಾಸೋಹ ನಿವಾಸದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಪಾಲ್ಗೊಂಡ ಯುವಕರು ಹಾಗೂ ಪ್ರಮುಖರು, ಬಂಡಾಯ ಅಭ್ಯರ್ಥಿಯೊಬ್ಬರನ್ನು ಕಣಕ್ಕಿಳಿಸಿ, ಬೆಂಬಲಿಸಲು ತೀರ್ಮಾನಿಸಿದರು. ಸಭೆ ನಂತರ ಕೆಲ ಕಾಲ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಪ್ರತಿಭಟನೆ ನಡೆಸಿದ ಯುವಕರು, ಬಿಜೆಪಿ ವರಿಷ್ಠರ ಹಾಗೂ ಸಂಸದ ಭಗವಂತ ಖೂಬಾ ವಿರುದ್ಧ ಘೋಷಣೆಯನ್ನು ಕೂಗುವ ಮೂಲಕ ತಮ್ಮ ಆಕ್ರೋಶ ಹೊರಹಾಕಿದರು. ಇದೇ ವೇಳೆ ಸಂಸದ ಭಗವಂತ ಖೂಬಾ ಅವರ ಭಾವಚಿತ್ರವಿದ್ದ ಬ್ಯಾನರ್‌ಗೆ ಬೆಂಕಿ ಹಚ್ಚಿ ಅಸಮಧಾನ ಹೊರಹಾಕಿದರು.

ಸಂಸದ ಭಗವಂತ ಖೂಬಾ ಬಿಜೆಪಿ ಟಿಕೆಟ್ ಮಾರಿಕೊಂಡಿದ್ದಾರೆ ಎಂದು ಆರೋಪಿಸಿ ಸಂಸದರು ಹಾಗೂ ಪಕ್ಷದ ಅಭ್ಯರ್ಥಿ ಶರಣು ಸಲಗರ ವಿರುದ್ಧ ಯುವಕರು ಆಕ್ರೋಶ ವ್ಯಕ್ತಪಡಿಸಿದರು. ಸ್ಥಳೀಯರಿಗೆ ಟಿಕೆಟ್ ನೀಡದೆ ಕ್ಷೇತ್ರದ ಹೊರಗಿನವರಿಗೆ ಟಿಕೆಟ್ ನೀಡಿದ್ದಾರೆ. ಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸಬೇಕು ಜೊತೆಗೆ ಇನ್ನಷ್ಟು ಮತದಾರರಿಗೆ ಬಿಜೆಪಿ ಪಕ್ಷಕ್ಕೆ ಮತ ಹಾಕದಿರಲು ಪ್ರಚಾರ ಕೈಗೊಳ್ಳಬೇಕು ಎಂದು ಸಭೆಯಲ್ಲಿ ಒಮ್ಮತದ ನಿರ್ಧಾರ ಪ್ರಕಟಿಸಲಾಯಿತು.

ಇದನ್ನೂ ಓದಿ: ಉಪಚುನಾವಣೆಗೆ ಬಸವಕಲ್ಯಾಣ ಕ್ಷೇತ್ರದಲ್ಲಿ ಮಾತ್ರ ಅಭ್ಯರ್ಥಿ ಕಣಕ್ಕೆ: ಹೆಚ್​ಡಿಕೆ

ಕ್ಷೇತ್ರದ ಹೊರಗಿನವರಿಗೆ ಟಿಕೆಟ್ ನೀಡಿದ್ದರಿಂದ ಸ್ಥಳೀಯ ಟಿಕೆಟ್ ಆಕಾಂಕ್ಷಿಗಳಲ್ಲಿ ಒಬ್ಬರು ಪಕ್ಷೇತರರಾಗಿ ಉಪಚುನಾವಣೆಯಲ್ಲಿ ಸ್ಪರ್ಧಿಸಬೇಕು ಎಂದು ಬಸವಕಲ್ಯಾಣ ಸ್ವಾಭಿಮಾನಿ ಬಳಗ ಹಾಗೂ ಬಿಜೆಪಿ ಪಕ್ಷದ ಕಾರ್ಯಕರ್ತರು ಒತ್ತಾಯಿಸಿದರು. ಸ್ಥಳೀಯ ಟಿಕೆಟ್ ಆಕಾಂಕ್ಷಿಗಳು ಸ್ಪರ್ಧೆಗೆ ಹಿಂದೇಟು ಹಾಕಿದ್ದಲ್ಲಿ ಸ್ವಾಭಿಮಾನಿ ಬಳಗದ ಯುವಕರಲ್ಲಿ ಒಬ್ಬರನ್ನು ಬಿಜೆಪಿ ಬಂಡಾಯ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿ ಕ್ಷೇತ್ರದ ಮತದಾರರಲ್ಲಿ ಚುನಾವಣೆಗೆ ದೇಣಿಗೆ ಸಂಗ್ರಹಿಸಲು ನಿರ್ಧರಿಸಿ ಸರ್ಕಾರಕ್ಕೆ ತಕ್ಕ ಪಾಠ ಕಲಿಸಲು ಒಮ್ಮತದ ನಿರ್ಧಾರ ಕೈಗೊಳ್ಳಲಾಯಿತು.

ಪ್ರತಿಜ್ಞಾವಿಧಿ ಬೋಧನೆ:

ಇದೇ ಸಂದರ್ಭದಲ್ಲಿ ಸಭೆಯಲ್ಲಿ ಪಾಲ್ಗೊಂಡ ಯುವಕರಿಗೆ ಪ್ರಜ್ಞಾವಿಧಿ ಬೋಧಿಸಲಾಯಿತು. ನಾನು ಈ ದೇಶದ ಅಭಿಮಾನಿ, ನಾನು ಸ್ವಾಭಿಮಾನಿ, ನಾನು ಮೋದಿ ಅಭಿಮಾನಿ, ಆದರೆ ಈ ಸಲ ನಾನು ನನ್ನ ತಂದೆ ತಾಯಿಯ ಮೇಲೆ, ಗುರು ಬಸವಣ್ಣನವರ ಮೇಲೆ, ಮನೆಯ ದೇವರ ಮೇಲೆ ಪ್ರಮಾಣ ಮಾಡುತ್ತೇನೆ ಟಿಕೆಟ್ ಮಾರಿಕೊಂಡ ಬಿಜೆಪಿಗೆ ಮತ ನೀಡುವುದಿಲ್ಲ. ನನಗೆ ಬೇಕಾದ ವ್ಯಕ್ತಿ ಅಥವಾ ಅನ್ಯ ಪಕ್ಷಕ್ಕೆ ಮತ ನೀಡುತ್ತೇನೆ ಎಂದು ಪ್ರತಿಜ್ಞಾವಿಧಿ ಬೋಧಿಸಲಾಯಿತು. ಯುವ ಮುಖಂಡ ಮಹೇಶ ಸುಂಟನೂರೆ ಪ್ರತಿಜ್ಞಾವಿಧಿ ಬೋಧಿಸಿದರು.

Last Updated : Mar 26, 2021, 10:50 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.