ETV Bharat / state

ಕೆಡಿಪಿ ಸಭೆಯಲ್ಲಿ ಅಧಿಕಾರಿಗಳ ಮೈ ಚಳಿ ಬಿಡಿಸಿದ ಸಚಿವ ಚವ್ಹಾಣ - kdp meeting at bidar news

ಬೀದರ್ ನಗರದ ಜಿಲ್ಲಾ ಪಂಚಾಯತ್​​​ ಸಭಾಂಗಣದಲ್ಲಿ ತಡರಾತ್ರಿವರೆಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಕೆಡಿಪಿ ಸಭೆ ನಡೆಸಿದ್ದಾರೆ.

ಕೆಡಿಪಿ ಸಭೆ
author img

By

Published : Oct 26, 2019, 8:25 AM IST

ಬೀದರ್: ಎಸಿ ರೂಮಿನ ಆಫೀಸ್ ಬಿಟ್ಟು ಗ್ರೌಂಡ್ ವರ್ಕ್ ಮಾಡಿ, ಜನರೊಂದಿಗೆ ಪ್ರೀತಿಯಿಂದ ಮಾತನಾಡಿ ಸಮಸ್ಯೆಗಳನ್ನ ಆನ್ ದಿ ಸ್ಪಾಟ್ ಬಗೆಹರಿಸಿ. ಇದೆಲ್ಲವೂ ಮಾಡಲಿಕ್ಕೆ ಆಗಲ್ಲ ಅನ್ನೋರು ಸಸ್ಪೆಂಡ್ ಆಗಲು ತಯಾರಾಗಿರಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಖಡಕ್ ಖಡಕ್ಕಾಗಿ ಎಚ್ಚರಿಕೆ ನೀಡಿದ್ದಾರೆ.

ನಗರದ ಜಿಲ್ಲಾ ಪಂಚಾಯತ್​​​ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಅಧಿಕಾರಿಗಳ ಮೈ ಚಳಿ ಬಿಡಿಸಿದ ಸಚಿವರು, ಆಡಳಿತ ವ್ಯವಸ್ಥೆ ಚುರುಕಾಗಿ‌ ನಡೆಯುವಂತಾಗಲು ಜಿಲ್ಲಾ ಮಟ್ಟದ ಅಧಿಕಾರಿಗಳು ತಮ್ಮ ಅಧೀನದಲ್ಲಿರುವ ಕಚೇರಿಗಳಿಗೆ ಆಗಾಗ ಅನಿರೀಕ್ಷಿತ ಭೇಟಿ ನೀಡುವ ಪರಿಪಾಠ ಬೆಳೆಸಿಕೊಳ್ಳಬೇಕು. ಮೇಲಾಧಿಕಾರಿಗಳು ಸಮಯ ಪಾಲನೆ ಮಾಡಿದಲ್ಲಿ ತಮ್ಮ ಅಧೀನ ಅಧಿಕಾರಿ ಮತ್ತು ಸಿಬ್ಬಂದಿ ತಾವಾಗೇ ಸಮಯ ಪಾಲನೆ‌ ಮಾಡುವರು. ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ಎಲ್ಲಾ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಕನಿಷ್ಠ 15 ದಿನಕ್ಕೊಮ್ಮೆ ತಮ್ಮ ವ್ಯಾಪ್ತಿಯಲ್ಲಿನ ಕಚೇರಿಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಚುರುಕು‌ ಮುಟ್ಟಿಸುವುದರಿಂದ ಎಲ್ಲವೂ ಸರಿಯಾಗುತ್ತೆ ಎಂದರು. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಅನುಷ್ಠಾನ ಸರಿಯಾಗಿಲ್ಲ ಎನ್ನುವ ದೂರುಗಳಿವೆ. ಅದನ್ನು ಸರಿಪಡಿಸಬೇಕು. ಮಣ್ಣು ಪರೀಕ್ಷೆ ಯೋಜನೆಯ ಬಗ್ಗೆ ಎಲ್ಲ ರೈತರಿಗೆ ಮಾಹಿತಿ ಇಲ್ಲ. ಹೆಚ್ಚು ಪ್ರಚಾರ ಮಾಡಿ ಕಾರ್ಯಕ್ರಮದ ಮಹತ್ವದ ಬಗ್ಗೆ ತಿಳುವಳಿಕೆ ಮೂಡಿಸಬೇಕು ಎಂದರು.

