ETV Bharat / state

ಇದೇನ್​ ಸಾರ್ ನೀವೇ ಈ ರೀತಿ ಹೇಳಿಕೆ ಕೊಟ್ಟಿದ್ದೀರಲ್ಲ... ಹೆಚ್​ಡಿಡಿಗೆ ವೇಣುಗೋಪಾಲ್ ದಿಢೀರ್​​ ಫೋನ್​ ಕಾಲ್​

ಮಧ್ಯಂತರ ಚುಣಾವಣೆ ಹೇಳಿಕೆಗೆ ಸಂಬಂಧಿಸಿದಂತೆ ರಾಜ್ಯ ಉಸ್ತುವಾರಿ ಸಚಿವ ಕೆ.ಸಿ ವೇಣುಗೋಪಾಲ್​​ ಅವರು ದೇವೇಗೌಡರಿಗೆ ದಿಢೀರ್​ ಕರೆ ಮಾಡಿ ಮಾತನಾಡಿದ್ದಾರೆ. ಈ ವೇಳೆ ದೊಡ್ಡಗೌಡರು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ ಎನ್ನಲಾಗ್ತಿದೆ.

author img

By

Published : Jun 21, 2019, 4:59 PM IST

ದೇವೇಗೌಡರ ಮಧ್ಯಂತರ ಚುನಾವಣೆ

ಬೆಂಗಳೂರು: ಜೆಡಿಎಸ್ ವರಿಷ್ಠ ಹೆಚ್​ ಡಿ ​ದೇವೇಗೌಡರ ನೀಡಿರುವ ಮಧ್ಯಂತರ ಚುನಾವಣೆ ಹೇಳಿಕೆ ರಾಜ್ಯದಲ್ಲಿ ರಾಜಕೀಯ ಬಿರುಗಾಳಿ ಎಬ್ಬಿಸಿದೆ. ಈ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಜೊತೆ ವೇಣುಗೋಪಾಲ್ ದೂರವಾಣಿ ಕರೆ ಮಾಡಿ ಮಾತನಾಡಿದ್ದಾರೆ ಎಂದು ತಿಳಿದುಬಂದಿದೆ.

ದೊಡ್ಡಗೌಡರ ಈ ಹೇಳಿಕೆ ರಾಜಕೀಯವಾಗಿ ಹೊಸ ತಿರುವು ಪಡೆಯುತ್ತಿದ್ದಂತೆ, ರಾಜ್ಯ ಕಾಂಗ್ರೆಸ್​​ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ದೂರವಾಣಿ ಮೂಲಕ ದೇವೇಗೌಡರ ಜತೆ ಮಾತುಕತೆ ನಡೆಸಿದ್ದಾರೆ. ಕರೆ ಮಾಡಿ ಇದೇನು ಸಾರ್ ನೀವೇ ಈ ರೀತಿ ಹೇಳಿಕೆ ಕೊಟ್ಟಿದ್ದೀರಲ್ಲ?. ನಿಮ್ಮ ಹೇಳಿಕೆಯೇ ಹಲವು ರಾಜಕೀಯ ತಿರುವು ಪಡೆಯುತ್ತಿದೆ. ಏನಕ್ಕೆ‌ ಈ ರೀತಿ ಮಾತನಾಡಿದ್ದೀರಾ?. ಏನಾದ್ರು ಸಮಸ್ಯೆ ಆಗಿದೆಯಾ? ಎಂದು ಪ್ರಶ್ನಿಸಿದ್ದಾರೆ ಎನ್ನಲಾಗ್ತಿದೆ.

ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಿಶ್ಚಿತ: ದೇವೇಗೌಡ

ವೇಣುಗೋಪಾಲ್​ ಪ್ರಶ್ನೆಗೆ ದೇವೇಗೌಡರು ತಾನು ಆ ರೀತಿ ಹೇಳಿಲ್ಲವೆಂದು ಸಮಜಾಯಿಷಿ ನೀಡಿದ್ದಾರೆ. ನಾನು ಪಂಚಾಯತ್​​ ಎಲೆಕ್ಷನ್ ಬಗ್ಗೆ ಮಾತನಾಡಿದ್ದು. ಆದರೆ ಮಾಧ್ಯಮದವರೇ ನನ್ನ ಹೇಳಿಕೆಯನ್ನು ತಿರುಚಿದ್ದಾರೆ ಎಂದು ವಿವರಿಸಿದ್ದಾರೆ ಎಂದು ಹೇಳಲಾಗ್ತಿದೆ. ಇನ್ನು ಉಭಯ ನಾಯಕರ ದೂರವಾಣಿ ಸಂಭಾಷಣೆಯ ಬಳಿಕ ದೇವೇಗೌಡರು ತಮ್ಮ ಹೇಳಿಕೆಯನ್ನು ಬದಲಾಯಿಸಿದ್ದಾರೆ. ಅರಮನೆ ಮೈದಾನದ ಕಾರ್ಯಕ್ರಮದಲ್ಲಿ ನೀಡಿದ್ದ ತಮ್ಮ ಹೇಳಿಕೆಯನ್ನು ತಿರುಚಲಾಗಿದೆ ಎಂದು ಹೆಚ್​ಡಿಡಿ ಯು ಟರ್ನ್ ​ಹೊಡೆದಿದ್ದಾರೆ.

