ETV Bharat / state

ಆನ್​ಲೈನ್​ ಹೂಡಿಕೆಯಿಂದ ಮೋಸ.. ನೊಂದ ಉಪನ್ಯಾಸಕಿ ಬಾವಿಗೆ ಹಾರಿ ಆತ್ಮಹತ್ಯೆ

author img

By

Published : Nov 12, 2022, 1:56 PM IST

ಖಾಸಗಿ ಕಾಲೇಜೊಂದರಲ್ಲಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಯುವತಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ.

lady-lecturer-commits-suicide-in-basavakalyan
ಉಪನ್ಯಾಸಕಿ ಬಾವಿಗೆ ಹಾರಿ ಆತ್ಮಹತ್ಯೆ

ಬಸವಕಲ್ಯಾಣ(ಬೀದರ್​​): ಆನ್‌ಲೈನ್​ನಲ್ಲಿ ಪರಿಚಿತನಾದ ವ್ಯಕ್ತಿಗೆ ಹಣ ಹಾಕಿ ಮೋಸ ಹೋಗಿದ್ದರಿಂದ ನೊಂದ ಉಪನ್ಯಾಸಕಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಇಸ್ಲಾಂಪೂರ ಗ್ರಾಮದಲ್ಲಿ ನಡೆದಿದೆ.

ಇಸ್ಲಾಂಪೂರ ಗ್ರಾಮದ ಆರತಿ ಕನಾಟೆ (28) ಎಂಬುವರು ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾದವರು. ನಗರದ ಖಾಸಗಿ ಕಾಲೇಜೊಂದರಲ್ಲಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಆರತಿ ಅವರಿಗೆ ಆನ್​ಲೈನ್ ಮೂಲಕ ವ್ಯಕ್ತಿಯೊಬ್ಬ ಪರಿಚಯವಾಗಿದ್ದರಂತೆ.

ಉಪನ್ಯಾಸಕಿಯು ತಮ್ಮ ಕೈಯಲ್ಲಿದ್ದ ಹಣ ಸೇರಿದಂತೆ ಸಾಲ ಮಾಡಿ ಹಂತ-ಹಂತವಾಗಿ ಸುಮಾರು 2 ಲಕ್ಷಕ್ಕೂ ಅಧಿಕ ಹಣವನ್ನು ವ್ಯಕ್ತಿ ಬಳಿ ಹೂಡಿಕೆ ಮಾಡಿದ್ದರು. ಇನ್ನೂ 82 ಸಾವಿರ ಹಾಕಿದರೆ ಮಾತ್ರ ನಿಮ್ಮೆಲ್ಲ ಎಲ್ಲ ಹಣ ವಾಪಸ್ ಬರುತ್ತದೆ ಎಂದು ಆ ವ್ಯಕ್ತಿ ನಂಬಿಸಿದ್ದರಂತೆ. ಹೀಗಾಗಿ ಉಳಿದ ಹಣ ಭರಿಸಲಾಗದೇ ಜೀವನದಲ್ಲಿ ಜುಗುಪ್ಸೆಗೊಂಡು ಉಪನ್ಯಾಸಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆತ್ಮಹತ್ಯೆಗೂ ಮುನ್ನ ಡೆತ್‌ನೋಟ್ ಬರೆದಿಟ್ಟಿರುವ ಆರತಿ, ಗ್ರಾಮದಲ್ಲಿನ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವದಾಗಿ ತಿಳಿಸಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಅಗ್ನಿಶಾಮಕ ದಳದ ತಂಡ, ಬಾವಿಯಿಂದ ಶವ ಹೊರತೆಗೆಯುವಲ್ಲಿ ಯಶಸ್ವಿಯಾಗಿದೆ.