ಕೆಡಿಪಿ ಸಭೆ

ಕೆಲವು ಶಾಲೆಗಳಿಗೆ ಭೇಟಿ ನೀಡಿದಾಗ 1ರಿಂದ 7ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಕನ್ನಡವನ್ನೇ ಓದುವ ಸಾಮರ್ಥ್ಯ ಇಲ್ಲದಿರುವುದು ಕಂಡು ಬಂದಿದೆ. ತಾಲೂಕು ಹಂತದ ಅಧಿಕಾರಿಗಳು ಪ್ರಾಥಮಿಕ‌ ಶಾಲೆಯಲ್ಲಿ ಶಿಕ್ಷಣ ಗುಣಮಟ್ಟ ಸುಧಾರಿಸಲು ಪ್ರಯತ್ನಿಸಬೇಕು ಎಂದು ಸಚಿವರು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ಸೂಚಿಸಿದರು.

ಬೀದರ್: ಎಸಿ ರೂಮಿನ ಆಫೀಸ್ ಬಿಟ್ಟು ಗ್ರೌಂಡ್ ವರ್ಕ್ ಮಾಡಿ, ಜನರೊಂದಿಗೆ ಪ್ರೀತಿಯಿಂದ ಮಾತನಾಡಿ ಸಮಸ್ಯೆಗಳನ್ನ ಆನ್ ದಿ ಸ್ಪಾಟ್ ಬಗೆಹರಿಸಿ. ಇದೆಲ್ಲವೂ ಮಾಡಲಿಕ್ಕೆ ಆಗಲ್ಲ ಅನ್ನೋರು ಸಸ್ಪೆಂಡ್ ಆಗಲು ತಯಾರಾಗಿರಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಖಡಕ್ ಖಡಕ್ಕಾಗಿ ಎಚ್ಚರಿಕೆ ನೀಡಿದ್ದಾರೆ.

ನಗರದ ಜಿಲ್ಲಾ ಪಂಚಾಯತ್​​​ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಅಧಿಕಾರಿಗಳ ಮೈ ಚಳಿ ಬಿಡಿಸಿದ ಸಚಿವರು, ಆಡಳಿತ ವ್ಯವಸ್ಥೆ ಚುರುಕಾಗಿ‌ ನಡೆಯುವಂತಾಗಲು ಜಿಲ್ಲಾ ಮಟ್ಟದ ಅಧಿಕಾರಿಗಳು ತಮ್ಮ ಅಧೀನದಲ್ಲಿರುವ ಕಚೇರಿಗಳಿಗೆ ಆಗಾಗ ಅನಿರೀಕ್ಷಿತ ಭೇಟಿ ನೀಡುವ ಪರಿಪಾಠ ಬೆಳೆಸಿಕೊಳ್ಳಬೇಕು. ಮೇಲಾಧಿಕಾರಿಗಳು ಸಮಯ ಪಾಲನೆ ಮಾಡಿದಲ್ಲಿ ತಮ್ಮ ಅಧೀನ ಅಧಿಕಾರಿ ಮತ್ತು ಸಿಬ್ಬಂದಿ ತಾವಾಗೇ ಸಮಯ ಪಾಲನೆ‌ ಮಾಡುವರು. ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ಎಲ್ಲಾ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಕನಿಷ್ಠ 15 ದಿನಕ್ಕೊಮ್ಮೆ ತಮ್ಮ ವ್ಯಾಪ್ತಿಯಲ್ಲಿನ ಕಚೇರಿಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಚುರುಕು‌ ಮುಟ್ಟಿಸುವುದರಿಂದ ಎಲ್ಲವೂ ಸರಿಯಾಗುತ್ತೆ ಎಂದರು. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಅನುಷ್ಠಾನ ಸರಿಯಾಗಿಲ್ಲ ಎನ್ನುವ ದೂರುಗಳಿವೆ. ಅದನ್ನು ಸರಿಪಡಿಸಬೇಕು. ಮಣ್ಣು ಪರೀಕ್ಷೆ ಯೋಜನೆಯ ಬಗ್ಗೆ ಎಲ್ಲ ರೈತರಿಗೆ ಮಾಹಿತಿ ಇಲ್ಲ. ಹೆಚ್ಚು ಪ್ರಚಾರ ಮಾಡಿ ಕಾರ್ಯಕ್ರಮದ ಮಹತ್ವದ ಬಗ್ಗೆ ತಿಳುವಳಿಕೆ ಮೂಡಿಸಬೇಕು ಎಂದರು.

