ETV Bharat / state

ಉದ್ದು, ಹೆಸರು ಖರೀದಿ ಕೇಂದ್ರ ಆರಂಭಿಸಲು ಆಗ್ರಹಿಸಿ ರೈತ ಸಂಘದಿಂದ ಪ್ರತಿಭಟನೆ..

author img

By

Published : Sep 23, 2019, 9:24 PM IST

ಸರ್ಕಾರದ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಉದ್ದು ಮತ್ತು ಹೆಸರು ಖರೀದಿ ಕೇಂದ್ರ ಆರಂಭಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಘಟಕದಿಂದ ತಾಲೂಕು ಕೃಷಿ ಉತ್ಪನ್ನ ಮರುಕಟ್ಟೆ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಉದ್ದು, ಹೆಸರು ಖರೀದಿ ಕೇಂದ್ರಕ್ಕಾಗಿ ರೈತ ಸಂಘದಿಂದ ಪ್ರತಿಭಟನೆ

ಬಸವಕಲ್ಯಾಣ: ಸರ್ಕಾರದ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಉದ್ದು ಮತ್ತು ಹೆಸರು ಖರೀದಿ ಕೇಂದ್ರ ಆರಂಭಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಘಟಕದಿಂದ ತಾಲೂಕು ಕೃಷಿ ಉತ್ಪನ್ನ ಮರುಕಟ್ಟೆ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಉದ್ದು, ಹೆಸರು ಖರೀದಿ ಕೇಂದ್ರಕ್ಕಾಗಿ ರೈತ ಸಂಘದಿಂದ ಪ್ರತಿಭಟನೆ..

ಸಂಘದ ಪದಾಧಿಕಾರಿಗಳ ನೇತೃತ್ವದಲ್ಲಿ ನಗರದ ಎಪಿಎಂಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ರೈತ ಮುಖಂಡರು, ಬೇಡಿಕೆ ಈಡೇರಿಕೆಗಾಗಿ ತಕ್ಷಣ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ತಾಲೂಕಿನಲ್ಲಿ ಉದ್ದು ಮತ್ತು ಹೆಸರು ರಾಶಿ ಈಗಾಗಲೇ ನಡೆಯುತ್ತಿದೆ. ಮಾಡಿದ ರಾಶಿಗೆ ಕೂಲಿ ಕೊಡಲು ಸಹ ಅಗದ ಅಸಹಾಯಕ ಸ್ಥಿತಿಯಲ್ಲಿರುವ ರೈತರು, ಅನಿವಾರ್ಯವಾಗಿ ಸಿಕ್ಕ ಸಿಕ್ಕ ರೇಟ್‌ಗೆ ವ್ಯಾಪಾರಸ್ಥರಿಗೆ ಮಾರಾಟ ಮಾಡ್ತಾರೆ. ಇದನ್ನು ತಪ್ಪಿಸಿ ಆರ್ಥಿಕವಾಗಿ ತೊಂದರೆಯಲ್ಲಿರುವ ರೈತರಿಗೆ ಬೆಳೆದ ಬೆಳೆಗೆ ಸೂಕ್ತ ಬೆಲೆ ಕಲ್ಪಿಸಲು ಖರೀದಿ ಕೇಂದ್ರ ತಕ್ಷಣ ಆರಂಭಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಸಂಘದ ತಾಲೂಕು ಅಧ್ಯಕ್ಷ ಚಂದ್ರಶೇಖರ್ ಜಮಖಂಡಿ ಮಾತನಾಡಿ, ಪ್ರಸಕ್ತ ಸಾಲಿನ ಮಳೆಗಾಲದಲ್ಲಿ ಅಸಮರ್ಪಕ ಮಳೆ-ಬೆಳೆಯಿಂದ ರೈತರು ಸಂಕಷ್ಟದಲ್ಲಿದ್ದಾರೆ. ಉದ್ದು ಮತ್ತು ಹೆಸರು ಬೆಂಬಲ ಬೆಲೆ ನಿಗದಿಯಾಗಿರುವುದಕ್ಕಿಂತ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಯಿದೆ. ಖರೀದಿ ಕೇಂದ್ರ ಆರಂಭಿಸಿ, ಬೆಂಬಲ ಬೆಲೆಗೆ ಖರೀದಿ ಮಾಡಲು ಕೂಡಲೇ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಸಂಘದ ತಾಲೂಕು ಕಾರ್ಯದರ್ಶಿ ಸುಭಾಶ್​ ರಗಟೆ ಮಾತನಾಡಿ, ಕಳೆದ ಎರಡು ವರ್ಷದಿಂದ ಸಮರ್ಪಕ ಮಳೆ ಇಲ್ಲದೇ ರೈತರು ಕಷ್ಟ-ನಷ್ಟ ಎದುರಿಸುತ್ತಿದ್ದಾರೆ. ಈ ಬೆಳೆದ ಉದ್ದು-ಹೆಸರಿಗೆ ಸೂಕ್ತ ಬೆಲೆ ಸಿಗದಿದ್ದರೆ, ರೈತರು ಮತ್ತಷ್ಟು ಸಮಸ್ಯೆಗೆ ಸಿಲುಕಲಿದ್ದಾರೆ. ಖರೀದಿ ಕೇಂದ್ರ ಆರಂಭಿಸಿ ರೈತರ ಉತ್ಪನ್ನ ಖರೀದಿಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಬೇಡಿಕೆ ಕುರಿತು ಮುಖ್ಯಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು ಸ್ಥಳಕ್ಕೆ ಭೇಟಿ ನೀಡಿದ ಉಪ ತಹಸೀಲ್ದಾರ್​ ರಾಜಕುಮಾರ್​ ಅವರಿಗೆ ಸಲ್ಲಿಸಲಾಯಿತು.

