ETV Bharat / state

ಬಯಲು ಸೀಮೆಯ ಬಾಂದಾರು ಬ್ಯಾರೇಜ್​ಗಳಲ್ಲಿ ನೀರು ಸಂಗ್ರಹ: ಈಶ್ವರ್​ ಖಂಡ್ರೆ ಸಂತಸ - Water storage in Bandar Bridge come barrages

ಭಾಲ್ಕಿ ತಾಲೂಕಿನ ರೈತರಿಗೆ ಅನುಕೂಲವಾಗಲಿ ಎಂದು 2006ರಲ್ಲಿ ಸುಮಾರು 426 ಕೋಟಿ ರೂ. ಖರ್ಚು ಮಾಡಿ ರಾಜ್ಯ ಸರ್ಕಾರ ಮಾಂಜ್ರಾ ನದಿಯ ನಾಲ್ಕು ಕಡೆ ಬ್ಯಾರೇಜ್​ಗಳನ್ನು ನಿರ್ಮಾಣ ಮಾಡಿತ್ತು. ಆದರೆ ಬ್ಯಾರೇಜ್‌ ನಿರ್ಮಾಣವಾದಾಗಿನಿಂದ ಗೇಟ್​ಗಳಲ್ಲಿ ಬಿರುಕು ಕಂಡು ಹನಿ ನೀರು ಕೂಡಾ ಈ  ಬ್ಯಾರೇಜ್​ಗಳಲ್ಲಿ ಸಂಗ್ರಹವಾಗಿರಲಿಲ್ಲ.

ಈಶ್ವರ್​ ಖಂಡ್ರೆ ಸಂತಸ
author img

By

Published : Oct 30, 2019, 7:30 PM IST

Updated : Oct 30, 2019, 8:17 PM IST

ಬೀದರ್: ಹನಿ ನೀರು ನಿಲ್ಲದೆ ಮೂಲೆಗುಂಪಾಗಿದ್ದ ಜಿಲ್ಲೆಯ ಬಾಂದಾರು ಬ್ಯಾರೇಜ್​ಗಳು ಇದೀಗ ಭರ್ತಿಯಾಗಿದ್ದು ರೈತರ ಮುಖದಲ್ಲಿ ಮಂದಹಾಸ ಮೂಡಿಸಿದೆ.

ಈಶ್ವರ್​ ಖಂಡ್ರೆ ಸಂತಸ

ಈ ಬಗ್ಗೆ ಸ್ಥಳೀಯ ಶಾಸಕ ಈಶ್ವರ್ ಖಂಡ್ರೆ ಮಾತನಾಡಿ, ನಮ್ಮ ತಂದೆಯವರು ಶಾಸಕರಾಗಿದ್ದಾಗ ಈ ಭಾಗದ ರೈತರಿಗೆ ಅನುಕೂಲವಾಗಲೆಂದು ನಾಲ್ಕು ಬ್ಯಾರೇಜ್‌ಗಳನ್ನು ಮಂಜೂರು ಮಾಡಲಾಗಿತ್ತು. ಅದರ ಕಾಮಗಾರಿ ಮುಗಿದು 2013ರಲ್ಲಿ ನಾನು ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಉದ್ಘಾಟನೆ ಮಾಡಿಸಿದ್ದೆ. 2015-16ರಲ್ಲಿ ಬ್ಯಾರೇಜ್​ಗಳಿಗೆ ನೀರು ಬಂದಿರಲಿಲ್ಲ. ಬಳಿಕ ನೀರು ಬಂದರೂ ಗೇಟ್​ಗಳಲ್ಲಿ ತಾಂತ್ರಿಕ ದೋಷ ಕಂಡು ಬಂದು ನೀರು ಸಂಗ್ರಹವಾಗಿರಲಿಲ್ಲ. ಈ ಬಗ್ಗೆ ನಾನು ಮುತುವರ್ಜಿ ವಹಿಸಿ ಗೇಟ್​ ದುರಸ್ಥಿಪಡಿಸುವ ಕಾರ್ಯ ಮಾಡಿಸಿದ್ದೇನೆ. ಇದರಿಂದಾಗಿ ಈಗ ಬ್ಯಾರೇಜ್​ಗಳು ತುಂಬಿದ್ದು ಈ ಭಾಗದ ಜನತೆಗೆ ಬಹಳಷ್ಟು ಅನುಕೂಲವಾಗಲಿದೆ ಎಂದರು.