ಕೆಡಿಪಿ ಸಭೆ

ಕೆಲವು ಶಾಲೆಗಳಿಗೆ ಭೇಟಿ ನೀಡಿದಾಗ 1ರಿಂದ 7ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಕನ್ನಡವನ್ನೇ ಓದುವ ಸಾಮರ್ಥ್ಯ ಇಲ್ಲದಿರುವುದು ಕಂಡು ಬಂದಿದೆ. ತಾಲೂಕು ಹಂತದ ಅಧಿಕಾರಿಗಳು ಪ್ರಾಥಮಿಕ‌ ಶಾಲೆಯಲ್ಲಿ ಶಿಕ್ಷಣ ಗುಣಮಟ್ಟ ಸುಧಾರಿಸಲು ಪ್ರಯತ್ನಿಸಬೇಕು ಎಂದು ಸಚಿವರು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ಸೂಚಿಸಿದರು.

Intro:ಕೆಲಸ ಮಾಡೋರು ಇಲ್ಲೆ ಇರಿ, ಆಗೋಲ್ಲ ಅಂದ್ರೆ ಸಸ್ಪೇಂಡ್ ಆಗಲು ರೇಡಿಯಾಗಿರಿ- ಚವ್ಹಾಣ ಖಡಕ್ ಸೂಚನೆ...!

ಬೀದರ್:
ಜನರ ಕೆಲಸ ಮಾಡಲಿಕ್ಕೆ ಆಗೊಲ್ಲ ಅಂದ್ರೆ ಈಗ ನಡೆಯೊದಿಲ್ಲ ಎಸಿ ರೂಮಿನ ಆಫೀಸ್ ಬಿಟ್ಟು ಗ್ರೌಂಡ್ ವರ್ಕ್ ಮಾಡಿ, ಜನರೊಂದಿಗೆ ಪ್ರೀತಿಯಿಂದ ಮಾತನಾಡಿ ಸಮಸ್ಯೆಗಳನ್ನ ಆನ್ ದಿ ಸ್ಪಾಟ್ ಬಗೆಹರಿಸಿ ಇದೆಲ್ಲವೂ ಮಾಡಲಿಕ್ಕೆ ಆಗೊಲ್ಲ ಅನ್ನೊವರು ಸಸ್ಪೇಂಡ್ ಆಗಲು ತಯಾರಾಗಿರಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಖಡಕ್ ಸೂಚನೆ ನೀಡಿದರು.

ನಗರದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ತಡರಾತ್ರಿ ವರೆಗೆ ನಡೆದ ಕೆಡಿಪಿ ಸಭೆಯಲ್ಲಿ ಅಧಿಕಾರಿಗಳ ಮೈ ಚಳಿ ಬಿಡಿಸಿದ ಸಚಿವರು ಆಡಳಿತ ವ್ಯವಸ್ಥೆ ಚುರುಕಾಗಿ‌ ನಡೆಯುವಂತಾಗಲು ಜಿಲ್ಲಾ ಮಟ್ಟದ ಅಧಿಕಾರಿಗಳು ತಮ್ಮ ಅಧೀನದಲ್ಲಿರುವ ಕಚೇರಿಗಳಿಗೆ ಆಗಾಗ ಅನಿರೀಕ್ಷಿತ ಭೇಟಿ ನೀಡುವ ಪರಿಪಾಠ ಬೆಳೆಸಿಕೊಳ್ಳಬೇಕು. ಮೇಲಾಧಿಕಾರಿಗಳು ಸಮಯ ಪಾಲನೆ ಮಾಡಿದಲ್ಲಿ ತಮ್ಮ ಅಧೀನದ ಅಧಿಕಾರಿ ಮತ್ತು ಸಿಬ್ಬಂದಿ ತಾನಾಗೇ ಸಮಯ ಪಾಲನೆ‌ ಮಾಡುವರು.
ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ಎಲ್ಲಾ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಕನಿಷ್ಠ 15 ದಿನಕೊಮ್ಮೆ ತಮ್ಮ ವ್ಯಾಪ್ತಿಯಲ್ಲಿನ ಕಚೇರಿಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಚುರುಕು‌ ಮುಟ್ಟಿಸುವುದರಿಂದ ಎಲ್ಲವೂ ಸರಿಯಾಗುತ್ತೆ ಎಂದರು.

