ETV Bharat / state

ಸಾಮೂಹಿಕ ಕೃಷಿ ಪದ್ಧತಿಗೆ ಹೊಸ ಕಾಯ್ದೆ.. ಕೃಷಿ ಸಚಿವ ಎನ್ ಹೆಚ್ ಶಿವಶಂಕರ್ ರೆಡ್ಡಿ - undefined

ಮುಂಗಾರು ಮಳೆ ಹಿನ್ನಡೆಯಿಂದಾಗಿ ಶೇ.8ರಷ್ಟು ಮಾತ್ರ ಬಿತ್ತನೆಯಾಗಿದೆ. ಈ ಬಾರಿ ಮುಂಗಾರು ಹಂಗಾಮಿಗೆ ಬಿತ್ತನೆ ಬೀಜಗಳ ಹಾಗೂ ರಸಗೊಬ್ಬರದ ಕೊರತೆ ಉಂಟಾಗದಂತೆ ನೋಡಿಕೊಳ್ಳಲಾಗಿದೆ ಎಂದು ಸಚಿವರು ಹೇಳಿದರು.

ಶಿವಶಂಕರ್​ ರೆಡ್ಡಿ
author img

By

Published : Jun 14, 2019, 8:24 PM IST

ಬೆಂಗಳೂರು: ಸಾಮೂಹಿಕ ಕೃಷಿ ಪದ್ಧತಿ ಜಾರಿಗೆ ತರಲು ಉದ್ದೇಶಿಸಿದ್ದು, ಇದಕ್ಕಾಗಿ ಹೊಸ ಕಾಯ್ದೆ ರೂಪಿಸಲು ಸಿದ್ದತೆ ನಡೆಸಲಾಗುತ್ತಿದೆ ಎಂದು ಕೃಷಿ ಸಚಿವ ಎನ್ ಹೆಚ್ ಶಿವಶಂಕರ್ ರೆಡ್ಡಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊಸ ಕಾಯ್ದೆ ಜಾರಿಗೆ ತರುವ ಸಂಬಂಧ ಸಂಪುಟ ಉಪಸಮಿತಿಯಲ್ಲಿ ಅದರ ಸಾಧಕ ಬಾಧಕಗಳನ್ನು ಚರ್ಚಿಸಲಾಗುವುದು. ಇದರಲ್ಲಿ ಭದ್ರತೆ ನೀಡುವುದು ಸೇರಿದಂತೆ ರೈತರಿಗೆ ಅನುಕೂಲವಾಗುವ ರೀತಿಯಲ್ಲಿ ಕಾಯ್ದೆ ಅನುಷ್ಠಾನಕ್ಕೆ ತರಲಾಗುವುದು ಎಂದು ಹೇಳಿದರು.

ಕೃಷಿ ಸಚಿವ ಎನ್ ಹೆಚ್ ಶಿವಶಂಕರ್ ರೆಡ್ಡಿ

ಕೋಲಾರ, ಚಿತ್ರದುರ್ಗ, ಕೊಪ್ಪಳ ಹಾಗೂ ಗದಗ ಜಿಲ್ಲೆಗಳಲ್ಲಿ ಇಸ್ರೇಲ್​ ಕೃಷಿ ಪದ್ಧತಿಯನ್ನು ಪ್ರಾಯೋಗಿಕವಾಗಿ ಆರಂಭಿಸಲಾಗುವುದು. ಮೊದಲ ಹಂತದಲ್ಲಿ ತಲಾ 5 ಸಾವಿರ ಹೆಕ್ಟೇರ್ ಖುಷ್ಕಿ ಜಮೀನಿನಲ್ಲಿ ನೀರಾವರಿ ಸೌಲಭ್ಯ ಒದಗಿಸಲು ವ್ಯವಸ್ಥೆ ಮಾಡಲಿದ್ದೇವೆ. ಇದರ ಅನುಷ್ಠಾನಕ್ಕೆ ₹145.92 ಕೋಟಿ ಅನುದಾನ ಬಿಡುಗಡೆ ಮಾಡಲಾಗುತ್ತದೆ ಎಂದು ಹೇಳಿದರು.

