ETV Bharat / state

ಜೆಎನ್‌ಯು ಹಿಂಸಾಚಾರ ಖಂಡಿಸಿ ಬಸವಕಲ್ಯಾಣದಲ್ಲಿ ಎಸ್‌ಐಒನಿಂದ ಪ್ರತಿಭಟನೆ

ದೆಹಲಿಯ ಪ್ರತಿಷ್ಠಿತ ಜವಹಾರ್ ಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಮೇಲೆ ನಡೆದ ಹಲ್ಲೆ ಖಂಡಿಸಿ ಎಸ್‌ಐಒ ಸ್ಥಳೀಯ ಬಸವಕಲ್ಯಾಣದಲ್ಲಿ ಪ್ರತಿಭಟನೆ ನಡೆಸಿತು. ಸಂಘಟನೆಯ ಕಾರ್ಯಕರ್ತರು ಪ್ರಧಾನಿ, ಗೃಹ ಸಚಿವರು, ಆರ್‌ಎಸ್‌ಎಸ್ ಹಾಗೂ ದೆಹಲಿ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

author img

By

Published : Jan 7, 2020, 3:42 AM IST

sio-protests-against-condemn-attacks-on-jnu-students
ಜೆಎನ್‌ಯು ವಿದ್ಯಾರ್ಥಿಗಳ ಮೇಲೆ ಹಲ್ಲೆ ಖಂಡಿಸಿ ಬಸವಕಲ್ಯಾಣದಲ್ಲಿ ಎಸ್‌ಐಒನಿಂದ ಪ್ರತಿಭಟನೆ

ಬೀದರ್​/ಬಸವಕಲ್ಯಾಣ: ದೆಹಲಿಯ ಜವಹಾರ್ ಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್​ಯು) ವಿದ್ಯಾರ್ಥಿಗಳ ಮೇಲೆ ನಡೆದ ಹಲ್ಲೆ ಖಂಡಿಸಿ ಎಸ್‌ಐಒ ಸ್ಥಳೀಯ ಘಟಕದಿಂದ ಪ್ರತಿಭಟನೆ ನಡೆಸಲಾಯಿತು.

ಜೆಎನ್‌ಯು ವಿದ್ಯಾರ್ಥಿಗಳ ಮೇಲೆ ಹಲ್ಲೆ ಖಂಡಿಸಿ ಬಸವಕಲ್ಯಾಣದಲ್ಲಿ ಎಸ್‌ಐಒನಿಂದ ಪ್ರತಿಭಟನೆ

ನಗರದ ಅಂಬೇಡ್ಕರ್ ವೃತ್ತದಲ್ಲಿಯ ಜಮಾಯಿಸಿದ ಪ್ರತಿಭಟನಾಕಾರರು ಕೈ ಹಾಗೂ ಹಣೆಗೆ ಕಪ್ಪು ಪಟ್ಟಿ ಕಟ್ಟಿಕೊಂಡು ವಿದ್ಯಾರ್ಥಿಗಳ ಮೇಲೆ ನಡೆದ ಹಲ್ಲೆಯನ್ನು ನಡೆಸಿದರು. ಪ್ರಧಾನಿ, ಗೃಹ ಸಚಿವರು, ಆರ್‌ಎಸ್‌ಎಸ್ ಹಾಗೂ ದೆಹಲಿ ಪೊಲೀಸರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಎಲ್ಲ ಸಮುದಾಯದ, ಜಾತಿ, ಧರ್ಮೀಯರು ಒಗ್ಗೂಡಿ ದೇಶದಲ್ಲಿ ಕೋಮು ಸೌಹಾರ್ಧತೆಯಿಂದ ಬಾಳುತ್ತಿದ್ದಾರೆ. ಆದರೆ, ಕೇಂದ್ರ ಬಿಜೆಪಿ ಸರ್ಕಾರ ಎನ್‌ಆರ್‌ಸಿ ಮತ್ತು ಸಿಎಎ ಜಾರಿಗೆ ತರುವ ಮೂಲಕ ದೇಶದಲ್ಲಿ ಕೋಮುವಾದ ಬೆಳೆಸುತ್ತಿದೆ. ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಆರೋಪಿಗಳನ್ನು ತಕ್ಷಣ ಬಂಧಿಸಿ, ಕಠೀಣ ಶಿಕ್ಷೆಗೆ ಗುರಿ ಪಡಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಎಸ್‌ಐಓ ಜಿಲ್ಲಾಧ್ಯಕ್ಷ ಮಹಮದ್ ನಜೀಮೋದ್ದಿನ್, ತಾಲೂಕು ಘಟಕ ಅಧ್ಯಕ್ಷ ಅಸಾದುಲ್ಲಾ ಖಾನ್, ಜಮಾಯಿತೆ ಇಸ್ಲಾಮಿ ಹಿಂದ್ ಸಂಘಟನೆ ರಾಜ್ಯ ಕಾರ್ಯದರ್ಶಿ ಅಸ್ಲಾಮ್ ಜನಾಬ್, ಮುಸ್ಲಿಂ ಬೈತುಲ್ ಮಾಲ್ ಅಧ್ಯಕ್ಷ ಮಕದುಮ್ ಮೋಹಿಯೋದ್ದಿನ್ ಸೇರಿದಂತೆ ಮತ್ತಿತ್ತರರು ಭಾಗವಹಿಸಿದ್ದರು.

