ETV Bharat / state

ಡೆಂಘೀ ಪ್ರಕರಣ ಉಲ್ಭಣ ಹಿನ್ನೆಲೆ.. ಈಟಿವಿ ಭಾರತ ವರದಿಯಿಂದ ಎಚ್ಚೆತ್ತ ಅಧಿಕಾರಿಗಳು

author img

By

Published : Oct 22, 2019, 11:26 PM IST

ನಿರಂತರ ನೀರು ಪೂರೈಸುವ ಸಂಬಂಧ ರಾಜ್ಯ ಸರ್ಕಾರದಿಂದ ಮಹತ್ವದ ಯೋಜನೆ ಅನುಷ್ಠಾನ ಗೊಳಿಸಲಾಗುತ್ತಿದೆ. ಆದರೆ, ಕಾಮಗಾರಿ ಆರಂಭವಾಗಿ ಹಲವು ವರ್ಷಗಳೇ ಗತಿಸಿದರೂ ಕಾಮಗಾರಿ ಪೂರ್ಣಗೊಂಡು ಯೋಜನೆ ಅನುಷ್ಠಾನಗೊಳಿಸಲು ಸಾಧ್ಯವಾಗಿಲ್ಲ. ಯೋಜನೆಯಡಿ ಪೈಪ್​ಲೈನ್​ಗಾಗಿ ಹಲವೆಡೆ ತಗ್ಗು ತೋಡಿ ಹಾಗೆ ಬಿಡಲಾಗಿದೆ. ಇದರಿಂದ ಸಾರ್ವಜನಿಕರು ತೀವ್ರ ಸಮಸ್ಯೆ ಎದುರಿಸುವಂತಾಗಿದೆ. ಅಧಿಕಾರಿಗಳ ನಿರ್ಲಕ್ಷ್ಯತನವೇ ಇದಕ್ಕೆ ಕಾರಣ ಎಂದು ಅಸಮಾಧಾನ ವ್ಯಕ್ತಪಡಿಸಿದರು.

bsk

ಬಸವಕಲ್ಯಾಣ: ಕಳೆದ ಕೆಲ ದಿನಗಳಿಂದ ನಗರದಲ್ಲಿ ಮಹಾಮಾರಿ ಡೆಂಘೀ ಪ್ರಕರಣಗಳು ಉಲ್ಭಣಗೊಂಡ ಹಿನ್ನೆಲೆಯಲ್ಲಿ ಎಚ್ಚೆತ್ತ ಸ್ಥಳೀಯ ಶಾಸಕರು ನಗರಸಭೆಯಲ್ಲಿ ಸಭೆ ನಡೆಸಿ ಅಧಿಕಾರಿಗಳ ಬೆವರಿಳಿಸಿದ್ದಾರೆ.

ನಗರಸಭೆಯಲ್ಲಿ ನಡೆದ ಸಭೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳು ಮತ್ತು ವಾರ್ಡ್​ಗಳಲ್ಲಿ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದ ಶಾಸಕರು, ನಗರದಲ್ಲಿ ಬಹುತೇಕ ಬಡ ಜನರು ಡೆಂಘೀ ಜ್ವರಕ್ಕೆ ತುತ್ತಾಗಿ ಆಸ್ಪತ್ರೆ ಸೇರತ್ತಿದ್ದಾರೆ. ಆದರೆ, ಸ್ವಚ್ಛತೆ ಕೈಗೊಳ್ಳಬೇಕಾದ ನಗರಸಭೆ ಅಧಿಕಾರಿಗಳು ನಿರ್ಲಕ್ಷ್ಯತೆವಹಿಸಿರೋದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು. ನಗರದ ಎಲ್ಲಾ ವಾರ್ಡ್​ಗಳಲ್ಲಿ ತಕ್ಷಣ ಸ್ವಚ್ಛತೆ ಕಾಪಾಡಬೇಕು. ಜತೆಗೆ ಜನರಿಗೆ ಜಾಗೃತಿ ಮೂಡಿಸುವ ಕೆಲಸ ಪರಿಣಾಮಕಾರಿಯಾಗಿ ನಡೆಸಬೇಕು ಎಂದು ನಗರಸಭೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.

ಅಧಿಕಾರಿಗಳ ಜತೆಗೆ ಶಾಸಕರ ಸಭೆ..

