ETV Bharat / state

ವಸತಿ ಶಾಲೆಯಲ್ಲಿ ಅನಾರೋಗ್ಯದಿಂದ ಮಕ್ಕಳ ಸಾವು... ತನಿಖೆಗೆ ಆದೇಶಿಸಿದ ಸಚಿವ ಚವ್ಹಾಣ್ - ಬೀದರ್​​ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ ಸಾವು ಸುದ್ದಿ

ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳ ಕುರಿತು ಸಚಿವ ಪ್ರಭು ಚವ್ಹಾಣ್ ಖುದ್ದು ಪರಿಶೀಲನೆ ನಡೆಸಿದರು.

ವಸತಿ ಶಾಲೆಗಳಿಗೆ ಸಚಿವ ಪ್ರಭು ಚವ್ಹಾಣ್ ಭೇಟಿ
author img

By

Published : Nov 13, 2019, 10:51 PM IST

ಬೀದರ್​​: ಜಿಲ್ಲೆಯ ಭಾಲ್ಕಿ ತಾಲೂಕಿನ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆ ಹಾಗೂ ಮುರಾಜಿ ದೇಸಾಯಿ ವಸತಿ ಶಾಲೆ ವಿದ್ಯಾರ್ಥಿಗಳಿಬ್ಬರು ಅನಾರೋಗ್ಯದಿಂದ ಮೃತಪಟ್ಟ ಹಿನ್ನೆಲೆ ವಸತಿ ಶಾಲೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಭೇಟಿ ನೀಡಿ ವಸತಿ ಶಾಲೆಗಳ ಸ್ಥಿತಿಗತಿ ಪರಿಶೀಲಿಸಿದರು.

ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆ ಒಟ್ಟು 220 ವಿದ್ಯಾರ್ಥಿನಿಯರು ವಾಸವಿದ್ದು, ಇದುವರೆಗೂ ಸರ್ಕಾರಿ ಕಟ್ಟಡ ಭಾಗ್ಯ ದೊರಕಿಲ್ಲ. ಖಾಸಗಿ ಕಟ್ಟಡದಲ್ಲಿ ನಡೆಯುತ್ತಿರುವ ವಸತಿ ಶಾಲೆಗೆಯಲ್ಲಿ ಸಮರ್ಪಕ ಕೋಣೆಗಳಿಲ್ಲ. ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ, ಸಿಸಿ ಕ್ಯಾಮರಾ ವ್ಯವಸ್ಥೆ ಇಲ್ಲ. ಶಾಲೆ ಸುತ್ತಲು ಕಾಂಪೌಂಡ್​​ ವ್ಯವಸ್ಥೆಯೂ ಇಲ್ಲದ ಕಾರಣ ವಿದ್ಯಾರ್ಥಿಗಳು ಸಾಕಷ್ಟು ಸಮಸ್ಯೆ ಎದುರಿಸುವಂತಾಗಿದೆ. ಮಹಿಳಾ ವಸತಿ ನಿಲಯವಿದ್ದರೂ ಮಹಿಳಾ ಮೇಲ್ವಿಚಾರಕಿ ಇಲ್ಲ ಎಂದು ಎಂದು ಸ್ಥಳದಲ್ಲಿದ್ದ ಎಬಿವಿಪಿ ರಾಜ್ಯ ಸಹ ಕಾರ್ಯದರ್ಶಿ ರೇವಣಸಿದ್ಧ ಜಾಡರ ಸಚಿವರ ಗಮನಕ್ಕೆ ತಂದರು.