ಬೆಂಗಳೂರು: ಜೆಡಿಎಸ್ ವರಿಷ್ಠ ಹೆಚ್​ ಡಿ ​ದೇವೇಗೌಡರ ನೀಡಿರುವ ಮಧ್ಯಂತರ ಚುನಾವಣೆ ಹೇಳಿಕೆ ರಾಜ್ಯದಲ್ಲಿ ರಾಜಕೀಯ ಬಿರುಗಾಳಿ ಎಬ್ಬಿಸಿದೆ. ಈ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಜೊತೆ ವೇಣುಗೋಪಾಲ್ ದೂರವಾಣಿ ಕರೆ ಮಾಡಿ ಮಾತನಾಡಿದ್ದಾರೆ ಎಂದು ತಿಳಿದುಬಂದಿದೆ.

ದೊಡ್ಡಗೌಡರ ಈ ಹೇಳಿಕೆ ರಾಜಕೀಯವಾಗಿ ಹೊಸ ತಿರುವು ಪಡೆಯುತ್ತಿದ್ದಂತೆ, ರಾಜ್ಯ ಕಾಂಗ್ರೆಸ್​​ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ದೂರವಾಣಿ ಮೂಲಕ ದೇವೇಗೌಡರ ಜತೆ ಮಾತುಕತೆ ನಡೆಸಿದ್ದಾರೆ. ಕರೆ ಮಾಡಿ ಇದೇನು ಸಾರ್ ನೀವೇ ಈ ರೀತಿ ಹೇಳಿಕೆ ಕೊಟ್ಟಿದ್ದೀರಲ್ಲ?. ನಿಮ್ಮ ಹೇಳಿಕೆಯೇ ಹಲವು ರಾಜಕೀಯ ತಿರುವು ಪಡೆಯುತ್ತಿದೆ. ಏನಕ್ಕೆ‌ ಈ ರೀತಿ ಮಾತನಾಡಿದ್ದೀರಾ?. ಏನಾದ್ರು ಸಮಸ್ಯೆ ಆಗಿದೆಯಾ? ಎಂದು ಪ್ರಶ್ನಿಸಿದ್ದಾರೆ ಎನ್ನಲಾಗ್ತಿದೆ.

ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಿಶ್ಚಿತ: ದೇವೇಗೌಡ

ವೇಣುಗೋಪಾಲ್​ ಪ್ರಶ್ನೆಗೆ ದೇವೇಗೌಡರು ತಾನು ಆ ರೀತಿ ಹೇಳಿಲ್ಲವೆಂದು ಸಮಜಾಯಿಷಿ ನೀಡಿದ್ದಾರೆ. ನಾನು ಪಂಚಾಯತ್​​ ಎಲೆಕ್ಷನ್ ಬಗ್ಗೆ ಮಾತನಾಡಿದ್ದು. ಆದರೆ ಮಾಧ್ಯಮದವರೇ ನನ್ನ ಹೇಳಿಕೆಯನ್ನು ತಿರುಚಿದ್ದಾರೆ ಎಂದು ವಿವರಿಸಿದ್ದಾರೆ ಎಂದು ಹೇಳಲಾಗ್ತಿದೆ. ಇನ್ನು ಉಭಯ ನಾಯಕರ ದೂರವಾಣಿ ಸಂಭಾಷಣೆಯ ಬಳಿಕ ದೇವೇಗೌಡರು ತಮ್ಮ ಹೇಳಿಕೆಯನ್ನು ಬದಲಾಯಿಸಿದ್ದಾರೆ. ಅರಮನೆ ಮೈದಾನದ ಕಾರ್ಯಕ್ರಮದಲ್ಲಿ ನೀಡಿದ್ದ ತಮ್ಮ ಹೇಳಿಕೆಯನ್ನು ತಿರುಚಲಾಗಿದೆ ಎಂದು ಹೆಚ್​ಡಿಡಿ ಯು ಟರ್ನ್ ​ಹೊಡೆದಿದ್ದಾರೆ.

