ETV Bharat / state

ಚಲಿಸುತ್ತಿದ್ದ ಲಾರಿಗೆ ತಗುಲಿದ ಬೆಂಕಿ, ಲಾರಿ ಸೇರಿ ಲಕ್ಷಾಂತರ ರೂ ಮೌಲ್ಯದ ವಸ್ತುಗಳು ಭಸ್ಮ

author img

By

Published : Oct 13, 2019, 5:34 PM IST

ಬಸವಕಲ್ಯಾಣ ತಾಲೂಕಿನ ರಾಷ್ಟ್ರೀಯ  ಹೆದ್ದಾರಿ- 65 ರ ಚಂಡಕಾಪುರದ ಸಮೀಪ ಭಾನುವಾರ ಮಧ್ಯಾಹ್ನ ಚಲಿಸುತ್ತಿದ್ದ ಲಾರಿಗೆ ಬೆಂಕಿ ತಗುಲಿ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾದ ಘಟನೆ ನಡೆದಿದೆ.

ಚಲಿಸುತ್ತಿದ್ದ ಲಾರಿಗೆ ತಗುಲಿದ ಬೆಂಕಿ

ಬಸವಕಲ್ಯಾಣ: ಚಲಿಸುತ್ತಿದ್ದ ಲಾರಿಗೆ ಬೆಂಕಿ ತಗುಲಿ ಲಾರಿ ಸಹಿತ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾದ ಘಟನೆ ರಾಜ್ಯದ ಗಡಿಯಲ್ಲಿರುವ ಬಸವಕಲ್ಯಾಣ ತಾಲೂಕಿನ ರಾಷ್ಟ್ರೀಯ ಹೆದ್ದಾರಿ- 65 ರ ಚಂಡಕಾಪುರದ ಸಮೀಪ ಭಾನುವಾರ ಮಧ್ಯಾಹ್ನ ನಡೆದಿದೆ.

ಮಹಾರಾಷ್ಟ್ರದ ಮುಂಬೈ ಮೂಲದ ಲಾರಿ ಆಂಧ್ರಪ್ರದೇಶದ ಗುಂಟೂರುನಿಂದ ಮುಂಬೈ ಕಡೆಗೆ ತೆರಳುತಿತ್ತು. ಈ ವೇಳೆ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಲಾರಿಗೆ ಬೆಂಕಿ ತಗುಲಿದೆ. ಪರಿಣಾಮ ಲಾರಿ ಸಹಿತ ಅದರಲ್ಲಿದ್ದ ಲಕ್ಷಾಂತರ ಮೌಲ್ಯದ ದಾರದ (ನೂಲು) ಬಂಡಲ್‌ಗಳು ಸುಟ್ಟು ಕರಕಲಾಗಿವೆ. ಲಾರಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ಪ್ರತಕ್ಷದರ್ಶಿಗಳು ತಿಳಿಸಿದ್ದಾರೆ.

ಚಲಿಸುತ್ತಿದ್ದ ಲಾರಿಗೆ ತಗುಲಿದ ಬೆಂಕಿ; ಲಾರಿ ಸೇರಿ ಲಕ್ಷಾಂತರ ರೂ,ಮೌಲ್ಯದ ವಸ್ತುಗಳು ಭಸ್ಮ

ಸುದ್ದಿ ತಿಳಿದು ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಆದರೆ ಅವರು ಬರುವ ವೇಳೆಗಾಗಲೇ ಶೇ.80 ರಷ್ಟು ಲಾರಿಯನ್ನು ಬೆಂಕಿ ಆಹುತಿ ಪಡೆದುಕೊಂಡಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.

ಬಸವಕಲ್ಯಾಣ ಗ್ರಾಮೀಣ ಠಾಣೆ ಪಿಎಸ್ಐ ಅರುಣಕುಮಾರ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಬಸವಕಲ್ಯಾಣ: ಚಲಿಸುತ್ತಿದ್ದ ಲಾರಿಗೆ ಬೆಂಕಿ ತಗುಲಿ ಲಾರಿ ಸಹಿತ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾದ ಘಟನೆ ರಾಜ್ಯದ ಗಡಿಯಲ್ಲಿರುವ ಬಸವಕಲ್ಯಾಣ ತಾಲೂಕಿನ ರಾಷ್ಟ್ರೀಯ ಹೆದ್ದಾರಿ- 65 ರ ಚಂಡಕಾಪುರದ ಸಮೀಪ ಭಾನುವಾರ ಮಧ್ಯಾಹ್ನ ನಡೆದಿದೆ.

