ETV Bharat / state

ಬಿಜೆಪಿ ಏರಲೇಬೇಕಂತಿದೆ ಗದ್ದುಗೆ.. ಮೈತ್ರಿ ಪಕ್ಷಗಳ ನಾಯಕರ ಮಧ್ಯೆ ಮತ್ತಷ್ಟು ಗಟ್ಟಿಗೊಳ್ತಿದೆ ಬೆಸುಗೆ.. - undefined

ಅತೃಪ್ತ ಶಾಸಕರನ್ನು ತಣ್ಣಗೆ ಮಾಡಲು ಮತ್ತು ಸಚಿವ ಸಂಪುಟ ಪುನಾರಚನೆ ಮಾಡುವ ಮೂಲಕ ಆಪರೇಷನ್ ಕಮಲ ಶಮನ ಮಾಡುವ ಕುರಿತು ಇಂದು ಬೆಂಗಳೂರಿನ ಕುಮಾರಕೃಪ ಅತಿಥಿಗೃಹದಲ್ಲಿ ಮೈತ್ರಿ ನಾಯಕರ ಮಹತ್ವದ ಸಭೆ ನಡೆಯುತ್ತಿದೆ.

ಮೈತ್ರಿ ನಾಯಕರ ಮಹತ್ವದ ಸಭೆ
author img

By

Published : May 29, 2019, 1:52 PM IST

ಬೆಂಗಳೂರು: ಆಪರೇಷನ್ ಕಮಲ ಬಿರುಸುಗೊಂಡ ಹಿನ್ನೆಲೆ ದೋಸ್ತಿ ನಾಯಕರು ರಣತಂತ್ರ ಹೆಣೆಯುತ್ತಿದ್ದಾರೆ. ಇಂದು ಮೈತ್ರಿ ನಾಯಕರೆಲ್ಲ ಸೇರಿ ಮಹತ್ವದ ಸಭೆ ನಡೆಸುತ್ತಿದ್ದಾರೆ.

ಮೈತ್ರಿ ನಾಯಕರ ಮಹತ್ವದ ಸಭೆ

ಬೆಂಗಳೂರಿನ ಕುಮಾರಕೃಪ ಅತಿಥಿಗೃಹದಲ್ಲಿ ಈಗಾಗಲೇ ಸಭೆ ಆರಂಭವಾಗಿದೆ. ಸಿಎಂ ಕುಮಾರಸ್ವಾಮಿ, ಡಿಸಿಎಂ ಡಾ ಜಿ. ಪರಮೇಶ್ವರ್, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವರಾದ ಡಿ ಕೆ ಶಿವಕುಮಾರ್, ಎಂ ಬಿ ಪಾಟೀಲ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ ಸಿ ವೇಣುಗೋಪಾಲ ಸಭೆಯಲ್ಲಿ ಪಾಲ್ಗೊಂಡಿದ್ದಾರೆ.

ಸಚಿವ ಸಂಪುಟ ಪುನಾರಚನೆ ಮಾಡುವ ಮೂಲಕ ಆಪರೇಷನ್ ಕಮಲ ಶಮನ ಮಾಡುವ ಕುರಿತು ಚರ್ಚೆ ನಡೆದಿದೆ. ಅತೃಪ್ತ ಶಾಸಕರನ್ನು ತಣ್ಣಗೆ ಮಾಡಲು ಈ ಮೂಲಕ ಪ್ರಯತ್ನ ಮುಂದುವರೆದಿದೆ. ಯಾರಿಗೆ ಸಚಿವ ಸ್ಥಾನ ಕೊಡಬೇಕು, ಯಾರನ್ನು ಸಂಪುಟದಿಂದ ಕೈ ಬಿಡಬೇಕು ಎಂಬುದರ ಬಗ್ಗೆ ಚರ್ಚೆಯಾಗುತ್ತಿದೆ.

