ETV Bharat / state

ಮದ್ಯದ ಅಮಲಿನಲ್ಲಿ ಕ್ವಾರಂಟೈನ್ ಕೇಂದ್ರಕ್ಕೆ ನುಗ್ಗಿ ದಾಂಧಲೆ: ಪೊಲೀಸರ ವಶಕ್ಕೆ ಕಿಡಿಗೇಡಿಗಳು - Basavakalyana quarantine center

ಬೀದರ್​​​ ಜಿಲ್ಲೆಯ ಬಸವಕಲ್ಯಾಣದ ಸರ್ಕಾರಿ ಶಾಲೆಯ ಕ್ವಾರಂಟೈನ್ ಕೇಂದ್ರದ ಬಳಿ ಯುವಕರ ಗುಂಪೊಂದು ಮದ್ಯದ ಅಮಲಿನಲ್ಲಿ ಗಲಾಟೆ ಮಾಡಿ ಮತ್ತೊಬ್ಬ ಯುವಕನ ಮೇಲೆ ಹಲ್ಲೆ ನಡೆಸಿದೆ. ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ.

quarantine center
ಕ್ವಾರಂಟೈನ್ ಕೇಂದ್ರಕ್ಕೆ ನುಗ್ಗಿ ದಾಂಧಲೆ
author img

By

Published : May 25, 2020, 4:06 PM IST

ಬಸವಕಲ್ಯಾಣ (ಬೀದರ್​​): ಲಾಕ್​​ಡೌನ್​ ಸಡಿಲಿಕೆಯಾಗುತ್ತಿದ್ದಂತೆ ಕಳೆದ ಎರಡು ತಿಂಗಳಿಂದ ಶಾಂತವಾಗಿದ್ದ ರಾಜ್ಯದಲ್ಲಿ ಈಗ ಮತ್ತೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಯುವಕರ ಗುಂಪೊಂದು ಮದ್ಯದ ಅಮಲಿನಲ್ಲಿ ಕ್ವಾರಂಟೈನ್ ಕೇಂದ್ರದ ಬಳಿ ತೆರಳಿ ದಾಂಧಲೆ ನಡೆಸಿದ ಪ್ರಸಂಗ ತಾಲೂಕಿನ ಕೋಹಿನೂರ ಗ್ರಾಮದಲ್ಲಿ ನಡೆದಿದೆ.

quarantine center
ಮಾಹಿತಿ ಪಡೆಯುತ್ತಿರುವ ತಹಶೀಲ್ದಾರ್​​​​​​​​​ ಸಾವಿತ್ರಿ ಸಲಗರ್

ಗ್ರಾಮದ ಸರ್ಕಾರಿ ಶಾಲೆಯ ಕ್ವಾರಂಟೈನ್ ಕೇಂದ್ರದಲ್ಲಿ ಮುಂಬೈನಿಂದ ಆಗಮಿಸಿದ್ದ ಅದೇ ಗ್ರಾಮದ ಯುವಕ ವಾಸ್ತವ್ಯ ಹೂಡಿದ್ದರು. ಈ ಯುವಕನ ಮೇಲೆ ಕ್ಷುಲ್ಲಕ ಕಾರಣಕ್ಕೆ ಕಿಡಿಗೇಡಿಗಳು ಹಲ್ಲೆ ನಡೆಸಿ ಈಗ ಪೊಲೀಸರ ಅತಿಥಿಯಾಗಿದ್ದಾರೆ. ಮಧ್ಯರಾತ್ರಿ ಸುಮಾರು 1 ಗಂಟೆಗೆ ಈ ಯುವಕರ ಗುಂಪು ಕುಡಿದು ಕ್ವಾರಂಟೈನ್ ಕೇಂದ್ರದ ಬಳಿ ತೆರಳಿ ಕಿರುಚಾಡಲಾರಂಭಿಸಿದ್ದಾರೆ. ಕ್ವಾರಂಟೈನ್ ಕೇಂದ್ರದಲ್ಲಿದ್ದ ಯುವಕ ಇದನ್ನು ಪ್ರಶ್ನಿಸಿದ್ದಕ್ಕಾಗಿ ಆತನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ವಿಷಯ ತಿಳಿದ ಕೂಡಲೇ ತಹಶೀಲ್ದಾರ್​​​​​​​​​ ಸಾವಿತ್ರಿ ಸಲಗರ್, ಮಂಠಾಳ ಠಾಣೆ ಪಿಎಸ್ಐ ಬಸಲಿಂಗಪ್ಪ ನೇತೃತ್ವದ ಸಿಬ್ಬಂದಿಗಳ ತಂಡ ಗ್ರಾಮಕ್ಕೆ ತೆರಳಿ ಘಟನೆ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ. ಹಲ್ಲೆ ನಡೆಸಿದ ಮೂವರನ್ನೂ ತಮ್ಮ ವಶಕ್ಕೆ ಪಡೆದು ವಿಚಾರಣೆ ಮುಂದುವರೆಸಿದ್ದಾರೆ.

