ETV Bharat / state

ಚಾಮರಾಜನಗರ: ನಾಲ್ಕು ಪ್ರತ್ಯೇಕ ರಸ್ತೆ ಅಪಘಾತ, ಓರ್ವ ಸಾವು, 7 ಜನರಿಗೆ ಗಾಯ

ಚಾಮರಾಜನಗರ ಜಿಲ್ಲೆಯ ನಾಲ್ಕು ಕಡೆಗಳಲ್ಲಿ ಪ್ರತ್ಯೇಕ ರಸ್ತೆ ಅಪಘಾತಗಳು ವರದಿಯಾಗಿವೆ.

author img

By

Published : Jul 4, 2022, 12:44 PM IST

chamrajnagar accident
ಚಾಮರಾಜನಗರ ನಾಲ್ಕು ಪ್ರತ್ಯೇಕ ರಸ್ತೆ ಅಪಘಾತ

ಚಾಮರಾಜನಗರ: ಜಿಲ್ಲೆಯಲ್ಲಿ ಸಂಭವಿಸಿದ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, 7 ಜನರು ಗಾಯಗೊಂಡಿದ್ದಾರೆ.

ಅಪಘಾತ 1: ಗುಂಡ್ಲುಪೇಟೆ ತಾಲೂಕಿನ ಬೇಗೂರು ಸಮೀಪದ ಗರಗನಹಳ್ಳಿ ಗೇಟ್​ ಬಳಿ ಕೇರಳ ಮೂಲದ ಕಾರು ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ. ಕಾರಿನಲ್ಲಿದ್ದ ಇಬ್ಬರು ಗಾಯಗೊಂಡಿದ್ದಾರೆ. ಸಾಕುನಾಯಿ ಸಾವಿಗೀಡಾಗಿದೆ. ದ್ವಿಚಕ್ರ ವಾಹನದಲ್ಲಿದ್ದ ಅದ್ವೈತ್ ಹಾಗೂ ಅಲೆಕ್ಸ್ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಅದ್ವೈತ್ ಎಂಬಾತನ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತ 2: ಪ್ರಯಾಣಿಕರನ್ನು ಹೊತ್ತು ಗುಂಡ್ಲುಪೇಟೆಗೆ ತೆರಳುತ್ತಿದ್ದ ಬಸ್​ ಮತ್ತು ಟಾಟಾ ಏಸ್ ನಡುವೆ ಅಪಘಾತ ನಡೆದಿದೆ. ಎರಡು ವಾಹನಗಳು ಜಖಂಗೊಂಡಿವೆ. ಯಾವುದೇ ಪ್ರಾಣಹಾನಿ ಸಂಭವಿಸಿದ ವರದಿಯಾಗಿಲ್ಲ.

ಅಪಘಾತ 3: ಬೇಗೂರು ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಕಾಲೇಜು ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಟೆಂಪೋ ಟ್ರಾವೆಲರ್​ ಮತ್ತು ಭತ್ತದ ಲಾರಿ ನಡುವೆ ಅಪಘಾತ ಉಂಟಾಗಿದೆ. ದುರ್ಘಟನೆಯಲ್ಲಿ ಮುರಳಿ ಮತ್ತು ವಿದ್ಯಾ ಎಂಬುವವರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತ 4: ಪಿಕಪ್ ವಾಹನವೊಂದು ಬೈಕಿಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಾಮರಾಜನಗರ ತಾಲೂಕಿನ ಸಿದ್ದಯ್ಯನಪುರ ಕ್ರಾಸ್‌ ಬಳಿ ನಡೆದಿದೆ. ಮೃತ ವ್ಯಕ್ತಿ ಆರ್​ಟಿಒ ಕಚೇರಿಯಲ್ಲಿ ಹೋಂ ಗಾರ್ಡ್​ ಆಗಿ ಕೆಲಸ ಮಾಡುತ್ತಿದ್ದರು. ಚಾಮರಾಜನಗರ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ಹಿಮಾಚಲ ಪ್ರದೇಶದಲ್ಲಿ ಕಣಿವೆಗೆ ಬಿದ್ದ ಬಸ್‌; ಶಾಲಾ ಮಕ್ಕಳು ಸೇರಿ 16 ಜನ ಸಾವು

ಚಾಮರಾಜನಗರ: ಜಿಲ್ಲೆಯಲ್ಲಿ ಸಂಭವಿಸಿದ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, 7 ಜನರು ಗಾಯಗೊಂಡಿದ್ದಾರೆ.

ಅಪಘಾತ 1: ಗುಂಡ್ಲುಪೇಟೆ ತಾಲೂಕಿನ ಬೇಗೂರು ಸಮೀಪದ ಗರಗನಹಳ್ಳಿ ಗೇಟ್​ ಬಳಿ ಕೇರಳ ಮೂಲದ ಕಾರು ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ. ಕಾರಿನಲ್ಲಿದ್ದ ಇಬ್ಬರು ಗಾಯಗೊಂಡಿದ್ದಾರೆ. ಸಾಕುನಾಯಿ ಸಾವಿಗೀಡಾಗಿದೆ. ದ್ವಿಚಕ್ರ ವಾಹನದಲ್ಲಿದ್ದ ಅದ್ವೈತ್ ಹಾಗೂ ಅಲೆಕ್ಸ್ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಅದ್ವೈತ್ ಎಂಬಾತನ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತ 2: ಪ್ರಯಾಣಿಕರನ್ನು ಹೊತ್ತು ಗುಂಡ್ಲುಪೇಟೆಗೆ ತೆರಳುತ್ತಿದ್ದ ಬಸ್​ ಮತ್ತು ಟಾಟಾ ಏಸ್ ನಡುವೆ ಅಪಘಾತ ನಡೆದಿದೆ. ಎರಡು ವಾಹನಗಳು ಜಖಂಗೊಂಡಿವೆ. ಯಾವುದೇ ಪ್ರಾಣಹಾನಿ ಸಂಭವಿಸಿದ ವರದಿಯಾಗಿಲ್ಲ.

ಅಪಘಾತ 3: ಬೇಗೂರು ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಕಾಲೇಜು ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಟೆಂಪೋ ಟ್ರಾವೆಲರ್​ ಮತ್ತು ಭತ್ತದ ಲಾರಿ ನಡುವೆ ಅಪಘಾತ ಉಂಟಾಗಿದೆ. ದುರ್ಘಟನೆಯಲ್ಲಿ ಮುರಳಿ ಮತ್ತು ವಿದ್ಯಾ ಎಂಬುವವರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತ 4: ಪಿಕಪ್ ವಾಹನವೊಂದು ಬೈಕಿಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಾಮರಾಜನಗರ ತಾಲೂಕಿನ ಸಿದ್ದಯ್ಯನಪುರ ಕ್ರಾಸ್‌ ಬಳಿ ನಡೆದಿದೆ. ಮೃತ ವ್ಯಕ್ತಿ ಆರ್​ಟಿಒ ಕಚೇರಿಯಲ್ಲಿ ಹೋಂ ಗಾರ್ಡ್​ ಆಗಿ ಕೆಲಸ ಮಾಡುತ್ತಿದ್ದರು. ಚಾಮರಾಜನಗರ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ಹಿಮಾಚಲ ಪ್ರದೇಶದಲ್ಲಿ ಕಣಿವೆಗೆ ಬಿದ್ದ ಬಸ್‌; ಶಾಲಾ ಮಕ್ಕಳು ಸೇರಿ 16 ಜನ ಸಾವು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.