ETV Bharat / state

ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಿಶ್ಚಿತ: ದೇವೇಗೌಡ

ಹಾಲಿ ಸಂಸದರಿರುವ ಕ್ಷೇತ್ರ ನಮಗೆ ಬೇಡ ಎಂದಿದ್ದೆ. ತುಮಕೂರು ಕ್ಷೇತ್ರವನ್ನು ನಾವು ಕೇಳಲೇ ಇಲ್ಲ. ಕಾಂಗ್ರೆಸ್ ಸೋತಿರುವ ಕ್ಷೇತ್ರವನ್ನೇ ಕೊಡಿ ಎಂದಿದ್ದೆ. ಮೈಸೂರಿಗೋಸ್ಕರ ತುಮಕೂರು ಕ್ಷೇತ್ರ ಕೊಟ್ಟರು ಎಂದು ಕಾಂಗ್ರೆಸ್ ವಿರುದ್ಧ ದೇವೇಗೌಡರು ಅಸಮಾಧಾನ ಹೊರಹಾಕಿದ್ದಾರೆ.

author img

By

Published : Jun 21, 2019, 12:17 PM IST

Updated : Jun 21, 2019, 12:46 PM IST

ಹೆಚ್.ಡಿ ದೇವೇಗೌಡ

ಬೆಂಗಳೂರು: ಸರ್ಕಾರ ಎಷ್ಟು ದಿನ ಇರುತ್ತದೋ ಗೊತ್ತಿಲ್ಲ. ಅದು ಎರಡೂ ಪಕ್ಷದ ಮೇಲೆ ನಿಂತಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಮಾರ್ಮಿಕವಾಗಿ ನುಡಿದಿದ್ದಾರೆ.

ಮೈತ್ರಿ ಸರ್ಕಾರ ಕುರಿತು ಹೆಚ್.ಡಿ.ದೇವೇಗೌಡ ಪ್ರತಿಕ್ರಿಯೆ

ಪದ್ಮನಾಭನಗರದ ತಮ್ಮ ನಿವಾಸದಲ್ಲಿ ಇಂದು ಬೆಳಗ್ಗೆ ಯೋಗಾಸನ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಮುಖಂಡರ ಕೈಯಲ್ಲಿ ಎಲ್ಲವೂ ಇದೆ. ಮಧ್ಯಂತರ ಚುನಾವಣೆ ನಡೆಯೋ ಬಗ್ಗೆ ಸಂಶಯವೇ ಇಲ್ಲ ಎಂದು ಹೊಸ ಬಾಂಬ್ ಸಿಡಿಸಿದರು. ರಾಜಕಾರಣದಲ್ಲಿ ಅನೇಕ ಏಳು ಬೀಳು ಇರುತ್ತದೆ. ನನ್ನ ಜೊತೆಯಲ್ಲೇ ಇದ್ದು, ನನ್ನ ಜೊತೆಯಲ್ಲೇ ಬೆಳೆದವರು ನನ್ನನ್ನು ಬಿಟ್ಟು ಹೋದ್ರು. ನಾನು ಧೃತಿಗೆಡದೇ ಮುಂದೆ ಬಂದಿದ್ದೇನೆ ಎಂದು ಹೇಳಿದರು.

ಮೈತ್ರಿ ಸರ್ಕಾರ ಮಾಡಲೇಬೇಕು ಅಂತ ನಂಗೇನು ಆಸೆ ಇರಲಿಲ್ಲ. ದೆಹಲಿ ನಾಯಕರು ಬಂದು ನಿಮ್ಮ ಮಗನನ್ನು ಮುಖ್ಯಮಂತ್ರಿ ಮಾಡ್ಬೇಕು. ಸಾರ್ವತ್ರಿಕ ಚುನಾವಣೆ ನಂತರ ಹೈಕಮಾಂಡ್ ಸ್ವಲ್ಪ ಶಕ್ತಿ ಕಳೆದುಕೊಂಡಿದೆ. ಯಡಿಯೂರಪ್ಪ ಸಿಎಂ ಆಗಬಾರದು ಅಂತ ಕಾಂಗ್ರೆಸ್​ನವರು ಓಡಿ ಬಂದರು. ಚರ್ಚೆ ಮಾಡದೇ ಸರ್ಕಾರ ರಚನೆಗೆ ಮುಂದಾದ್ರು. ಕುಮಾರಸ್ವಾಮಿ ಅವರನ್ನೇ ಸಿಎಂ ಮಾಡಿ ಎಂದ್ರು. ಈಗ ಎಲ್ಲವನ್ನೂ ಸಹಿಸಿಕೊಂಡು ಹೋಗ್ತಿದ್ದೇವೆ ಎಂದು ಹೇಳಿದರು.

