ETV Bharat / state

ಏ 17ರಂದು ಬೀದರ್​ಗೆ ರಾಹುಲ್ ಗಾಂಧಿ.. ಅಂದೇ ಈಶ್ವರ ಖಂಡ್ರೆ ನಾಮಪತ್ರ ಸಲ್ಲಿಕೆ

ಲಿಂಗಾಯತ ವೀರಶೈವ ಮುಖಂಡರನ್ನು ಬಿಜೆಪಿ ಕಡೆಗಣಿಸುತ್ತಿದ್ದು, ಯಾವ ಏಣಿಯಿಂದ ಏರುತ್ತಾರೋ ಆ ಏಣಿಯನ್ನೇ ಒದಿಯುವ ಸಂಸ್ಕೃತಿ ಅವರದ್ದು: ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ

author img

By

Published : Apr 15, 2023, 8:42 PM IST

Updated : Apr 15, 2023, 9:09 PM IST

KPCC  Ishwar Khandre spoke at the press conference.
ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದರು

ಬೀದರ್: ಭಾಲ್ಕಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಸೋಮವಾರ ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆ ದಿನ ಸೋಮವಾರ ಬೆಳಗ್ಗೆ 11.30ಕ್ಕೆ ಹುಮನಾಬಾದ್ ರಸ್ತೆಯ ಅಮರ ಹಾಸ್ಟೆಲ್ ಎದುರಿನ ಬಯಲು ಪ್ರದೇಶದಲ್ಲಿ ಬೃಹತ್ ಬಹಿರಂಗ ಸಭೆ ನಡೆಯಲಿದ್ದು, ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಡಾ ಮಲ್ಲಿಕಾರ್ಜುನ ಖರ್ಗೆ, ರಾಜ್ಯ ಉಸ್ತುವಾರಿ ರಣದೀಪಸಿಂಗ್ ಸುರ್ಜೆವಾಲಾ, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಭಾಗವಹಿಸಲಿದ್ದಾರೆ ಎಂದು ಈಶ್ವರ ಖಂಡ್ರೆ ಶನಿವಾರ ಮಾಧ್ಯಮಗೋಷ್ಟಿಯಲ್ಲಿ ತಿಳಿಸಿದರು.

ತಾಲೂಕಿನ ಮೂಲೆ ಮೂಲೆಯಿಂದ ಸುಮಾರು 25 ಸಾವಿರಕ್ಕೂ ಅಧಿಕ ಕಾರ್ಯಕರ್ತರು, ಅಭಿಮಾನಿಗಳು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಕ್ಷೇತ್ರದಲ್ಲಿ ಕಳೆದ 15 ವರ್ಷಗಳಿಂದ ನಾನಾ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದು, ಜನರ ಕಷ್ಟ ಸುಖಗಳಲ್ಲಿ ಭಾಗವಹಿಸಿದ ತೃಪ್ತಿ ನನಗಿದೆ. ಈ ಬಾರಿ ಮತದಾರರು ಭಾರಿ ಅಂತರದಿಂದ ನನ್ನನ್ನು ಗೆಲ್ಲಿಸಲಿದ್ದಾರೆ ಎಂದು ಖಂಡ್ರೆ ಆತ್ಮವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿಯ ಭ್ರಷ್ಟಾಚಾರ, ದುರಾಡಳಿತದಿಂದ ಜನ ಬೇಸತ್ತಿದ್ದಾರೆ- ಖಂಡ್ರೆ: ಕೇಂದ್ರ, ರಾಜ್ಯದ ಬಿಜೆಪಿ ಸರ್ಕಾರಗಳು ಬೆಲೆ ಏರಿಕೆ, ಭ್ರಷ್ಟಾಚಾರ, ಆಂತರಿಕ ಕಿತ್ತಾಟ, ದುರಾಡಳಿತದಿಂದ ಜನರು ಬೇಸತ್ತು ಹೋಗಿದ್ದು, ರಾಜ್ಯದಲ್ಲಿ ಬಿಜೆಪಿಯನ್ನು ಕಿತ್ತೊಗೆಯಲು ತೀರ್ಮಾನಿಸಿದ್ದಾರೆ. ಹಾಗಾಗಿ ಮತ್ತೆ ರಾಜ್ಯದಲ್ಲಿ ಭಾರಿ ಬಹುಮತದೊಂದಿಗೆ ಕಾಂಗ್ರೆಸ್ ಪಕ್ಷದ ಸರ್ಕಾರ ರಚನೆ ಆಗಲಿದೆ ಎಂದು ಖಂಡ್ರೆ ಭವಿಷ್ಯ ನುಡಿದರು.