ವಸತಿ ಶಾಲೆಗಳಿಗೆ ಸಚಿವ ಪ್ರಭು ಚವ್ಹಾಣ್ ಭೇಟಿ

ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಸಿಬ್ಬಂದಿ ನಿರ್ಲಕ್ಷ್ಯದಿಂದ ಮೃತಪಟ್ಟ ವಿದ್ಯಾರ್ಥಿನಿ ಸಾಧನಾ ಹಾಗೂ ವಿದ್ಯಾರ್ಥಿ ಸಾಯಿ ಕುಮಾರ ಸಾವಿನ ಬಗ್ಗೆ ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸಬೇಕು, ನಿರ್ಲಕ್ಷ್ಯ ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ತಾಕೀತು ಮಾಡಿದರು.ನ.7 ರಂದು ಮೃತಪಟ್ಟ ವಿದ್ಯಾರ್ಥಿನಿ ಸಾಧನಾ ಶಂಕರ ಅವರ ಮನೆಗೆ ತೆರಳಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಮೃತ ವಿದ್ಯಾರ್ಥಿಗಳ ಕುಟುಂಬಕ್ಕೆ ಸರ್ಕಾರದಿಂದ 2.5 ಲಕ್ಷ ರೂ. ಪರಿಹಾರ ಧನ ಕಲ್ಪಿಸಲಾಗುವುದು ಜೊತೆಗೆ ಕುಟುಂಬದವರಿಗೆ ಅಗತ್ಯವಿರುವ ಸಹಾಯ, ಸೌಲಭ್ಯ ಸರ್ಕಾರ ಕಲ್ಪಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತದೆ ಎಂದು ಭರವಸೆ ನೀಡಿದರು.

ಬೀದರ್​​: ಜಿಲ್ಲೆಯ ಭಾಲ್ಕಿ ತಾಲೂಕಿನ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆ ಹಾಗೂ ಮುರಾಜಿ ದೇಸಾಯಿ ವಸತಿ ಶಾಲೆ ವಿದ್ಯಾರ್ಥಿಗಳಿಬ್ಬರು ಅನಾರೋಗ್ಯದಿಂದ ಮೃತಪಟ್ಟ ಹಿನ್ನೆಲೆ ವಸತಿ ಶಾಲೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಭೇಟಿ ನೀಡಿ ವಸತಿ ಶಾಲೆಗಳ ಸ್ಥಿತಿಗತಿ ಪರಿಶೀಲಿಸಿದರು.

ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆ ಒಟ್ಟು 220 ವಿದ್ಯಾರ್ಥಿನಿಯರು ವಾಸವಿದ್ದು, ಇದುವರೆಗೂ ಸರ್ಕಾರಿ ಕಟ್ಟಡ ಭಾಗ್ಯ ದೊರಕಿಲ್ಲ. ಖಾಸಗಿ ಕಟ್ಟಡದಲ್ಲಿ ನಡೆಯುತ್ತಿರುವ ವಸತಿ ಶಾಲೆಗೆಯಲ್ಲಿ ಸಮರ್ಪಕ ಕೋಣೆಗಳಿಲ್ಲ. ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ, ಸಿಸಿ ಕ್ಯಾಮರಾ ವ್ಯವಸ್ಥೆ ಇಲ್ಲ. ಶಾಲೆ ಸುತ್ತಲು ಕಾಂಪೌಂಡ್​​ ವ್ಯವಸ್ಥೆಯೂ ಇಲ್ಲದ ಕಾರಣ ವಿದ್ಯಾರ್ಥಿಗಳು ಸಾಕಷ್ಟು ಸಮಸ್ಯೆ ಎದುರಿಸುವಂತಾಗಿದೆ. ಮಹಿಳಾ ವಸತಿ ನಿಲಯವಿದ್ದರೂ ಮಹಿಳಾ ಮೇಲ್ವಿಚಾರಕಿ ಇಲ್ಲ ಎಂದು ಎಂದು ಸ್ಥಳದಲ್ಲಿದ್ದ ಎಬಿವಿಪಿ ರಾಜ್ಯ ಸಹ ಕಾರ್ಯದರ್ಶಿ ರೇವಣಸಿದ್ಧ ಜಾಡರ ಸಚಿವರ ಗಮನಕ್ಕೆ ತಂದರು.

