ETV Bharat / state

ಮುಂಬೈನಲ್ಲಿ ಡಿಕೆಶಿ ವಶಕ್ಕೆ ಪಡೆದಿದ್ದಕ್ಕೆ ಕಾಂಗ್ರೆಸ್​ ಆಕ್ರೋಶ: ಬೀದರ್​ನಲ್ಲಿ ಪ್ರತಿಭಟನೆ - ಡಿ.ಕೆ.ಶಿ ಯನ್ನು ತಡೆದ ಮುಂಬೈ ಪೋಲಿಸರು, ಬೀದರ್ ಪ್ರತಿಭಟನೆ, ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ, ಮುಂಬೈ ಪೋಲಿಸ್ ವಿರುದ್ದ ಪ್ರತಿಭಟನೆ

ಅತೃಪ್ತ ಶಾಸಕರನ್ನು ಭೇಟಿ ಮಾಡಲು ಮುಂಬೈಗೆ ತೆರಳಿದ್ದ ಡಿ.ಕೆ. ಶಿವಕುಮಾರ್ ಅವರನ್ನು ಹೋಟೆಲ್ ಪ್ರವೇಶಿಸದಂತೆ ತಡೆದು ವಶಕ್ಕೆ ಪಡೆದಿದ್ದ ಮುಂಬೈ ಪೊಲೀಸರ ವಿರುದ್ಧ ಬೀದರ್ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಬೀದರ್ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ ನಡೆಯಿತು
author img

By

Published : Jul 11, 2019, 8:10 AM IST

ಬೀದರ್: ಅತೃಪ್ತ ಶಾಸಕರನ್ನು ಭೇಟಿ ಮಾಡಲು ಮುಂಬೈನ ಪಂಚತಾರ ಹೋಟೆಲ್​ಗೆ ತೆರಳಿದ್ದ ಸಚಿವ ಡಿ.ಕೆ ಶಿವಕುಮಾರ್ ಅವರನ್ನು ಹೋಟೆಲ್ ಹೊರಗೆ ತಡೆದು ವಶಕ್ಕೆ ಪಡೆದಿದ್ದನ್ನು ಜಿಲ್ಲಾ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು​​ ಖಂಡಿಸಿದ್ದಾರೆ.

ನಗರದ ಕಾಂಗ್ರೆಸ್ ಕಚೇರಿ ಎದುರು ಜಮಾಯಿಸಿದ್ದ ಕಾರ್ಯಕರ್ತರು ಮುಂಬೈ ಪೊಲೀಸ್ ಹಾಗೂ ಬಿಜೆಪಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಬೀದರ್ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ

ಕಾಯ್ದಿರಿಸಿದ ಹೋಟೆಲ್ ಕೊಠಡಿಯಲ್ಲಿ ತಂಗಲು ಸಹ ಅವಕಾಶ ಮಾಡಿಕೊಡದೆ ನಡು ಬೀದಿಯಲ್ಲಿ ಮಳೆಯಲ್ಲಿ ನಿಲ್ಲಿಸುವ ಮೂಲಕ ಅವಮಾನ ಮಾಡಲಾಗಿದೆ ಎಂದು ಪ್ರತಿಭಟನಾನಿರತರು ಕಿಡಿಕಾರಿದರು.

ಬೀದರ್: ಅತೃಪ್ತ ಶಾಸಕರನ್ನು ಭೇಟಿ ಮಾಡಲು ಮುಂಬೈನ ಪಂಚತಾರ ಹೋಟೆಲ್​ಗೆ ತೆರಳಿದ್ದ ಸಚಿವ ಡಿ.ಕೆ ಶಿವಕುಮಾರ್ ಅವರನ್ನು ಹೋಟೆಲ್ ಹೊರಗೆ ತಡೆದು ವಶಕ್ಕೆ ಪಡೆದಿದ್ದನ್ನು ಜಿಲ್ಲಾ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು​​ ಖಂಡಿಸಿದ್ದಾರೆ.

ನಗರದ ಕಾಂಗ್ರೆಸ್ ಕಚೇರಿ ಎದುರು ಜಮಾಯಿಸಿದ್ದ ಕಾರ್ಯಕರ್ತರು ಮುಂಬೈ ಪೊಲೀಸ್ ಹಾಗೂ ಬಿಜೆಪಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಬೀದರ್ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ

ಕಾಯ್ದಿರಿಸಿದ ಹೋಟೆಲ್ ಕೊಠಡಿಯಲ್ಲಿ ತಂಗಲು ಸಹ ಅವಕಾಶ ಮಾಡಿಕೊಡದೆ ನಡು ಬೀದಿಯಲ್ಲಿ ಮಳೆಯಲ್ಲಿ ನಿಲ್ಲಿಸುವ ಮೂಲಕ ಅವಮಾನ ಮಾಡಲಾಗಿದೆ ಎಂದು ಪ್ರತಿಭಟನಾನಿರತರು ಕಿಡಿಕಾರಿದರು.

Intro:ಮುಂಬೈ ಪೊಲೀಸರು ಡಿಕೆಶಿ ತಡೆದ ಘಟನೆ ಖಂಡಿಸಿ ಬೀದರ್ ನಲ್ಲಿ ಪ್ರತಿಭಟನೆ...!

ಬೀದರ್:
ಅತೃಪ್ತ ಶಾಸಕರನ್ನು ಭೇಟಿ ಮಾಡಲು ಮಹಾರಾಷ್ಟ್ರದ ಮುಂಬೈನ ಪಂಚತಾರ ಹೊಟೆಲ್ ಗೆ ಹೊಗಿದ್ದ ಸಚಿವ ಡಿ.ಕೆ ಶಿವಕುಮಾರ್ ಅವರನ್ನು ಹೊಟೆಲ್ ಹೊರಗೆ ತಡೆದು ಮುಂಬೈ ಪೊಲೀಸರು ವಶಕ್ಕೆ ತೆಗೆದುಕೊಂಡ ಘಟನೆಯನ್ನು ಖಂಡಿಸಿ ಬೀದರ್ ಜಿಲ್ಲಾ ಕಾಂಗ್ರೆಸ್ ನಿಂದ ಪ್ರತಿಭಟನೆ ಮಾಡಲಾಯಿತು.

ನಗರದ ಕಾಂಗ್ರೆಸ್ ಕಚೇರಿ ಎದುರು ಜಮಾಯಿಸಿದ ಕಾರ್ಯಕರ್ತರು ಮುಂಬೈ ಪೊಲೀಸ್ ಹಾಗೂ ಬಿಜೆಪಿ ವಿರುದ್ಧ ಘೋಷಣೆ ಕೂಗಿ ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ಹೊರ ಹಾಕಿದರು.

ಕಾಯ್ದಿರಿಸಿದ ಹೊಟೆಲ್ ಕೊಠಡಿಯಲ್ಲಿ ತಂಗಲು ಅವಕಾಶ ಮಾಡಿಕೊಡದೆ ನಡು ಬೀದಿಯಲ್ಲಿ ತುಂತುರು ಮಳೆಯಲ್ಲಿ ನಿಲ್ಲುವಂತೆ ಮಾಡಿ ಕೊನೆಗೆ ಹೈಡ್ರಾಮ ಮಾಡಿದ ಮಹಾರಾಷ್ಟ್ರ ಸರ್ಕಾರದ ಅಣತಿಯಂತೆ ಮುಂಬೈ ಪೊಲೀಸರು ವರ್ತಿಸಿದ್ದಾರೆ ಎಂದು ಆರೋಪಿಸಿದರು.Body:AnilConclusion:Bidar

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.