ಬಹುತೇಕ ತಾಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನ ಬಿಟ್ಟು ಜಿಲ್ಲಾ ಕೇಂದ್ರ ಬೀದರ ನಗರದಲ್ಲಿ ವಾಸ್ತವ್ಯ ಮಾಡುತ್ತಿರುವುದು ಕಂಡು‌ ಬಂದಿದೆ. ಇದರಿಂದ‌ ತಾಲೂಕಿನಲ್ಲಿ ಕೆಲಸಗಳು ಸರಿಯಾಗಿ ನಡೆಯುತ್ತಿಲ್ಲ. ತಾಲೂಕು ಅಧಿಕಾರಿಗಳು ತಮ್ಮ ಕೇಂದ್ರ ಸ್ಥಾನದಲ್ಲಿ ವಾಸ ಮಾಡಲು ನಿರಾಕರಿಸಿದಲ್ಲಿ ಬೇರೆ ಕಡೆಗೆ ಹೋಗಬೇಕು ಎಂದು ಕಟ್ಟುನಿಟ್ಟಾಗಿ ಎಚ್ಚರಿಸಿದರು. ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಸಹ‌ ನಗರದಲ್ಲಿಯೇ ವಾಸ‌ ಮಾಡುತ್ತಿರುವುದರಿಂದ ಗ್ರಾಮೀಣ ಭಾಗದ ಜನರ ಕೈಗೆ ಆಡಳಿತ ಸುಲಭವಾಗಿ ಸಿಗ್ತಿಲ್ಲ.

ಕೃಷಿ ಇಲಾಖೆ ಪ್ರಗತಿ ಪರಿಶೀಲನೆ ವೇಳೆ ಬೆಳೆ ಹಾನಿ, ರೈತರಿಗೆ ಪರಿಹಾರ ವಿತರಣೆ, ಬೆಳೆ ವಿಮೆ ಯೋಜನೆ, ಖರೀದಿ ಕೇಂದ್ರಗಳ ಕುರಿತು ಅಧಿಕಾರಿಯಿಂದ ವಿವರಣೆ ಪಡೆದರು. ಬಳಿಕ ಮಾತನಾಡಿ, ದಾಬಕಾ ಗ್ರಾಮದಲ್ಲಿ ಹೆಚ್ಚು ಮಳೆಯಿಂದಾಗಿ ಬೆಳೆ ಹಾನಿಯಾಗಿದೆ. ಅಧಿಕಾರಿಗಳನ್ನು ಕಳುಹಿಸಿ ಸರ್ವೇ ಮಾಡಿಸುವಂತೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ದಯಾನಂದ.ಸಿ ಅವರಿಗೆ ಸೂಚಿಸಿದರು.
ಭಾಲ್ಕಿ, ಬಸವಕಲ್ಯಾಣ ಹಾಗೂ ಇತರೆಡೆ ಬೀಜ ವಿತರಣೆ ಸಮರ್ಪಕವಾಗಿ ನಡೆದಿಲ್ಲ ಎಂದು ರೈತರಿಂದ ದೂರುಗಳು ಬಂದಿವೆ. ಜಂಟಿ ನಿರ್ದೇಶಕರು ರೈತ ಸಂಪರ್ಕ ಕೇಂದ್ರಗಳೊಂದಿಗೆ ಸಂಪರ್ಕದಲ್ಲಿದ್ದು, ಬೀಜ ವಿತರಣೆ ಕಾರ್ಯದಲ್ಲಿ ಲೋಪಗಳಾಗದಂತೆ ನೋಡಿಕೊಳ್ಳಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ರೈತರಿಗಾಗಿ ಇರುವ ಯೋಜನೆಗಳ ಬಗ್ಗೆ ಎಲ್ಲ ರೈತ ಕೇಂದ್ರಗಳಲ್ಲಿ ಭಾವಚಿತ್ರ ಸಹಿತ ಮಾಹಿತಿಯನ್ನು ಬಿತ್ತರಿಸಬೇಕು ಎಂದು‌ ಸಚಿವ ಚವ್ಹಾಣ ಸೂಚಿಸಿದರು.