ನಗರದ ಎಲ್ಲ ವಾರ್ಡ್​ಗಳಲ್ಲಿ ಸಮರ್ಪಕ ಕುಡಿಯುವ ನೀರು ಪೂರೈಕೆ, ರಸ್ತೆ, ಚರಂಡಿ ನಿರ್ಮಾಣಕ್ಕೆ ಆದ್ಯತೆ ನೀಡಲಾಗುತ್ತಿದೆ. ನಿರಂತರ ನೀರು ಪೂರೈಸುವ ಸಂಬಂಧ ರಾಜ್ಯ ಸರ್ಕಾರದಿಂದ ಮಹತ್ವದ ಯೋಜನೆ ಅನುಷ್ಠಾನ ಗೊಳಿಸಲಾಗುತ್ತಿದೆ. ಆದರೆ, ಕಾಮಗಾರಿ ಆರಂಭವಾಗಿ ಹಲವು ವರ್ಷಗಳೇ ಗತಿಸಿದರೂ ಕಾಮಗಾರಿ ಪೂರ್ಣಗೊಂಡು ಯೋಜನೆ ಅನುಷ್ಠಾನಗೊಳಿಸಲು ಸಾಧ್ಯವಾಗಿಲ್ಲ. ಯೋಜನೆಯಡಿ ಪೈಪ್​ಲೈನ್​ಗಾಗಿ ಹಲವೆಡೆ ತಗ್ಗು ತೋಡಿ ಹಾಗೆ ಬಿಡಲಾಗಿದೆ. ಇದರಿಂದ ಸಾರ್ವಜನಿಕರು ತೀವ್ರ ಸಮಸ್ಯೆ ಎದುರಿಸುವಂತಾಗಿದೆ. ಅಧಿಕಾರಿಗಳ ನಿರ್ಲಕ್ಷ್ಯತನವೇ ಇದಕ್ಕೆ ಕಾರಣ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನಿರಂತರ ನೀರು ಪೂರೈಕೆ ಯೋಜನೆ ವಿಳಂಬವಾಗುತ್ತಿರುವ ಕಾರಣ ಹಳೆ ವ್ಯವಸ್ಥೆಯಿಂದಲೇ ನಗರಕ್ಕೆ ನೀರು ಸರಬರಾಜು ಮಾಡಲಾಗುತ್ತಿದೆ. ಇದರಿಂದ ಅಶುದ್ಧ ನೀರು ಪೂರೈಕೆಯಾಗಿ ವಾಂತಿ ಬೇಧಿ, ಡೆಂಘೀ ಸೇರಿ ವಿವಿಧ ಸಾಂಕ್ರಾಮಿಕ ಕಾಯಿಲೆಗಳಿಂದ ಜನ ನರಳುವಂತಾಗಿದೆ. ಇದಕ್ಕೆ ಯಾರು ಹೊಣೆ ಎಂದು ಅಧಿಕಾರಿಗಳ ವಿರುದ್ಧ ಆಕ್ರೊಶ ವ್ಯಕ್ತಪಡಿಸಿದರು.

ನಿರಂತರ ನೀರು ಪೂರೈಕೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಬೇಕು ಎಂದು ಸಂಬಂಧಿಕರಿಗೆ ಅನೇಕ ಬಾರಿ ಸೂಚಿಸಿದರೂ ಪ್ರಯೋಜನೆಯಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಶಾಸಕರು, ಬರುವ ಒಂದು ತಿಂಗಳ ಒಳಗಾಗಿ ಕಾಮಗಾರಿ ಪೂರ್ಣಗೊಳಿಸುತ್ತೇವೆ ಎಂದು ಸಂಬಂಧಿತರು ಲಿಖಿತರೂಪದಲ್ಲಿ ಭರವಸೆ ನೀಡಬೇಕು, ಇಲ್ಲವಾದಲ್ಲಿ ನಿಮ್ಮ ವಿರುದ್ಧ ಕ್ರಮಕ್ಕಾಗಿ ಮೇಲಾಧಿಕಾರಿಗಳಿಗೆ ಪತ್ರ ಬರೆಯಬೇಕಾಗುತ್ತದೆ ಎಂದು ಖಡಕ್ ಆಗಿಯೇ ಹೇಳಿದರು.

