ETV Bharat / state

ಜಿಂದಾಲ್​ಗೆ ಭೂಮಿ ವಿವಾದ: ನಾಳೆಯಿಂದ 2 ದಿನ ಬಿಜೆಪಿ ಶಾಸಕ, ಸಂಸದರಿಂದ ಅಹೋರಾತ್ರಿ ಧರಣಿ!

author img

By

Published : Jun 13, 2019, 8:15 PM IST

ಜಿಂದಾಲ್​ಗೆ ಭೂಮಿ ಮಾರಾಟವನ್ನು ವಿರೋಧಿಸಿ ನಾಳೆ ಬೆಳಗ್ಗೆ 10 ಗಂಟೆಗೆ ಬಿಜೆಪಿ ಸಂಸದರು ಮತ್ತು ಶಾಸಕರು ಅಹೋರಾತ್ರಿ ಧರಣಿ ಆರಂಭಿಸಲಿದ್ದು, ಮಾಜಿ ಡಿಸಿಎಂ ಆರ್.ಅಶೋಕ್ ನೇತೃತ್ವದಲ್ಲಿ ಧರಣಿ ಆರಂಭಗೊಳ್ಳಲಿದೆ.

ಜಿಂದಾಲ್​ಗೆ ಭೂ ಮಾರಾಟ ವಿರೋಧಿಸಿ ಬಿಜೆಪಿ ಶಾಸಕ, ಸಂಸದರಿಂದ ಅಹೋರಾತ್ರಿ ಧರಣಿ

ಬೆಂಗಳೂರು: ಜಿಂದಾಲ್​ಗೆ 3,667 ಎಕರೆ ಭೂಮಿ ಮಾರಾಟ ಮಾಡುವ ಸರ್ಕಾರದ ನಿರ್ಧಾರ ಹಾಗೂ ಬರ ನಿರ್ವಹಣೆ ವೈಫಲ್ಯ ಖಂಡಿಸಿ ನಾಳೆಯಿಂದ ಎರಡು ದಿನಗಳ ಕಾಲ ಬಿಜೆಪಿ ಶಾಸಕರು ಮತ್ತು ಸಂಸದರು ಅಹೋರಾತ್ರಿ ಧರಣಿ ನಡೆಸಲಿದ್ದಾರೆ.

ಜಿಂದಾಲ್​ಗೆ ಭೂಮಿ ಮಾರಾಟ ವಿರೋಧಿಸಿ ಬಿಜೆಪಿ ಶಾಸಕ, ಸಂಸದರಿಂದ ಅಹೋರಾತ್ರಿ ಧರಣಿ

ನಗರದ ಆನಂದರಾವ್ ವೃತ್ತದಲ್ಲಿರುವ ಗಾಂಧಿ ಪ್ರತಿಮೆ ಎದುರು ನಾಳೆ ಬೆಳಗ್ಗೆ 10 ಗಂಟೆಗೆ ಧರಣಿ ಆರಂಭಿಸಲಿದ್ದು, ಬಿಜೆಪಿ ಸಂಸದರು ಮತ್ತು ಶಾಸಕರು ಧರಣಿಯಲ್ಲಿ ಭಾಗಿಯಾಗಲಿದ್ದಾರೆ. ಮಾಜಿ ಡಿಸಿಎಂ ಆರ್.ಅಶೋಕ್ ನೇತೃತ್ವದಲ್ಲಿ ಧರಣಿ ಆರಂಭಗೊಳ್ಳಲಿದ್ದು, ದೆಹಲಿ ಪ್ರವಾಸದಿಂದ‌ ಹಿಂದಿರುಗಿದ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಧರಣಿಯಲ್ಲಿ ಭಾಗವಹಿಸಲಿದ್ದಾರೆ.

