ETV Bharat / state

ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಶಾಸಕ ನಾರಾಯಣರಾವ್ ಅಂತ್ಯಕ್ರಿಯೆ

ಕೊರೊನಾ ಸೋಂಕಿಗೆ ಬಲಿಯಾದ ಕ್ಷೇತ್ರದ ಶಾಸಕ ಬಿ. ನಾರಾಯಣರಾವ್​ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಬಸವಕಲ್ಯಾಣದ ಸಸ್ತಾಪುರ ಬಂಗ್ಲಾ ಬಳಿಯ ಕೈಗಾರಿಕೆ ಪ್ರದೇಶ ಸಮೀಪದ ಬೊಕ್ಕೆ ಲೇಔಟ್​ನಲ್ಲಿ ಸರ್ಕಾರಿ ಗೌರವ ಹಾಗೂ ಧಾರ್ಮಿಕ ವಿಧಿ ವಿಧಾನಗಳನುಸಾರ ಕೊರೊನಾ ನಿಯಮಗಳನ್ನನುಸರಿಸಿ ನೆರವೇರಿಸಲಾಯಿತು.

author img

By

Published : Sep 25, 2020, 3:24 PM IST

Updated : Sep 25, 2020, 9:29 PM IST

The funeral of Narayana Rao with all government honours
ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಶಾಸಕ ಬಿ. ನಾರಾಯಣರಾವ್ ಅಂತ್ಯಕ್ರಿಯೆ

ಬಸವಕಲ್ಯಾಣ(ಬೀದರ್): ಕೊರೊನಾ ಸೋಂಕಿಗೆ ಬಲಿಯಾದ ಕ್ಷೇತ್ರದ ಶಾಸಕ ಬಿ. ನಾರಾಯಣರಾವ್​ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.

ಇಲ್ಲಿಯ ಸಸ್ತಾಪುರ ಬಂಗ್ಲಾ ಬಳಿಯ ಕೈಗಾರಿಕೆ ಪ್ರದೇಶ ಸಮೀಪದ ಬೊಕ್ಕೆ ಲೇಔಟ್​ನಲ್ಲಿ ಸರ್ಕಾರಿ ಗೌರವ ಹಾಗೂ ಧಾರ್ಮಿಕ ವಿಧಿ ವಿಧಾನಗಳನುಸಾರ ಕೊರೊನಾ ನಿಯಮಗಳನ್ನನುಸರಿಸಿ ಅಗಲಿದ ಶಾಸಕರಿಗೆ ಅಂತಿಮ ನಮನ ಸಲ್ಲಿಸಲಾಯಿತು.

ಅಂತ್ಯಕ್ರಿಯೆ ವೇಳೆ ಕನಿಷ್ಠ ಪಡೆಯಿಂದ ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸುವ ಮೂಲಕ ಅಗಲಿದ ಶಾಸಕರಿಗೆ ಗೌರವ, ಅಂತಿಮ ನಮನ ಸಲ್ಲಿಸಲಾಯಿತು.

ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಶಾಸಕ ನಾರಾಯಣರಾವ್ ಅಂತ್ಯಕ್ರಿಯೆ

ಹಾರಕೂಡನ ಡಾ.ಚನ್ನವೀರ ಶಿವಾಚಾರ್ಯರು, ಭಾಲ್ಕಿಯ ಗುರುಬಸವ ಪಟ್ಟದೇವರು, ಕಲಬುರಗಿ ಸಂಸದ ಡಾ.ಉಮೇಶ್ ಜಾಧವ್, ಬೀದರ್ ಸಂಸದ ಭಗವಂತ್ ಖೂಬಾ, ಕೆಪಿಸಿಸಿ ಕಾರ್ಯಧ್ಯಕ್ಷ ಈಶ್ವರ ಖಂಡ್ರೆ, ಮಾಜಿ ಸಚಿವರು ಹಾಗೂ ಹಾಲಿ ಶಾಸಕರುಗಳಾದ ರಾಜಶೇಖರ್ ಪಾಟೀಲ ಹುಮನಾಬಾದ, ಬಂಡೆಪ್ಪ ಕಾಶೆಂಪೂರ, ಯುಟಿ ಖಾದರ್, ವಿಧಾನ ಪರಿಷತ್ ಸದಸ್ಯರಾದ ವಿಜಯಸಿಂಗ್, ಚಂದ್ರಶೇಖರ್ ಪಾಟೀಲ, ಕುಪ್ಪಣ್ಣ ಕಮಕನೂರ, ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ, ಜಿಲ್ಲಾಧಿಕಾರಿ ಆರ್. ರಾಮಚಂದ್ರನ್, ಎಸ್ಪಿ ಡಿ.ಎಲ್, ನಾಗೇಶ ಸೇರಿದಂತೆ ಹಿರಿಯ ರಾಜಕೀಯ ಧುರೀಣರು, ಅಧಿಕಾರಿಗಳು, ಶಾಸಕರ ಅಭಿಮಾನಿಗಳು ಅಂತ್ಯಕ್ರಿಯೆಯಲ್ಲಿ ಭಾಗಿಯಾದರು.

ಪಿಪಿಇ ಕಿಟ್ ಬಳಕೆ: ಶಾಸಕ ಬಿ. ನಾರಾಯಣರಾವ್​ ಅವರು ಮಾರಕ ಕೊರೊನಾದಿಂದ ಮೃತಪಟ್ಟ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆ ವೇಳೆ ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿ ಡಾ.ವಿ.ಜಿ.ರೆಡ್ಡಿ ನೇತೃತ್ವದಲ್ಲಿ ಇತರೆ ಆರೋಗ್ಯ ಇಲಾಖೆ ಸಿಬ್ಬಂದಿ ಪಿಪಿಇ ಕಿಟ್ ಧರಿಸಿ ಅಂತಿಮ ಸಂಸ್ಕಾರ ನೆರವೇರಿಸಿದರು.

ಪಿಪಿಇ ಕಿಟ್​ನಲ್ಲಿಯೇ ಸ್ಥಳದಲ್ಲಿದ್ದ ಶಾಸಕರ ಪತ್ನಿ ಮಲ್ಲಮ್ಮ ಹಾಗೂ ಪುತ್ರರಾದ ಗೌತಮ ಮತ್ತು ರಾಹುಲ್ ಅವರ ಆಕ್ರಂದನ ಮುಗಿಲು ಮುಟ್ಟಿತು. ಅಂತ್ಯಕ್ರಿಯೆ ಸ್ಥಳಕ್ಕೆ ಹೆಚ್ಚಿನ ಜನರಿಗೆ ಪ್ರವೇಶ ಇಲ್ಲದಿದ್ದ ಕಾರಣ ಕ್ಷೇತ್ರ ಸೇರಿದಂತೆ ಜಿಲ್ಲೆಯ ನಾನಾ ಕಡೆಗಳಿಂದ ಆಗಮಿಸಿದ ಶಾಸಕರ ಅಭಿಮಾನಿಗಳು ದೂರದಲ್ಲಿಯೇ ನಿಂತು ಅಂತಿಮ ದರ್ಶನ ಪಡೆದರು.

ರಾಹುಲ್ ಗಾಂಧಿ ಶೋಕ:

ಮಹಾಮಾರಿ ಕೊರೊನಾ ಸೋಂಕಿಗೆ ಬಲಿಯಾದ ಕಾಂಗ್ರೆಸ್ ಶಾಸಕ ಬಿ.ನಾರಾಯಣರಾವ ಅವರ ನಿಧನಕ್ಕೆ ಕಾಂಗ್ರೆಸ್ ಪಕ್ಷದ ವರಿಷ್ಠ ರಾಹುಲ್ ಗಾಂಧಿ ತ್ರೀವ ಶೋಕ ವ್ಯಕ್ತಪಡಿಸಿ ಶಾಸಕರ ಪತ್ನಿ ಮಲ್ಲಮ್ಮ ನವರ ಹೆಸರಿಗೆ ರಾಹುಲ್ ಗಾಂಧಿ ಬರೆದ ಶೋಕ ಸಂದೇಶ ಹೊತ್ತ ಪತ್ರವನ್ನು ಕೆಪಿಸಿಸಿ ಕಾರ್ಯಧ್ಯಕ್ಷ ಈಶ್ವರ ಖಂಡ್ರೆ ಹಸ್ತಾಂತರಿಸಿದರು.

ಬಸವಕಲ್ಯಾಣ(ಬೀದರ್): ಕೊರೊನಾ ಸೋಂಕಿಗೆ ಬಲಿಯಾದ ಕ್ಷೇತ್ರದ ಶಾಸಕ ಬಿ. ನಾರಾಯಣರಾವ್​ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.

ಇಲ್ಲಿಯ ಸಸ್ತಾಪುರ ಬಂಗ್ಲಾ ಬಳಿಯ ಕೈಗಾರಿಕೆ ಪ್ರದೇಶ ಸಮೀಪದ ಬೊಕ್ಕೆ ಲೇಔಟ್​ನಲ್ಲಿ ಸರ್ಕಾರಿ ಗೌರವ ಹಾಗೂ ಧಾರ್ಮಿಕ ವಿಧಿ ವಿಧಾನಗಳನುಸಾರ ಕೊರೊನಾ ನಿಯಮಗಳನ್ನನುಸರಿಸಿ ಅಗಲಿದ ಶಾಸಕರಿಗೆ ಅಂತಿಮ ನಮನ ಸಲ್ಲಿಸಲಾಯಿತು.

ಅಂತ್ಯಕ್ರಿಯೆ ವೇಳೆ ಕನಿಷ್ಠ ಪಡೆಯಿಂದ ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸುವ ಮೂಲಕ ಅಗಲಿದ ಶಾಸಕರಿಗೆ ಗೌರವ, ಅಂತಿಮ ನಮನ ಸಲ್ಲಿಸಲಾಯಿತು.

ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಶಾಸಕ ನಾರಾಯಣರಾವ್ ಅಂತ್ಯಕ್ರಿಯೆ

ಹಾರಕೂಡನ ಡಾ.ಚನ್ನವೀರ ಶಿವಾಚಾರ್ಯರು, ಭಾಲ್ಕಿಯ ಗುರುಬಸವ ಪಟ್ಟದೇವರು, ಕಲಬುರಗಿ ಸಂಸದ ಡಾ.ಉಮೇಶ್ ಜಾಧವ್, ಬೀದರ್ ಸಂಸದ ಭಗವಂತ್ ಖೂಬಾ, ಕೆಪಿಸಿಸಿ ಕಾರ್ಯಧ್ಯಕ್ಷ ಈಶ್ವರ ಖಂಡ್ರೆ, ಮಾಜಿ ಸಚಿವರು ಹಾಗೂ ಹಾಲಿ ಶಾಸಕರುಗಳಾದ ರಾಜಶೇಖರ್ ಪಾಟೀಲ ಹುಮನಾಬಾದ, ಬಂಡೆಪ್ಪ ಕಾಶೆಂಪೂರ, ಯುಟಿ ಖಾದರ್, ವಿಧಾನ ಪರಿಷತ್ ಸದಸ್ಯರಾದ ವಿಜಯಸಿಂಗ್, ಚಂದ್ರಶೇಖರ್ ಪಾಟೀಲ, ಕುಪ್ಪಣ್ಣ ಕಮಕನೂರ, ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ, ಜಿಲ್ಲಾಧಿಕಾರಿ ಆರ್. ರಾಮಚಂದ್ರನ್, ಎಸ್ಪಿ ಡಿ.ಎಲ್, ನಾಗೇಶ ಸೇರಿದಂತೆ ಹಿರಿಯ ರಾಜಕೀಯ ಧುರೀಣರು, ಅಧಿಕಾರಿಗಳು, ಶಾಸಕರ ಅಭಿಮಾನಿಗಳು ಅಂತ್ಯಕ್ರಿಯೆಯಲ್ಲಿ ಭಾಗಿಯಾದರು.

ಪಿಪಿಇ ಕಿಟ್ ಬಳಕೆ: ಶಾಸಕ ಬಿ. ನಾರಾಯಣರಾವ್​ ಅವರು ಮಾರಕ ಕೊರೊನಾದಿಂದ ಮೃತಪಟ್ಟ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆ ವೇಳೆ ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿ ಡಾ.ವಿ.ಜಿ.ರೆಡ್ಡಿ ನೇತೃತ್ವದಲ್ಲಿ ಇತರೆ ಆರೋಗ್ಯ ಇಲಾಖೆ ಸಿಬ್ಬಂದಿ ಪಿಪಿಇ ಕಿಟ್ ಧರಿಸಿ ಅಂತಿಮ ಸಂಸ್ಕಾರ ನೆರವೇರಿಸಿದರು.

ಪಿಪಿಇ ಕಿಟ್​ನಲ್ಲಿಯೇ ಸ್ಥಳದಲ್ಲಿದ್ದ ಶಾಸಕರ ಪತ್ನಿ ಮಲ್ಲಮ್ಮ ಹಾಗೂ ಪುತ್ರರಾದ ಗೌತಮ ಮತ್ತು ರಾಹುಲ್ ಅವರ ಆಕ್ರಂದನ ಮುಗಿಲು ಮುಟ್ಟಿತು. ಅಂತ್ಯಕ್ರಿಯೆ ಸ್ಥಳಕ್ಕೆ ಹೆಚ್ಚಿನ ಜನರಿಗೆ ಪ್ರವೇಶ ಇಲ್ಲದಿದ್ದ ಕಾರಣ ಕ್ಷೇತ್ರ ಸೇರಿದಂತೆ ಜಿಲ್ಲೆಯ ನಾನಾ ಕಡೆಗಳಿಂದ ಆಗಮಿಸಿದ ಶಾಸಕರ ಅಭಿಮಾನಿಗಳು ದೂರದಲ್ಲಿಯೇ ನಿಂತು ಅಂತಿಮ ದರ್ಶನ ಪಡೆದರು.

ರಾಹುಲ್ ಗಾಂಧಿ ಶೋಕ:

ಮಹಾಮಾರಿ ಕೊರೊನಾ ಸೋಂಕಿಗೆ ಬಲಿಯಾದ ಕಾಂಗ್ರೆಸ್ ಶಾಸಕ ಬಿ.ನಾರಾಯಣರಾವ ಅವರ ನಿಧನಕ್ಕೆ ಕಾಂಗ್ರೆಸ್ ಪಕ್ಷದ ವರಿಷ್ಠ ರಾಹುಲ್ ಗಾಂಧಿ ತ್ರೀವ ಶೋಕ ವ್ಯಕ್ತಪಡಿಸಿ ಶಾಸಕರ ಪತ್ನಿ ಮಲ್ಲಮ್ಮ ನವರ ಹೆಸರಿಗೆ ರಾಹುಲ್ ಗಾಂಧಿ ಬರೆದ ಶೋಕ ಸಂದೇಶ ಹೊತ್ತ ಪತ್ರವನ್ನು ಕೆಪಿಸಿಸಿ ಕಾರ್ಯಧ್ಯಕ್ಷ ಈಶ್ವರ ಖಂಡ್ರೆ ಹಸ್ತಾಂತರಿಸಿದರು.

Last Updated : Sep 25, 2020, 9:29 PM IST

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.