2006ರಲ್ಲಿ ಸುಮಾರು 426 ಕೋಟಿ ರೂ ವೆಚ್ಚದಲ್ಲಿ ತಾಲೂಕಿನ ಚೆಂದಾಪೂರ್, ಮಾಣಿಕೇಶ್ವರಿ, ಜಿರಗ್ಯಾಳ ಗಡಿ ಭಾಗದ ರೈತರಿಗೆ ಅನುಕೂಲವಾಗಲಿ ಎಂದು ಕೃಷ್ಣ ಭಾಗ್ಯ ಜಲ ನಿಗಮದ ವತಿಯಿಂದ ಮಾಂಜ್ರಾ ನದಿಗೆ ಅಡ್ಡಲಾಗಿ ಬ್ರಿಡ್ಜ್ ಕಂ ಬ್ಯಾರೇಜ್​ಗಳನ್ನು ಕಟ್ಟಲಾಗಿತ್ತು. ಪ್ರತಿಯೊಂದು ಬ್ಯಾರೇಜಿಗೆ 58 ರಿಂದ 60 ಆಟೋಮ್ಯಾಟಿಕ್ ಗೇಟ್‌ಗಳನ್ನು ಅಳವಡಿಸಲಾಗಿತ್ತು. ಆದರೆ ಒಂದೇ ಮಳೆಗೆ ಈ ಗೇಟ್‌ಗಳ ಹಣೆಬರಹ ಬಯಲಿಗೆ ಬಂದಿತ್ತು. ಕಳಪೆ ಕಾಮಗಾರಿ ನಡೆಸಿ ಗೇಟ್ ಅಳವಡಿಸಿದ್ದರೂ ಹನಿ ನೀರು ಕೂಡಾ ನಿಲ್ಲದೆ ಹರಿದು ಹೋಗಿತ್ತು. ಈ ಬಗ್ಗೆ ಸ್ಥಳೀಯರು ಅಕ್ರೋಶ ವ್ಯಕ್ತಪಡಿಸಿದ್ದರು. ಜೊತೆಗೆ ಗೇಟ್ ಬದಲಾವಣೆ ಮಾಡಿ ನೀರು ನಿಲ್ಲಿಸುವಂತೆ ರಾಜ್ಯ ಸರ್ಕಾರದ ಮೇಲೆ ಒತ್ತಡ ಹಾಕಲಾಗಿತ್ತು. ಗೇಟ್​ಗಳ ದುರಸ್ಥಿ ಬಳಿಕ ಇದೀಗ ಬ್ಯಾರೇಜ್​ಗಳಲ್ಲಿ ನೀರು ಸಂಗ್ರಹವಾಗಿದ್ದು, ಇದರಿಂದ ಭಾಲ್ಕಿ ತಾಲೂಕಿನ 25 ಹಳ್ಳಿಯ ರೈತರಿಗೆ ಬರದಲ್ಲೂ ನೀರು ಸಿಗಲಿದೆ.

ಬೀದರ್: ಹನಿ ನೀರು ನಿಲ್ಲದೆ ಮೂಲೆಗುಂಪಾಗಿದ್ದ ಜಿಲ್ಲೆಯ ಬಾಂದಾರು ಬ್ಯಾರೇಜ್​ಗಳು ಇದೀಗ ಭರ್ತಿಯಾಗಿದ್ದು ರೈತರ ಮುಖದಲ್ಲಿ ಮಂದಹಾಸ ಮೂಡಿಸಿದೆ.