ಇಸ್ರೇಲ್​ ಮಾದರಿಯಲ್ಲಿ ಸಾಮೂಹಿಕ ಕೃಷಿ ಪದ್ಧತಿಗೆ ಹೆಚ್ಚು ಒತ್ತು ನೀಡಲಾಗುತ್ತದೆ. ಇದರಲ್ಲಿ ವೈಯಕ್ತಿಕ ಸಬ್ಸಿಡಿಗಿಂತಲೂ ಹೆಚ್ಚಿನ ಆರ್ಥಿಕ ನೆರವು ದೊರೆಯಲಿದೆ. ಹನಿ ನೀರಾವರಿ ಬಳಕೆ, ವಿಮೆ ಸೇರಿದಂತೆ ಹಲವಾರು ಸೌಲಭ್ಯಗಳಿವೆ. ಸಬ್ಸಿಡಿ ಕೃಷಿ ಯಂತ್ರೋಪಕರಣ ಯೋಜನೆಯನ್ನು ಮುಂದುವರಿಸಿರುವ ರಾಜ್ಯ ಸರ್ಕಾರ ₹ 441 ಕೋಟಿ ಕಾಯ್ದಿರಿಸಿದೆ. ಹಾಗೆಯೇ ಕೃಷಿ ಹೊಂಡಕ್ಕೆ ₹ 250 ಕೋಟಿ, ಮಣ್ಣಿನ ಆರೋಗ್ಯ ಕಾರ್ಡ್​ನ 3ನೇ ಹಂತದ ಯೋಜನೆಯಲ್ಲಿ ₹ 25 ಖರ್ಚು ಮಾಡಲಾಗುತ್ತಿದೆ ಎಂದು ಹೇಳಿದರು. ಶೂನ್ಯ ಬಂಡವಾಳ ನೈಸರ್ಗಿಕ ಕೃಷಿ ಯೋಜನೆ ಜಾರಿಗೆ ತರುತ್ತಿದ್ದು, ಸುಮಾರು 20 ಸಾವಿರ ಹೆಕ್ಟೇರ್​ನಲ್ಲಿ 10 ವಲಯಗಳನ್ನಾಗಿ ಆಯ್ಕೆ ಮಾಡಿಕೊಂಡಿದ್ದು, ಸುಮಾರು ₹ 40 ಕೋಟಿ ನೆರವು ನೀಡಲಾಗುತ್ತಿದೆ ಎಂದು ಹೇಳಿದರು.

ಬೆಂಗಳೂರು: ಸಾಮೂಹಿಕ ಕೃಷಿ ಪದ್ಧತಿ ಜಾರಿಗೆ ತರಲು ಉದ್ದೇಶಿಸಿದ್ದು, ಇದಕ್ಕಾಗಿ ಹೊಸ ಕಾಯ್ದೆ ರೂಪಿಸಲು ಸಿದ್ದತೆ ನಡೆಸಲಾಗುತ್ತಿದೆ ಎಂದು ಕೃಷಿ ಸಚಿವ ಎನ್ ಹೆಚ್ ಶಿವಶಂಕರ್ ರೆಡ್ಡಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊಸ ಕಾಯ್ದೆ ಜಾರಿಗೆ ತರುವ ಸಂಬಂಧ ಸಂಪುಟ ಉಪಸಮಿತಿಯಲ್ಲಿ ಅದರ ಸಾಧಕ ಬಾಧಕಗಳನ್ನು ಚರ್ಚಿಸಲಾಗುವುದು. ಇದರಲ್ಲಿ ಭದ್ರತೆ ನೀಡುವುದು ಸೇರಿದಂತೆ ರೈತರಿಗೆ ಅನುಕೂಲವಾಗುವ ರೀತಿಯಲ್ಲಿ ಕಾಯ್ದೆ ಅನುಷ್ಠಾನಕ್ಕೆ ತರಲಾಗುವುದು ಎಂದು ಹೇಳಿದರು.