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಅನುಷ್ಠಾನ ಸರಿಯಾಗಿಲ್ಲ ಎನ್ನುವ ದೂರುಗಳಿವೆ. ಅದನ್ನು ಸರಿಪಡಿಸಬೇಕು. ಮಣ್ಣು ಪರೀಕ್ಷೆ ಯೋಜನೆಯ ಬಗ್ಗೆ ಎಲ್ಲ ರೈತರಿಗೆ ಮಾಹಿತಿ ಇಲ್ಲ. ಹೆಚ್ಚು ಪ್ರಚಾರ ಮಾಡಿ ಕಾರ್ಯಕ್ರಮದ ಮಹತ್ವದ ಬಗ್ಗೆ ತಿಳುವಳಿಕೆ ಮೂಡಿಸಬೇಕು ಎಂದು ತಿಳಿಸಿದರು.

ಭಾಲ್ಕಿ ತಾಲೂಕಿನ ಬೀರಿ.ಬಿ ಮತ್ತು ಡೋಣಗಾಪೂರ‌ ಗ್ರಾಮಸ್ಥರು ಸಣ್ಣ ಪುಟ್ಟ ಕೆಲಸಗಳಿಗಾಗಿ ದೂರದ ಲಖನಗಾಂವ್ ಗೆ ಹೋಗಬೇಕು. ಇದರಿಂದ ಜನರು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ‌.‌ ಈ ಜನರಿಗೆ ಅನುಕೂಲವಾಗುವ ಕಡೆಯಲ್ಲಿ ನೆಮ್ಮದಿ ಕೇಂದ್ರ ಆರಂಭಿಸಬೇಕು ಎಂದು ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಉಷಾ ರಾಜೇಂದ್ರ ನಿಟ್ಟೂರಕರ್ ಅವರು ಕೊರಿಕೆಯನ್ನು ಸಮರ್ಥಿಸಿದ ಚವ್ಜಾಣ ಮೇಲಧಿಕಾರಿಗಳೊಂದಿಗೆ ಸಂಪರ್ಕಿಸಿ ಶೀಘ್ರದಲ್ಲೇ ಸಮಸ್ಯೆ ಇತ್ಯರ್ಥ ಪಡಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.