ಬಿಜೆಪಿ ಲಿಂಗಾಯತ ವೀರಶೈವರನ್ನು ಕಡೆಗಣಿಸಿದೆ- ಖಂಡ್ರೆ : ಲಿಂಗಾಯತ ವೀರಶೈವ ಮುಖಂಡರನ್ನು ಬಿಜೆಪಿ ಕಡೆಗಣಿಸಿ ಅವಮಾನ ಮಾಡುತ್ತಿದೆ. ಯಡಿಯೂರಪ್ಪ ಅವರನ್ನು ಕಣ್ಣೀರು ಹಾಕಿಸಿದ್ರು. ಈಗ ಜಗದೀಶ್ ಶೆಟ್ಟರ್ ಒಂದು ಟಿಕೆಟ್​ಗಾಗಿ ಪರದಾಡುತ್ತಿದ್ದಾರೆ. ಮಾಜಿ ಡಿಸಿಎಂ ಲಕ್ಷ್ಮಣ್​ ಸವದಿ ಕಣ್ಣೀರು ಹಾಕಿ ಕೊನೆಗೆ ಕಾಂಗ್ರೆಸ್ ಸೇರ್ಪೆಡೆಯಾಗಿದ್ದಾರೆ. ಯಾವ ಏಣಿಯಿಂದ ಏರುತ್ತಾರೋ ಆ ಏಣಿಯನ್ನೇ ಒದೆಯುವ ಸಂಸ್ಕೃತಿ ಬಿಜೆಪಿಯರದ್ದಾಗಿದೆ ಎಂದು ಈಶ್ವರ ಖಂಡ್ರೆ ಹರಿಹಾಯ್ದರು.

ಹಿರಿಯರನ್ನು ಬಿಜೆಪಿಯಲ್ಲಿ ಯಾವ ರೀತಿ ನೋಡಿಕೊಳ್ಳುತ್ತಾರೆ ಎಂದು ಕರ್ನಾಟಕದ ಜನ ಗಮನಿಸುತ್ತಿದ್ದಾರೆ. ಮಾಜಿ ಸಚಿವ ಲಕ್ಷ್ಮಣ್​ ಸವದಿ ಕಾಂಗ್ರೆಸ್ ಬಂದಿದ್ದಾರೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗಲೆಂದು ಆಹ್ವಾನ ನೀಡಿದ ಖಂಡ್ರೆ, ಇನ್ನೂ ಬಹಳಷ್ಟು ನಾಯಕರು ಕಾಂಗ್ರೆಸ್​​ ಪಕ್ಷಕ್ಕೆ ಸೇರ್ಪಡೆ ಆಗುತ್ತಾರೆ. ಕಾದು ನೋಡಿ ಎಂದರು.

