ETV Bharat / state

ಬರದ ಮಧ್ಯೆ ರಾಜ್ಯಕ್ಕೆ ಕಾವೇರಿ 'ಬರೆ'.. ಷರತ್ತಿನ ಮೇಲೆ ತಮಿಳುನಾಡಿಗೆ ನೀರು ಹರಿಸಲು ಪ್ರಾಧಿಕಾರದ ಆದೇಶ -

ಎರಡೂ ರಾಜ್ಯಗಳ ವಾದ ಪರಿಗಣಿಸಿ ಜೂನ್ ಪಾಲಿನ ನೀರು ಹರಿಸುವಂತೆ ಕರ್ನಾಟಕಕ್ಕೆ ಆದೇಶಿಸಿದೆ. ರಾಜ್ಯದಲ್ಲಿ ಈಗಾಗಲೇ ಬರಗಾಲ ಆವರಿಸಿದ್ದು, ಪ್ರಾಧಿಕಾರದ ಈ ಆದೇಶ ಕಾವೇರಿ ಕಣಿವೆ ರೈತರ ಪಾಲಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.

ಸಾಂದರ್ಭಿಕ ಚಿತ್ರ
author img

By

Published : May 28, 2019, 2:40 PM IST

Updated : May 28, 2019, 2:55 PM IST

ನವದೆಹಲಿ: ಮುಂಗಾರು ಹಂಗಾಮಿನಲ್ಲಿ ಕಾವೇರಿ ನದಿ ನೀರಿನ ಹಂಚಿಕೆ ಸೇರಿದಂತೆ ಇತರೆ ವಿಷಯಗಳ ಕುರಿತು ನಡೆದ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯುಎಂಎ) ಸಭೆಯಲ್ಲಿ ಕಾವೇರಿ ಕಣಿವೆಯ ಜನತೆಗೆ ಪ್ರಾಧಿಕಾರವು ಬರದ ನಡುವೆ ಶಾಕ್ ನೀಡಿದೆ.

ಕಾವೇರಿ ಕಣಿವೆ ವ್ಯಾಪ್ತಿಯ ರಾಜ್ಯಗಳಾದ ಕರ್ನಾಟಕ, ತಮಿಳುನಾಡು, ಕೇರಳ ಮತ್ತು ಪುದುಚೇರಿಯ ಪ್ರತಿನಿಧಿಗಳು ಭಾಗವಹಿಸಿದ್ದು, ಸಿಡಬ್ಲ್ಯೂಸಿ ಮುಖ್ಯಸ್ಥರಾದ ಮಸೂದ್‌ ಹುಸೇನ್‌ ಅಧ್ಯಕ್ಷತೆ ವಹಿಸಿದ್ದರು.

ದೆಹಲಿಯ ಕಾವೇರಿ ಪ್ರಾಧಿಕಾರದಲ್ಲಿ ನಡೆದ ಸಭೆಯಲ್ಲಿ ತಮಿಳುನಾಡು ಸುಪ್ರೀಂಕೋರ್ಟ್​ ಆದೇಶದ ಅನ್ವಯ, ಜೂನ್​ ತಿಂಗಳ ತನ್ನ ಪಾಲಿನ 9.19 ಟಿಎಂಸಿ ನೀರು ಬೀಡುವಂತೆ ಪ್ರಸ್ತಾಪಿಸಿತ್ತು. ಎರಡೂ ರಾಜ್ಯಗಳ ವಾದ ಪರಿಗಣಿಸಿ ಜೂನ್ ಪಾಲಿನ ನೀರು ಹರಿಸುವಂತೆ ಕರ್ನಾಟಕಕ್ಕೆ ಆದೇಶಿಸಿದೆ. ರಾಜ್ಯದಲ್ಲಿ ಈಗಾಗಲೇ ಬರಗಾಲ ಆವರಿಸಿದ್ದು, ಪ್ರಾಧಿಕಾರದ ಈ ಆದೇಶ ಕಾವೇರಿ ಕಣಿವೆ ರೈತರ ಪಾಲಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಯಾಕಂದ್ರೇ, ಈಗ ಕೆಆರ್‌ಎಸ್‌ನಲ್ಲಿ ಬರೀ 11.403 ಟಿಎಂಸಿ ನೀರಿನ ಸಂಗ್ರಹವಿದೆ. ಇದರಲ್ಲಿ 7 ಟಿಎಂಸಿ ಮಾತ್ರ ಬಳಕೆಗೆ ಯೋಗ್ಯವಾಗಿದೆ. ಒಳ ಹರಿವು 193 ಕ್ಯೂಸೆಕ್‌ ಹಾಗೂ ಹೊರ ಹರಿವು 348 ಕ್ಯೂಸೆಕ್‌ನಷ್ಟಿದೆ.