ಈಶ್ವರ್​ ಖಂಡ್ರೆ ಸಂತಸ

ಈ ಬಗ್ಗೆ ಸ್ಥಳೀಯ ಶಾಸಕ ಈಶ್ವರ್ ಖಂಡ್ರೆ ಮಾತನಾಡಿ, ನಮ್ಮ ತಂದೆಯವರು ಶಾಸಕರಾಗಿದ್ದಾಗ ಈ ಭಾಗದ ರೈತರಿಗೆ ಅನುಕೂಲವಾಗಲೆಂದು ನಾಲ್ಕು ಬ್ಯಾರೇಜ್‌ಗಳನ್ನು ಮಂಜೂರು ಮಾಡಲಾಗಿತ್ತು. ಅದರ ಕಾಮಗಾರಿ ಮುಗಿದು 2013ರಲ್ಲಿ ನಾನು ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಉದ್ಘಾಟನೆ ಮಾಡಿಸಿದ್ದೆ. 2015-16ರಲ್ಲಿ ಬ್ಯಾರೇಜ್​ಗಳಿಗೆ ನೀರು ಬಂದಿರಲಿಲ್ಲ. ಬಳಿಕ ನೀರು ಬಂದರೂ ಗೇಟ್​ಗಳಲ್ಲಿ ತಾಂತ್ರಿಕ ದೋಷ ಕಂಡು ಬಂದು ನೀರು ಸಂಗ್ರಹವಾಗಿರಲಿಲ್ಲ. ಈ ಬಗ್ಗೆ ನಾನು ಮುತುವರ್ಜಿ ವಹಿಸಿ ಗೇಟ್​ ದುರಸ್ಥಿಪಡಿಸುವ ಕಾರ್ಯ ಮಾಡಿಸಿದ್ದೇನೆ. ಇದರಿಂದಾಗಿ ಈಗ ಬ್ಯಾರೇಜ್​ಗಳು ತುಂಬಿದ್ದು ಈ ಭಾಗದ ಜನತೆಗೆ ಬಹಳಷ್ಟು ಅನುಕೂಲವಾಗಲಿದೆ ಎಂದರು.

2006ರಲ್ಲಿ ಸುಮಾರು 426 ಕೋಟಿ ರೂ ವೆಚ್ಚದಲ್ಲಿ ತಾಲೂಕಿನ ಚೆಂದಾಪೂರ್, ಮಾಣಿಕೇಶ್ವರಿ, ಜಿರಗ್ಯಾಳ ಗಡಿ ಭಾಗದ ರೈತರಿಗೆ ಅನುಕೂಲವಾಗಲಿ ಎಂದು ಕೃಷ್ಣ ಭಾಗ್ಯ ಜಲ ನಿಗಮದ ವತಿಯಿಂದ ಮಾಂಜ್ರಾ ನದಿಗೆ ಅಡ್ಡಲಾಗಿ ಬ್ರಿಡ್ಜ್ ಕಂ ಬ್ಯಾರೇಜ್​ಗಳನ್ನು ಕಟ್ಟಲಾಗಿತ್ತು. ಪ್ರತಿಯೊಂದು ಬ್ಯಾರೇಜಿಗೆ 58 ರಿಂದ 60 ಆಟೋಮ್ಯಾಟಿಕ್ ಗೇಟ್‌ಗಳನ್ನು ಅಳವಡಿಸಲಾಗಿತ್ತು. ಆದರೆ ಒಂದೇ ಮಳೆಗೆ ಈ ಗೇಟ್‌ಗಳ ಹಣೆಬರಹ ಬಯಲಿಗೆ ಬಂದಿತ್ತು. ಕಳಪೆ ಕಾಮಗಾರಿ ನಡೆಸಿ ಗೇಟ್ ಅಳವಡಿಸಿದ್ದರೂ ಹನಿ ನೀರು ಕೂಡಾ ನಿಲ್ಲದೆ ಹರಿದು ಹೋಗಿತ್ತು. ಈ ಬಗ್ಗೆ ಸ್ಥಳೀಯರು ಅಕ್ರೋಶ ವ್ಯಕ್ತಪಡಿಸಿದ್ದರು. ಜೊತೆಗೆ ಗೇಟ್ ಬದಲಾವಣೆ ಮಾಡಿ ನೀರು ನಿಲ್ಲಿಸುವಂತೆ ರಾಜ್ಯ ಸರ್ಕಾರದ ಮೇಲೆ ಒತ್ತಡ ಹಾಕಲಾಗಿತ್ತು. ಗೇಟ್​ಗಳ ದುರಸ್ಥಿ ಬಳಿಕ ಇದೀಗ ಬ್ಯಾರೇಜ್​ಗಳಲ್ಲಿ ನೀರು ಸಂಗ್ರಹವಾಗಿದ್ದು, ಇದರಿಂದ ಭಾಲ್ಕಿ ತಾಲೂಕಿನ 25 ಹಳ್ಳಿಯ ರೈತರಿಗೆ ಬರದಲ್ಲೂ ನೀರು ಸಿಗಲಿದೆ.

