ETV Bharat / state

ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ನ್ಯಾಯಾಂಗ ತನಿಖೆಗೆ ಕಾಂಗ್ರೆಸ್ ಆಗ್ರಹ

author img

By

Published : Aug 21, 2020, 12:26 AM IST

ಕೊರೊನಾ ನಿಯಂತ್ರಣ ನೆಪದಲ್ಲಿ ಕೋಟ್ಯಂತರ ರೂ. ಭ್ರಷ್ಟಾಚಾರ ನಡೆದಿದೆ. ಈ ಬಗ್ಗೆ ಹೈಕೋರ್ಟ್​ ನ್ಯಾಯಮೂರ್ತಿಗಳಿಂದ ತನಿಖೆ ನಡೆಸಬೇಕು ಎಂದು ಕಾಂಗ್ರೆಸ್ ಆಗ್ರಹ.

Congress urges judicial probe into BJP government's corruption
ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ನ್ಯಾಯಾಂಗ ತನಿಖೆಗೆ ಕಾಂಗ್ರೆಸ್ ಪಕ್ಷದ​ ಆಗ್ರಹ

ಬಸವಕಲ್ಯಾಣ (ಬೀದರ್): ಕೊರೊನಾ ನಿಯಂತ್ರಣ ನೆಪದಲ್ಲಿ ಕೋಟ್ಯಂತರ ರೂ. ಭ್ರಷ್ಟಾಚಾರ ನಡೆದಿದ್ದು, ಹೈಕೋರ್ಟ್​ ಹಾಲಿ ನ್ಯಾಯಮೂರ್ತಿಗಳಿಂದ ಈ ಬಗ್ಗೆ ತನಿಖೆ ನಡೆಸಬೇಕು ಎಂದು ಕಾಂಗ್ರೆಸ್ ಪಕ್ಷ ಒತ್ತಾಯಿಸಿದೆ.

ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ನ್ಯಾಯಾಂಗ ತನಿಖೆಗೆ ಕಾಂಗ್ರೆಸ್ ಪಕ್ಷದ​ ಆಗ್ರಹ

ಕಾಂಗ್ರೆಸ್ ಪದಾಧಿಕಾರಿಗಳನ್ನೊಳಗೊಂಡ ನಿಯೋಗ ನಗರದ ಮಿನಿ ವಿಧಾನಸೌಧಕ್ಕೆ ತೆರಳಿ ತಹಶೀಲ್ದಾರ್ ಸಾವಿತ್ರಿ ಸಲಗರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಸರ್ಕಾರ ಅತಿವೃಷ್ಟಿಯಿಂದಾಗಿರುವ ಹಾನಿಗೆ ಪರಿಹಾರ ಒದಗಿಸುವಲ್ಲಿ ವಿಫಲವಾಗಿದೆ. ಕೊರೊನಾ ಪರಿಕರಗಳ ಖರೀದಿಯಲ್ಲಿ ಕೋಟ್ಯಂತರ ರೂ. ಭ್ರಷ್ಟಾಚಾರವಾಗಿದ್ದು, ಹೈಕೋರ್ಟ್​ ಹಾಲಿ ನ್ಯಾಯಮೂರ್ತಿಗಳಿಂದ ಈ ಬಗ್ಗೆ ತನಿಖೆ ನಡೆಸಬೇಕು.

ಸರ್ಕಾರ ಕೂಡಲೇ ರೈತ ಹಾಗೂ ಕಾರ್ಮಿಕ ವಿರೋಧಿಯಾಗಿರುವ ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ, ಕಾರ್ಮಿಕ ಕಾಯ್ದೆ ತಿದ್ದುಪಡಿಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ಬಸವಕಲ್ಯಾಣ (ಬೀದರ್): ಕೊರೊನಾ ನಿಯಂತ್ರಣ ನೆಪದಲ್ಲಿ ಕೋಟ್ಯಂತರ ರೂ. ಭ್ರಷ್ಟಾಚಾರ ನಡೆದಿದ್ದು, ಹೈಕೋರ್ಟ್​ ಹಾಲಿ ನ್ಯಾಯಮೂರ್ತಿಗಳಿಂದ ಈ ಬಗ್ಗೆ ತನಿಖೆ ನಡೆಸಬೇಕು ಎಂದು ಕಾಂಗ್ರೆಸ್ ಪಕ್ಷ ಒತ್ತಾಯಿಸಿದೆ.

ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ನ್ಯಾಯಾಂಗ ತನಿಖೆಗೆ ಕಾಂಗ್ರೆಸ್ ಪಕ್ಷದ​ ಆಗ್ರಹ

ಕಾಂಗ್ರೆಸ್ ಪದಾಧಿಕಾರಿಗಳನ್ನೊಳಗೊಂಡ ನಿಯೋಗ ನಗರದ ಮಿನಿ ವಿಧಾನಸೌಧಕ್ಕೆ ತೆರಳಿ ತಹಶೀಲ್ದಾರ್ ಸಾವಿತ್ರಿ ಸಲಗರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಸರ್ಕಾರ ಅತಿವೃಷ್ಟಿಯಿಂದಾಗಿರುವ ಹಾನಿಗೆ ಪರಿಹಾರ ಒದಗಿಸುವಲ್ಲಿ ವಿಫಲವಾಗಿದೆ. ಕೊರೊನಾ ಪರಿಕರಗಳ ಖರೀದಿಯಲ್ಲಿ ಕೋಟ್ಯಂತರ ರೂ. ಭ್ರಷ್ಟಾಚಾರವಾಗಿದ್ದು, ಹೈಕೋರ್ಟ್​ ಹಾಲಿ ನ್ಯಾಯಮೂರ್ತಿಗಳಿಂದ ಈ ಬಗ್ಗೆ ತನಿಖೆ ನಡೆಸಬೇಕು.

ಸರ್ಕಾರ ಕೂಡಲೇ ರೈತ ಹಾಗೂ ಕಾರ್ಮಿಕ ವಿರೋಧಿಯಾಗಿರುವ ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ, ಕಾರ್ಮಿಕ ಕಾಯ್ದೆ ತಿದ್ದುಪಡಿಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.