ಬೀದರ್: ಗಡಿ ಭಾಗದ ಜಿಲ್ಲೆಯಲ್ಲಿ ಕೈಗಾರಿಕಾ ಪ್ರದೇಶ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು ಸಾರ್ವಜನಿಕ ಸಲಹೆಗಳನ್ನು ಪಡೆದು ಪರಿಗಣಿಸಲಾಗುವುದು ಎಂದು ಬೃಹತ್ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಭರವಸೆ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಾರ್ವಜನಿಕರು, ಉದ್ಯಮಿಗಳು ಹಾಗೂ ಹಿರಿಯ ಕೈಗಾರಿಕೋದ್ಯಮಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಬೀದರ್ನಲ್ಲಿ ಸ್ಥಾಪಿಸಲಾದ ಕೈಗಾರಿಕಾ ವಲಯಕ್ಕೆ ಮರುಸ್ಥಾಪನೆ ಅಗತ್ಯವಿದ್ದು ಹೊಸ ಉದ್ಯಮಿಗಳಿಗೆ ಅವಕಾಶ ನೀಡಲು ಸರ್ಕಾರ ವಿಶೇಷ ಗಮನ ನೀಡುವಂತೆ ಸಂವಾದದಲ್ಲಿ ಕೋರಲಾದ ಮನವಿಗೆ ಸಚಿವ ಜಗದೀಶ್ ಶೆಟ್ಟರ್ ಸ್ಪಂದಿಸಿದ್ದಾರೆ.