ಸಮ್ಮಿಶ್ರ ಸರ್ಕಾರವನ್ನು ಉಳಿಸಿಕೊಳ್ಳಲೇಬೇಕೆಂದು ಪಣತೊಟ್ಟಿರುವ ಮೈತ್ರಿ ನಾಯಕರು ಸಚಿವ ಸಂಪುಟ ಪುನಾರಚನೆಗೆ ನಿರ್ಧರಿಸಿದ್ದಾರೆ. ಈ ಸಂಬಂಧ ಇಂದಿನ ಸಭೆಯಲ್ಲಿ ತೀರ್ಮಾನ ಕೈಗೊಳ್ಳುವರು. ಒಂದೊಮ್ಮೆ ಪುನರ್ ರಚನೆಯಿಂದ ಎದುರಾಗುವ ಸಮಸ್ಯೆ, ಬಂಡಾಯ, ಆತಂಕ ನಿವಾರಣೆಗೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕುರಿತು ಗಂಭೀರ ಚರ್ಚೆ ನಡೆದಿದೆ. ಸಮಸ್ಯೆ ಶಮನಕ್ಕೆ ಬಂದಿರುವ ವೇಣುಗೋಪಾಲ್ ಇಲ್ಲಿ ಮಹತ್ವದ ಪಾತ್ರ ನಿರ್ವಹಿಸಲಿದ್ದಾರೆ. ಜೆಡಿಎಸ್ ಕಡೆಯಿಂದ ಸಿಎಂ ಕುಮಾರಸ್ವಾಮಿ ಮಾತ್ರ ಪಾಲ್ಗೊಂಡಿದ್ದಾರೆ.

ಬೆಂಗಳೂರು: ಆಪರೇಷನ್ ಕಮಲ ಬಿರುಸುಗೊಂಡ ಹಿನ್ನೆಲೆ ದೋಸ್ತಿ ನಾಯಕರು ರಣತಂತ್ರ ಹೆಣೆಯುತ್ತಿದ್ದಾರೆ. ಇಂದು ಮೈತ್ರಿ ನಾಯಕರೆಲ್ಲ ಸೇರಿ ಮಹತ್ವದ ಸಭೆ ನಡೆಸುತ್ತಿದ್ದಾರೆ.

ಮೈತ್ರಿ ನಾಯಕರ ಮಹತ್ವದ ಸಭೆ

ಬೆಂಗಳೂರಿನ ಕುಮಾರಕೃಪ ಅತಿಥಿಗೃಹದಲ್ಲಿ ಈಗಾಗಲೇ ಸಭೆ ಆರಂಭವಾಗಿದೆ. ಸಿಎಂ ಕುಮಾರಸ್ವಾಮಿ, ಡಿಸಿಎಂ ಡಾ ಜಿ. ಪರಮೇಶ್ವರ್, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವರಾದ ಡಿ ಕೆ ಶಿವಕುಮಾರ್, ಎಂ ಬಿ ಪಾಟೀಲ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ ಸಿ ವೇಣುಗೋಪಾಲ ಸಭೆಯಲ್ಲಿ ಪಾಲ್ಗೊಂಡಿದ್ದಾರೆ.

ಸಚಿವ ಸಂಪುಟ ಪುನಾರಚನೆ ಮಾಡುವ ಮೂಲಕ ಆಪರೇಷನ್ ಕಮಲ ಶಮನ ಮಾಡುವ ಕುರಿತು ಚರ್ಚೆ ನಡೆದಿದೆ. ಅತೃಪ್ತ ಶಾಸಕರನ್ನು ತಣ್ಣಗೆ ಮಾಡಲು ಈ ಮೂಲಕ ಪ್ರಯತ್ನ ಮುಂದುವರೆದಿದೆ. ಯಾರಿಗೆ ಸಚಿವ ಸ್ಥಾನ ಕೊಡಬೇಕು, ಯಾರನ್ನು ಸಂಪುಟದಿಂದ ಕೈ ಬಿಡಬೇಕು ಎಂಬುದರ ಬಗ್ಗೆ ಚರ್ಚೆಯಾಗುತ್ತಿದೆ.

ಸಮ್ಮಿಶ್ರ ಸರ್ಕಾರವನ್ನು ಉಳಿಸಿಕೊಳ್ಳಲೇಬೇಕೆಂದು ಪಣತೊಟ್ಟಿರುವ ಮೈತ್ರಿ ನಾಯಕರು ಸಚಿವ ಸಂಪುಟ ಪುನಾರಚನೆಗೆ ನಿರ್ಧರಿಸಿದ್ದಾರೆ. ಈ ಸಂಬಂಧ ಇಂದಿನ ಸಭೆಯಲ್ಲಿ ತೀರ್ಮಾನ ಕೈಗೊಳ್ಳುವರು. ಒಂದೊಮ್ಮೆ ಪುನರ್ ರಚನೆಯಿಂದ ಎದುರಾಗುವ ಸಮಸ್ಯೆ, ಬಂಡಾಯ, ಆತಂಕ ನಿವಾರಣೆಗೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕುರಿತು ಗಂಭೀರ ಚರ್ಚೆ ನಡೆದಿದೆ. ಸಮಸ್ಯೆ ಶಮನಕ್ಕೆ ಬಂದಿರುವ ವೇಣುಗೋಪಾಲ್ ಇಲ್ಲಿ ಮಹತ್ವದ ಪಾತ್ರ ನಿರ್ವಹಿಸಲಿದ್ದಾರೆ. ಜೆಡಿಎಸ್ ಕಡೆಯಿಂದ ಸಿಎಂ ಕುಮಾರಸ್ವಾಮಿ ಮಾತ್ರ ಪಾಲ್ಗೊಂಡಿದ್ದಾರೆ.