ಬಸವಕಲ್ಯಾಣ: ಸರ್ಕಾರದ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಉದ್ದು ಮತ್ತು ಹೆಸರು ಖರೀದಿ ಕೇಂದ್ರ ಆರಂಭಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಘಟಕದಿಂದ ತಾಲೂಕು ಕೃಷಿ ಉತ್ಪನ್ನ ಮರುಕಟ್ಟೆ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಉದ್ದು, ಹೆಸರು ಖರೀದಿ ಕೇಂದ್ರಕ್ಕಾಗಿ ರೈತ ಸಂಘದಿಂದ ಪ್ರತಿಭಟನೆ..

ಸಂಘದ ಪದಾಧಿಕಾರಿಗಳ ನೇತೃತ್ವದಲ್ಲಿ ನಗರದ ಎಪಿಎಂಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ರೈತ ಮುಖಂಡರು, ಬೇಡಿಕೆ ಈಡೇರಿಕೆಗಾಗಿ ತಕ್ಷಣ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ತಾಲೂಕಿನಲ್ಲಿ ಉದ್ದು ಮತ್ತು ಹೆಸರು ರಾಶಿ ಈಗಾಗಲೇ ನಡೆಯುತ್ತಿದೆ. ಮಾಡಿದ ರಾಶಿಗೆ ಕೂಲಿ ಕೊಡಲು ಸಹ ಅಗದ ಅಸಹಾಯಕ ಸ್ಥಿತಿಯಲ್ಲಿರುವ ರೈತರು, ಅನಿವಾರ್ಯವಾಗಿ ಸಿಕ್ಕ ಸಿಕ್ಕ ರೇಟ್‌ಗೆ ವ್ಯಾಪಾರಸ್ಥರಿಗೆ ಮಾರಾಟ ಮಾಡ್ತಾರೆ. ಇದನ್ನು ತಪ್ಪಿಸಿ ಆರ್ಥಿಕವಾಗಿ ತೊಂದರೆಯಲ್ಲಿರುವ ರೈತರಿಗೆ ಬೆಳೆದ ಬೆಳೆಗೆ ಸೂಕ್ತ ಬೆಲೆ ಕಲ್ಪಿಸಲು ಖರೀದಿ ಕೇಂದ್ರ ತಕ್ಷಣ ಆರಂಭಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಸಂಘದ ತಾಲೂಕು ಅಧ್ಯಕ್ಷ ಚಂದ್ರಶೇಖರ್ ಜಮಖಂಡಿ ಮಾತನಾಡಿ, ಪ್ರಸಕ್ತ ಸಾಲಿನ ಮಳೆಗಾಲದಲ್ಲಿ ಅಸಮರ್ಪಕ ಮಳೆ-ಬೆಳೆಯಿಂದ ರೈತರು ಸಂಕಷ್ಟದಲ್ಲಿದ್ದಾರೆ. ಉದ್ದು ಮತ್ತು ಹೆಸರು ಬೆಂಬಲ ಬೆಲೆ ನಿಗದಿಯಾಗಿರುವುದಕ್ಕಿಂತ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಯಿದೆ. ಖರೀದಿ ಕೇಂದ್ರ ಆರಂಭಿಸಿ, ಬೆಂಬಲ ಬೆಲೆಗೆ ಖರೀದಿ ಮಾಡಲು ಕೂಡಲೇ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಸಂಘದ ತಾಲೂಕು ಕಾರ್ಯದರ್ಶಿ ಸುಭಾಶ್​ ರಗಟೆ ಮಾತನಾಡಿ, ಕಳೆದ ಎರಡು ವರ್ಷದಿಂದ ಸಮರ್ಪಕ ಮಳೆ ಇಲ್ಲದೇ ರೈತರು ಕಷ್ಟ-ನಷ್ಟ ಎದುರಿಸುತ್ತಿದ್ದಾರೆ. ಈ ಬೆಳೆದ ಉದ್ದು-ಹೆಸರಿಗೆ ಸೂಕ್ತ ಬೆಲೆ ಸಿಗದಿದ್ದರೆ, ರೈತರು ಮತ್ತಷ್ಟು ಸಮಸ್ಯೆಗೆ ಸಿಲುಕಲಿದ್ದಾರೆ. ಖರೀದಿ ಕೇಂದ್ರ ಆರಂಭಿಸಿ ರೈತರ ಉತ್ಪನ್ನ ಖರೀದಿಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಬೇಡಿಕೆ ಕುರಿತು ಮುಖ್ಯಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು ಸ್ಥಳಕ್ಕೆ ಭೇಟಿ ನೀಡಿದ ಉಪ ತಹಸೀಲ್ದಾರ್​ ರಾಜಕುಮಾರ್​ ಅವರಿಗೆ ಸಲ್ಲಿಸಲಾಯಿತು.