ಮಹಾರಾಷ್ಟ್ರದ ಮುಂಬೈ ಮೂಲದ ಲಾರಿ ಆಂಧ್ರಪ್ರದೇಶದ ಗುಂಟೂರುನಿಂದ ಮುಂಬೈ ಕಡೆಗೆ ತೆರಳುತಿತ್ತು. ಈ ವೇಳೆ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಲಾರಿಗೆ ಬೆಂಕಿ ತಗುಲಿದೆ. ಪರಿಣಾಮ ಲಾರಿ ಸಹಿತ ಅದರಲ್ಲಿದ್ದ ಲಕ್ಷಾಂತರ ಮೌಲ್ಯದ ದಾರದ (ನೂಲು) ಬಂಡಲ್‌ಗಳು ಸುಟ್ಟು ಕರಕಲಾಗಿವೆ. ಲಾರಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ಪ್ರತಕ್ಷದರ್ಶಿಗಳು ತಿಳಿಸಿದ್ದಾರೆ.

ಚಲಿಸುತ್ತಿದ್ದ ಲಾರಿಗೆ ತಗುಲಿದ ಬೆಂಕಿ; ಲಾರಿ ಸೇರಿ ಲಕ್ಷಾಂತರ ರೂ,ಮೌಲ್ಯದ ವಸ್ತುಗಳು ಭಸ್ಮ

ಸುದ್ದಿ ತಿಳಿದು ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಆದರೆ ಅವರು ಬರುವ ವೇಳೆಗಾಗಲೇ ಶೇ.80 ರಷ್ಟು ಲಾರಿಯನ್ನು ಬೆಂಕಿ ಆಹುತಿ ಪಡೆದುಕೊಂಡಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.

ಬಸವಕಲ್ಯಾಣ ಗ್ರಾಮೀಣ ಠಾಣೆ ಪಿಎಸ್ಐ ಅರುಣಕುಮಾರ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Intro:ಮೂರು ವಿಡಿಯೋಗಳನ್ನು ಕಳಿಸಲಾಗಿದೆ.


ಬಸವಕಲ್ಯಾಣ: ಚಲಿಸುತ್ತಿದ್ದ ಲಾರಿಗೆ ಬೆಂಕಿ ತಗುಲಿ ಲಾರಿ ಸಹಿತ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾದ ಘಟನೆ ರಾಜ್ಯದ ಗಡಿಯಲ್ಲಿರುವ ಬಸವಕಲ್ಯಾಣ ತಾಲೂಕಿನ ರಾಷ್ಟಿçÃಯ ಹೆದ್ದಾರಿ-೬೫ರ ಮೇಲಿರುವ ಚಂಡಕಾಪೂರ ಸಮಿಪ ಭಾನುವಾರ ಮಧ್ಯಾಹ್ನ ನಡೆದಿದೆ.
ಮಹಾರಾಷ್ಟçದ ಮುಂಬೈ ಮೂಲದ ಲಾರಿಯೊಂದು ಆಂದ್ರಪ್ರದೇಶದ ಗುಂಟೂರನಿಂದ ಮುಂಬೈ ಕಡೆಗೆ ತೆರಳುತಿದ್ದ ವೇಳೆ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ತಗುಲಿದ್ದು, ಲಾರಿ ಸಹಿತ ಅದರಲ್ಲಿದ್ದ ಲಕ್ಷಾಂತರ ಮೌಲ್ಯದ ಧಾರದ (ನೂಲಿನ ಧಾರ)ಬಂಡಲ್‌ಗಳು ಸುಟ್ಟು ಭಸ್ಮವಾಗಿವೆ. ಅದೃಷ್ಟವಶಾತ್ ಲಾರಿ ಚಾಲಕ ಬಚಾವಾಗಿದ್ದಾನೆ ಎಂದು ಪ್ರತಕ್ಷ ದರ್ಶಗಳು ತಿಳಿಸಿದ್ದಾರೆ.
ಸುದ್ದಿ ತಿಳಿದ ಅಗ್ನಿಶಾಮಕ ದಳ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಆದರೆ ಅಗ್ನಿ ಶಾಮಕ ಸಿಬ್ಬಂದಿ ಬರುವ ವೇಳೆಗಾಗಲೇ ಶೇ.೮೦ ರಷ್ಟು ಲಾರಿ ಬೆಂಕಿಗೆ ಸುಟ್ಟುಹೊಗಿದೆ ಎಂದು ತಿಳಿದುಬಂದಿದೆ.
ಬಸವಕಲ್ಯಾಣ ಗ್ರಾಮೀಣ ಠಾಣೆ ಪಿಎಸ್ಐ ಅರುಣಕುಮಾರ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿನೀಡಿ ಪರಿಶೀಲಿಸಿದ್ದಾರೆ.

ವರದಿ
ಉದಯಕುಮಾರ ಮುಳೆ
ಈ ಟಿವಿ ಭಾರತ
ಬಸವಕಲ್ಯಾಣ


Body:UDAYAKUAMAR MULEConclusion:BASAVAKALYAN
ETV Bharat Logo

Copyright © 2024 Ushodaya Enterprises Pvt. Ltd., All Rights Reserved.