ಚಾಮರಾಜನಗರ: ಅಂತರರಾಜ್ಯ ಗಡಿದಾಟದೆ ಎರಡೂ ರಾಜ್ಯಗಳ ಗಡಿಯಲ್ಲೇ ಜೋಡಿಯೊಂದು ಮದುವೆಯಾದ ಘಟನೆ ತಮಿಳುನಾಡಿನ ಪುಣಜನೂರು ಚೆಕ್ಪೋಸ್ಟ್ನಲ್ಲಿ ನಡೆದಿದೆ.
ಅಂತರ್ ರಾಜ್ಯ ಪ್ರವೇಶಕ್ಕೆ ನಿರ್ಬಂಧ ಇರುವುದರಿಂದ ರಾಜ್ಯದ ಕೊಡಗು ಜಿಲ್ಲೆಯ ಗೋಣಿಕೊಪ್ಪದ ಹೊಂಬಾಳಯ್ಯ, ತ್ರಿವೇಣಿ ದಂಪತಿ ಪುತ್ರಿ ಯಶಸ್ಮಿತ ಹಾಗೂ ತಮಿಳುನಾಡಿನ ಮೆಟ್ಟುಪಾಳ್ಯಂ ನಿವಾಸಿ ಶಕ್ತಿವೇಲು-ಲತಾ ದಂಪತಿ ಪುತ್ರ ಸತೀಶ್ ಕುಮಾರ್ ಗಡಿ ದಾಟದೆ, ಪುಣಜನೂರು ಚೆಕ್ಪೋಸ್ಟ್ನ ಗಣೇಶ ಗುಡಿಯಲ್ಲೇ ವಿವಾಹವಾಗಿದ್ದಾರೆ.
ವಿವಾಹವಾದ ಬಳಿಕ ವಧು-ವರರು ತಮ್ಮ-ತಮ್ಮ ಊರಿಗೆ ಮರಳಿದ್ದಾರೆ. ಈ ಮದುವೆಗೆ ಚೆಕ್ಪೋಸ್ಟ್ನಲ್ಲಿ ಕರ್ತವ್ಯದಲ್ಲಿದ್ದ ಸಿಬ್ಬಂದಿ ಸಾಕ್ಷಿಯಾದರು.