HDD
ಹೆಚ್.ಡಿ.ದೇವೇಗೌಡ

ಹಾಲಿ ಸಂಸದರಿರುವ ಕ್ಷೇತ್ರ ನಮಗೆ ಬೇಡ ಎಂದಿದ್ದೆ. ತುಮಕೂರು ಕ್ಷೇತ್ರವನ್ನು ನಾವು ಕೇಳಲೇ ಇಲ್ಲ. ಕಾಂಗ್ರೆಸ್ ಸೋತಿರುವ ಕ್ಷೇತ್ರವನ್ನೇ ಕೊಡಿ ಎಂದಿದ್ದೆ. ಮೈಸೂರಿಗೋಸ್ಕರ ತುಮಕೂರು ಕ್ಷೇತ್ರ ಕೊಟ್ಟರು ಎಂದು ಕಾಂಗ್ರೆಸ್ ವಿರುದ್ಧ ದೇವೇಗೌಡರು ಅಸಮಾಧಾನ ಹೊರಹಾಕಿದರು.

ಬೆಂಗಳೂರು: ಸರ್ಕಾರ ಎಷ್ಟು ದಿನ ಇರುತ್ತದೋ ಗೊತ್ತಿಲ್ಲ. ಅದು ಎರಡೂ ಪಕ್ಷದ ಮೇಲೆ ನಿಂತಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಮಾರ್ಮಿಕವಾಗಿ ನುಡಿದಿದ್ದಾರೆ.

ಮೈತ್ರಿ ಸರ್ಕಾರ ಕುರಿತು ಹೆಚ್.ಡಿ.ದೇವೇಗೌಡ ಪ್ರತಿಕ್ರಿಯೆ

ಪದ್ಮನಾಭನಗರದ ತಮ್ಮ ನಿವಾಸದಲ್ಲಿ ಇಂದು ಬೆಳಗ್ಗೆ ಯೋಗಾಸನ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಮುಖಂಡರ ಕೈಯಲ್ಲಿ ಎಲ್ಲವೂ ಇದೆ. ಮಧ್ಯಂತರ ಚುನಾವಣೆ ನಡೆಯೋ ಬಗ್ಗೆ ಸಂಶಯವೇ ಇಲ್ಲ ಎಂದು ಹೊಸ ಬಾಂಬ್ ಸಿಡಿಸಿದರು. ರಾಜಕಾರಣದಲ್ಲಿ ಅನೇಕ ಏಳು ಬೀಳು ಇರುತ್ತದೆ. ನನ್ನ ಜೊತೆಯಲ್ಲೇ ಇದ್ದು, ನನ್ನ ಜೊತೆಯಲ್ಲೇ ಬೆಳೆದವರು ನನ್ನನ್ನು ಬಿಟ್ಟು ಹೋದ್ರು. ನಾನು ಧೃತಿಗೆಡದೇ ಮುಂದೆ ಬಂದಿದ್ದೇನೆ ಎಂದು ಹೇಳಿದರು.