ಗೂಂಡಾರಾಜ್ಯ ಮಾಡಲು ಹೊರಟಿದ್ದಾರಾ? ಚಿತ್ತಾಪುರ‌ ಕ್ಷೇತ್ರದಿಂದ ಮಣಿಕಂಠ ರಾಠೋಡ್ ಗೆ ಬಿಜೆಪಿ ಟಿಕೆಟ್ ಘೋಷಣೆ ಆಗಿದೆ. ಇದರಿಂದ ಬಿಜೆಪಿ ಸಂಸ್ಕೃತಿ ಗೊತ್ತಾಗುತ್ತೆ. ಮಣಿಕಂಠ ವಿರುದ್ಧ ಪೊಲೀಸರು ಹಾಗೂ ಕಾನೂನು ಗೂಂಡಾ ಕಾಯ್ದೆ ಪಟ್ಟಿಯಿಂದ ತೆಗೆಯಬಾರದು ಎಂದಿದ್ರು, ಆದ್ರು ರಾಜಕೀಯ ದುರುದ್ದೇಶದಿಂದ ಗೂಂಡಾ ಪಟ್ಟಿಯಿಂದ ತೆಗೆಸಿದ್ದಾರೆ. ಇಂದು ಇಂಥವರಿಗೆ ಟಿಕೆಟ್ ನೀಡಿದ್ದಾರೆಂದರೆ, ಬಿಜೆಪಿಗೆ ಯಾವ ನೈತಿಕತೆ ಇದೆ. ಏನು ಗೂಂಡಾರಾಜ್ಯ ಮಾಡಲು ಹೊರಟಿದ್ದಾರಾ? ಎಂದು ಅಪಾದನೆ ಮಾಡಿದರು.

ಕೇಂದ್ರ ಸಚಿವರಿಗೆ ಭಾಲ್ಕಿ ಮೇಲೆ ಪ್ರೀತಿ ಇದ್ರೆ ಇಲ್ಲೆ ಬಂದ ನನ್ನ ವಿರುದ್ಧ ಸ್ಪರ್ಧೆ ಮಾಡಲಿ. ಕೇಂದ್ರ ಸಚಿವರು ಗಾಳಿಯಲ್ಲೇ ಬಂದ್ರು ಗಾಳಿಯಲ್ಲೆ ಹೋಗುತ್ತಾರೆ ಎಂದು ಬೀದರ್​ನ ಭಾಲ್ಕಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅವರು ಬಿಜೆಪಿ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಮಾಧ್ಯಮಗೋಷ್ಟಿಯಲ್ಲಿ ಕಲಬುರಗಿ ಮಾಜಿ ಮೇಯರ ಶರಣಕುಮಾರ ಮೋದಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಕಾಶ ಮಾಶೆಟ್ಟೆ ಇದ್ದರು.

ಇದನ್ನೂಓದಿ:ಸಿದ್ದರಾಮಯ್ಯ ಮನವೊಲಿಸಿದ ಹೈಕಮಾಂಡ್​; ಕೋಲಾರ ಕ್ಷೇತ್ರದಿಂದ ಕೊತ್ತೂರು ಮಂಜುನಾಥ್ ಕಣಕ್ಕೆ

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದರು

ಬೀದರ್: ಭಾಲ್ಕಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಸೋಮವಾರ ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆ ದಿನ ಸೋಮವಾರ ಬೆಳಗ್ಗೆ 11.30ಕ್ಕೆ ಹುಮನಾಬಾದ್ ರಸ್ತೆಯ ಅಮರ ಹಾಸ್ಟೆಲ್ ಎದುರಿನ ಬಯಲು ಪ್ರದೇಶದಲ್ಲಿ ಬೃಹತ್ ಬಹಿರಂಗ ಸಭೆ ನಡೆಯಲಿದ್ದು, ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಡಾ ಮಲ್ಲಿಕಾರ್ಜುನ ಖರ್ಗೆ, ರಾಜ್ಯ ಉಸ್ತುವಾರಿ ರಣದೀಪಸಿಂಗ್ ಸುರ್ಜೆವಾಲಾ, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಭಾಗವಹಿಸಲಿದ್ದಾರೆ ಎಂದು ಈಶ್ವರ ಖಂಡ್ರೆ ಶನಿವಾರ ಮಾಧ್ಯಮಗೋಷ್ಟಿಯಲ್ಲಿ ತಿಳಿಸಿದರು.