Intro:ಬಯಲು ಸೀಮೆಯ ಬಾಂದಾರು ಸೇತುವೆಯಲ್ಲಿ ನೀರು ಸಂಗ್ರಹ, ಶಾಸಕ ಈಶ್ವರ ಖಂಡ್ರೆ ಸಂತಸ...!

ಬೀದರ್:
ಬರೋಬ್ಬರಿ 426 ಕೋಟಿ ರುಪಾಯಿ ಖರ್ಚು ಮಾಡಿ ನಿರ್ಮಾಣ ಮಾಡಿದ ಬಾಂದಾರು ಸೇತುವೆಗಳಲ್ಲಿ ಹನಿ ನೀರು ನಿಲ್ಲದೆ ಮೂಲೆಗುಂಪಾಗಿದ್ದ ನಾಲ್ಕು ಸೇತುವೆಗಳು ಈಗ ಭರ್ತಿಯಾಗಿವೆ. ಕಳಪೆ ಕಾಮಗಾರಿಯಿಂದ ನರಳಾಡ್ತಿದ್ದ ಬಾಂದಾರು ಸೇತುವೆ ದುರಸ್ಥಿಯಿಂದ ಸಾವಿರಾರು ಜನರ ಮುಖದಲ್ಲಿ ಮಂದಹಾಸ ಮೂಡಿದೆ.

ಹೌದು‌ ಕಳೆದ ನಾಲ್ಕು ವರ್ಷದಿಂದ ಬಾರದ ಮಳೆಯಿಂದ ಗಡಿ ಜಿಲ್ಲೆ ಬೀದರ್ ನಲ್ಲಿ ಭೀಕರ ಬರಗಾಲ ಉಂಟಾಗಿ ಜಿಲ್ಲೆಯ ರೈತರು ಸಂಕಟದಲ್ಲಿದ್ದರು. ಜಿಲ್ಲೆಯ ಭಾಲ್ಕಿ ತಾಲೂಕಿನ ರೈತರಿಗೆ ಅನುಕೂಲವಾಗಲಿ ಎಂದು 2006 ರಲ್ಲಿ ತಲಾ 426 ಕೋಟಿ ರೂ.ಖರ್ಚು ಮಾಡಿ ಮಾಂಜ್ರಾ ನದಿಯ ನಾಲ್ಕು ಕಡೆ ಬ್ಯಾರೇಜ್​ಗಳನ್ನ ರಾಜ್ಯ ಸರ್ಕಾರ ನಿರ್ಮಾಣ ಮಾಡಿತ್ತು. ಆದರೆ ನಿರ್ಮಾಣವಾದಾಗಿನಿಂದ ಗೇಟ್ ಗಳಲ್ಲಿ ಬಿರುಕು ಕಂಡು ಹನಿ ನೀರು ಈ ಬಾಂದಾರು ಸೇತುವೆಯಲ್ಲಿ ನಿಂತಿರಲಿಲ್ಲ.