ಆರತಿ ತಂದೆ ಶಿವರಾಜ ಕನಾಟೆ ನೀಡಿದ ದೂರಿನ ಮೇರೆಗೆ ಬಸವಕಲ್ಯಾಣ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪಿಎಸ್‌ಐ ಅಂಬರೀಷ್ ವಾಗಮೋಡೆ, ಇತರ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಇದನ್ನೂ ಓದಿ: ಶಾಲೆಯಲ್ಲಿ ಪ್ರೀತ್ಸೆ ಪ್ರೀತ್ಸೆ ಅಂತಾ ಬೆನ್ನುಬಿದ್ದ.. ಮನೆಗೆ ಬಂದು ಮಂಗಳಸೂತ್ರ ಕಟ್ಟಿ ಅತ್ಯಾಚಾರವೆಸಗಿದ

ಬಸವಕಲ್ಯಾಣ(ಬೀದರ್​​): ಆನ್‌ಲೈನ್​ನಲ್ಲಿ ಪರಿಚಿತನಾದ ವ್ಯಕ್ತಿಗೆ ಹಣ ಹಾಕಿ ಮೋಸ ಹೋಗಿದ್ದರಿಂದ ನೊಂದ ಉಪನ್ಯಾಸಕಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಇಸ್ಲಾಂಪೂರ ಗ್ರಾಮದಲ್ಲಿ ನಡೆದಿದೆ.

ಇಸ್ಲಾಂಪೂರ ಗ್ರಾಮದ ಆರತಿ ಕನಾಟೆ (28) ಎಂಬುವರು ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾದವರು. ನಗರದ ಖಾಸಗಿ ಕಾಲೇಜೊಂದರಲ್ಲಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಆರತಿ ಅವರಿಗೆ ಆನ್​ಲೈನ್ ಮೂಲಕ ವ್ಯಕ್ತಿಯೊಬ್ಬ ಪರಿಚಯವಾಗಿದ್ದರಂತೆ.

ಉಪನ್ಯಾಸಕಿಯು ತಮ್ಮ ಕೈಯಲ್ಲಿದ್ದ ಹಣ ಸೇರಿದಂತೆ ಸಾಲ ಮಾಡಿ ಹಂತ-ಹಂತವಾಗಿ ಸುಮಾರು 2 ಲಕ್ಷಕ್ಕೂ ಅಧಿಕ ಹಣವನ್ನು ವ್ಯಕ್ತಿ ಬಳಿ ಹೂಡಿಕೆ ಮಾಡಿದ್ದರು. ಇನ್ನೂ 82 ಸಾವಿರ ಹಾಕಿದರೆ ಮಾತ್ರ ನಿಮ್ಮೆಲ್ಲ ಎಲ್ಲ ಹಣ ವಾಪಸ್ ಬರುತ್ತದೆ ಎಂದು ಆ ವ್ಯಕ್ತಿ ನಂಬಿಸಿದ್ದರಂತೆ. ಹೀಗಾಗಿ ಉಳಿದ ಹಣ ಭರಿಸಲಾಗದೇ ಜೀವನದಲ್ಲಿ ಜುಗುಪ್ಸೆಗೊಂಡು ಉಪನ್ಯಾಸಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆತ್ಮಹತ್ಯೆಗೂ ಮುನ್ನ ಡೆತ್‌ನೋಟ್ ಬರೆದಿಟ್ಟಿರುವ ಆರತಿ, ಗ್ರಾಮದಲ್ಲಿನ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವದಾಗಿ ತಿಳಿಸಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಅಗ್ನಿಶಾಮಕ ದಳದ ತಂಡ, ಬಾವಿಯಿಂದ ಶವ ಹೊರತೆಗೆಯುವಲ್ಲಿ ಯಶಸ್ವಿಯಾಗಿದೆ.

ಆರತಿ ತಂದೆ ಶಿವರಾಜ ಕನಾಟೆ ನೀಡಿದ ದೂರಿನ ಮೇರೆಗೆ ಬಸವಕಲ್ಯಾಣ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪಿಎಸ್‌ಐ ಅಂಬರೀಷ್ ವಾಗಮೋಡೆ, ಇತರ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಇದನ್ನೂ ಓದಿ: ಶಾಲೆಯಲ್ಲಿ ಪ್ರೀತ್ಸೆ ಪ್ರೀತ್ಸೆ ಅಂತಾ ಬೆನ್ನುಬಿದ್ದ.. ಮನೆಗೆ ಬಂದು ಮಂಗಳಸೂತ್ರ ಕಟ್ಟಿ ಅತ್ಯಾಚಾರವೆಸಗಿದ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.