ಕಾವೇರಿ ಕಣಿವೆ ಪ್ರದೇಶದಲ್ಲಿ ಮಳೆ ಸುರಿಯುವ ಸಾಧ್ಯತೆ, ಮೇಕೆದಾಟು ಅಣೆಕಟ್ಟೆ ನಿರ್ಮಾಣ, ಜಲಾಶಯಗಳ ಒಳಹರಿವು ಮತ್ತು ಹೊರ ಹರಿವು, ಜಲಾನಯನ ಪ್ರದೇಶದಲ್ಲಿ ಲಭ್ಯವಾಗಲಿರುವ ನೀರಿನ ಸಮಗ್ರ ನಿರ್ವಹಣೆಗೆ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಚರ್ಚೆ ನಡೆದವು.

ಷರತ್ತಿನ ಮೇಲೆ ನೀರು ಹರಿಸುವಂತೆ ಪ್ರಾಧಿಕಾರದ ಆದೇಶ :

ಇವತ್ತು ದೆಹಲಿಯಲ್ಲಿ ಕಾವೇರಿ ನಿರ್ವಹಣಾ ಪ್ರಾಧಿಕಾರಿ ನೀಡಿರೋ ಆದೇಶ ಒಂದಷ್ಟು ಆತಂಕ ದೂರವಾಗಿಸಿದೆ. ಸದ್ಯ ಕೆಆರ್‌ಎಸ್‌, ಹಾರಂಗಿ, ಹೇಮಾವತಿ ಮತ್ತು ಕಬಿನಿ ಈ ನಾಲ್ಕೂ ಜಲಾಶಯಗಳಲ್ಲಿ ಬರೀ 14 ಟಿಎಂಸಿಯಷ್ಟು ನೀರಿನ ಸಂಗ್ರಹವಿದೆ. ಒಳ ಹರಿವು ಹೆಚ್ಚಾದ್ರೇ ಮಾತ್ರ ತಮಿಳುನಾಡಿಗೆ 9.19 ಟಿಎಂಸಿ ನೀರು ಹರಿಸಬೇಕು. ಒಂದು ವೇಳೆ ಒಳ ಹರಿವು ಹೆಚ್ಚಾಗದೇ ಇದ್ರೇ, ತಮಿಳುನಾಡಿಗೆ ನೀರು ಹರಿಸಬೇಕಿಲ್ಲ ಅಂತಾ ಕಾವೇರಿ ನಿರ್ವಹಣಾ ಪ್ರಾಧಿಕಾರ ಷರತ್ತು ಹಾಕಿದೆ. ಇದರಿಂದಾಗಿ ಕರ್ನಾಟಕ ಮಳೆಯಾಗಿ ಈ ತಿಂಗಳಲ್ಲಿ ಜಲಾಶಯಗಳಲ್ಲಿ ನೀರಿನ ಒಳ ಹರಿವು ಹೆಚ್ಚಾದ್ರೇ ಮಾತ್ರವೇ ನೀರು ಬಿಡಬೇಕಿದೆ. ಇಲ್ಲದಿದ್ರೇ ನೀರು ಹರಿಸುವ ಅಗತ್ಯ ಇಲ್ಲ.

ನವದೆಹಲಿ: ಮುಂಗಾರು ಹಂಗಾಮಿನಲ್ಲಿ ಕಾವೇರಿ ನದಿ ನೀರಿನ ಹಂಚಿಕೆ ಸೇರಿದಂತೆ ಇತರೆ ವಿಷಯಗಳ ಕುರಿತು ನಡೆದ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯುಎಂಎ) ಸಭೆಯಲ್ಲಿ ಕಾವೇರಿ ಕಣಿವೆಯ ಜನತೆಗೆ ಪ್ರಾಧಿಕಾರವು ಬರದ ನಡುವೆ ಶಾಕ್ ನೀಡಿದೆ.

ಕಾವೇರಿ ಕಣಿವೆ ವ್ಯಾಪ್ತಿಯ ರಾಜ್ಯಗಳಾದ ಕರ್ನಾಟಕ, ತಮಿಳುನಾಡು, ಕೇರಳ ಮತ್ತು ಪುದುಚೇರಿಯ ಪ್ರತಿನಿಧಿಗಳು ಭಾಗವಹಿಸಿದ್ದು, ಸಿಡಬ್ಲ್ಯೂಸಿ ಮುಖ್ಯಸ್ಥರಾದ ಮಸೂದ್‌ ಹುಸೇನ್‌ ಅಧ್ಯಕ್ಷತೆ ವಹಿಸಿದ್ದರು.

