ETV Bharat / state

ಕೊರೊನಾ ಕಾಲದಲ್ಲೂ ಮಾದಪ್ಪನಿಗೆ ಹರಿದು ಬಂತು ಕಾಣಿಕೆ.. 47 ದಿನದಲ್ಲಿ 2.33 ಕೋಟಿ ರೂ. ಸಂಗ್ರಹ

author img

By

Published : Jul 23, 2021, 9:49 AM IST

ಮಲೆಮಹದೇಶ್ವರ ಬೆಟ್ಟದಲ್ಲಿ ಗುರುವಾರ ಹುಂಡಿ‌ ಹಣ ಎಣಿಕೆ ಕಾರ್ಯ ನಡೆಯಿತು. 47 ದಿನಗಳಲ್ಲಿ 2,33,57,28 ಕೋಟಿ ರೂ. ಹುಂಡಿಯಲ್ಲಿ ಭಕ್ತರು 155 ಗ್ರಾಂ ಚಿನ್ನ, 2.2 ಕೆಜಿ ಬೆಳ್ಳಿಯನ್ನು ದೇವರಿಗೆ ಅರ್ಪಿಸಿದ್ದಾರೆ.

2,33,57,28 crore rupees collected in malemahadeshwara temple
ಮಾದಪ್ಪನ ದೇವಸ್ಥಾನದಲ್ಲಿ 2.33 ಕೋಟಿ ರೂ. ಸಂಗ್ರಹ

ಚಾಮರಾಜನಗರ: ರಾಜ್ಯದ ಪ್ರಮುಖ ದೇಗುಲಗಳಲ್ಲಿ ಒಂದಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಗುರುವಾರ ಹುಂಡಿ‌ ಹಣ ಎಣಿಕೆ ಕಾರ್ಯ ನಡೆದಿದ್ದು, ಬರೋಬ್ಬರಿ 2.33 ಕೋಟಿ ರೂ. ಸಂಗ್ರಹವಾಗಿದೆ.

2,33,57,28 crore rupees collected in malemahadeshwara temple
47 ದಿನದಲ್ಲಿ 2.33 ಕೋಟಿ ರೂ. ಸಂಗ್ರಹ

ಕೇವಲ 47 ದಿನಗಳಲ್ಲಿ 2,33,57,28 ಕೋಟಿ ರೂ. ಸಂಗ್ರಹವಾಗಿದೆ ಎಂದು ಹೇಳಬಹುದು. ಭಕ್ತಾದಿಗಳು ಮಾದಪ್ಪನಿಗೆ ಹಣದ ರೂಪದಲ್ಲಿ ಭಕ್ತಿಯ ಹೊಳೆಯನ್ನೇ ಹರಿಸಿದ್ದು, ಹುಂಡಿಯಲ್ಲಿ 155 ಗ್ರಾಂ ಚಿನ್ನ, 2.2 ಕೆಜಿ ಬೆಳ್ಳಿಯನ್ನು ದೇವರಿಗೆ ಅರ್ಪಿಸಿದ್ದಾರೆ. 122 ದಿನಗಳ ಬಳಿಕ ಹುಂಡಿ ಹಣ ಎಣಿಕೆ ಕಾರ್ಯ ನಡೆದಿದೆ. ಇದರಲ್ಲಿ ಕೊರೊನಾ ಲಾಕ್​ಡೌನ್​​ ಪರಿಣಾಮ 75 ದಿನಗಳ ಕಾಲ ದೇವಾಲಯ ಬಂದ್ ಮಾಡಲಾಗಿತ್ತು ಎಂಬುದು ವಿಶೇಷ.

ಇಂದಿನಿಂದ ದಾಸೋಹ:

ಮಲೆಮಹದೇಶ್ವರ ಬೆಟ್ಟದಲ್ಲಿ ಸ್ಥಗಿತಗೊಂಡಿದ್ದ ದಾಸೋಹ ವ್ಯವಸ್ಥೆ ಇಂದಿನಿಂದ ಪ್ರಾರಂಭವಾಗಲಿದೆ. ಆದರೆ, ಲಾಡು ವಿತರಣೆ, ವಿಶೇಷ ಸೇವೆಗಳು, ಮುಡಿ ಸೇವೆಗಳಿಗೆ ನಿರ್ಬಂಧ ಹೇರಲಾಗಿದೆ.

ಚಾಮರಾಜನಗರ: ರಾಜ್ಯದ ಪ್ರಮುಖ ದೇಗುಲಗಳಲ್ಲಿ ಒಂದಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಗುರುವಾರ ಹುಂಡಿ‌ ಹಣ ಎಣಿಕೆ ಕಾರ್ಯ ನಡೆದಿದ್ದು, ಬರೋಬ್ಬರಿ 2.33 ಕೋಟಿ ರೂ. ಸಂಗ್ರಹವಾಗಿದೆ.

2,33,57,28 crore rupees collected in malemahadeshwara temple
47 ದಿನದಲ್ಲಿ 2.33 ಕೋಟಿ ರೂ. ಸಂಗ್ರಹ

ಕೇವಲ 47 ದಿನಗಳಲ್ಲಿ 2,33,57,28 ಕೋಟಿ ರೂ. ಸಂಗ್ರಹವಾಗಿದೆ ಎಂದು ಹೇಳಬಹುದು. ಭಕ್ತಾದಿಗಳು ಮಾದಪ್ಪನಿಗೆ ಹಣದ ರೂಪದಲ್ಲಿ ಭಕ್ತಿಯ ಹೊಳೆಯನ್ನೇ ಹರಿಸಿದ್ದು, ಹುಂಡಿಯಲ್ಲಿ 155 ಗ್ರಾಂ ಚಿನ್ನ, 2.2 ಕೆಜಿ ಬೆಳ್ಳಿಯನ್ನು ದೇವರಿಗೆ ಅರ್ಪಿಸಿದ್ದಾರೆ. 122 ದಿನಗಳ ಬಳಿಕ ಹುಂಡಿ ಹಣ ಎಣಿಕೆ ಕಾರ್ಯ ನಡೆದಿದೆ. ಇದರಲ್ಲಿ ಕೊರೊನಾ ಲಾಕ್​ಡೌನ್​​ ಪರಿಣಾಮ 75 ದಿನಗಳ ಕಾಲ ದೇವಾಲಯ ಬಂದ್ ಮಾಡಲಾಗಿತ್ತು ಎಂಬುದು ವಿಶೇಷ.

ಇಂದಿನಿಂದ ದಾಸೋಹ:

ಮಲೆಮಹದೇಶ್ವರ ಬೆಟ್ಟದಲ್ಲಿ ಸ್ಥಗಿತಗೊಂಡಿದ್ದ ದಾಸೋಹ ವ್ಯವಸ್ಥೆ ಇಂದಿನಿಂದ ಪ್ರಾರಂಭವಾಗಲಿದೆ. ಆದರೆ, ಲಾಡು ವಿತರಣೆ, ವಿಶೇಷ ಸೇವೆಗಳು, ಮುಡಿ ಸೇವೆಗಳಿಗೆ ನಿರ್ಬಂಧ ಹೇರಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.