ಎರಡು ದಿನಗಳ ಅಹೋರಾತ್ರಿ ಧರಣಿ ನಂತರ ಜೂನ್ 16ರಂದು ಬಿಜೆಪಿ ಶಾಸಕರು ಮತ್ತು ಸಂಸದರು ಮುಖ್ಯಮಂತ್ರಿಗಳ‌ ಗೃಹ ಕಚೇರಿ ಕೃಷ್ಣಾಗೆ ಮುತ್ತಿಗೆ ಹಾಕಲಿದ್ದಾರೆ. ರಾಜ್ಯದ 105 ಬಿಜೆಪಿ ಶಾಸಕರು, 25 ಸಂಸದರು ಧರಣಿಯಲ್ಲಿ ಭಾಗವಹಿಸುತ್ತಿರುವ ಕಾರಣ ಬೃಹತ್ ವೇದಿಕೆ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಮಳೆಯಿಂದ ರಕ್ಷಣೆ ಪಡೆಯಲು ಅನುವಾಗುವಂತೆ ತಾತ್ಕಾಲಿಕ ಶೆಡ್ ನಿರ್ಮಿಸಲಾಗುತ್ತಿದೆ. ಜೊತೆಗೆ ರಾತ್ರಿ ವಾಸ್ತವ್ಯ ಹೂಡಲು ಅನುವಾಗುವಂತೆ 150ಕ್ಕೂ ಹೆಚ್ಚಿನ ಜನರಿಗೆ ಅಗತ್ಯವಿರುವ ಹಾಸಿಗೆ, ದಿಂಬು ವ್ಯವಸ್ಥೆ ಕಲ್ಪಿಸಲಾಗುತ್ತಿದೆ.

ಬೆಂಗಳೂರು: ಜಿಂದಾಲ್​ಗೆ 3,667 ಎಕರೆ ಭೂಮಿ ಮಾರಾಟ ಮಾಡುವ ಸರ್ಕಾರದ ನಿರ್ಧಾರ ಹಾಗೂ ಬರ ನಿರ್ವಹಣೆ ವೈಫಲ್ಯ ಖಂಡಿಸಿ ನಾಳೆಯಿಂದ ಎರಡು ದಿನಗಳ ಕಾಲ ಬಿಜೆಪಿ ಶಾಸಕರು ಮತ್ತು ಸಂಸದರು ಅಹೋರಾತ್ರಿ ಧರಣಿ ನಡೆಸಲಿದ್ದಾರೆ.

ಜಿಂದಾಲ್​ಗೆ ಭೂಮಿ ಮಾರಾಟ ವಿರೋಧಿಸಿ ಬಿಜೆಪಿ ಶಾಸಕ, ಸಂಸದರಿಂದ ಅಹೋರಾತ್ರಿ ಧರಣಿ

ನಗರದ ಆನಂದರಾವ್ ವೃತ್ತದಲ್ಲಿರುವ ಗಾಂಧಿ ಪ್ರತಿಮೆ ಎದುರು ನಾಳೆ ಬೆಳಗ್ಗೆ 10 ಗಂಟೆಗೆ ಧರಣಿ ಆರಂಭಿಸಲಿದ್ದು, ಬಿಜೆಪಿ ಸಂಸದರು ಮತ್ತು ಶಾಸಕರು ಧರಣಿಯಲ್ಲಿ ಭಾಗಿಯಾಗಲಿದ್ದಾರೆ. ಮಾಜಿ ಡಿಸಿಎಂ ಆರ್.ಅಶೋಕ್ ನೇತೃತ್ವದಲ್ಲಿ ಧರಣಿ ಆರಂಭಗೊಳ್ಳಲಿದ್ದು, ದೆಹಲಿ ಪ್ರವಾಸದಿಂದ‌ ಹಿಂದಿರುಗಿದ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಧರಣಿಯಲ್ಲಿ ಭಾಗವಹಿಸಲಿದ್ದಾರೆ.

ಎರಡು ದಿನಗಳ ಅಹೋರಾತ್ರಿ ಧರಣಿ ನಂತರ ಜೂನ್ 16ರಂದು ಬಿಜೆಪಿ ಶಾಸಕರು ಮತ್ತು ಸಂಸದರು ಮುಖ್ಯಮಂತ್ರಿಗಳ‌ ಗೃಹ ಕಚೇರಿ ಕೃಷ್ಣಾಗೆ ಮುತ್ತಿಗೆ ಹಾಕಲಿದ್ದಾರೆ. ರಾಜ್ಯದ 105 ಬಿಜೆಪಿ ಶಾಸಕರು, 25 ಸಂಸದರು ಧರಣಿಯಲ್ಲಿ ಭಾಗವಹಿಸುತ್ತಿರುವ ಕಾರಣ ಬೃಹತ್ ವೇದಿಕೆ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಮಳೆಯಿಂದ ರಕ್ಷಣೆ ಪಡೆಯಲು ಅನುವಾಗುವಂತೆ ತಾತ್ಕಾಲಿಕ ಶೆಡ್ ನಿರ್ಮಿಸಲಾಗುತ್ತಿದೆ. ಜೊತೆಗೆ ರಾತ್ರಿ ವಾಸ್ತವ್ಯ ಹೂಡಲು ಅನುವಾಗುವಂತೆ 150ಕ್ಕೂ ಹೆಚ್ಚಿನ ಜನರಿಗೆ ಅಗತ್ಯವಿರುವ ಹಾಸಿಗೆ, ದಿಂಬು ವ್ಯವಸ್ಥೆ ಕಲ್ಪಿಸಲಾಗುತ್ತಿದೆ.