Intro:Kcv Body:KN_BNG_04_21_MIDPOLL_HDDVENUGOPALCALL_SCRIPT_VENKAT_7201951

ದೊಡ್ಡಗೌಡರ ಮಧ್ಯಂತರ ಚುನಾವಣೆ ಹೇಳಿಕೆ: ಕೆ.ಸಿ.ವೇಣುಗೋಪಾಲ್ ರಿಂದ ದೇವೇಗೌಡರಿಗೆ ಕರೆ

ಬೆಂಗಳೂರು: ದೇವೇಗೌಡರ ಮಧ್ಯಂತರ ಚುನಾವಣೆ ಹೇಳಿಕೆ ಸಂಬಂಧ ರಾಜ್ಯದಲ್ಲಿ ರಾಜಕೀಯ ಬಿರುಗಾಳಿ ಎಬ್ಬಿರುವ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಜೊತೆ ವೇಣುಗೋಪಾಲ್ ದೂರವಾಣಿ ಕರೆ ಮಾಡಿ ಮಾತನಾಡಿದ್ದಾರೆ.

ಹೇಳಿಕೆ ರಾಜಕೀಯವಾಗಿ ತಿರುವು ಪಡೆಯುತ್ತಾ ಇದ್ದ ಹಾಗೆ, ಕೆ.ಸಿ.ವೇಣುಗೋಪಾಲ್ ದೂರವಾಣಿ ಮೂಲಕ ದೇವೇಗೌಡರ ಜತೆ ಮಾತುಕತೆ ನಡೆಸಿದರು. ಕರೆ ಮಾಡಿ ಇದೇನು ಸಾರ್ ನೀವೇ ಈ ರೀತಿ ಹೇಳಿಕೆ ಕೊಟ್ಟಿದ್ದೀರಲ್ಲ?. ಮಾಧ್ಯಮಗಳ ಮುಂದೆ ಹೇಳಿಕೆ ಕೊಟ್ಟಿದ್ದೀರಿ. ಅದುವೇ ಹಲವು ರಾಜಕೀಯ ತಿರುವು ಪಡೆಯುತ್ತಿದೆ. ಏನಕ್ಕೆ‌ ಈ ರೀತಿ ಮಾತನಾಡಿದ್ದಿರಾ?. ಏನಾದ್ರು ಸಮಸ್ಯೆ ಆಗಿದೆಯಾ? ಎಂದು ಪ್ರಶ್ನಿಸಿದ್ದಾರೆ ಎನ್ನಲಾಗಿದೆ.

ಈ ವೇಳೆ ದೇವೇಗೌಡರು ನಾನು ಆ ರೀತಿ ಹೇಳಿಲ್ಲ ಎಂದು ಸಮಜಾಯಿಷಿ ನೀಡಿದ್ದಾರೆ. ನಾನು ಪಂಚಾಯ್ತಿ ಎಲೆಕ್ಷನ್ ಬಗ್ಗೆ ಮಾತನಾಡಿದ್ದು. ಆದರೆ ಮಾಧ್ಯಮದವರು ನನ್ನ ಹೇಳಿಕೆಯನ್ನು ತಿರುಚಿದ್ದಾರೆ ಎಂದು ವಿವರಿಸಿದ್ದಾರೆ.

ಉಭಯ ನಾಯಕರ ದೂರವಾಣಿ ಸಂಭಾಷಣೆಯ ಬಳಿಕ ದೇವೇಗೌಡರು ತಮ್ಮ ಹೇಳಿಕೆಯನ್ನು ಬದಲಾಯಿಸಿದ್ದಾರೆ. ಅರಮನೆ ಮೈದಾನದ ಕಾರ್ಯಕ್ರಮದಲ್ಲಿ ತಮ್ಮ ಹೇಳಿಕೆಯನ್ನು ತಿರುಚಲಾಗಿದ್ದು, ನಾನು ಪಂಚಾಯ್ತಿ ಚುನಾವಣೆ ಬಗ್ಗೆ ಮಾತನಾಡಿದ್ದು ಎಂದು ಸಮರ್ಥಿಸಿಕೊಂಡಿದ್ದಾರೆ.Conclusion:Venkat

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.