ETV Bharat / state

ಕಾರಿಗೆ ಡಿಕ್ಕಿ ಹೊಡೆದಿದ್ದನ್ನ ಪ್ರಶ್ನಿಸಿದ್ದಕ್ಕೆ ಚಾಲಕನ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿಗಳು

author img

By

Published : May 27, 2019, 11:42 PM IST

ಹಿಂಬದಿಯಿಂದ ಬಂದ ಬೈಕ್​ ಸವಾರಿಬ್ಬರು ಮುಂದೆ ಹೋಗುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದ್ದಲ್ಲದೇ ಅದನ್ನು ಪ್ರಶ್ನಿಸಿದ ಕಾರು ಚಾಲಕನಿಗೆ ಮನಬಂದಂತೆ ಥಳಿಸಿ ಪರಾರಿಯಾಗಿದ್ದಾರೆ.

ಚಾಲಕನ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿಗಳು

ಬೆಂಗಳೂರು: ಹಿಂಬದಿಯಿಂದ ಬಂದ ಬೈಕ್​, ಕಾರಿಗೆ ಡಿಕ್ಕಿ ಹೊಡೆದಿದ್ದಲ್ಲದೆ ಅದನ್ನು ಪ್ರಶ್ನಿಸಿದ ಕಾರು ಚಾಲಕನ‌ ಮೇಲೆ ಇಬ್ಬರು ದುಷ್ಕರ್ಮಿಗಳು ಮನಬಂದಂತೆ ಥಳಿಸಿರುವ ಘಟನೆ ಮೈಕೊ‌ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮೂರ್ತಿ (27) ಹಲ್ಲೆಗೆ ಒಳಗಾದ ಚಾಲಕ. ಇದೇ ತಿಂಗಳ 18ರಂದು ಮೂರ್ತಿ ಬಿಟಿಎಂ ಲೇಔಟ್​ನ ಕೋಡಿಚಿಕ್ಕನಹಳ್ಳಿ ಬಳಿ ಗ್ರಾಹಕರನ್ನು ಡ್ರಾಪ್ ಮಾಡಲು ಹೋಗಿದ್ದರು. ಮಾರ್ಗ ಮಧ್ಯೆ ಕಾರಿನಲ್ಲಿ ಹೋಗುವಾಗ ಹಿಂಬದಿಯಿಂದ ಬೈಕ್​ನಲ್ಲಿ ಬಂದಿದ್ದ ಇಬ್ಬರು ಅಪರಿಚಿತರು ಕಾರಿಗೆ ಡಿಕ್ಕಿ ಹೊಡೆದಿದ್ದಾರೆ. ಕೆಳಗಿಳಿದು ಪ್ರಶ್ನಿಸಿದಕ್ಕೆ ಆಕ್ರೋಶಗೊಂಡು ಚಾಲಕನ ವಿರುದ್ಧ ನಾವು ಲೋಕಲ್, ನಮ್ಮನ್ನೇ ಪ್ರಶ್ನೆ ಮಾಡ್ತೀಯಾ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ಮಾಡಿದ್ದಾರೆ.

ಈ ವೇಳೆ ಕಾರಿನ ಗ್ಲಾಸ್ ಪುಡಿ ಮಾಡಿ ಗ್ಯಾರೇಜ್ ವಸ್ತುಗಳಿಂದ ಹಲ್ಲೆ ನಡೆಸಿ, ಕಾರಿನ ಮೇಲೆ ಇಟ್ಟಿಗೆ ಹಾಕಿ ಪರಾರಿಯಾಗಿದ್ದಾರೆ. ಗಂಭೀರ ಗಾಯಗೊಂಡಿರುವ ಮೂರ್ತಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಈ ಸಂಬಂಧ ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು: ಹಿಂಬದಿಯಿಂದ ಬಂದ ಬೈಕ್​, ಕಾರಿಗೆ ಡಿಕ್ಕಿ ಹೊಡೆದಿದ್ದಲ್ಲದೆ ಅದನ್ನು ಪ್ರಶ್ನಿಸಿದ ಕಾರು ಚಾಲಕನ‌ ಮೇಲೆ ಇಬ್ಬರು ದುಷ್ಕರ್ಮಿಗಳು ಮನಬಂದಂತೆ ಥಳಿಸಿರುವ ಘಟನೆ ಮೈಕೊ‌ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮೂರ್ತಿ (27) ಹಲ್ಲೆಗೆ ಒಳಗಾದ ಚಾಲಕ. ಇದೇ ತಿಂಗಳ 18ರಂದು ಮೂರ್ತಿ ಬಿಟಿಎಂ ಲೇಔಟ್​ನ ಕೋಡಿಚಿಕ್ಕನಹಳ್ಳಿ ಬಳಿ ಗ್ರಾಹಕರನ್ನು ಡ್ರಾಪ್ ಮಾಡಲು ಹೋಗಿದ್ದರು. ಮಾರ್ಗ ಮಧ್ಯೆ ಕಾರಿನಲ್ಲಿ ಹೋಗುವಾಗ ಹಿಂಬದಿಯಿಂದ ಬೈಕ್​ನಲ್ಲಿ ಬಂದಿದ್ದ ಇಬ್ಬರು ಅಪರಿಚಿತರು ಕಾರಿಗೆ ಡಿಕ್ಕಿ ಹೊಡೆದಿದ್ದಾರೆ. ಕೆಳಗಿಳಿದು ಪ್ರಶ್ನಿಸಿದಕ್ಕೆ ಆಕ್ರೋಶಗೊಂಡು ಚಾಲಕನ ವಿರುದ್ಧ ನಾವು ಲೋಕಲ್, ನಮ್ಮನ್ನೇ ಪ್ರಶ್ನೆ ಮಾಡ್ತೀಯಾ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ಮಾಡಿದ್ದಾರೆ.