ಸಭೆಯಲ್ಲಿದ್ದ ಯೋಜನೆ ಅನುಷ್ಠಾನಾಧಿಕಾರಿಗಳು ಒಂದು ತಿಂಗಳ ಒಳಗಾಗಿ ಕಾಮಗಾರಿ ಪೂರ್ಣಗೊಳಿಸಿ ನೀರು ಪೂರೈಕೆಗೆ ಚಾಲನೆ ನೀಡಲಾಗುವದು ಎಂದು ಲಿಖಿತರೂಪದಲ್ಲಿಯೇ ಮುಚ್ಚಳಿಕೆ ಪತ್ರ ಬರೆದುಕೊಟ್ಟರು. ನಗರದ ವಿವಿಧ ಬಡಾವಣೆಗಳಲ್ಲಿ ಜನರಿಗೆ ಡೆಂಘೀ ಜ್ವರ ಹರಡುತ್ತಿದೆ. ನಗರಸಭೆ ಅಧಿಕಾರಿಗಳು ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ನಗರಸಭೆ ಪೌರಾಯುಕ್ತರಿಗೆ ಶಾಸಕರು ಸೂಚಿಸಿದರು.

ಸದಸ್ಯರಾದ ರವೀಂದ್ರ ಗಾಯಕವಾಡ, ಗಫಾರ ಪೇಶಮಮ, ರವೀಂದ್ರ ಬೋರಾಳೆ, ರಾಮ ಜಾಧವ, ಸಗೀರೋದ್ದಿನ್, ಮೀರ ಅಮಜದ ನವರಂಗ, ಪೌರಾಯುಕ್ತ ಸುರೇಶ ಬಬಲಾದ ಹಾಗೂ ಸದಸ್ಯರು ಪಾಲ್ಗೊಂಡಿದ್ದರು. ಈ ಮೊದಲು ಈಟಿವಿ ಭಾರತ ನಗರದಲ್ಲಿ ಹೆಚ್ಚುತ್ತಿರುವ ಸಾಂಕ್ರಾಮಿಕ ರೋಗಗಳ ಕುರಿತಂತೆ ವರದಿ ಪ್ರಕಟಿಸಿತ್ತು. ಇದರಿಂದ ಎಚ್ಚೆತ್ತ ಅಧಿಕಾರಿಗಳು ಈಗ ಕ್ರಮಕ್ಕೆ ಮುಂದಾಗಿದ್ದಾರೆ.

ಬಸವಕಲ್ಯಾಣ: ಕಳೆದ ಕೆಲ ದಿನಗಳಿಂದ ನಗರದಲ್ಲಿ ಮಹಾಮಾರಿ ಡೆಂಘೀ ಪ್ರಕರಣಗಳು ಉಲ್ಭಣಗೊಂಡ ಹಿನ್ನೆಲೆಯಲ್ಲಿ ಎಚ್ಚೆತ್ತ ಸ್ಥಳೀಯ ಶಾಸಕರು ನಗರಸಭೆಯಲ್ಲಿ ಸಭೆ ನಡೆಸಿ ಅಧಿಕಾರಿಗಳ ಬೆವರಿಳಿಸಿದ್ದಾರೆ.

ನಗರಸಭೆಯಲ್ಲಿ ನಡೆದ ಸಭೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳು ಮತ್ತು ವಾರ್ಡ್​ಗಳಲ್ಲಿ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದ ಶಾಸಕರು, ನಗರದಲ್ಲಿ ಬಹುತೇಕ ಬಡ ಜನರು ಡೆಂಘೀ ಜ್ವರಕ್ಕೆ ತುತ್ತಾಗಿ ಆಸ್ಪತ್ರೆ ಸೇರತ್ತಿದ್ದಾರೆ. ಆದರೆ, ಸ್ವಚ್ಛತೆ ಕೈಗೊಳ್ಳಬೇಕಾದ ನಗರಸಭೆ ಅಧಿಕಾರಿಗಳು ನಿರ್ಲಕ್ಷ್ಯತೆವಹಿಸಿರೋದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು. ನಗರದ ಎಲ್ಲಾ ವಾರ್ಡ್​ಗಳಲ್ಲಿ ತಕ್ಷಣ ಸ್ವಚ್ಛತೆ ಕಾಪಾಡಬೇಕು. ಜತೆಗೆ ಜನರಿಗೆ ಜಾಗೃತಿ ಮೂಡಿಸುವ ಕೆಲಸ ಪರಿಣಾಮಕಾರಿಯಾಗಿ ನಡೆಸಬೇಕು ಎಂದು ನಗರಸಭೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.