ತಾಲೂಕಿನ ಮೂಲೆ ಮೂಲೆಯಿಂದ ಸುಮಾರು 25 ಸಾವಿರಕ್ಕೂ ಅಧಿಕ ಕಾರ್ಯಕರ್ತರು, ಅಭಿಮಾನಿಗಳು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಕ್ಷೇತ್ರದಲ್ಲಿ ಕಳೆದ 15 ವರ್ಷಗಳಿಂದ ನಾನಾ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದು, ಜನರ ಕಷ್ಟ ಸುಖಗಳಲ್ಲಿ ಭಾಗವಹಿಸಿದ ತೃಪ್ತಿ ನನಗಿದೆ. ಈ ಬಾರಿ ಮತದಾರರು ಭಾರಿ ಅಂತರದಿಂದ ನನ್ನನ್ನು ಗೆಲ್ಲಿಸಲಿದ್ದಾರೆ ಎಂದು ಖಂಡ್ರೆ ಆತ್ಮವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿಯ ಭ್ರಷ್ಟಾಚಾರ, ದುರಾಡಳಿತದಿಂದ ಜನ ಬೇಸತ್ತಿದ್ದಾರೆ- ಖಂಡ್ರೆ: ಕೇಂದ್ರ, ರಾಜ್ಯದ ಬಿಜೆಪಿ ಸರ್ಕಾರಗಳು ಬೆಲೆ ಏರಿಕೆ, ಭ್ರಷ್ಟಾಚಾರ, ಆಂತರಿಕ ಕಿತ್ತಾಟ, ದುರಾಡಳಿತದಿಂದ ಜನರು ಬೇಸತ್ತು ಹೋಗಿದ್ದು, ರಾಜ್ಯದಲ್ಲಿ ಬಿಜೆಪಿಯನ್ನು ಕಿತ್ತೊಗೆಯಲು ತೀರ್ಮಾನಿಸಿದ್ದಾರೆ. ಹಾಗಾಗಿ ಮತ್ತೆ ರಾಜ್ಯದಲ್ಲಿ ಭಾರಿ ಬಹುಮತದೊಂದಿಗೆ ಕಾಂಗ್ರೆಸ್ ಪಕ್ಷದ ಸರ್ಕಾರ ರಚನೆ ಆಗಲಿದೆ ಎಂದು ಖಂಡ್ರೆ ಭವಿಷ್ಯ ನುಡಿದರು.

ಬಿಜೆಪಿ ಲಿಂಗಾಯತ ವೀರಶೈವರನ್ನು ಕಡೆಗಣಿಸಿದೆ- ಖಂಡ್ರೆ : ಲಿಂಗಾಯತ ವೀರಶೈವ ಮುಖಂಡರನ್ನು ಬಿಜೆಪಿ ಕಡೆಗಣಿಸಿ ಅವಮಾನ ಮಾಡುತ್ತಿದೆ. ಯಡಿಯೂರಪ್ಪ ಅವರನ್ನು ಕಣ್ಣೀರು ಹಾಕಿಸಿದ್ರು. ಈಗ ಜಗದೀಶ್ ಶೆಟ್ಟರ್ ಒಂದು ಟಿಕೆಟ್​ಗಾಗಿ ಪರದಾಡುತ್ತಿದ್ದಾರೆ. ಮಾಜಿ ಡಿಸಿಎಂ ಲಕ್ಷ್ಮಣ್​ ಸವದಿ ಕಣ್ಣೀರು ಹಾಕಿ ಕೊನೆಗೆ ಕಾಂಗ್ರೆಸ್ ಸೇರ್ಪೆಡೆಯಾಗಿದ್ದಾರೆ. ಯಾವ ಏಣಿಯಿಂದ ಏರುತ್ತಾರೋ ಆ ಏಣಿಯನ್ನೇ ಒದೆಯುವ ಸಂಸ್ಕೃತಿ ಬಿಜೆಪಿಯರದ್ದಾಗಿದೆ ಎಂದು ಈಶ್ವರ ಖಂಡ್ರೆ ಹರಿಹಾಯ್ದರು.