ಕೃಷಿ ಸಚಿವ ಎನ್ ಹೆಚ್ ಶಿವಶಂಕರ್ ರೆಡ್ಡಿ

ಕೋಲಾರ, ಚಿತ್ರದುರ್ಗ, ಕೊಪ್ಪಳ ಹಾಗೂ ಗದಗ ಜಿಲ್ಲೆಗಳಲ್ಲಿ ಇಸ್ರೇಲ್​ ಕೃಷಿ ಪದ್ಧತಿಯನ್ನು ಪ್ರಾಯೋಗಿಕವಾಗಿ ಆರಂಭಿಸಲಾಗುವುದು. ಮೊದಲ ಹಂತದಲ್ಲಿ ತಲಾ 5 ಸಾವಿರ ಹೆಕ್ಟೇರ್ ಖುಷ್ಕಿ ಜಮೀನಿನಲ್ಲಿ ನೀರಾವರಿ ಸೌಲಭ್ಯ ಒದಗಿಸಲು ವ್ಯವಸ್ಥೆ ಮಾಡಲಿದ್ದೇವೆ. ಇದರ ಅನುಷ್ಠಾನಕ್ಕೆ ₹145.92 ಕೋಟಿ ಅನುದಾನ ಬಿಡುಗಡೆ ಮಾಡಲಾಗುತ್ತದೆ ಎಂದು ಹೇಳಿದರು.

ಇಸ್ರೇಲ್​ ಮಾದರಿಯಲ್ಲಿ ಸಾಮೂಹಿಕ ಕೃಷಿ ಪದ್ಧತಿಗೆ ಹೆಚ್ಚು ಒತ್ತು ನೀಡಲಾಗುತ್ತದೆ. ಇದರಲ್ಲಿ ವೈಯಕ್ತಿಕ ಸಬ್ಸಿಡಿಗಿಂತಲೂ ಹೆಚ್ಚಿನ ಆರ್ಥಿಕ ನೆರವು ದೊರೆಯಲಿದೆ. ಹನಿ ನೀರಾವರಿ ಬಳಕೆ, ವಿಮೆ ಸೇರಿದಂತೆ ಹಲವಾರು ಸೌಲಭ್ಯಗಳಿವೆ. ಸಬ್ಸಿಡಿ ಕೃಷಿ ಯಂತ್ರೋಪಕರಣ ಯೋಜನೆಯನ್ನು ಮುಂದುವರಿಸಿರುವ ರಾಜ್ಯ ಸರ್ಕಾರ ₹ 441 ಕೋಟಿ ಕಾಯ್ದಿರಿಸಿದೆ. ಹಾಗೆಯೇ ಕೃಷಿ ಹೊಂಡಕ್ಕೆ ₹ 250 ಕೋಟಿ, ಮಣ್ಣಿನ ಆರೋಗ್ಯ ಕಾರ್ಡ್​ನ 3ನೇ ಹಂತದ ಯೋಜನೆಯಲ್ಲಿ ₹ 25 ಖರ್ಚು ಮಾಡಲಾಗುತ್ತಿದೆ ಎಂದು ಹೇಳಿದರು. ಶೂನ್ಯ ಬಂಡವಾಳ ನೈಸರ್ಗಿಕ ಕೃಷಿ ಯೋಜನೆ ಜಾರಿಗೆ ತರುತ್ತಿದ್ದು, ಸುಮಾರು 20 ಸಾವಿರ ಹೆಕ್ಟೇರ್​ನಲ್ಲಿ 10 ವಲಯಗಳನ್ನಾಗಿ ಆಯ್ಕೆ ಮಾಡಿಕೊಂಡಿದ್ದು, ಸುಮಾರು ₹ 40 ಕೋಟಿ ನೆರವು ನೀಡಲಾಗುತ್ತಿದೆ ಎಂದು ಹೇಳಿದರು.