Intro:ಬೆಂಗಳೂರು: ಜಿಂದಾಲ್ ಗೆ 3667 ಎಕರೆ ಸರ್ಕಾರಿ ಭೂಮಿ ಮಾರಾಟ ಮಾಡುವ ಸರ್ಕಾರದ ನಿರ್ಧಾರ ಹಾಗು ಬರ ನಿರ್ವಹಣೆ ವೈಫಲ್ಯ ಖಂಡಿಸಿ ನಾಳೆಯಿಂದ ಎರಡು ದಿನಗಳ ಕಾಲ ಬಿಜೆಪಿ ಅಹೋರಾತ್ರಿ ಧರಣಿ ನಡೆಸಲಿದೆ.
Body:
ನಗರದ ಆನಂದರಾವ್ ವೃತ್ತದಲ್ಲಿರುವ ಗಾಂಧಿ ಪ್ರತಿಮೆ ಎದುರು ನಾಳೆ ಬೆಳಗ್ಗೆ 10 ಗಂಟೆಗೆ ಧರಣಿ ಆರಂಭಿಸಲಿದ್ದು ಬಿಜೆಪಿ ಸಂಸದರು ಮತ್ತು ಶಾಸಕರು ಧರಣಿಯಲ್ಲಿ ಭಾಗಿಯಾಗಲಿದ್ದಾರೆ. ಮಾಜಿ ಡಿಸಿಎಂ ಆರ್.ಅಶೋಕ್ ನೇತೃತ್ವದಲ್ಲಿ ಧರಣಿ ಆರಂಭಗೊಳ್ಳಲಿದ್ದು ದೆಹಲಿ ಪ್ರವಾಸದಿಂದ‌ ಹಿಂದಿರುಗಿದ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಧರಣಿಯಲ್ಲಿ ಭಾಗವಹಿಸಲಿದ್ದಾರೆ.

ಎರಡು ದಿನಗಳ ಅಹೋರಾತ್ರಿ ಧರಣಿ ನಂತರ ಜೂನ್ 16 ರಂದು ಬಿಜೆಪಿ ಶಾಸಕರು ಮತ್ತು ಸಂಸದರು ಮುಖ್ಯಮಂತ್ರಿಗಳ‌ ಗೃಹ ಕಚೇರಿ ಕೃಷ್ಣಾಗೆ ಮುತ್ತಿಗೆ ಹಾಕಲಿದ್ದಾರೆ.

ರಾಜ್ಯದ 105 ಬಿಜೆಪಿ ಶಾಸಕರು, ಸದಸ್ಯರು,25 ಸಂಸದರು ಧರಣಿಯಲ್ಲಿ ಭಾಗವಹಿಸುತ್ತಿರುವ ಕಾರಣ ಬೃಹತ್ ವೇದಿಕೆ ನಿರ್ಮಾಣ ಕಾರ್ಯ ನಡೆಯುತ್ತಿದ್ದು ಮಳೆಯಿಂದ ರಕ್ಷಣೆ ಪಡೆಯಲು ಅನುವಾಗುವಂತೆ ತಾತ್ಕಾಲಿಕ ಶೆಡ್ ನಿರ್ಮಿಸಲಾಗುತ್ತಿದೆ ರಾತ್ರಿ ವಾಸ್ತವ್ಯ ಹೂಡಲು ಅನುವಾಗುವಂತೆ 150 ಕ್ಕೂ ಹೆಚ್ಚಿನ ಜನರಿಗೆ ಅಗತ್ಯವಿರುವ ಹಾಸಿಗೆ,ದಿಂಬು ವ್ಯವಸ್ಥೆ ಕಲ್ಪಿಸಲಾಗುತ್ತಿದೆ.Conclusion:-ಪ್ರಶಾಂತ್ ಕುಮಾರ್

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.