ETV Bharat / state

ಹೈದರಾಬಾದ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ವ್ಯಕ್ತಿಗೆ ಕೊರೊನಾ ಸೋಂಕಿತ್ತು: ಈಶ್ವರ್​ ಖಂಡ್ರೆ - found man dead in Coronal infection

ಹೈದರಾಬಾದ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ವ್ಯಕ್ತಿಯನ್ನ ಜಿಲ್ಲಾಡಳಿತ ಮೊದಲು ಎರಡು ಬಾರಿ ಪರಿಕ್ಷೆಗೆ ಒಳಪಡಿಸಿದಾಗ ನೆಗೆಟಿವ್ ಬಂದಿತ್ತು. ಆದರೆ ಅವನಲ್ಲಿ ಕೊರೊನಾ ಸೋಂಕಿತ್ತು ಎಂದು ಈಶ್ವರ್​ ಖಂಡ್ರೆ ಹೇಳಿದ್ದಾರೆ.

Hyderabad hospital found man dead in Coronal infection Ishwar Khandre
ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ
author img

By

Published : Apr 22, 2020, 3:14 PM IST

ಬೀದರ್: ಕಳೆದ ತಿಂಗಳು ಹೈದರಾಬಾದ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ವ್ಯಕ್ತಿಯಲ್ಲಿ ಕೊರೊನಾ ಸೋಂಕಿತ್ತು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್​ ಖಂಡ್ರೆ ಹೇಳಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಲಾಕ್​ಡೌನ್ ಆರಂಭಕ್ಕೂ ಮುನ್ನ ಸಾವನ್ನಪ್ಪಿದ ಒಲ್ಡ್ ಸಿಟಿ ನಿವಾಸಿಯಲ್ಲಿ ಕೊವಿಡ್-19 ಸೋಂಕಿತ್ತು. ಆದರೆ ಜಿಲ್ಲಾಡಳಿತ ಮೊದಲು ಆ ವ್ಯಕ್ತಿಯನ್ನು ಎರಡು ಬಾರಿ ಪರಿಕ್ಷೆಗೆ ಒಳಪಡಿಸಿದಾಗ ನೆಗೆಟಿವ್ ಬಂದಿತ್ತು. ನಂತರ ಆತನನ್ನು ಹೈದರಾಬಾದ್ ಆಸ್ಪತ್ರೆಯಲ್ಲಿ ಕುಟುಂಬಸ್ಥರು ದಾಖಲಿಸಿದ್ದರು. ಈ ವೇಳೆ ಮೃತಪಟ್ಟ ವ್ಯಕ್ತಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿರುವುದು ಸತ್ಯ ಎಂದು ಈಶ್ವರ್​ ಖಂಡ್ರೆ ಹೇಳಿದ್ದಾರೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್​ ಖಂಡ್ರೆ

ಈ ಕುರಿತು ಜಿಲ್ಲಾಡಳಿತದೊಂದಿಗೆ ಚರ್ಚೆ ಮಾಡಿದಾಗ, ಮೃತ ವ್ಯಕ್ತಿ ತೆಲಂಗಾಣದಲ್ಲಿ ಸಾವನ್ನಪ್ಪಿದಕ್ಕೆ ನಮ್ಮ ಜಿಲ್ಲಾಡಳಿತ ಪ್ರಾಥಮಿಕ ಹಾಗೂ ಎರಡನೇ ಹಂತದ ಎಲ್ಲಾ ಸಂಪರ್ಕಿತರನ್ನು ಕ್ವಾರಂಟೆನ್ ಮಾಡಿದೆ.

ಪಾದರಾಯನಪುರ ಗಲಾಟೆ ತಪ್ಪಿತಸ್ಥರ ಮೇಲೆ ಕ್ರಮ:

ಬೆಂಗಳೂರಿನ ಪಾದರಾಯನಪುರ ಗಲಾಟೆಯನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ. ಅಲ್ಲದೆ ಯಾರೇ ತಪ್ಪು ಮಾಡಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಈಶ್ವರ್​ ಖಂಡ್ರೆ ಆಗ್ರಹಿಸಿದ್ದಾರೆ. ಸರ್ಕಾರ ಆ ಭಾಗದಲ್ಲಿ ಕೈಗೊಂಡ ಕ್ರಮಕ್ಕೆ ತಮ್ಮ ಬೆಂಬಲವಿದ್ದು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕಾನೂನು ಸುವ್ಯವಸ್ಥೆಗೆ ಭಂಗವಾದರೆ ಅಂಥವರಿಗೆ ಕ್ಷಮೆ ಇಲ್ಲ. ತಪ್ಪು ಯಾರೇ ಮಾಡಿದ್ದರು ಶಿಕ್ಷೆ ಕೊಡಿ ಎಂದರು.