ಅಧಿಕಾರಿಗಳ ಜತೆಗೆ ಶಾಸಕರ ಸಭೆ..

ನಗರದ ಎಲ್ಲ ವಾರ್ಡ್​ಗಳಲ್ಲಿ ಸಮರ್ಪಕ ಕುಡಿಯುವ ನೀರು ಪೂರೈಕೆ, ರಸ್ತೆ, ಚರಂಡಿ ನಿರ್ಮಾಣಕ್ಕೆ ಆದ್ಯತೆ ನೀಡಲಾಗುತ್ತಿದೆ. ನಿರಂತರ ನೀರು ಪೂರೈಸುವ ಸಂಬಂಧ ರಾಜ್ಯ ಸರ್ಕಾರದಿಂದ ಮಹತ್ವದ ಯೋಜನೆ ಅನುಷ್ಠಾನ ಗೊಳಿಸಲಾಗುತ್ತಿದೆ. ಆದರೆ, ಕಾಮಗಾರಿ ಆರಂಭವಾಗಿ ಹಲವು ವರ್ಷಗಳೇ ಗತಿಸಿದರೂ ಕಾಮಗಾರಿ ಪೂರ್ಣಗೊಂಡು ಯೋಜನೆ ಅನುಷ್ಠಾನಗೊಳಿಸಲು ಸಾಧ್ಯವಾಗಿಲ್ಲ. ಯೋಜನೆಯಡಿ ಪೈಪ್​ಲೈನ್​ಗಾಗಿ ಹಲವೆಡೆ ತಗ್ಗು ತೋಡಿ ಹಾಗೆ ಬಿಡಲಾಗಿದೆ. ಇದರಿಂದ ಸಾರ್ವಜನಿಕರು ತೀವ್ರ ಸಮಸ್ಯೆ ಎದುರಿಸುವಂತಾಗಿದೆ. ಅಧಿಕಾರಿಗಳ ನಿರ್ಲಕ್ಷ್ಯತನವೇ ಇದಕ್ಕೆ ಕಾರಣ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನಿರಂತರ ನೀರು ಪೂರೈಕೆ ಯೋಜನೆ ವಿಳಂಬವಾಗುತ್ತಿರುವ ಕಾರಣ ಹಳೆ ವ್ಯವಸ್ಥೆಯಿಂದಲೇ ನಗರಕ್ಕೆ ನೀರು ಸರಬರಾಜು ಮಾಡಲಾಗುತ್ತಿದೆ. ಇದರಿಂದ ಅಶುದ್ಧ ನೀರು ಪೂರೈಕೆಯಾಗಿ ವಾಂತಿ ಬೇಧಿ, ಡೆಂಘೀ ಸೇರಿ ವಿವಿಧ ಸಾಂಕ್ರಾಮಿಕ ಕಾಯಿಲೆಗಳಿಂದ ಜನ ನರಳುವಂತಾಗಿದೆ. ಇದಕ್ಕೆ ಯಾರು ಹೊಣೆ ಎಂದು ಅಧಿಕಾರಿಗಳ ವಿರುದ್ಧ ಆಕ್ರೊಶ ವ್ಯಕ್ತಪಡಿಸಿದರು.

ನಿರಂತರ ನೀರು ಪೂರೈಕೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಬೇಕು ಎಂದು ಸಂಬಂಧಿಕರಿಗೆ ಅನೇಕ ಬಾರಿ ಸೂಚಿಸಿದರೂ ಪ್ರಯೋಜನೆಯಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಶಾಸಕರು, ಬರುವ ಒಂದು ತಿಂಗಳ ಒಳಗಾಗಿ ಕಾಮಗಾರಿ ಪೂರ್ಣಗೊಳಿಸುತ್ತೇವೆ ಎಂದು ಸಂಬಂಧಿತರು ಲಿಖಿತರೂಪದಲ್ಲಿ ಭರವಸೆ ನೀಡಬೇಕು, ಇಲ್ಲವಾದಲ್ಲಿ ನಿಮ್ಮ ವಿರುದ್ಧ ಕ್ರಮಕ್ಕಾಗಿ ಮೇಲಾಧಿಕಾರಿಗಳಿಗೆ ಪತ್ರ ಬರೆಯಬೇಕಾಗುತ್ತದೆ ಎಂದು ಖಡಕ್ ಆಗಿಯೇ ಹೇಳಿದರು.

