ಬಸವಕಲ್ಯಾಣ: ವಿದ್ಯುತ್ ಸ್ಪರ್ಶಿಸಿ ಯುವಕನೋರ್ವ ಸ್ಥಳದಲ್ಲೆ ಮೃತಪಟ್ಟ ಘಟನೆ ತಾಲೂಕಿನ ಬೆಟ್ಬಾಲಕುಂದಾ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಸಚಿನ್ ನಿವರ್ತಿ ಮೇತ್ರೆ (19) ಮೃತ ಯುವಕ.
ಗ್ರಾಮದ ನೀರಿನ ಟ್ಯಾಂಕ್ ಬಳಿ ವಿದ್ಯುತ್ ತಂತಿ ಜೋಡಿಸುವ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶಿಸಿದೆ. ಹುಲಸೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.