ಬೀದರ್​/ಬಸವಕಲ್ಯಾಣ: ದೆಹಲಿಯ ಜವಹಾರ್ ಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್​ಯು) ವಿದ್ಯಾರ್ಥಿಗಳ ಮೇಲೆ ನಡೆದ ಹಲ್ಲೆ ಖಂಡಿಸಿ ಎಸ್‌ಐಒ ಸ್ಥಳೀಯ ಘಟಕದಿಂದ ಪ್ರತಿಭಟನೆ ನಡೆಸಲಾಯಿತು.

ಜೆಎನ್‌ಯು ವಿದ್ಯಾರ್ಥಿಗಳ ಮೇಲೆ ಹಲ್ಲೆ ಖಂಡಿಸಿ ಬಸವಕಲ್ಯಾಣದಲ್ಲಿ ಎಸ್‌ಐಒನಿಂದ ಪ್ರತಿಭಟನೆ

ನಗರದ ಅಂಬೇಡ್ಕರ್ ವೃತ್ತದಲ್ಲಿಯ ಜಮಾಯಿಸಿದ ಪ್ರತಿಭಟನಾಕಾರರು ಕೈ ಹಾಗೂ ಹಣೆಗೆ ಕಪ್ಪು ಪಟ್ಟಿ ಕಟ್ಟಿಕೊಂಡು ವಿದ್ಯಾರ್ಥಿಗಳ ಮೇಲೆ ನಡೆದ ಹಲ್ಲೆಯನ್ನು ನಡೆಸಿದರು. ಪ್ರಧಾನಿ, ಗೃಹ ಸಚಿವರು, ಆರ್‌ಎಸ್‌ಎಸ್ ಹಾಗೂ ದೆಹಲಿ ಪೊಲೀಸರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಎಲ್ಲ ಸಮುದಾಯದ, ಜಾತಿ, ಧರ್ಮೀಯರು ಒಗ್ಗೂಡಿ ದೇಶದಲ್ಲಿ ಕೋಮು ಸೌಹಾರ್ಧತೆಯಿಂದ ಬಾಳುತ್ತಿದ್ದಾರೆ. ಆದರೆ, ಕೇಂದ್ರ ಬಿಜೆಪಿ ಸರ್ಕಾರ ಎನ್‌ಆರ್‌ಸಿ ಮತ್ತು ಸಿಎಎ ಜಾರಿಗೆ ತರುವ ಮೂಲಕ ದೇಶದಲ್ಲಿ ಕೋಮುವಾದ ಬೆಳೆಸುತ್ತಿದೆ. ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಆರೋಪಿಗಳನ್ನು ತಕ್ಷಣ ಬಂಧಿಸಿ, ಕಠೀಣ ಶಿಕ್ಷೆಗೆ ಗುರಿ ಪಡಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಎಸ್‌ಐಓ ಜಿಲ್ಲಾಧ್ಯಕ್ಷ ಮಹಮದ್ ನಜೀಮೋದ್ದಿನ್, ತಾಲೂಕು ಘಟಕ ಅಧ್ಯಕ್ಷ ಅಸಾದುಲ್ಲಾ ಖಾನ್, ಜಮಾಯಿತೆ ಇಸ್ಲಾಮಿ ಹಿಂದ್ ಸಂಘಟನೆ ರಾಜ್ಯ ಕಾರ್ಯದರ್ಶಿ ಅಸ್ಲಾಮ್ ಜನಾಬ್, ಮುಸ್ಲಿಂ ಬೈತುಲ್ ಮಾಲ್ ಅಧ್ಯಕ್ಷ ಮಕದುಮ್ ಮೋಹಿಯೋದ್ದಿನ್ ಸೇರಿದಂತೆ ಮತ್ತಿತ್ತರರು ಭಾಗವಹಿಸಿದ್ದರು.