ಮೈತ್ರಿ ಸರ್ಕಾರ ಮಾಡಲೇಬೇಕು ಅಂತ ನಂಗೇನು ಆಸೆ ಇರಲಿಲ್ಲ. ದೆಹಲಿ ನಾಯಕರು ಬಂದು ನಿಮ್ಮ ಮಗನನ್ನು ಮುಖ್ಯಮಂತ್ರಿ ಮಾಡ್ಬೇಕು. ಸಾರ್ವತ್ರಿಕ ಚುನಾವಣೆ ನಂತರ ಹೈಕಮಾಂಡ್ ಸ್ವಲ್ಪ ಶಕ್ತಿ ಕಳೆದುಕೊಂಡಿದೆ. ಯಡಿಯೂರಪ್ಪ ಸಿಎಂ ಆಗಬಾರದು ಅಂತ ಕಾಂಗ್ರೆಸ್​ನವರು ಓಡಿ ಬಂದರು. ಚರ್ಚೆ ಮಾಡದೇ ಸರ್ಕಾರ ರಚನೆಗೆ ಮುಂದಾದ್ರು. ಕುಮಾರಸ್ವಾಮಿ ಅವರನ್ನೇ ಸಿಎಂ ಮಾಡಿ ಎಂದ್ರು. ಈಗ ಎಲ್ಲವನ್ನೂ ಸಹಿಸಿಕೊಂಡು ಹೋಗ್ತಿದ್ದೇವೆ ಎಂದು ಹೇಳಿದರು.

HDD
ಹೆಚ್.ಡಿ.ದೇವೇಗೌಡ

ಹಾಲಿ ಸಂಸದರಿರುವ ಕ್ಷೇತ್ರ ನಮಗೆ ಬೇಡ ಎಂದಿದ್ದೆ. ತುಮಕೂರು ಕ್ಷೇತ್ರವನ್ನು ನಾವು ಕೇಳಲೇ ಇಲ್ಲ. ಕಾಂಗ್ರೆಸ್ ಸೋತಿರುವ ಕ್ಷೇತ್ರವನ್ನೇ ಕೊಡಿ ಎಂದಿದ್ದೆ. ಮೈಸೂರಿಗೋಸ್ಕರ ತುಮಕೂರು ಕ್ಷೇತ್ರ ಕೊಟ್ಟರು ಎಂದು ಕಾಂಗ್ರೆಸ್ ವಿರುದ್ಧ ದೇವೇಗೌಡರು ಅಸಮಾಧಾನ ಹೊರಹಾಕಿದರು.