Intro:ಬೆಂಗಳೂರು : ಸಾಮೂಹಿಕ ಕೃಷಿ ಪದ್ಧತಿ ಜಾರಿಗೆ ತರಲು ಉದ್ದೇಶಿಸಿದ್ದು, ಇದಕ್ಕಾಗಿ ಹೊಸ ಕಾಯಿದೆ ರೂಪಿಸಲಾಗುವುದು ಎಂದು ಕೃಷಿ ಸಚಿವ ಎನ್.ಎಚ್. ಶಿವಶಂಕರ್ ರೆಡ್ಡಿ ತಿಳಿಸಿದ್ದಾರೆ.Body:ಕೃಷಿ ಆಯುಕ್ತರ ಕಚೇರಿಯಲ್ಲಿ ಇಂದು ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಹೊಸ ಕಾಯಿದೆ ಜಾರಿಗೆ ತರುವ ಸಂಬಂಧ ಸಂಪುಟ ಉಪ ಸಮಿತಿಯಲ್ಲಿ ಅದರ ಸಾಧಕ ಭಾದಕಗಳನ್ನು ಚರ್ಚಿಸಲಾಗುವುದು. ನಂತರ ಮುಂದಿನ ಅಧಿವೇಶನದಲ್ಲಿ ಈ ಹೊಸ ಕಾಯಿದೆ ಜಾರಿಗೆ ತರಲಾಗುವುದು ಎಂದು ಹೇಳಿದರು.
ರೈತರಿಗೆ ಭದ್ರತೆ ಸೇರಿದಂತೆ ಅನುಕೂಲವಾಗುವ ರೀತಿಯಲ್ಲಿ ಕಾಯಿದೆ ರೂಪಿಸಲಾಗುವುದು ಎಂದರು.
ಇಸ್ರೇಲ್ ಕೃಷಿ ಪದ್ಧತಿಯನ್ನು ನಾಲ್ಕು ಜಿಲ್ಲೆಗಳಲ್ಲಿ ಶೀಘ್ರದಲ್ಲೇ ಪ್ರಾಯೋಗಿಕವಾಗಿ ಜಾರಿಗೊಳಿಸಲಾಗುವುದು. ಕೋಲಾರ, ಚಿತ್ರದುರ್ಗ, ಕೊಪ್ಪಳ ಹಾಗೂ ಗದಗ ಜಿಲ್ಲೆಗಳಲ್ಲಿ ಮೊದಲ ಹಂತದಲ್ಲಿ ತಲಾ 5000 ಹೆಕ್ಟೇಕ್ ಖುಷ್ಕಿ ಜಮೀನಿನಲ್ಲಿ ನೀರಾವರಿ ಸೌಲಭ್ಯ ಒದಗಿಸಲು ಅನುದಾನ ಬಳಕೆ ಮಾಡಲಾಗುವುದು. ಇದರ ಅನುಷ್ಠಾನಕ್ಕೆ 145.92 ಕೋಟಿ ರೂ. ಒದಗಿಸಿಕೊಳ್ಳಲಾಗಿದೆ ಎಂದು ಹೇಳಿದರು.
ಇಸ್ರೇಲ್ ಕೃಷಿ ಪದ್ಧತಿಗೆ ಬಜೆಟ್‍ನಲ್ಲಿ ಸಾಕಷ್ಟು ಹಣನಿಗದಿ ಮಾಡಲಾಗಿದೆ. ಇದಕ್ಕೆ ತಕ್ಕಂತೆ ಗುತ್ತಿಗೆ ಕೃಷಿಪದ್ಧತಿಯನ್ನು ರೂಪಿಸಲಾಗುವುದು, ಅಗತ್ಯವಾದಕಾನೂನುಗಳನ್ನು ತಿದ್ದುಪಡಿ ಮಾಡಲಾಗುವುದುಎಂದರು.
