ಬೀದರ್ : ಕೊರೊನಾ ವೈರಸ್ ಭೀತಿಯಿಂದಾಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚೌಹಾಣ್ ಅವರ ಪೂರ್ವ ನಿಗದಿತ ಕಾರ್ಯಕ್ರಮಗಳೆಲ್ಲವನ್ನೂ ರದ್ದುಗೊಳಿಸಲಾಗಿದೆ.
ಈ ಕುರಿತು ಸಚಿವರ ವಿಶೇಷ ಕರ್ತವ್ಯಾಧಿಕಾರಿ ಶಿವಕುಮಾರ್ ಕಟ್ಟೆ ಈಟಿವಿ ಭಾರತ ಜತೆ ಮಾತನಾಡಿ, ರಾಜ್ಯ ಸರ್ಕಾರದ ನಿರ್ಧಾರದಂತೆ ಪಶು ಸಂಗೋಪನಾ ಸಚಿವ ಪ್ರಭು ಚೌಹಾಣ್ ಅವರ ಪೂರ್ವ ನಿಗದಿತ ಎಲ್ಲಾ ಸಾರ್ವಜನಿಕ ಸಮಾರಂಭ ಹಾಗೂ ಕಾರ್ಯಕ್ರಮಗಳನ್ನ ರದ್ದುಗೊಳಿಸಲಾಗಿದೆ ಎಂದರು.
![Ministers](https://etvbharatimages.akamaized.net/etvbharat/prod-images/kn-bdr-05-13-prabhuchawan-7203280-av_13032020181303_1303f_1584103383_821.jpg)
ನಾಳೆ ಸಚಿವ ಚೌಹಾಣ್ ಅವರ ಸ್ವಕ್ಷೇತ್ರ ಔರಾದ್ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಶಂಕು ಸ್ಥಾಪನೆ, ಉದ್ಘಾಟನೆ ಹಾಗೂ ಸಾರ್ವಜನಿಕ ಸಮಾರಂಭಗಳು ನಡೆಯಬೇಕಿದ್ದವು. ಆದರೆ, ಸಂಪುಟ ಸಚಿವರ ತೀರ್ಮಾನದ ನಂತರ ಸಿಎಂ ಬಿಎಸ್ವೈ ಅವರು ಪ್ರಕಟಿಸಿದಂತೆ ಸಚಿವರ ಎಲ್ಲಾ ಕಾರ್ಯಕ್ರಮಗಳನ್ನ ರದ್ದುಪಡಿಸಲಾಗಿದೆ ಎಂದಿದ್ದಾರೆ.