ಸಭೆಯಲ್ಲಿದ್ದ ಯೋಜನೆ ಅನುಷ್ಠಾನಾಧಿಕಾರಿಗಳು ಒಂದು ತಿಂಗಳ ಒಳಗಾಗಿ ಕಾಮಗಾರಿ ಪೂರ್ಣಗೊಳಿಸಿ ನೀರು ಪೂರೈಕೆಗೆ ಚಾಲನೆ ನೀಡಲಾಗುವದು ಎಂದು ಲಿಖಿತರೂಪದಲ್ಲಿಯೇ ಮುಚ್ಚಳಿಕೆ ಪತ್ರ ಬರೆದುಕೊಟ್ಟರು. ನಗರದ ವಿವಿಧ ಬಡಾವಣೆಗಳಲ್ಲಿ ಜನರಿಗೆ ಡೆಂಘೀ ಜ್ವರ ಹರಡುತ್ತಿದೆ. ನಗರಸಭೆ ಅಧಿಕಾರಿಗಳು ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ನಗರಸಭೆ ಪೌರಾಯುಕ್ತರಿಗೆ ಶಾಸಕರು ಸೂಚಿಸಿದರು.

ಸದಸ್ಯರಾದ ರವೀಂದ್ರ ಗಾಯಕವಾಡ, ಗಫಾರ ಪೇಶಮಮ, ರವೀಂದ್ರ ಬೋರಾಳೆ, ರಾಮ ಜಾಧವ, ಸಗೀರೋದ್ದಿನ್, ಮೀರ ಅಮಜದ ನವರಂಗ, ಪೌರಾಯುಕ್ತ ಸುರೇಶ ಬಬಲಾದ ಹಾಗೂ ಸದಸ್ಯರು ಪಾಲ್ಗೊಂಡಿದ್ದರು. ಈ ಮೊದಲು ಈಟಿವಿ ಭಾರತ ನಗರದಲ್ಲಿ ಹೆಚ್ಚುತ್ತಿರುವ ಸಾಂಕ್ರಾಮಿಕ ರೋಗಗಳ ಕುರಿತಂತೆ ವರದಿ ಪ್ರಕಟಿಸಿತ್ತು. ಇದರಿಂದ ಎಚ್ಚೆತ್ತ ಅಧಿಕಾರಿಗಳು ಈಗ ಕ್ರಮಕ್ಕೆ ಮುಂದಾಗಿದ್ದಾರೆ.

Intro:(ಗಮನಕ್ಕೆ: ನಮ್ಮ ಸುದ್ದಿಗಳನ್ನು ಬಸವಕಲ್ಯಾಣ ಡೇಟ್ ಲೈನ್ ಮೇಲೆ ಹಾಕಿಕೊಳ್ಳಿ. ಸರ್,) ಸುದ್ದಿಯಲ್ಲಿ ಬರೆಯಲಾದ ಹೆಸರುಗಳನ್ನು ಕಟ್ ಮಾಡಬೇಡಿ ಸರ್)