ಇಸ್ರೇಲ್ ಪದ್ಧತಿಯಲ್ಲಿ ಸಾಮೂಹಿಕ ಕೃಷಿ ಪದ್ಧತಿಗೆಹೆಚ್ಚಿನ ಒತ್ತು ನೀಡಲಾಗುತ್ತದೆ. ಆದರೆ ಯಾರಮೇಲೂ ಬಲವಂತವಾಗಿ ಒತ್ತಡ ಹಾಕುವುದಿಲ್ಲ.ರೈತರಿಗೆ ಆಸಕ್ತಿ ಇದ್ದರೆ ಬಳಸಿಕೊಳ್ಳಬಹುದು.ವೈಯಕ್ತಿಕ ಸಬ್ಸಿಡಿಗಿಂತಲೂ ಸಾಮೂಹಿಕಕೃಷಿಯಲ್ಲಿ ಹೆಚ್ಚಿನ ಆರ್ಥಿಕ ನೆರವು ಸಿಗಲಿದೆ. ಹನಿನೀರಾವರಿ ಬಳಕೆ, ವಿಮೆ ಸೇರಿದಂತೆ ಹಲವಾರುಸೌಲಭ್ಯಗಳು ಗುಂಪು ಕೃಷಿ ಮಾಡುವವರಿಗೆ ಹೆಚ್ಚಿನನೆರವು ನೀಡಲಿದೆ.  ರಾಜ್ಯ ಸರ್ಕಾರ ಸಬ್ಸಿಡಿ ಕೃಷಿಯಂತ್ರೋಪಕರಣ ಯೋಜನೆಯನ್ನುಮುಂದುವರೆಸಿದ್ದು, ಇದಕ್ಕಾಗಿ 441 ಕೋಟಿರೂ.ಗಳನ್ನು ಕಾಯ್ದಿರಿಸಿದೆ.
ಕೃಷಿ ಹೊಂಡಕ್ಕೆ 250 ಕೋಟಿ, ಮಣ್ಣು ಆರೋಗ್ಯಕಾರ್ಡ್ 3ನೇ ಹಂತದ ಯೋಜನೆಯಲ್ಲಿ 15 ಕೋಟಿಖರ್ಚು ಮಾಡಲಾಗುತ್ತಿದ್ದು, ಸುಮಾರು 75 ಲಕ್ಷರೈತರಿಗೆ ಮಣ್ಣು ಆರೋಗ್ಯ ಕಾರ್ಡ್ಮಾಡಿಕೊಡುವ ಗುರಿ ಇದೆ ಎಂದರು.
ಅದೇ ರೀತಿ ಶೂನ್ಯ ಬಂಡವಾಳ ನೈಸರ್ಗಿಕ ಕೃಷಿ ಯೋಜನೆ ಜಾರಿಗೆ ತರಲಾಗುತ್ತಿದ್ದು, ಸುಮಾರು 20 ಸಾವಿರ ಹೆಕ್ಟೇರ್ ನಲ್ಲಿ 10 ವಲಯಗಳನ್ನಾಗಿ ಆಯ್ಕೆ ಮಾಡಲಾಗಿಎ. ಇದಕ್ಕೆ ಸುಮಾರು 40 ಕೋಟಿ ರೂ. ನೆರವು ನೀಡಲಾಗುತ್ತಿದೆ. ಈ ಪದ್ಧತಿಯಿಂದ ರೈತರಿಗೆ ಅನುಕೂಲವಾಗಲಿದೆ ಎಂದು ವಿವರಿಸಿದರು.
ಮುಂಗಾರು ಮಳೆ ಹಿನ್ನಡೆಯಿಂದಾಗಿ ಈ ಬಾರಿಬಿತ್ತನೆ ಕಾರ್ಯ ಚುರುಕಾಗಿ ನಡೆದಿಲ್ಲ ಎಂದುಆತಂಕ ವ್ಯಕ್ತಪಡಿಸಿದ ಸಚಿವರು, ಇದವರೆಗೂ ಶೇ.8ರಷ್ಟು ಮಾತ್ರ ಬಿತ್ತನೆಯಾಗಿದೆ. ಶೇ.33ರಷ್ಟು ಮಳೆಕೊರತೆ ಇದೆ. ಮುಂದಿನ ದಿನಗಳಲ್ಲಿ ಹೆಚ್ಚುಮಳೆಯಾಗುವ ನಿರೀಕ್ಷೆಗಳಿವೆ ಎಂದು ಹೇಳಿದರು.
