ಚಾಮರಾಜನಗರ: ಕೇರಳದ ಪ್ರವಾಸಿಗರ ಕಾರೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಗಂಡ-ಹೆಂಡತಿ ಇಬ್ಬರೂ ಮೃತಪಟ್ಟಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಗರಗನಹಳ್ಳಿ ಗೇಟ್ ಬಳಿ ನಡೆದಿದೆ.
ಗುಂಡ್ಲುಪೇಟೆ ತಾಲೂಕಿನ ರಾಘವಪುರ ಗ್ರಾಮದ ಪಾಪಣ್ಣ(55) ಹಾಗೂ ಪತ್ನಿ ಪುಟ್ಟಸಿದ್ದಮ್ಮ ಮೃತ ದುರ್ದೈವಿಗಳು. ಗ್ರಾಮದಿಂದ ಗುಂಡ್ಲುಪೇಟೆಗೆ ತೆರಳುವಾಗ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದ್ದು, ಸ್ಥಳದಲ್ಲೇ ಪಾಪಣ್ಣ ಮೃತಪಟ್ಟಿದ್ದಾರೆ ಹಾಗೂ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗಮಧ್ಯದಲ್ಲಿ ಪತ್ನಿ ಪುಟ್ಟಸಿದ್ದಮ್ಮ ಅಸುನೀಗಿದ್ದಾರೆ.
ಘಟನೆ ನಡೆಯುತ್ತಿದ್ದಂತೆ ಚಾಲಕ ಪರಾರಿಯಾಗಿದ್ದು, ಬೇಗೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.