ವಸತಿ ಶಾಲೆಗಳಿಗೆ ಸಚಿವ ಪ್ರಭು ಚವ್ಹಾಣ್ ಭೇಟಿ

ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಸಿಬ್ಬಂದಿ ನಿರ್ಲಕ್ಷ್ಯದಿಂದ ಮೃತಪಟ್ಟ ವಿದ್ಯಾರ್ಥಿನಿ ಸಾಧನಾ ಹಾಗೂ ವಿದ್ಯಾರ್ಥಿ ಸಾಯಿ ಕುಮಾರ ಸಾವಿನ ಬಗ್ಗೆ ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸಬೇಕು, ನಿರ್ಲಕ್ಷ್ಯ ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ತಾಕೀತು ಮಾಡಿದರು.ನ.7 ರಂದು ಮೃತಪಟ್ಟ ವಿದ್ಯಾರ್ಥಿನಿ ಸಾಧನಾ ಶಂಕರ ಅವರ ಮನೆಗೆ ತೆರಳಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಮೃತ ವಿದ್ಯಾರ್ಥಿಗಳ ಕುಟುಂಬಕ್ಕೆ ಸರ್ಕಾರದಿಂದ 2.5 ಲಕ್ಷ ರೂ. ಪರಿಹಾರ ಧನ ಕಲ್ಪಿಸಲಾಗುವುದು ಜೊತೆಗೆ ಕುಟುಂಬದವರಿಗೆ ಅಗತ್ಯವಿರುವ ಸಹಾಯ, ಸೌಲಭ್ಯ ಸರ್ಕಾರ ಕಲ್ಪಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತದೆ ಎಂದು ಭರವಸೆ ನೀಡಿದರು.

Intro:ಎರಡು ವಿಡಿಯೊ ಕಳಿಸಲಾಗಿದೆ.

ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಗೆ ಭೇಟಿ ನೀಡಿ ಸಮಸ್ಯೆಗಳ ಕುರಿತು ವಿದ್ಯಾರ್ಥಿಗಳಿಂದ ಮಾಹಿತಿ ಪಡೆದರು.


