ETV Bharat / state

ಕೇಂದ್ರ ಸರ್ಕಾರದಿಂದ ಟ್ಯಾಕ್ಸ್ ಭಯೋತ್ಪಾದನೆ: ಖಾದರ್ - UT Khader allegation against BJP Govt

ಜನರಿಗೆ ಬೆಲೆ ಏರಿಕೆ ನಿಯಂತ್ರಣ ಮಾಡುವ ಕನಸು ತೋರಿಸಿ ಬಿಜೆಪಿ ಅಧಿಕಾರಕ್ಕೆ ಬಂದಿದೆ ಎಂದು ಮಾಜಿ ಸಚಿವ ಯು.ಟಿ.ಖಾದರ್ ಆರೋಪಿಸಿದ್ದಾರೆ.

Former Minister UT Khader
ಮಾಜಿ ಸಚಿವ ಯು.ಟಿ ಖಾದರ್
author img

By

Published : Jun 11, 2021, 7:51 PM IST

ಬೀದರ್: ಕೇಂದ್ರ ಸರ್ಕಾರ ಜನಸಾಮಾನ್ಯರ ಮೇಲೆ ಟ್ಯಾಕ್ಸ್ ಭಯೋತ್ಪಾದನೆ ಮಾಡುತ್ತಿದೆ ಎಂದು ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಯು.ಟಿ.ಖಾದರ್ ಆರೋಪಿಸಿದ್ದಾರೆ.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ದೇಶದಲ್ಲಿ ಆಡಳಿತಕ್ಕೆ ಬಂದಿದ್ದೇ ಬೆಲೆ ಏರಿಕೆ ವಿರೋಧಿಸಿ. ಪೆಟ್ರೋಲ್, ಡೀಸೆಲ್ ಹಾಗೂ ದಿನ ಬಳಕೆ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಯುಪಿಎ ವಿರುದ್ಧ ಪ್ರತಿಭಟಿಸಿ ಜನರಿಗೆ ಬೆಲೆ ಏರಿಕೆ ನಿಯಂತ್ರಣ ಮಾಡುವ ಕನಸು ತೋರಿಸಿ ಅಧಿಕಾರಕ್ಕೆ ಬಂದಿದೆ ಎಂದರು.

ಮಾಜಿ ಸಚಿವ ಯು.ಟಿ.ಖಾದರ್

ಅಧಿಕಾರಕ್ಕೆ ಬಂದ ಮೇಲೆ ತೈಲ ಬೆಲೆ, ಗ್ಯಾಸ್ ಬೆಲೆ, ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಕೊರೊನಾ ಸಂದರ್ಭದಲ್ಲಿ ಜನಸಾಮಾನ್ಯರ ಮೇಲೆ ಹೊರೆ ಹಾಕಿಸಿ ಕಾರ್ಖಾನೆಗಳ ಉದ್ಧಾರ ಮಾಡಿದ ಸರ್ಕಾರ ಜನ ಪರ ಇದೆಯಾ? ಎಂದು ಖಾದರ್​​ ಪ್ರಶ್ನಿಸಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.