Intro:
ಸ್ಲಗ್ ಕೆಎ_ಬಿಡಿಆರ್_ಬಿಎಸ್‌ಕೆ_೨೩_೧

ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಉದ್ದು ಮತ್ತು ಹೆಸರು ಖರೀದಿ ಕೇಂದ್ರ ಆರಂಭಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಘಟಕದಿಂದ ನಗರದ ತಾಲೂಕು ಕೃಷಿ ಉತ್ಪನ್ನ ಮಾರುಕಟ್ಟೆ (ಎಪಿಎಂಸಿ)ಕಚೇರಿ ಎದುರು ಕೆಲ ಕಾಲ ಪ್ರತಿಭಟನೆ ನಡೆಸಲಾಯಿತು.



ಉದ್ದು, ಹೆಸರು ಖರೀದಿ ಕೇಂದ್ರಕ್ಕಾಗಿ ರೈತ ಸಂಘದಿಂದ ಪ್ರತಿಭಟನೆ

ಬಸವಕಲ್ಯಾಣ: ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಉದ್ದು ಮತ್ತು ಹೆಸರು ಖರೀದಿ ಕೇಂದ್ರ ಆರಂಭಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಘಟಕದಿಂದ ಸೋಮವಾರ ಇಲ್ಲಿಯ ತಾಲೂಕು ಕೃಷಿ ಉತ್ಪನ್ನ ಮರುಕಟ್ಟೆ (ಎಪಿಎಂಸಿ)ಕಚೇರಿ ಎದುರು ಕೆಲ ಕಾಲ ಪ್ರತಿಭಟನೆ ನಡೆಸಲಾಯಿತು.
ಸಂಘದ ಪದಾಧಿಕಾರಿಗಳ ನೇತೃತ್ವದಲ್ಲಿ ನಗರದ ಎಪಿಎಂಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ರೈತ ಮುಖಂಡರು, ಬೇಡಿಕೆಗೆ ಈಡೇರಿಕೆಗಾಗಿ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ತಾಲೂಕಿನಲ್ಲಿ ಉದ್ದು ಮತ್ತು ಹೆಸರು ರಾಸಿ ಈಗಾಗಲೇ ನಡೆಯುತ್ತಿದ್ದು, ಮಾಡಿದ ರಾಸಿಗೆ ಕೂಲಿ ಕೊಡಲು ಸಹ ಅಗದ ಅಸಹಾಯಕ ಸ್ಥಿತಿಯಲ್ಲಿರುವ ರೈತರು ಅನಿವಾರ್ಯವಾಗಿ ಅಡತ್ ಬಜಾರನಲ್ಲಿ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಾರೆ. ಇದನ್ನು ತಪ್ಪಿಸಿ ಆರ್ಥಿಕವಾಗಿ ತೊಂದರೆಯಲ್ಲಿರುವ ರೈತರಿಗೆ ಬೆಳೆದ ಬೆಳೆಗೆ ಸೂಕ್ತ ಬೆಲೆ ಕಲ್ಪಿಸಲು ಖರೀದಿ ಕೇಂದ್ರ ತಕ್ಷಣ ಆರಂಭಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಸಂಘದ ತಾಲೂಕು ಅಧ್ಯಕ್ಷ ಚಂದ್ರಶೇಖರ್ ಜಮಖಂಡಿ ಮಾತನಾಡಿ, ಪ್ರಸಕ್ತ ಸಾಲಿನ ಮಳೆಗಾಲದಲ್ಲಿ ಅಸಮರ್ಪಕ ಮಳೆ-ಬೆಳೆಯಿಂದ ರೈತರು ಸಂಕಷ್ಟದಲ್ಲಿದ್ದಾರೆ. ಉದ್ದು ಮತ್ತು ಹೆಸರು ಬೆಂಬಲ ಬೆಲೆ ನಿಗದಿ ಪಡೆಸಿರುವದಕ್ಕಿಂತ ಮರುಕಟ್ಟೆಯಲ್ಲಿ ಕಡಿಮೆ ಬೆಲೆ ಇದೆ. ಖರೀದಿ ಕೇಂದ್ರ ಅರಂಭಿಸಿಸಿ ಬೆಂಬಲ ಬೆಲೆಗೆ ಖರೀದಿ ಮಾಡಲು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಸಂಘದ ತಾಲೂಕು ಕಾರ್ಯದರ್ಶಿ ಸುಭಾಷ ರಗಟೆ ಮಾತನಾಡಿ, ಕಳೆದ ಎರಡು ವರ್ಷದಿಂದ ಸಮರ್ಪಕ ಮಳೆ ಇಲ್ಲದೇ ರೈತರು ಕಷ್ಟ-ನಷ್ಟ ಎದುರಿಸುತ್ತಿದ್ದಾರೆ. ಈ ಬೆಳೆದ ಉದ್ದು-ಹೆಸರಗೆ ಸೂಕ್ತ ಬೆಲೆ ಸಿಗದಿದ್ದರೆ ರೈತರು ಮತ್ತಷ್ಟು ಸಮಸ್ಯೆಗೆ ಸಿಲುಕಲಿದ್ದಾರೆ. ಖರೀದಿ ಕೇಂದ್ರ ಅರಂಭಿಸಿ ರೈತರ ಉತ್ಪನ್ನ ಖರೀದಿಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಬೇಡಿಕೆ ಕುರಿತು ಮುಖ್ಯಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು ಸ್ಥಳಕ್ಕೆ ಭೇಟಿ ನೀಡಿದ ಉಪ ತಹಸೀಲ್ದಾರ ರಾಜಕುಮಾರ ಅವರಿಗೆ ಸಲ್ಲಿಸಲಾಯಿತು.
ರೈತ ಮುಖಂಡ ಸಿದ್ರಾಮಪ್ಪ ಬಾಲಕುಂದೆ ಸೇರಿದಂತೆ ಇತರ ರೈತ ಮುಖಂಡರು ಮಾತನಾಡಿದರು. ರೈತ ಮುಖಂಡರಾದ ಕೆ.ಎಸ್.ಖಾನಸಾಬ್, ಕಾಸಪ್ಪ ಸೇರಿಕಾರ, ಅಣ್ಣೆಪ್ಪ ಮಾನಕಾರ, ಶ್ರಿÃಮಂತ ಮಹಾಜನ್, ಮಡಿವಾಳಪ್ಪ ಪಾಟೀಲ್, ಭೀಮಣ್ಣ ಕೋಪ್ಟೆ, ನಾಗರೆಡ್ಡಿ ಮೋಡ್ತೆ, ರಾಮಲಿಂಗಪ್ಪ ಪಾಟೀಲ್, ಜೈಪ್ರಕಾಶ ಸದಾನಂದೆ, ಭೀಮರೆಡ್ಡಿ ರಂಗೆ ಹಾಗೂ ತಾಲೂಕಿನ ವಿವಿಧಡೆಯಿಂದ ಆಗಮಿಸಿದ ರೈತ ಮುಖಂಡರು ಭಾಗವಹಿಸಿದ್ದರು

Body:UDAYAKUMAR MULEConclusion:BASAVAKALYAN
ETV Bharat Logo

Copyright © 2024 Ushodaya Enterprises Pvt. Ltd., All Rights Reserved.