ಚೀನಾ ಕಿಟ್ ಕಳಪೆ, ಖಂಡ್ರೆ ಗರಂ:

ಕೋವಿಡ್-19 ನಿಯಂತ್ರಣ ಕಾರ್ಯದಲ್ಲಿ ಬಳಸಲಾಗುತ್ತಿರುವ ಕಿಟ್​​ಗಳು ಕಳಪೆ ಎಂದು ಗೊತ್ತಿದ್ದರೂ ಸರ್ಕಾರ ಯಾಕೆ ಖರೀದಿ ಮಾಡಿದೆ ಎಂದು ಖಂಡ್ರೆ ಅಸಮಾಧಾನ ಹೊರ ಹಾಕಿದರು.

ಬ್ರೀಮ್ಸ್​​ನಲ್ಲಿ ಕೊರೊನಾ ಪರೀಕ್ಷಾ ಕೇಂದ್ರಕ್ಕೆ ಆಗ್ರಹ:

ಲಾಕ್​ಡೌನ್ ಶುರುವಾಗಿ ಒಂದು ತಿಂಗಳಾಗಿದೆ. ರಾಜ್ಯದಲ್ಲಿ ಕೇವಲ 18 ಕಡೆಯಲ್ಲಿ ಕೊರೊನಾ ವೈರಸ್ ಪರೀಕ್ಷಾ ಕೇಂದ್ರಗಳಿವೆ. ಹೀಗಾಗಿ ಬ್ರೀಮ್ಸ್ ಆಸ್ಪತ್ರೆಯ ಲ್ಯಾಬ್​ನಲ್ಲಿ ಪರೀಕ್ಷಾ ಕೇಂದ್ರ ಸ್ಥಾಪಿಸಲಿ ಎಂದು ಈಶ್ವರ್​ ಖಂಡ್ರೆ ಸರ್ಕಾರಕ್ಕೆ ಆಗ್ರಹಿಸಿದರು.

ಬೀದರ್​ನಿಂದ ಬೆಂಗಳೂರು ಪ್ರವಾಸ ಮಾಡಿ ರಕ್ತ ಹಾಗೂ ಗಂಟಲು ದ್ರವದ ಮಾದರಿ ಪರೀಕ್ಷೆಗೆ ಒಳಪಡಿಸಬೇಕು. ಬೀದರ್​ನಲ್ಲಿ 26 ಸಾವಿರಕ್ಕೂ ಅಧಿಕ ಸ್ಯಾಂಪಲ್ ಪಡೆಯಲಾಗಿದೆ. ಈಗಾಗಲೇ ಕಳುಹಿಸಲಾದ ಸ್ಯಾಂಪಲ್​ಗಳಲ್ಲಿ 1,074 ವರದಿ ಬರೋದು ಬಾಕಿ ಇದೆ. ಹೀಗಿರುವಾಗ ಬೀದರ್ ಬ್ರೀಮ್ಸ್ ಆಸ್ಪತ್ರೆಯ ಲ್ಯಾಬ್​ನಲ್ಲಿ ಒಂದೆರಡು ಕೋಟಿ ಖರ್ಚು ಮಾಡಿ ಪರೀಕ್ಷಾ ಕೇಂದ್ರ ಸ್ಥಾಪನೆ ಮಾಡಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ಬೀದರ್: ಕಳೆದ ತಿಂಗಳು ಹೈದರಾಬಾದ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ವ್ಯಕ್ತಿಯಲ್ಲಿ ಕೊರೊನಾ ಸೋಂಕಿತ್ತು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್​ ಖಂಡ್ರೆ ಹೇಳಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಲಾಕ್​ಡೌನ್ ಆರಂಭಕ್ಕೂ ಮುನ್ನ ಸಾವನ್ನಪ್ಪಿದ ಒಲ್ಡ್ ಸಿಟಿ ನಿವಾಸಿಯಲ್ಲಿ ಕೊವಿಡ್-19 ಸೋಂಕಿತ್ತು. ಆದರೆ ಜಿಲ್ಲಾಡಳಿತ ಮೊದಲು ಆ ವ್ಯಕ್ತಿಯನ್ನು ಎರಡು ಬಾರಿ ಪರಿಕ್ಷೆಗೆ ಒಳಪಡಿಸಿದಾಗ ನೆಗೆಟಿವ್ ಬಂದಿತ್ತು. ನಂತರ ಆತನನ್ನು ಹೈದರಾಬಾದ್ ಆಸ್ಪತ್ರೆಯಲ್ಲಿ ಕುಟುಂಬಸ್ಥರು ದಾಖಲಿಸಿದ್ದರು. ಈ ವೇಳೆ ಮೃತಪಟ್ಟ ವ್ಯಕ್ತಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿರುವುದು ಸತ್ಯ ಎಂದು ಈಶ್ವರ್​ ಖಂಡ್ರೆ ಹೇಳಿದ್ದಾರೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್​ ಖಂಡ್ರೆ

ಈ ಕುರಿತು ಜಿಲ್ಲಾಡಳಿತದೊಂದಿಗೆ ಚರ್ಚೆ ಮಾಡಿದಾಗ, ಮೃತ ವ್ಯಕ್ತಿ ತೆಲಂಗಾಣದಲ್ಲಿ ಸಾವನ್ನಪ್ಪಿದಕ್ಕೆ ನಮ್ಮ ಜಿಲ್ಲಾಡಳಿತ ಪ್ರಾಥಮಿಕ ಹಾಗೂ ಎರಡನೇ ಹಂತದ ಎಲ್ಲಾ ಸಂಪರ್ಕಿತರನ್ನು ಕ್ವಾರಂಟೆನ್ ಮಾಡಿದೆ.