ಈ ವೇಳೆ ಕಾರಿನ ಗ್ಲಾಸ್ ಪುಡಿ ಮಾಡಿ ಗ್ಯಾರೇಜ್ ವಸ್ತುಗಳಿಂದ ಹಲ್ಲೆ ನಡೆಸಿ, ಕಾರಿನ ಮೇಲೆ ಇಟ್ಟಿಗೆ ಹಾಕಿ ಪರಾರಿಯಾಗಿದ್ದಾರೆ. ಗಂಭೀರ ಗಾಯಗೊಂಡಿರುವ ಮೂರ್ತಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಈ ಸಂಬಂಧ ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:Body:ಕಾರಿಗೆ ಡಿಕ್ಕಿ ಹೊಡೆದ್ರು, ಪ್ರಶ್ನಿಸಿದ ಚಾಲಕನಿಗೂ ಮನಬಂದಂತೆ ಥಳಿಸಿದ್ರು..

ಬೆಂಗಳೂರು:
ಹಿಂಬದಿಯಿಂದ ಬಂದು ಕಾರಿಗೆ ಡಿಕ್ಕಿ ಹೊಡೆದಿದಲ್ಲದೆ ಇದನ್ನು ಪ್ರಶ್ನಿಸಿದ ಕಾರು ಚಾಲಕನ‌ ಮೇಲೆ ಇಬ್ಬರು ದುಷ್ಕರ್ಮಿಗಳು ಮನಬಂದಂತೆ ಥಳಿಸಿರುವ ಘಟನೆ ಮೈಕೊ‌ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ
ಮೂರ್ತಿ ಹಲ್ಲೆಗೆ ಒಳಗಾದ ಚಾಲಕನಾಗಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
27 ವರ್ಷದ ಮೂರ್ತಿ ಇದೇ ತಿಂಗಳು 18ರಂದು ಬಿಟಿಎಂ ಲೇಔಟ್ ನ ಕೋಡಿಚಿಕ್ಕನಹಳ್ಳಿ ಬಳಿ ಗ್ರಾಹಕರನ್ನು ಡ್ರಾಪ್ ಮಾಡಲು ಹೋಗಿದ್ದರು. ಮಾರ್ಗ ಮಧ್ಯೆ ಕಾರಿನಲ್ಲಿ ಹೋಗುವಾಗ ಹಿಂಬದಿಯಿಂದ ಬೈಕ್ ನಲ್ಲಿ ಬಂದಿದ್ದ ಇಬ್ಬರು ಅಪರಿಚಿತರು ಕಾರಿಗೆ ಡಿಕ್ಕಿ ಹೊಡೆದಿದ್ದಾರೆ. ಕೆಳಗಿಳಿದು ಪ್ರಶ್ನಿಸಿದಕ್ಕೆ ಆಕ್ರೋಶಗೊಂಡು ಚಾಲಕನ ವಿರುದ್ಧ ನಾವು ಲೋಕಲ್ ನಮ್ಮನ್ನೇ ಪ್ರಶ್ನೆ ಮಾಡ್ತೀಯಾ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಬಳಿಕ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ತನ್ನ ಸ್ನೇಹಿತರನ್ನ ಕರೆಸಿಕೊಂಡು ಮೂರ್ತಿಗೆ ಮನಬಂದಂತೆ ಥಳಿಸಿದ್ದಾರೆ. ಈ ವೇಳೆ ಕಾರಿನ ಗ್ಲಾಸ್ ಪುಡಿ ಮಾಡಿ ಗ್ಯಾರೇಜ್ ವಸ್ತುಗಳಿಂದ ಹಲ್ಲೆ ನಡೆಸಿ ಕಾರಿನ ಮೇಲೆ ಇಟ್ಟಿಗೆ ಹಾಕಿ ಪರಾರಿಯಾಗಿದ್ದಾರೆ.
ಗಂಭೀರ ಗಾಯಗೊಂಡಿರುವ ಮೂರ್ತಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಈ ಸಂಬಂಧ ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Conclusion:

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.