ETV Bharat / state

ಚಾಮರಾಜನಗರ ದಸರಾಗೆ 36 ಲಕ್ಷ ರೂ. ಬಿಡುಗಡೆ - Dasara latest news

ಈ ಬಾರಿ ಜಿಲ್ಲೆಯ ದಸರಾಗೆ ಸಿಎಂ 36 ಲಕ್ಷ ರೂ. ಬಿಡುಗಡೆ ಮಾಡಲು ಆದೇಶಿಸಿದ್ದಾರೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

Chamarajanagara
Chamarajanagara
author img

By

Published : Oct 16, 2020, 7:50 PM IST

ಚಾಮರಾಜನಗರ: ಜಿಲ್ಲಾ ದಸರಾ ಆಚರಣೆಗೆ 36 ಲಕ್ಷ ರೂ. ಬಿಡುಗಡೆ ಮಾಡಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆದೇಶಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಅನುದಾನ ಬಿಡುಗಡೆಯಾಗದೆ ಸಿದ್ಧತೆಗೆ ತೊಂದರೆಯಾಗಿದೆ. ತಕ್ಷಣವೇ ಅನುದಾನ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕೆಂದು ಸಚಿವರು ಸಿಎಂಗೆ ಪತ್ರ ಬರೆದಿದ್ದರು. ಮನವಿಗೆ ಸ್ಪಂದಿಸಿ ಅನುದಾನ ಬಿಡುಗಡೆಗೆ ಸಿಎಂ ಆದೇಶಿಸಿದ್ದಾರೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ಇನ್ನು 17 ರಿಂದ 20ರವರೆಗೆ ಪ್ರತಿದಿನ ಸಂಜೆ 7 ರಿಂದ 8 ರವರೆಗೆ ಚಾಮರಾಜೇಶ್ವರ ದೇವಾಲಯದ ಒಳ ಆವರಣದಲ್ಲಿ ವಿವಿಧ ಗಾಯನ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ.

ಕಾರ್ಯಕ್ರಮಗಳ ವಿವರ :

17ರಂದು ಸುರೇಶ್‍ನಾಗ್ ಮತ್ತು ತಂಡದಿಂದ ಭಕ್ತಿ ಸಂಗೀತ,

18ರಂದು ಎಸ್.ಬಿ.ನಾಗರಾಜು ಮತ್ತು ತಂಡದವರಿಂದ ಜನಪದ ಗಾಯನ,

19ರಂದು ದೊಡ್ಡಗವಿಬಸಪ್ಪ, ಕೈಲಾಸ ಮೂರ್ತಿ ಮತ್ತು ತಂಡದವರಿಂದ ನೀಲಗಾರರ ಪದ, ತಂಬೂರಿ ಪದ,

20ರಂದು ಲತಾ ಪುಟ್ಟಸ್ವಾಮಿ ಮತ್ತು ತಂಡದವರಿಂದ ಸುಗಮ ಸಂಗೀತ ಕಾರ್ಯಕ್ರಮ ನಡೆಯಲಿದೆ.

ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಾಮಾಜಿಕ ಜಾಲತಾಲಗಳ ಮೂಲಕ ಪ್ರಸಾರ ಮಾಡಲಾಗುತ್ತಿದೆ.‌

ಚಾಮರಾಜನಗರ: ಜಿಲ್ಲಾ ದಸರಾ ಆಚರಣೆಗೆ 36 ಲಕ್ಷ ರೂ. ಬಿಡುಗಡೆ ಮಾಡಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆದೇಶಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಅನುದಾನ ಬಿಡುಗಡೆಯಾಗದೆ ಸಿದ್ಧತೆಗೆ ತೊಂದರೆಯಾಗಿದೆ. ತಕ್ಷಣವೇ ಅನುದಾನ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕೆಂದು ಸಚಿವರು ಸಿಎಂಗೆ ಪತ್ರ ಬರೆದಿದ್ದರು. ಮನವಿಗೆ ಸ್ಪಂದಿಸಿ ಅನುದಾನ ಬಿಡುಗಡೆಗೆ ಸಿಎಂ ಆದೇಶಿಸಿದ್ದಾರೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ಇನ್ನು 17 ರಿಂದ 20ರವರೆಗೆ ಪ್ರತಿದಿನ ಸಂಜೆ 7 ರಿಂದ 8 ರವರೆಗೆ ಚಾಮರಾಜೇಶ್ವರ ದೇವಾಲಯದ ಒಳ ಆವರಣದಲ್ಲಿ ವಿವಿಧ ಗಾಯನ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ.

ಕಾರ್ಯಕ್ರಮಗಳ ವಿವರ :

17ರಂದು ಸುರೇಶ್‍ನಾಗ್ ಮತ್ತು ತಂಡದಿಂದ ಭಕ್ತಿ ಸಂಗೀತ,

18ರಂದು ಎಸ್.ಬಿ.ನಾಗರಾಜು ಮತ್ತು ತಂಡದವರಿಂದ ಜನಪದ ಗಾಯನ,

19ರಂದು ದೊಡ್ಡಗವಿಬಸಪ್ಪ, ಕೈಲಾಸ ಮೂರ್ತಿ ಮತ್ತು ತಂಡದವರಿಂದ ನೀಲಗಾರರ ಪದ, ತಂಬೂರಿ ಪದ,

20ರಂದು ಲತಾ ಪುಟ್ಟಸ್ವಾಮಿ ಮತ್ತು ತಂಡದವರಿಂದ ಸುಗಮ ಸಂಗೀತ ಕಾರ್ಯಕ್ರಮ ನಡೆಯಲಿದೆ.

ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಾಮಾಜಿಕ ಜಾಲತಾಲಗಳ ಮೂಲಕ ಪ್ರಸಾರ ಮಾಡಲಾಗುತ್ತಿದೆ.‌

ETV Bharat Logo

Copyright © 2025 Ushodaya Enterprises Pvt. Ltd., All Rights Reserved.