ETV Bharat / state

ಎಸ್​​ಎಸ್​​ಎಲ್​​ಸಿ ವಿದ್ಯಾರ್ಥಿಗಳಿಗೆ ಬಿಸ್ಕೆಟ್,​​ ಚಾಕಲೇಟ್​​​ ವಿತರಿಸಿದ ಸಚಿವ ಪ್ರಭು ಚೌವ್ಹಾಣ್​ - SSLC Exam

ಇಲ್ಲಿನ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ ಸಚಿವ ಪ್ರಭು ಚೌವ್ಹಾಣ್​ ವಿದ್ಯಾರ್ಥಿಗಳಿಗೆ ಬಿಸ್ಕೆಟ್​ ಹಾಗೂ ಚಾಕಲೇಟ್ ವಿತರಿಸಿದಲ್ಲದೆ, ಕೊರೊನಾ ವಿರುದ್ಧ ಅಗತ್ಯ ಮುಂಜಾಗೃತಾ ಕ್ರಮ ತೆಗೆದುಕೊಂಡು ಪರೀಕ್ಷೆ ಎದುರಿಸುವಂತೆ ಸೂಚನೆ ನೀಡಿದರು.

Minister Prabhu Chowhan distributed biscuits and chocolate to SSLC students
ಎಸ್​​ಎಸ್​​ಎಲ್​​ಸಿ ವಿದ್ಯಾರ್ಥಿಗಳಿಗೆ ಬಿಸ್ಕೆಟ್,​​ ಚಾಕಲೇಟ್​​​ ವಿತರಿಸಿದ ಸಚಿವ ಪ್ರಭು ಚೌವ್ಹಾಣ್​
author img

By

Published : Jun 29, 2020, 6:56 PM IST

ಬೀದರ್: ಎಸ್​​ಎಸ್​ಎಲ್​ಸಿ ಪರೀಕ್ಷಾ ಕೇಂದ್ರಗಳಿಗೆ ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್​ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಜಿಲ್ಲೆಯ ಔರಾದ್ ಪಟ್ಟಣದ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದ ಸಚಿವರು, ಕೊವಿಡ್-19 ಸೋಂಕು ನಿಯಂತ್ರಣ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಪಾಡಬೇಕು, ಮಾಸ್ಕ್, ಸ್ಯಾನಿಟೈಸರ್ ಬಳಕೆ ಮಾಡಲೇಬೇಕು ಇದರಿಂದ ವೈಯಕ್ತಿಕ ಜಾಗೃತಿ ವಹಿಸಿಕೊಳ್ಳುವುದಲ್ಲದೆ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಅಗತ್ಯವಾಗಿದೆ ಎಂದರು.

ಎಸ್​​ಎಸ್​​ಎಲ್​​ಸಿ ವಿದ್ಯಾರ್ಥಿಗಳಿಗೆ ಬಿಸ್ಕೆಟ್,​​ ಚಾಕಲೇಟ್​​​ ವಿತರಿಸಿದ ಸಚಿವ ಪ್ರಭು ಚೌವ್ಹಾಣ್​

ಇದೇ ವೇಳೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಬಿಸ್ಕೆಟ್​​, ಚಾಕಲೇಟ್​​​ ವಿತರಣೆ ಮಾಡಿದರು. ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯುತ್ತಿರುವ ಮಕ್ಕಳಿಗೆ ಬಿಸ್ಕೇಟ್​ ಹಾಗೂ ಚಾಕಲೇಟ್​​ ವಿತರಣೆ ಮಾಡಲಾಗುವುದು ಎಂದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಚ್.ಸಿ ಚಂದ್ರಶೇಖರ್, ಬಿಇಓ ಮಂಜುನಾಥ್ ಸೇರಿದಂತೆ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಬೀದರ್: ಎಸ್​​ಎಸ್​ಎಲ್​ಸಿ ಪರೀಕ್ಷಾ ಕೇಂದ್ರಗಳಿಗೆ ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್​ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಜಿಲ್ಲೆಯ ಔರಾದ್ ಪಟ್ಟಣದ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದ ಸಚಿವರು, ಕೊವಿಡ್-19 ಸೋಂಕು ನಿಯಂತ್ರಣ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಪಾಡಬೇಕು, ಮಾಸ್ಕ್, ಸ್ಯಾನಿಟೈಸರ್ ಬಳಕೆ ಮಾಡಲೇಬೇಕು ಇದರಿಂದ ವೈಯಕ್ತಿಕ ಜಾಗೃತಿ ವಹಿಸಿಕೊಳ್ಳುವುದಲ್ಲದೆ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಅಗತ್ಯವಾಗಿದೆ ಎಂದರು.

ಎಸ್​​ಎಸ್​​ಎಲ್​​ಸಿ ವಿದ್ಯಾರ್ಥಿಗಳಿಗೆ ಬಿಸ್ಕೆಟ್,​​ ಚಾಕಲೇಟ್​​​ ವಿತರಿಸಿದ ಸಚಿವ ಪ್ರಭು ಚೌವ್ಹಾಣ್​

ಇದೇ ವೇಳೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಬಿಸ್ಕೆಟ್​​, ಚಾಕಲೇಟ್​​​ ವಿತರಣೆ ಮಾಡಿದರು. ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯುತ್ತಿರುವ ಮಕ್ಕಳಿಗೆ ಬಿಸ್ಕೇಟ್​ ಹಾಗೂ ಚಾಕಲೇಟ್​​ ವಿತರಣೆ ಮಾಡಲಾಗುವುದು ಎಂದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಚ್.ಸಿ ಚಂದ್ರಶೇಖರ್, ಬಿಇಓ ಮಂಜುನಾಥ್ ಸೇರಿದಂತೆ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.