ಸ್ಥಳೀಯ ಶಾಸಕ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಕಾಳಜಿ ವಹಿಸಿ ಗುತ್ತಿಗೆದಾರರ ಮೈ ಚಳಿ ಬಿಡಿಸಿ ಎಲ್ಲಾ ಗೇಟ್ ಗಳನ್ನ ರಿಪೇರಿ ಮಾಡಿ ಇಗ ನೀರು ನಿಲ್ಲುವಂತೆ ಮಾಡಿದ್ದಾರೆ. ಇದರಿಂದಾಗಿ 15 ಸಾವಿರ ಎಕರೆ ಪ್ರದೇಶಕ್ಕೆ ಬರದಲ್ಲೂ ನೀರು ಸಿಗಲಿದೆ. ಜಿಲ್ಲೆಯಲ್ಲಿ 2013ರಲ್ಲಿ ನಿರ್ಮಾಣ ಮುಗಿದು ಉದ್ಘಾಟಿಸಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಾ ಚಂದಾಪೂರ್ ಬ್ರಿಜ್ ಕಂ ಬ್ಯಾರೇಜ್​​ಗೆ ಬಂದು ಹೋಗಿದ್ದರು. ಕಳೆದ 2006ರಲ್ಲಿ ಸರಿ ಸುಮಾರು 426 ಕೋಟಿ ಒಂದರಂತೆ ತಾಲೂಕಿನ ಚೆಂದಾಪೂರ್, ಮಾಣೀಕೆಶ್ವರಿ, ಜಿರಗ್ಯಾಳಗಳಲ್ಲಿ ಗಡಿ ಭಾಗದ ರೈತರಿಗೆ ಅನುಕೂಲವಾಗಲಿ ಅಂತಾ ಬ್ರೀಜ್ ಕಂ ಬ್ಯಾರೇಜ್ ಗಳನ್ನ ಕೃಷ್ಣ ಭಾಗ್ಯ ಜಲ ನಿಗಮದ ವತಿಯಿಂದ ಮಾಂಜ್ರಾ ನದಿಗೆ ಅಡ್ಡಲಾಗಿ ಕಟ್ಟಲಾಗಿತ್ತು. ಪ್ರತಿಯೊಂದು ಬ್ಯಾರೇಜಿಗೆ 58 ರಿಂದ 60 ಆಟೋಮ್ಯಾಟಿಕ್ ಗೋಡ್ಬೋಲೆ ಗೇಟ್ ಗಳನ್ನ ಅಳವಡಿಸಲಾಗಿತ್ತು. ಒಂದೇ ಮಳೆಗೆ ಈ ಗೇಟ್ ಗಳ ಹಣೆ ಬರಹ ಬಯಲಿಗೆ ಬಂತು. ಗೇಟ್ ಅಳವಡಿಸಿದ್ದರೂ ಹನಿ ನೀರು ಕೂಡಾ ನಿಲ್ಲದೆ ಹರಿದು ಹೋಗಿತ್ತು. ಗೋಡ್ ಬೋಲೆ ಗೆಟ್ ಗಳ ಕಳಪೆ ನಿರ್ಮಾಣದ ಬಗ್ಗೆ ಅಕ್ರೋಶ ವ್ಯಕ್ತವಾಗಿತ್ತು. ಜೊತೆಗೆ ಗೇಟ್ ಬದಲಾವಣೆ ಮಾಡಿ ನೀರು ನಿಲ್ಲಿಸುವಂತೆ ರಾಜ್ಯ ಸರ್ಕಾರ ಮೇಲೆ ಒತ್ತಡ ಹೆಚ್ಚಾಗಿತ್ತು.ಭಾರಿ ಮಳೆ ಬಂದಾಗ ನೀರು ನಿಲ್ಲಿಸಲು ಸಾಧ್ಯವಾಗಿರಲಿಲ್ಲ. ಭಾಲ್ಕಿ ತಾಲೂಕಿನ 25 ಹಳ್ಳಿಯ ರೈತರಿಗೆ ಬರದಲ್ಲೂ ಇದರಿಂದ ಲಾಭವಾಗಲಿದೆ.ತಾಲೂಕಿನ 15 ಸಾವಿರ ಏಕರೆ ಪ್ರದೇಶಕ್ಕೆ ಈ ಸಲ ಬೇಸಿಗೆಯಲ್ಲಿ ನೀರು ಸಿಗಲಿದೆ.

ಒಂದು ಸಣ್ಣ ತಾಂತ್ರಿಕ ಸಮಸ್ಯೆಯಿಂದ ಮಹತ್ವಕಾಂಕ್ಷಿ ಯೋಜನೆ ಹಳ್ಳ ಹಿಡಿದಿರುವ ಕುರಿತು ಕರೇಕ್ಟಾಗಿ ಫಾಲೋಅಪ ಮಾಡಿ ಭವಿಷ್ಯದಲ್ಲಿ ಜನರ ನೀರಿನ ಬವಣೆ ನಿಗಿಸುವ ಯೋಜನೆ ಅನುಷ್ಢಾನಗೊಳಿಸಿ ನಿಟ್ಟುಸಿರು ಬಿಟ್ಟ ಜನಪ್ರತಿನಿಧಿಗಳ ಕಾರ್ಯ ಮೆಚ್ಚುವಂಥದ್ದೆ.

ಬೈಟ್-೦೧: ಈಶ್ವರ ಖಂಡ್ರೆ- ಕೆಪಿಸಿಸಿ ಕಾರ್ಯಾಧ್ಯಕ್ಷ.

-----ಈಟಿವಿ ಭಾರತ ಬೀದರ್----Body:ಅನೀಲConclusion:ಬೀದರ್
Last Updated : Oct 30, 2019, 8:17 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.