Intro:(ಗಮನಕ್ಕೆ: ಸುದ್ದಿಯಲ್ಲಿ ಬರೆಯಲಾದ ಹೆಸರುಗಳನ್ನು ಕಟ್ ಮಾಡಬೇಡಿ ಸರ್)


ಎರಡು ವಿಡಿಯೊ ಕಳಿಸಲಾಗಿದೆ



ಬಸವಕಲ್ಯಾಣ: ದೆಹಲಿಯ ಜವಹಾರ್ ಲಾಲ್ ನೆಹರು ವಿವಿ ವಿದ್ಯಾರ್ಥಿಗಳ ಮೇಲೆ ನಡೆದ ಹಲ್ಲೆ ಘಟನೆ ಖಂಡಿಸಿ ಎಸ್‌ಐಒ ಸ್ಥಳೀಯ ಘಟಕದಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಅಂಬೇಡ್ಕರ್ ವೃತ್ತದಲ್ಲಿಯ ಡಾ: ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆ ಮುಂದೆ ಸೋಮವಾರ ಸಂಜೆ ಕೆಲ ಕಾಲ ಕೈಗೆ ಹಾಘೂ ಹಣೆಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಧರಣಿ ಕುಳಿತು ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು, ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಘಟನೆಗೆ ತೀವ್ರವಾಗಿ ಖಂಡಿಸಿದರು. ಈ ವೇಳೆ ಪ್ರಧಾನಿ ಹಾಗೂ ಗೃಹ ಸಚಿವರ ವಿರುದ್ಧ, ಆರ್‌ಎಸ್‌ಎಸ್ ಹಾಗೂ ದೆಹಲಿ ಪೊಲೀಸರ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಹಿಂದು, ಮುಸ್ಲಿ ಸೇರಿದಂತೆ ವಿವಿಧ ಜಾತಿ, ಧರ್ಮಗಳನ್ನು ಒಳಗೊಂಡ ಭಾರತ ದೇಶದಲ್ಲಿ ಜನರು ಪರಸ್ಪರ, ಕೋಮು ಸೌಹಾರ್ಧತೆಯಿಂದ ಬಾಳುತ್ತಿದ್ದಾರೆ. ಆದರೆ ಕೇಂದ್ರ ಬಿಜೆಪಿ ಸರ್ಕಾರ ಎನ್‌ಆರ್‌ಸಿ ಮತ್ತು ಸಿಎಎ ಜಾರಿಗೆ ತರುವ ಮೂಲಕ ದೇಶದಲ್ಲಿ ಕೋಮುವಾದ ಬೆಳೆಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಧಾರ್ಮಾಧಾರಿತವಾಗಿ ದೇಶದ ಜನರನ್ನು ವಿಭಜಿಸುವ ಪೌರತ್ವ ತಿದ್ದುಪಡಿ ಕಾಯ್ದೆ ಕೂಡಲೇ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು.
ವಿದ್ಯಾರ್ಥಿಗಳ ಮೇಲೆ ಮನಬಂದAತೆ ಹಲ್ಲೆ ನಡೆಸಿದ ಆರೋಪಿಗಳನ್ನು ತಕ್ಷಣ ಬಂಧಿಸಿ, ಕಠೀಣ ಶಿಕ್ಷೆಗೆ ಗುರಿ ಪಡಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆ ವೇಳೆ ಪ್ರಮುಖರು ಮಾತನಾಡಿ, ಸಬಕಾ ಸಾಥ್ ಸಬಕಾ ವಿಕಾಸ ಎಂದು ಹೇಳಿ ಅದಿಕಾರಕ್ಕೆ ಬಂದು ಜನವಿರೋಧಿ, ಮತ್ತು ದೇಶದಲ್ಲಿ ಧರ್ಮಾಧಾರದಲ್ಲಿ ಜನರನ್ನು ಒಡೆದು ಆಳುವ ನೀತಿ ಅನುಸರಿಸುತ್ತಿದ್ದಾರೆ. ಕೋಮು ಸೌಹಾರ್ಧತೆಯಿಂದ ಬಾಳುತ್ತಿರುವ ದೇಶದ ಜನರನ್ನು ಒಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಎಸ್‌ಐಓ ಜಿಲ್ಲಾಧ್ಯಕ್ಷ ಮಹ್ಮದ್ ನಜೀಮೋದ್ದಿನ್, ಸ್ಥಳೀಯ ಅಧ್ಯಕ್ಷ ಅಸದುಲ್ಲಾ ಖಾನ್, ಜಮಾಅತೆ ಇಸ್ಲಾಮಿ ಹಿಂದ್ ಸಂಘಟನೆ ರಾಜ್ಯ ಕಾರ್ಯದರ್ಶಿ ಅಸ್ಲಾಮ್ ಜನಾಬ್, ಮುಸ್ಲಿಮ್ ಬೈತುಲ್ ಮಾಲ್ ಅಧ್ಯಕ್ಷ ಮಕದುಮ್ ಮೋಹಿಯೋದ್ದಿನ್,
ಪ್ರಮುಖರಾದ ಮುಜಾಹಿದ್ ಪಾಶಾ ಖುರೇಶಿ, ಮಹ್ಮದ್ ರೈಸೊದ್ದಿನ್, ಸೈಯದ್ ಶಹಬಾಜ್, ಮೀರ್ ಆಶೀಪ್, ಮಹ್ಮದ್ ನವಾಜೋದ್ದಿನ್ ಸೇರಿದಂತೆ ಸಂಘಟನೆಗಳ ಪದಾಧಿಕಾರಿಗಳು, ಪ್ರಮುಖರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ರಾಷ್ಟçಪತಿಗಳ ಹೆಸರಲ್ಲಿ ಬರೆದ ಮನವಿ ಪತ್ರವನ್ನು ಸ್ಥಳಕ್ಕೆ ಭೇಟಿನೀಡಿದ ಉಪತಹಶೀಲ್ದಾರ ಶಿವಕುಮಾರ ಸಾಬಾ ಅವರಿಗೆ ಸಲ್ಲಿಸಲಾಯಿತು.