ಕೆಲವು ಶಾಲೆಗಳಿಗೆ ಭೇಟಿ ನೀಡಿದಾಗ 1ರಿಂದ 7ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ಕನ್ನಡ ಓದುವ ಸಾಮರ್ಥ್ಯ ಇಲ್ಲದಿರುವುದು ಕಾಣಿಸಿದೆ. ಹೀಗಾದಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿ ಫಲಿತಾಂಶ ಸುಧಾರಣೆ ಹೇಗೆ ಸಾಧ್ಯ ? ತಾಲೂಕು ಹಂತದಲ್ಲಿರುವ ಅಧಿಕಾರಿಗಳು ಪ್ರಾಥಮಿಕ‌ ಶಾಲೆಯಲ್ಲಿ ಶಿಕ್ಷಣ ಗುಣಮಟ್ಟ ಸುಧಾರಿಸಲು ಪ್ರಯತ್ನಿಸಬೇಕು ಎಂದು ಸಚಿವರು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ಸೂಚಿಸಿದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಕಚೇರಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಹಲವು ವರ್ಷಗಳಿಂದ ಒಂದೇ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದಾರೆ. ಅಂತಹ ಅಧಿಕಾರಿ ಮತ್ತು ಸಿಬ್ಬಂದಿಯನ್ನು ವರ್ಗಾವಣೆ ಮಾಡಬೇಕು. ಫಲಿತಾಂಶ ಸುಧಾರಣೆಗೆ ಸಾರ್ವಜನಿಕ ಶಿಕ್ಷಣ ಇಲಾಖೆಯೊಂದಿಗೆ ವಿವಿಧ ಇಲಾಖೆಗಳು ಸಹ ಪ್ರಯತ್ನಿಸಬೇಕು.
ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿ ನಿಲಯಗಳಲ್ಲಿ ಫಲಿತಾಂಶ ಸುಧಾರಣೆಗೆ ಎಷ್ಟು ಪ್ರಯತ್ನಿಸುತ್ತಿದ್ದಾರೆ ಎನ್ನುವುದನ್ನು ಪರಿಶೀಲಿಸಬೇಕು. ಸಾರಿಗೆ ವ್ಯವಸ್ಥೆ ಸರಿಯಾಗಿ‌ ಇಲ್ಲದಿದ್ದಲ್ಲಿ ಶಿಕ್ಷಕರು ಶಾಲೆಗೆ ಸಮಯಕ್ಕೆ ಹಾಜರಾಗಲು ತೊಡಕಾಗುತ್ತದೆ. ಇವುಗಳನ್ನು ಸರಿಪಡಿಸಬೇಕು.
ಸರ್ಕಾರಿ ಶಾಲೆಗಳಲ್ಲಿ ಅರ್ಹ ಶಿಕ್ಷಕರಿರುತ್ತಾರೆ. ಇವರು ಪ್ರಮಾಣಿಕವಾಗಿ ಪ್ರಯತ್ನಿಸಿದಲ್ಲಿ ಫಲಿತಾಂಶ ಸುಧಾರಣೆ ಸಾಧ್ಯ ಎಂದು ಬಸವಕಲ್ಯಾಣ ಶಾಸಕರಾದ ಬಿ.ನಾರಾಯಣರಾವ್ ಅವರು ಸಲಹೆ ನೀಡಿದರು. ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಮಕ್ಕಳ ಹಾಜರಾತಿ‌ ಕಡಿಮೆಯಾಗುತ್ತಿದೆ. ಸುದಾರಣೆಗೆ ಯಾವ ಕ್ರಮ ಕೈಗೊಂಡಿದ್ದೀರಿ ಎಂದು ಪ್ರಶ್ನಿಸಿದಾಗ ಶಾಲೆಯ ಆರಂಭದಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಮಾಹಿತಿ ನೀಡಿದರು. ಶಾಸಕರಾದ ಬಿ.ನಾರಾಯಣರಾವ್ ಅವರು ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ಸರಿಯಾಗಿ ನೀಡುವುದಿಲ್ಲ ಎಂಬ ಕಾರಣಕ್ಕಾಗಿ ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸುತ್ತಾರೆ. ಸರ್ಕಾರಿ ಶಾಲೆಗಳಲ್ಲಿ ಬುದ್ದಿವಂತ ಶಿಕ್ಷಕರಿದ್ದಾರೆ. ಇವರು ಉತ್ತಮ ರೀತಿಯಲ್ಲಿ ಪಾಠ ಮಾಡಿದಲ್ಲಿ ದಾಖಲಾತಿ ಪ್ರಮಾಣ ಹೆಚ್ಚಾಗುತ್ತದೆ‌ ಎಂದು ಹೇಳಿದರು.

ಸಂಸದ ಭಗವಂತ ಖೂಬಾ, ಜಿ.ಪಂ ಅಧ್ಯಕ್ಷೆ ಗೀತಾ ಪಂಡಿತ ಚಿದ್ರಿ, ಶಾಸಕ ರಹಿಂಖಾನ್, ಜಿಲ್ಲಾಧಿಕಾರಿ ಡಾ. ಎಚ್.ಆರ್ ಮಹಾದೇವ್, ಎಸ್.ಪಿ ಟಿ.ಶ್ರೀಧರ್, ಪರಿಷತ್ ಸದಸ್ಯರಾದ ಅರವಿಂದ ಕುಮಾರ್ ಅರಳಿ, ರಘುನಾಥ್ ಮಲ್ಕಾಪೂರೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಬೈಟ್-೦೧: ಪ್ರಭು ಚವ್ಹಾಣ- ಸಚಿವರು.Body:AnilConclusion:Bidar
ETV Bharat Logo

Copyright © 2025 Ushodaya Enterprises Pvt. Ltd., All Rights Reserved.