Intro:newsBody:ಸರ್ಕಾರ ಉಳಿಸಿಕೊಳ್ಳಲು ಮೈತ್ರಿ ನಾಯಕರ ಮಹತ್ವದ ಸಭೆ


ಬೆಂಗಳೂರು: ಆಪರೇಷನ್ ಕಮಲ ಬಿರುಸುಗೊಂಡ ಹಿನ್ನೆಲೆ ಈ ಆಪರೇಷನ್ ವಿಫಲಕ್ಕೆ ದೋಸ್ತಿ ನಾಯಕರ ರಣತಂತ್ರ ಮುಂದುವರಿದಿದ್ದು, ಮೈತ್ರಿ ನಾಯಕರು ಮಹತ್ವದ ಸಭೆ ನಡೆಸುತ್ತಿದ್ದಾರೆ.
ಬೆಂಗಳೂರಿನ ಕುಮಾರಕೃಪ ಅತಿಥಿಗೃಹದಲ್ಲಿ ಸಭೆ ಆರಂಭವಾಗಿದ್ದು, ಸಿಎಂ ಕುಮಾರಸ್ವಾಮಿ, ಡಿಸಿಎಂ ಡಾ ಜಿ. ಪರಮೇಶ್ವರ್, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವರಾದ ಡಿ.ಕೆ. ಶಿವಕುಮಾರ್, ಎಂ.ಬಿ. ಪಾಟೀಲ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ. ಸಿ. ವೇಣುಗೋಪಾಲ ಪಾಲ್ಗೊಂಡಿದ್ದಾರೆ.
ಸಚಿವ ಸಂಪುಟ ಪುನಾರಚನೆ ಮಾಡುವ ಮೂಲಕ ಶಮನ ಮಾಡುವ ಕುರಿತು ಚರ್ಚೆ ನಡೆದಿದೆ. ಅತೃಪ್ತ ಶಾಸಕರನ್ನು ತಣ್ಣಗೆ ಮಾಡಲು ಪ್ರಯತ್ನ ಈ ಮೂಲಕ ಸಾಗಿದ್ದು, ಯಾರು ಯಾರಿಗೆ ಸಚಿವ ಸ್ಥಾನ ಕೊಡಬೇಕು, ಯಾರನ್ನು ಸಂಪುಟದಿಂದ ಕೈ ಬಿಡಬೇಕು ಎಂಬುದುರ ಬಗ್ಗೆ ಚರ್ಚೆ ನಡೆದಿದೆ.
ಸಮ್ಮಿಶ್ರ ಸರ್ಕಾರವನ್ನು ಉಳಿಸಿಕೊಳ್ಳಲೇ ಬೇಕೆಂದು ಪಣತೊಟ್ಟಿರುವ ಮೈತ್ರಿ ನಾಯಕರು ಸಚಿವ ಸಂಪುಟ ಪುನರ್ ರಚನೆಗೆ ನಿರ್ಧರಿಸಿದ್ದು, ಈ ಸಂಬಂಧ ಇಂದಿಸ ಸಭೆಯಲ್ಲಿ ತೀರ್ಮಾನ ಕೈಗೊಳ್ಳುವರು. ದೊಮ್ಮೆ ಪುನರ್ ರಚನೆಯಿಂದ ಎದುರಾಗುವ ಸಮಸ್ಯೆ, ಬಂಡಾಯ, ಆತಂಕ ನಿವಾರಣೆಗೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕುರಿತು ಗಂಭೀರ ಚರ್ಚೆ ನಡೆದಿದೆ. ಸಮಸ್ಯೆ ಶಮನಕ್ಕೆ ಬಂದಿರುವ ವೇಣುಗೋಪಾಲ ಇಲ್ಲಿ ಮಹತ್ವದ ಪಾತ್ರ ನಿರ್ವಹಿಸಲಿದ್ದಾರೆ. ಜೆಡಿಎಸ್ ಕಡೆಯಿಂದ ಸಿಎ ಕುಮಾರಸ್ವಾಮಿ ಮಾತ್ರ ಪಾಲ್ಗೊಂಡಿದ್ದಾರೆ.

Conclusion:news

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.