ವರದಿ
ಉದಯಕುಮಾರ ಮುಳೆ
ಈ ಟಿವಿ ಭಾರತ
ಬಸವಕಲ್ಯಾಣ


ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುವ ಮುಖಂಡರ ಹೆಸರು

ಅಸ್ಲಾಮ್ ಜನಾಬ್
ಜಮಾತೆ ಇಸ್ಲಾಮಿ ಹಿಂದ್ ಸಂಘಟನೆ ರಾಜ್ಯ ಕಾರ್ಯದರ್ಶಿ


(ಬಿಳಿ ಬಣ್ಣದ ಶರ್ಟ್ ಹಾಗೂ ಕಪ್ಪು ಬಣ್ಣದ ಪ್ಯಾಂಟ್ ಧರಿಸಿದ್ದಾರೆ.. ಇವರ ಪಕ್ಕದಲ್ಲಿ ಕೆಂಪುಬಣ್ಣದ ಶರ್ಟ್ ಧರಿಸಿದ ಮತ್ತೊಬ್ಬ ಯುವಕ ನಿಂತಿದ್ದಾನೆ)

Body:UDAYAKUMAR MULEConclusion:BASAVAKALYAN
ETV Bharat Logo

Copyright © 2024 Ushodaya Enterprises Pvt. Ltd., All Rights Reserved.