ವಿದ್ಯಾರ್ಥಿ ಸಾಧನಾ ಕುಟುಂಬದವರಿಗೆ ಸಾಂತ್ವನ ಹೇಳಿದ ಸಚಿವ ಚವ್ಹಾಣ್,


ಬೀದರ: ಜಿಲ್ಲೆಯ ಭಾಲ್ಕಿ ತಾಲೂಕಿನ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆ ಹಾಗೂ ಮುರಾಜಿ ದೇಸಾಯಿ ವಸತಿ ಶಾಲೆ ವಿದ್ಯಾರ್ಥಿಗಳಿಬ್ಬರು ಇತ್ತಿಚಗೆ ಅನಾರೋಗ್ಯದಿಂದ ಮೃತಪಟ್ಟ ಘಟನೆ ಹಿನ್ನೆಲೆಯಲ್ಲಿ ಬುಧವಾರ ಭಾಲ್ಕಿ ನಗರದ ಎರಡು ವಸತಿ ಶಾಲೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಭೇಟಿನೀಡಿ ವಸತಿ ಶಾಲೆಗಳ ಸ್ಥಿತಿಗತಿ ಪರಿಶೀಲಿಸಿದರು.
ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆ ಒಟ್ಟು ೨೨೦ ವಿದ್ಯಾರ್ಥಿನಿಯರು ವಾಸವಿದ್ದು, ಇದುವರೆಗೂ ಸರ್ಕಾರಿ ಕಟ್ಟಡ ಭಾಗ್ಯ ದೊರಕಿಲ್ಲ. ಖಾಸಗಿ ಕಟ್ಟಡದಲ್ಲಿ ನಡೆಯುತ್ತಿರು ವಸತಿ ಶಾಲೆಗೆಯಲ್ಲಿ ಸಮರ್ಪಕ ಕೊಣೆಗಳಿಲ್ಲ. ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ, ಸಿಸಿ ಕ್ಯಾಮರಾ ಇಲ್ಲ ವ್ಯವಸ್ಥೆ ಇಲ್ಲ. ಶಾಲೆ ಸುತ್ತಲು ಕಾಂಪೌAಡ ವ್ಯವಸ್ಥೆಯೂ ಇಲ್ಲದ ಕಾರಣ ವಿದ್ಯಾರ್ಥಿಗಳು ಸಾಕಷ್ಟು ಸಮಸ್ಯೆ ಎದುರಿಸುವಂತಾಗಿದೆ. ಮಹಿಳಾ ವಸತಿ ನಿಲಯವಿದ್ದರು ಮಹಿಳಾ ಮೇಲ್ವಿಚಾರಕಿ ಇಲ್ಲ ಎಂದು ಎಂದು ಸ್ಥಳದಲಿದ್ದ ಎಬಿವಿಪಿ ರಾಜ್ಯ ಸಹ ಕಾರ್ಯದರ್ಶಿ ರೇವಣಸಿದ್ಧ ಜಾಡರ ಸಚಿವರ ಗಮನಕ್ಕೆ ತಂದರು.
ಶಾಲೆ ಸಮಸ್ಯೆಗಳ ಕುರಿತು ಸ್ಥಳದಲ್ಲಿದ್ದ ಎಬಿವಿಪಿ ಸಂಘಟನೆ ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳಿಂದ ಮಾಹಿತಿ ಪಡೆದ ಸಚಿವರು, ಇಲ್ಲಿಯ ವಸತಿ ಶಾಲೆಗೆ ಅಗತ್ಯವಿರುವ ಮೂಲ ಸೌಕರ್ಯಗಳ ವ್ಯವಸ್ಥೆಗೆ ತಕ್ಷಣ ಕ್ರಮ ಕೈಗೊಳ್ಳಬೇಕು. ಕಿತ್ತೂರು ರಾಣಿ ಚನ್ನಮ್ಮ ಹಾಗೂ ಮುರಾಜಿ ದೇಸಾಯಿ ವಸತಿ ಶಾಲೆಗಳಲ್ಲಿ ಸಿಬ್ಬಂದಿಗಳ ನಿರ್ಲಕ್ಷತನದಿಂದ ಮೃತಪಟ್ಟ ವಿದ್ಯಾರ್ಥಿನಿ ಸಾಧನಾ ಹಾಗೂ ವಿದ್ಯಾರ್ಥಿ ಸಾಯಿಕುಮಾರ ಸಾವಿನ ಬಗ್ಗೆ ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸಬೇಕು, ನಿರ್ಲಕ್ಷ ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ತಾಕೀತು ಮಾಡಿದರು.
ನಂತರ ಕಳೆದ ನ.೭ರಂದು ಮೃತಪಟ್ಟ ವಿದ್ಯಾರ್ಥಿನಿ ಸಾಧನಾ ಶಂಕರ ಅವರ ಬಸವ ನಗರ ಮೇನೆಗೆ ಹಾಗೂ ಮುರಾಜಿ ದೇಸಾಯಿ ವಸತಿ ಶಾಲೆಯಲ್ಲಿ ಸಚಿವರ ಭೇಟಿಗಾಗಿ ಆಗಮಿಸಿದ ವಿದ್ಯಾರ್ಥಿ ಸಾಯಿಕುಮಾರ ನಾಮದೇವ ಕುಟುಂಬದವರಿಗೆ ಭೇಟಿ ಮಾಡಿದ ಸಚಿವರು, ಕುಟುಂಬದವರಿಗೆ ಸಾಂತ್ವನ ಹೇಳಿದರು. ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿ ಸಾವಿನ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಲಾಗುವದು.
ವಿದ್ಯಾರ್ಥಿಗಳ ಕುಟುಂಬಕ್ಕೆ ಸರ್ಕಾರದಿಂದ ೨.೫ ಲಕ್ಷ ರೂ. ಪರಿಹಾರ ಧನ ಕಲ್ಪಿಸಲಾಗುವ ಜೊತೆಗೆ ಕುಟುಂಬವದಿಗೆ ಅಗತ್ಯವಿರುವ ಸಹಾಯ, ಸೌಲಭ್ಯ ಸರ್ಕಾದ ಕಲ್ಪಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವದು ಎಂದು ಭರವಸೆ ನೀಡಿದರು.

Body:UDAYAKUMAR MULEConclusion:BASAVAKALYAN

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.