Intro:ಬೆಂಗಳೂರು : ಸರ್ಕಾರ ಎಷ್ಟು ದಿನ ಇರುತ್ತದೋ ಗೊತ್ತಿಲ್ಲ.
ಅದು ಎರಡು ಪಕ್ಷದ ಮೇಲೆ ನಿಂತಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಮಾರ್ಮಿಕವಾಗಿ ನುಡಿದಿದ್ದಾರೆ.Body:ಪದ್ಮನಾಭನಗರದಲ್ಲಿ ತಮ್ಮ ನಿವಾಸದಲ್ಲಿ ಇಂದು ಬೆಳಗ್ಗೆ ಯೋಗಾಸನ ಮಾಡಿದ ನಂತರ ಸುದ್ದಿಗಾರರಿಗೆ ಈ ವಿಷಯ ತಿಳಿದ ಅವರು, ಕಾಂಗ್ರೆಸ್ ಮುಖಂಡರ ಕೈಯಲ್ಲಿ ಎಲ್ಲೂವು ಇದೆ ಎಂದರು.
ಮಧ್ಯಂತರ ಚುನಾವಣೆ ನಿಶ್ಚಿತ? : ಮಧ್ಯಂತರ ಚುನಾವಣೆ ನಡೆಯಬಹುದು ಎಂದು ಹೇಳ್ತಿದ್ದರಾಲ್ಲ ಅನ್ನೋ ಪ್ರಶ್ನೆಗೆ ಉತ್ತರಿಸಿದ ಗೌಡರು, ಮಧ್ಯಂತರ ಚುನಾವಣೆ ನಡೆಯೋ ಬಗ್ಗೆ ಸಂಶಯವೇ ಇಲ್ಲ ಎಂದು ಹೊಸ ಬಾಂಬ್ ಸಿಡಿಸಿದರು.
ರಾಜಕಾರಣದಲ್ಲಿ ಅನೇಕ ಏಳು ಬೀಳು ಇರುತ್ತದೆ. ನನ್ನ ಜೊತೆಯಲ್ಲೇ ಇದ್ದು, ನನ್ನ ಜೊತೆಯಲ್ಲೇ ಬೆಳೆದವರು ನನ್ನನ್ನು ಬಿಟ್ಟು ಹೋದ್ರು. ನಾನು ಧೃತಿಗೆಡದೆ ಮುಂದೆ ಬಂದಿದ್ದೇನೆ ಎಂದು ಹೇಳಿದರು.
ಮೈತ್ರಿ ಸರ್ಕಾರ ಮಾಡಲೇ ಬೇಕು ಅಂತ ನಂಗೇನು ಇರಲಿಲ್ಲ.
ದೆಹಲಿ ನಾಯಕರು ಬಂದು ನಿಮ್ಮ ಮಗನನ್ನು ಮುಖ್ಯಮಂತ್ರಿ ಮಾಡ್ಬೇಕು ಅಂದ್ರು ಎಂದರು.
ಸಾರ್ವಂತ್ರಿಕ ಚುನಾವಣೆ ನಂತರ ಹೈಕಮಾಂಡ್ ಸ್ವಲ್ಪ ಶಕ್ತಿ ಕಳೆದುಕೊಂಡಿದೆ ಎಂದ ಅವರು, ಜೆಡಿಎಸ್ ಜೊತೆ ಹೋದರೆ ಕಾಂಗ್ರೆಸ್ ಪಕ್ಷ ಹೋಗುತ್ತೆ ಅನ್ನೋ ಸಂಕಟ ಆ ನಾಯಕರಿಗಿದೆ.
ಯಡಿಯೂರಪ್ಪ ಸಿಎಂ ಆಗ್ಬಾರ್ದು ಅಂತಾ ಕಾಂಗ್ರೆಸ್ ನವರು ಓಡಿ ಬಂದರು. ಚರ್ಚೆ ಮಾಡದೇ ಸರ್ಕಾರ ರಚನೆಗೆ ಮುಂದಾದ್ರು. ಕುಮಾರಸ್ವಾಮಿ ಅವರನ್ನೇ ಸಿಎಂ ಮಾಡಿ ಎಂದ್ರು. ಈಗ ಒನ್ ಥರ್ಡ್ ನಿಯಮವೂ ಇಲ್ಲ ಏನು ಇಲ್ಲ.
ನಮ್ಮ ಒಂದು ಮಂತ್ರಿ ಸ್ಥಾನವನ್ನೂ ಕಾಂಗ್ರೆಸ್ ಗೆ ಸರಂಡರ್ ಮಾಡಿದ್ದೇವೆ. ಎಲ್ಲವನ್ನು ಸಹಿಸ್ಕೊಂಡು ಹೋಗ್ತಿದ್ದೇನೆ...
ನಾನೇನಾದ್ರು ಮಾತಾಡಿದ್ನಾ? ಎಂದು ಹೇಳಿದರು.
ಹಾಲಿ ಸಂಸದರಿರುವ ಕ್ಷೇತ್ರ ನಮಗೆ ಬೇಡ ಎಂದಿದ್ದೆ.
ತುಮಕೂರು ಕ್ಷೇತ್ರವನ್ನು ನಾವು ಕೇಳಲೇ ಇಲ್ಲ.
ಕಾಂಗ್ರೆಸ್ ಸೋತಿರುವ ಕ್ಷೇತ್ರವನ್ನೇ ಕೊಡಿ ಎಂದಿದ್ದೆ.
ಮೈಸೂರಿಗೋಸ್ಕರ ತುಮಕೂರು ಕ್ಷೇತ್ರ ಕೊಟ್ಟರು ಎಂದು ಕಾಂಗ್ರೆಸ್ ವಿರುದ್ಧ ದೇವೇಗೌಡರು ಅಸಮಾಧಾನ ಹೊರಹಾಕಿದರು.Conclusion:
Last Updated : Jun 21, 2019, 12:46 PM IST

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.