ಬಸವಕಲ್ಯಾಣ (ಬೀದರ್​​): ಲಾಕ್​​ಡೌನ್​ ಸಡಿಲಿಕೆಯಾಗುತ್ತಿದ್ದಂತೆ ಕಳೆದ ಎರಡು ತಿಂಗಳಿಂದ ಶಾಂತವಾಗಿದ್ದ ರಾಜ್ಯದಲ್ಲಿ ಈಗ ಮತ್ತೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಯುವಕರ ಗುಂಪೊಂದು ಮದ್ಯದ ಅಮಲಿನಲ್ಲಿ ಕ್ವಾರಂಟೈನ್ ಕೇಂದ್ರದ ಬಳಿ ತೆರಳಿ ದಾಂಧಲೆ ನಡೆಸಿದ ಪ್ರಸಂಗ ತಾಲೂಕಿನ ಕೋಹಿನೂರ ಗ್ರಾಮದಲ್ಲಿ ನಡೆದಿದೆ.

quarantine center
ಮಾಹಿತಿ ಪಡೆಯುತ್ತಿರುವ ತಹಶೀಲ್ದಾರ್​​​​​​​​​ ಸಾವಿತ್ರಿ ಸಲಗರ್

ಗ್ರಾಮದ ಸರ್ಕಾರಿ ಶಾಲೆಯ ಕ್ವಾರಂಟೈನ್ ಕೇಂದ್ರದಲ್ಲಿ ಮುಂಬೈನಿಂದ ಆಗಮಿಸಿದ್ದ ಅದೇ ಗ್ರಾಮದ ಯುವಕ ವಾಸ್ತವ್ಯ ಹೂಡಿದ್ದರು. ಈ ಯುವಕನ ಮೇಲೆ ಕ್ಷುಲ್ಲಕ ಕಾರಣಕ್ಕೆ ಕಿಡಿಗೇಡಿಗಳು ಹಲ್ಲೆ ನಡೆಸಿ ಈಗ ಪೊಲೀಸರ ಅತಿಥಿಯಾಗಿದ್ದಾರೆ. ಮಧ್ಯರಾತ್ರಿ ಸುಮಾರು 1 ಗಂಟೆಗೆ ಈ ಯುವಕರ ಗುಂಪು ಕುಡಿದು ಕ್ವಾರಂಟೈನ್ ಕೇಂದ್ರದ ಬಳಿ ತೆರಳಿ ಕಿರುಚಾಡಲಾರಂಭಿಸಿದ್ದಾರೆ. ಕ್ವಾರಂಟೈನ್ ಕೇಂದ್ರದಲ್ಲಿದ್ದ ಯುವಕ ಇದನ್ನು ಪ್ರಶ್ನಿಸಿದ್ದಕ್ಕಾಗಿ ಆತನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ವಿಷಯ ತಿಳಿದ ಕೂಡಲೇ ತಹಶೀಲ್ದಾರ್​​​​​​​​​ ಸಾವಿತ್ರಿ ಸಲಗರ್, ಮಂಠಾಳ ಠಾಣೆ ಪಿಎಸ್ಐ ಬಸಲಿಂಗಪ್ಪ ನೇತೃತ್ವದ ಸಿಬ್ಬಂದಿಗಳ ತಂಡ ಗ್ರಾಮಕ್ಕೆ ತೆರಳಿ ಘಟನೆ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ. ಹಲ್ಲೆ ನಡೆಸಿದ ಮೂವರನ್ನೂ ತಮ್ಮ ವಶಕ್ಕೆ ಪಡೆದು ವಿಚಾರಣೆ ಮುಂದುವರೆಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.