ದೆಹಲಿಯ ಕಾವೇರಿ ಪ್ರಾಧಿಕಾರದಲ್ಲಿ ನಡೆದ ಸಭೆಯಲ್ಲಿ ತಮಿಳುನಾಡು ಸುಪ್ರೀಂಕೋರ್ಟ್​ ಆದೇಶದ ಅನ್ವಯ, ಜೂನ್​ ತಿಂಗಳ ತನ್ನ ಪಾಲಿನ 9.19 ಟಿಎಂಸಿ ನೀರು ಬೀಡುವಂತೆ ಪ್ರಸ್ತಾಪಿಸಿತ್ತು. ಎರಡೂ ರಾಜ್ಯಗಳ ವಾದ ಪರಿಗಣಿಸಿ ಜೂನ್ ಪಾಲಿನ ನೀರು ಹರಿಸುವಂತೆ ಕರ್ನಾಟಕಕ್ಕೆ ಆದೇಶಿಸಿದೆ. ರಾಜ್ಯದಲ್ಲಿ ಈಗಾಗಲೇ ಬರಗಾಲ ಆವರಿಸಿದ್ದು, ಪ್ರಾಧಿಕಾರದ ಈ ಆದೇಶ ಕಾವೇರಿ ಕಣಿವೆ ರೈತರ ಪಾಲಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಯಾಕಂದ್ರೇ, ಈಗ ಕೆಆರ್‌ಎಸ್‌ನಲ್ಲಿ ಬರೀ 11.403 ಟಿಎಂಸಿ ನೀರಿನ ಸಂಗ್ರಹವಿದೆ. ಇದರಲ್ಲಿ 7 ಟಿಎಂಸಿ ಮಾತ್ರ ಬಳಕೆಗೆ ಯೋಗ್ಯವಾಗಿದೆ. ಒಳ ಹರಿವು 193 ಕ್ಯೂಸೆಕ್‌ ಹಾಗೂ ಹೊರ ಹರಿವು 348 ಕ್ಯೂಸೆಕ್‌ನಷ್ಟಿದೆ.

ಕಾವೇರಿ ಕಣಿವೆ ಪ್ರದೇಶದಲ್ಲಿ ಮಳೆ ಸುರಿಯುವ ಸಾಧ್ಯತೆ, ಮೇಕೆದಾಟು ಅಣೆಕಟ್ಟೆ ನಿರ್ಮಾಣ, ಜಲಾಶಯಗಳ ಒಳಹರಿವು ಮತ್ತು ಹೊರ ಹರಿವು, ಜಲಾನಯನ ಪ್ರದೇಶದಲ್ಲಿ ಲಭ್ಯವಾಗಲಿರುವ ನೀರಿನ ಸಮಗ್ರ ನಿರ್ವಹಣೆಗೆ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಚರ್ಚೆ ನಡೆದವು.

ಷರತ್ತಿನ ಮೇಲೆ ನೀರು ಹರಿಸುವಂತೆ ಪ್ರಾಧಿಕಾರದ ಆದೇಶ :

ಇವತ್ತು ದೆಹಲಿಯಲ್ಲಿ ಕಾವೇರಿ ನಿರ್ವಹಣಾ ಪ್ರಾಧಿಕಾರಿ ನೀಡಿರೋ ಆದೇಶ ಒಂದಷ್ಟು ಆತಂಕ ದೂರವಾಗಿಸಿದೆ. ಸದ್ಯ ಕೆಆರ್‌ಎಸ್‌, ಹಾರಂಗಿ, ಹೇಮಾವತಿ ಮತ್ತು ಕಬಿನಿ ಈ ನಾಲ್ಕೂ ಜಲಾಶಯಗಳಲ್ಲಿ ಬರೀ 14 ಟಿಎಂಸಿಯಷ್ಟು ನೀರಿನ ಸಂಗ್ರಹವಿದೆ. ಒಳ ಹರಿವು ಹೆಚ್ಚಾದ್ರೇ ಮಾತ್ರ ತಮಿಳುನಾಡಿಗೆ 9.19 ಟಿಎಂಸಿ ನೀರು ಹರಿಸಬೇಕು. ಒಂದು ವೇಳೆ ಒಳ ಹರಿವು ಹೆಚ್ಚಾಗದೇ ಇದ್ರೇ, ತಮಿಳುನಾಡಿಗೆ ನೀರು ಹರಿಸಬೇಕಿಲ್ಲ ಅಂತಾ ಕಾವೇರಿ ನಿರ್ವಹಣಾ ಪ್ರಾಧಿಕಾರ ಷರತ್ತು ಹಾಕಿದೆ. ಇದರಿಂದಾಗಿ ಕರ್ನಾಟಕ ಮಳೆಯಾಗಿ ಈ ತಿಂಗಳಲ್ಲಿ ಜಲಾಶಯಗಳಲ್ಲಿ ನೀರಿನ ಒಳ ಹರಿವು ಹೆಚ್ಚಾದ್ರೇ ಮಾತ್ರವೇ ನೀರು ಬಿಡಬೇಕಿದೆ. ಇಲ್ಲದಿದ್ರೇ ನೀರು ಹರಿಸುವ ಅಗತ್ಯ ಇಲ್ಲ.

Intro:Body:Conclusion:
Last Updated : May 28, 2019, 2:55 PM IST

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.