೨ ವಿಡಿಯೊಗಳನ್ನು ಕಳಿಸಲಾಗಿದೆ



ಬಸವಕಲ್ಯಾಣ: ಕಳೆದ ಕೆಲ ದಿನಗಳಿಂದ ನಗರದ ಜನತೆಗೆ ಬೆಂಬಿಡದ ಬೇತಾಳನಂತೆ ಕಾಡುತ್ತಿರುವ ಮಹಾಮಾರಿ ಡೆಂಗ್ಯೂ ಜ್ವರ ನಗರದಾದ್ಯಂತ ಉಲ್ಭಣಗೊಂಡ ಹಿನ್ನೆಲೆಯಲ್ಲಿ ಎಚ್ಚೆÃತ್ತ ಸ್ಥಳೀಯ ಶಾಸಕರು, ನಗರಸಭೆಯಲ್ಲಿ ಸಭೆ ನಡೆಸಿ, ಅಧಿಕಾರಿಗಳ ಬೆವರಿಳಿಸಿದ್ದಾರೆ.
ನಗರಸಭೆಯಲ್ಲಿ ನಡೆದ ಸಭೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳು ಮತ್ತು ವಾರ್ಡ್ಗಳಲ್ಲಿ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದ ಶಾಸಕರು, ನಗರದಲ್ಲಿ ಬಹುತೇಕ ಬಡ ಜನರು ಡೆಂಗ್ಯೂ ಜ್ವರಕ್ಕೆ ತುತ್ತಾಗಿ ಆಸ್ಪತ್ರೆ ಸೇರತಿದ್ದಾರೆ. ಆದರೆ ನಗರದಲ್ಲಿ ಸ್ವಚ್ಚತೆ ಕೈಗೊಳ್ಳಬೇಕಾದ ನಗರಸಭೆ ಅಧಿಕಾರಿಗಳು ನಿರ್ಲಕ್ಷ ವಹಿಸಿದ್ದು ಸಲ್ಲದು ಎಂದು ಅಸಮಾಧಾನ ವ್ಯಕ್ತಪಡಿಸಿ, ನಗರದ ಎಲ್ಲಾ ವಾರ್ಡ್ಗಳಲ್ಲಿ ತಕ್ಷಣ ಸ್ವಚ್ಚತೆ ಕಾಪಾಡುವ ಜೋತೆಗೆ ಸ್ವಚ್ಚತೆ ಕುರಿತು ಜನರಿಗೆ ಜಾಗೃತಿ ಮೂಡಿಸುವ ಕೆಲಸ ಪರಿಣಾಮಕಾರಿಯಾಗಿ ನಡೆಸಬೇಕು ಎಂದು ನಗರಸಭೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.
ನಗರದ ಎಲ್ಲ ವಾರ್ಡ್ಗಳಲ್ಲಿ ಸಮರ್ಪಕ ಕುಡಿಯುವ ನೀರು ಪುರೈಕೆ, ರಸ್ತೆ, ಚರಂಡಿ ನಿರ್ಮಾಣಕ್ಕೆ ಆದ್ಯತೆ ನೀಡಲಾಗುತ್ತಿದೆ. ನಗರಕ್ಕೆ ದಿನದ ಗಂಟೆಗಳ ಕಾಲ ನಿರಂತರ ನೀರು ಪೂರೈಸುವ ಸಂಬಂಧ ರಾಜ್ಯ ಸರ್ಕಾರದಿಂದ ಮಹತ್ವದ ಯೋಜನೆ ಅನುಷ್ಠಾನ ಗೊಳಿಸಲಾಗುತ್ತಿದೆ. ಆದರೆ ಕಾಮಗಾರಿ ಆರಂಭವಾಗಿ ಹಲವು ವರ್ಷಗಳೆ ಗತಿಸಿದರು ಕಾಮಗಾರಿ ಪೂರ್ಣಗೊಂಡು ಯೋಜನೆ ಅನುಷ್ಠಾನ ಗೊಳಿಸಲು ಸಾಧ್ಯವಾಗಿಲ್ಲ. ಯೋಜನೆಯಡಿ ಪೈಪಲೈನ್‌ಗಾಗಿ ಹಲವಡೆ ತಗ್ಗುತೊಡಿ ಹಾಗೆ ಬಿಡಲಾಗಿದೆ, ಇದರಿಂದ ಸಾರ್ವಜನಿಕರಿಗೆ ತೀವ್ರ ಸಮಸ್ಯೆ ಎದುರಿಸುವಂತಾಗಿದೆ. ಅಧಿಕಾರಿಗಳ ನಿರ್ಲಕ್ಷತನವೆ ಇದಕ್ಕೆ ಕಾರಣವಾಗಿದೆ ಎಂದು ಅಸಮಧಾನ ವ್ಯಕ್ತಪಡಿಸಿದರು.