ಹಿರಿಯರನ್ನು ಬಿಜೆಪಿಯಲ್ಲಿ ಯಾವ ರೀತಿ ನೋಡಿಕೊಳ್ಳುತ್ತಾರೆ ಎಂದು ಕರ್ನಾಟಕದ ಜನ ಗಮನಿಸುತ್ತಿದ್ದಾರೆ. ಮಾಜಿ ಸಚಿವ ಲಕ್ಷ್ಮಣ್​ ಸವದಿ ಕಾಂಗ್ರೆಸ್ ಬಂದಿದ್ದಾರೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗಲೆಂದು ಆಹ್ವಾನ ನೀಡಿದ ಖಂಡ್ರೆ, ಇನ್ನೂ ಬಹಳಷ್ಟು ನಾಯಕರು ಕಾಂಗ್ರೆಸ್​​ ಪಕ್ಷಕ್ಕೆ ಸೇರ್ಪಡೆ ಆಗುತ್ತಾರೆ. ಕಾದು ನೋಡಿ ಎಂದರು.

ಗೂಂಡಾರಾಜ್ಯ ಮಾಡಲು ಹೊರಟಿದ್ದಾರಾ? ಚಿತ್ತಾಪುರ‌ ಕ್ಷೇತ್ರದಿಂದ ಮಣಿಕಂಠ ರಾಠೋಡ್ ಗೆ ಬಿಜೆಪಿ ಟಿಕೆಟ್ ಘೋಷಣೆ ಆಗಿದೆ. ಇದರಿಂದ ಬಿಜೆಪಿ ಸಂಸ್ಕೃತಿ ಗೊತ್ತಾಗುತ್ತೆ. ಮಣಿಕಂಠ ವಿರುದ್ಧ ಪೊಲೀಸರು ಹಾಗೂ ಕಾನೂನು ಗೂಂಡಾ ಕಾಯ್ದೆ ಪಟ್ಟಿಯಿಂದ ತೆಗೆಯಬಾರದು ಎಂದಿದ್ರು, ಆದ್ರು ರಾಜಕೀಯ ದುರುದ್ದೇಶದಿಂದ ಗೂಂಡಾ ಪಟ್ಟಿಯಿಂದ ತೆಗೆಸಿದ್ದಾರೆ. ಇಂದು ಇಂಥವರಿಗೆ ಟಿಕೆಟ್ ನೀಡಿದ್ದಾರೆಂದರೆ, ಬಿಜೆಪಿಗೆ ಯಾವ ನೈತಿಕತೆ ಇದೆ. ಏನು ಗೂಂಡಾರಾಜ್ಯ ಮಾಡಲು ಹೊರಟಿದ್ದಾರಾ? ಎಂದು ಅಪಾದನೆ ಮಾಡಿದರು.

ಕೇಂದ್ರ ಸಚಿವರಿಗೆ ಭಾಲ್ಕಿ ಮೇಲೆ ಪ್ರೀತಿ ಇದ್ರೆ ಇಲ್ಲೆ ಬಂದ ನನ್ನ ವಿರುದ್ಧ ಸ್ಪರ್ಧೆ ಮಾಡಲಿ. ಕೇಂದ್ರ ಸಚಿವರು ಗಾಳಿಯಲ್ಲೇ ಬಂದ್ರು ಗಾಳಿಯಲ್ಲೆ ಹೋಗುತ್ತಾರೆ ಎಂದು ಬೀದರ್​ನ ಭಾಲ್ಕಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅವರು ಬಿಜೆಪಿ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಮಾಧ್ಯಮಗೋಷ್ಟಿಯಲ್ಲಿ ಕಲಬುರಗಿ ಮಾಜಿ ಮೇಯರ ಶರಣಕುಮಾರ ಮೋದಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಕಾಶ ಮಾಶೆಟ್ಟೆ ಇದ್ದರು.

ಇದನ್ನೂಓದಿ:ಸಿದ್ದರಾಮಯ್ಯ ಮನವೊಲಿಸಿದ ಹೈಕಮಾಂಡ್​; ಕೋಲಾರ ಕ್ಷೇತ್ರದಿಂದ ಕೊತ್ತೂರು ಮಂಜುನಾಥ್ ಕಣಕ್ಕೆ

Last Updated : Apr 15, 2023, 9:09 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.