ಈ ವರ್ಷ ಮುಂಗಾರು ಹಂಗಾಮಿಗೆ 6.29 ಲಕ್ಷ ಕ್ವಿಂಟಾಲ್ ಬಿತ್ತನೆ ಬೀಜಗಳ ಬೇಡಿಕೆ ಇದ್ದು, 10.82 ಲಕ್ಷ ಕ್ವಿಂಟಾಲ್ ಲಭ್ಯತೆ ಇದೆ. ಇದುವರೆಗೂ 36,065 ಕ್ವಿಂಟಾಳ್ ಬಿತ್ತನೆ ಬೀಜಗಳನ್ನು ವಿತರಣೆ ಮಾಡಲಾಗಿದ್ದು, ಉಳಿದ 10.46 ಲಕ್ಷ ಕ್ವಿಂಟಾಲ್ ನ್ನು ದಾಸ್ತಾನು ಮಾಡಲಾಗಿದೆ. ಇನ್ನೂ ರಸಗೊಬ್ಬರವೂ ಕೊರತೆ ಇಲ್ಲದಂತೆ ನೋಡಿಕೊಳ್ಳಲಾಗಿದೆ. ಈ ವರ್ಷ 22.45 ಲಕ್ಷ ಮೆಟ್ರಿಕ್ ಟನ್ ಗಳಷ್ಟು ರಸಗೊಬ್ಬರ ಬೇಡಿಕೆ ಇದ್ದು, ಜೂನ್ ಅಂತ್ಯದವರಗೆ 6.38 ಲಕ್ಷ ಮೆಟ್ರಿಕ್ ಟನ್ ಗಳಷ್ಟು ಸರಬರಾಜು ಆಗಿದೆ. ಸುಮಾರು 7.94 ಲಕ್ಷ ಮೆಟ್ರಿಕ್ ಟನ್ ದಾಸ್ತಾನು ಮಾಡಲಾಗಿದೆ ಎಂದು ವಿವರಿಸಿದರು.
2019-20 ಸಾಲಿನಲ್ಲಿ ಹೊಸ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ರೈತ ಸಿರಿ, ಕರಾವಳಿ ಪ್ಯಾಕೇಜ್, ಸಾವಯವ ಉತ್ಪನ್ನಗಳ ಮಾರುಕಟ್ಟೆ ಬಲವರ್ಧನೆ ಮತ್ತು ಮೌಲ್ಯ ವರ್ಧನೆಗೆ ಪ್ರೋತ್ಸಾಹ ನೀಡಲಾಗುತ್ತಿದೆ ಎಂದು ಹೇಳಿದರು.
ಈ ವೇಳೆ ಕೃಷಿ ಆಯುಕ್ತ ಬ್ರಿಜೇಶ್ ಕುಮಾರ್ ದೀಕ್ಷಿತ್, ಹೆಚ್ಚುವರಿ ನಿರ್ದೇಶಕ ಶಿವರಾಜ್, ನಿರ್ದೇಶಕ ಬಿ.ವೈ. ಶ್ರೀನಿವಾಸ್ ಮತ್ತಿತರರು ಉಪಸ್ಥಿತರಿದ್ದರು.Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.