ಚಾಮರಾಜನಗರ: ಕೊರೊನಾ ಎರಡನೇ ಅಲೆಯ ಅಬ್ಬರ ಜಿಲ್ಲೆಯಲ್ಲಿ ಹೆಚ್ಚಾಗುತ್ತಿದೆ. ನಿನ್ನೆ 377 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 2,130ಕ್ಕೆ ಏರಿಕೆಯಾಗಿದೆ.
ನಿನ್ನೆ 215 ಮಂದಿ ಗುಣಮುಖರಾಗಿದ್ದಾರೆ. 45 ಮಂದಿ ಐಸಿಯುನಲ್ಲಿದ್ದಾರೆ. 1,532 ಮಂದಿ ಹೋಂ ಐಸೋಲೇಷನ್ನಲ್ಲಿದ್ದಾರೆ. 4,901 ಮಂದಿ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಮೇಲೆ ಆರೋಗ್ಯ ಇಲಾಖೆ ನಿಗಾ ಇಟ್ಟಿದೆ.
ಕೊರೊನಾ ಸೋಂಕಿತರ ಸಾವಿನ ಸರಣಿ ಮುಂದುವರೆದಿದ್ದು 7 ಮಂದಿ ಮೃತಪಟ್ಟರು. ಇಲ್ಲಿಯವರೆಗಿನ ಒಟ್ಟಾರೆ ಸಾವಿನ ಸಂಖ್ಯೆ 138.
ಇದನ್ನೂ ಓದಿ: ಮಕ್ಕಳ ಭವಿಷ್ಯಕ್ಕೆ ಬೆಳಕಾದ ಗುರು.. ವಿದ್ಯಾರ್ಥಿಗಳ ಹೆಸರಲ್ಲಿ ಬ್ಯಾಂಕ್ ಠೇವಣಿ ತೆರೆದ ಶಿಕ್ಷಕಿ