ಪಾದರಾಯನಪುರ ಗಲಾಟೆ ತಪ್ಪಿತಸ್ಥರ ಮೇಲೆ ಕ್ರಮ:

ಬೆಂಗಳೂರಿನ ಪಾದರಾಯನಪುರ ಗಲಾಟೆಯನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ. ಅಲ್ಲದೆ ಯಾರೇ ತಪ್ಪು ಮಾಡಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಈಶ್ವರ್​ ಖಂಡ್ರೆ ಆಗ್ರಹಿಸಿದ್ದಾರೆ. ಸರ್ಕಾರ ಆ ಭಾಗದಲ್ಲಿ ಕೈಗೊಂಡ ಕ್ರಮಕ್ಕೆ ತಮ್ಮ ಬೆಂಬಲವಿದ್ದು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕಾನೂನು ಸುವ್ಯವಸ್ಥೆಗೆ ಭಂಗವಾದರೆ ಅಂಥವರಿಗೆ ಕ್ಷಮೆ ಇಲ್ಲ. ತಪ್ಪು ಯಾರೇ ಮಾಡಿದ್ದರು ಶಿಕ್ಷೆ ಕೊಡಿ ಎಂದರು.

ಚೀನಾ ಕಿಟ್ ಕಳಪೆ, ಖಂಡ್ರೆ ಗರಂ:

ಕೋವಿಡ್-19 ನಿಯಂತ್ರಣ ಕಾರ್ಯದಲ್ಲಿ ಬಳಸಲಾಗುತ್ತಿರುವ ಕಿಟ್​​ಗಳು ಕಳಪೆ ಎಂದು ಗೊತ್ತಿದ್ದರೂ ಸರ್ಕಾರ ಯಾಕೆ ಖರೀದಿ ಮಾಡಿದೆ ಎಂದು ಖಂಡ್ರೆ ಅಸಮಾಧಾನ ಹೊರ ಹಾಕಿದರು.

ಬ್ರೀಮ್ಸ್​​ನಲ್ಲಿ ಕೊರೊನಾ ಪರೀಕ್ಷಾ ಕೇಂದ್ರಕ್ಕೆ ಆಗ್ರಹ:

ಲಾಕ್​ಡೌನ್ ಶುರುವಾಗಿ ಒಂದು ತಿಂಗಳಾಗಿದೆ. ರಾಜ್ಯದಲ್ಲಿ ಕೇವಲ 18 ಕಡೆಯಲ್ಲಿ ಕೊರೊನಾ ವೈರಸ್ ಪರೀಕ್ಷಾ ಕೇಂದ್ರಗಳಿವೆ. ಹೀಗಾಗಿ ಬ್ರೀಮ್ಸ್ ಆಸ್ಪತ್ರೆಯ ಲ್ಯಾಬ್​ನಲ್ಲಿ ಪರೀಕ್ಷಾ ಕೇಂದ್ರ ಸ್ಥಾಪಿಸಲಿ ಎಂದು ಈಶ್ವರ್​ ಖಂಡ್ರೆ ಸರ್ಕಾರಕ್ಕೆ ಆಗ್ರಹಿಸಿದರು.

ಬೀದರ್​ನಿಂದ ಬೆಂಗಳೂರು ಪ್ರವಾಸ ಮಾಡಿ ರಕ್ತ ಹಾಗೂ ಗಂಟಲು ದ್ರವದ ಮಾದರಿ ಪರೀಕ್ಷೆಗೆ ಒಳಪಡಿಸಬೇಕು. ಬೀದರ್​ನಲ್ಲಿ 26 ಸಾವಿರಕ್ಕೂ ಅಧಿಕ ಸ್ಯಾಂಪಲ್ ಪಡೆಯಲಾಗಿದೆ. ಈಗಾಗಲೇ ಕಳುಹಿಸಲಾದ ಸ್ಯಾಂಪಲ್​ಗಳಲ್ಲಿ 1,074 ವರದಿ ಬರೋದು ಬಾಕಿ ಇದೆ. ಹೀಗಿರುವಾಗ ಬೀದರ್ ಬ್ರೀಮ್ಸ್ ಆಸ್ಪತ್ರೆಯ ಲ್ಯಾಬ್​ನಲ್ಲಿ ಒಂದೆರಡು ಕೋಟಿ ಖರ್ಚು ಮಾಡಿ ಪರೀಕ್ಷಾ ಕೇಂದ್ರ ಸ್ಥಾಪನೆ ಮಾಡಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.