ನಿರಂತರ ನೀರು ಪೂರೈಕೆ ಯೋಜನೆ ವಿಳಂಬವಾಗುತ್ತಿರುವ ಕಾರಣ ಹಳೆ ವ್ಯವಸ್ಥೆಯಿಂದಲೇ ನಗರಕ್ಕೆ ನೀರು ಸರಬರಾಜು ಮಾಡಲಾಗುತ್ತಿದೆ, ಇದರಿಂದ ಜನರಿಗೆ ಅಶುದ್ಧ ನೀರು ಪೂರೈಕೆಯಾಗಿ ವಾಂತಿ ಬೇಧಿ, ಡೆಂಗ್ಯೂ ಸೇರಿದಂತೆ ವಿವಿಧ ಸಾಂಕ್ರಾಮಿಕ ಕಾಯಿಲೆಗಳಿಂದ ಜನ ನರಳುವಂತಾಗಿದೆ. ಇದಕ್ಕೆ ಯಾವು ಹೊಣೆ ಎಂದು ಅಧಿಕಾರಿಗಳ ವಿರುದ್ಧ ಆಕ್ರೊÃಶ ವ್ಯಕ್ತಪಡಿಸಿದರು.
ನಿರಂತರ ನೀರು ಪೂರೈಕೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಬೇಕು ಎಂದು ಸಂಬಂಧಿತರಿಗೆ ಅನೇಕಬಾರಿ ಸೂಚಿಸಿದರು ಪ್ರಯೋಜನೆಯಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಶಾಸಕರು, ಬರುವ ಒಂದು ತಿಂಗಳ ಒಳಗಾಗಿ ಕಾಮಗಾರಿ ಪೂರ್ಣಗೊಳಿಸುತ್ತೆವೆ ಎಂದು ಸಂಬಂಧಿತರು ಲಿಖಿತರೂಪದಲ್ಲಿ ಭರವಸೆ ನೀಡಬೇಕು, ಇಲ್ಲವದಲ್ಲಿ ನಿಮ್ಮ ವಿರುದ್ಧ ಕ್ರಮಕ್ಕಾಗಿ ಮೇಲಾಧಿಕಾರಿಗಳಿಗೆ ಪತ್ರ ಬರೆಯಬೇಕಾಗುತ್ತದೆ ಎಂದು ಖಡಕ್ ಆಗಿಯೇ ಹೇಳಿದರು.
ಸಭೆಯಲಿದ್ದ ಯೋಜನೆ ಅನುಷ್ಠಾನಾಧಿಕಾರಿಗಳು ಒಂದು ತಿಂಗಳ ಒಳಗಾಗಿ ಕಾಮಗಾರಿ ಪೂರ್ಣಗೊಳಿಸಿ ನೀರು ಪೂರೈಕೆಗೆ ಚಾಲನೆ ನೀಡಲಾಗುವದು ಎಂದು ಲಿಖಿತರೂಪದಲ್ಲಿಯೇ ಮುಚ್ಚಳಿಕೆ ಪತ್ರ ಬರೆದುಕೊಟ್ಟರು.
ನಗರದ ವಿವಿಧ ಬಡವಣೆಗಳಲ್ಲಿ ಅಶ್ವಚ್ಚ ವಾತಾವರಣದಿಂದಾಗಿ ಜನರಿಗೆ ಡೆಂಗ್ಯೂ ಜ್ವರ ಹರಡುತ್ತಿದೆ. ನಗರಸಭೆ ಅಧಿಕಾರಿಗಳು ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ನಗರಸಭೆ ಪೌರಾಯುಕ್ತರಿಗೆ ಶಾಸಕರು ಸೂಚಿಸಿದರು.
ಸದಸ್ಯರಾದ ರವೀಂದ್ರ ಗಾಯಕವಾಡ, ಗಫಾರ ಪೇಶಮಮ, ರವೀಂದ್ರ ಬೋರಾಳೆ, ರಾಮ ಜಾಧವ, ಸಗೀರೋದ್ದಿನ್, ಮೀರ ಅಮಜದ ನವರಂಗ, ಪೌರಾಯುಕ್ತ ಸುರೇಶ ಬಬಲಾದ ಹಾಗೂ ಸದಸ್ಯರು ಪಾಲ್ಗೊಂಡಿದ್ದರು.



ವರದಿ
ಉದಯಕುಮಾರ ಮುಳೆ
ಈ ಟಿವಿ ಭಾರತ
ಬಸವಕಲ್ಯಾಣ
Body:UDAYAKUMAR MULEConclusion:BASAVAKALYAN
ETV Bharat Logo

Copyright © 2024 Ushodaya Enterprises Pvt. Ltd., All Rights Reserved.