ETV Bharat / state

ಜಿಂಕೆಯನ್ನು ಬೇಟೆಯಾಡಿದ್ದ ಆರೋಪಿ ಬಂಧನ: ನಾಡ ಬಂದೂಕು​ ವಶಕ್ಕೆ - ಆರೋಪಿ ಮಹೇಶ್

ಗುಂಡ್ಲುಪೇಟೆ ಬಫರ್ ಝೋನ್ ವ್ಯಾಪ್ತಿಯ ಪಾರ್ವತಿ ಬೆಟ್ಟದಲ್ಲಿ ಜಿಂಕೆಯನ್ನು ಬೇಟೆಯಾಡಿದ್ದ ಆರೋಪಿಯನ್ನು ಅಧಿಕಾರಿಗಳು ಬಂಧಿಸಿದ್ದಾರೆ.

ಜಿಂಕೆಯನ್ನು ಬೇಟೆಯಾಡಿದ್ದ ಆರೋಪಿ ಬಂಧನ
ಜಿಂಕೆಯನ್ನು ಬೇಟೆಯಾಡಿದ್ದ ಆರೋಪಿ ಬಂಧನ
author img

By

Published : May 27, 2020, 1:28 PM IST

Updated : May 27, 2020, 1:35 PM IST

ಚಾಮರಾಜನಗರ (ಗುಂಡ್ಲುಪೇಟೆ): ಅರಣ್ಯ ಇಲಾಖೆಯ ಬಫರ್ ಝೋನ್ ವ್ಯಾಪ್ತಿಯ ಪಾರ್ವತಿ ಬೆಟ್ಟದಲ್ಲಿ ಜಿಂಕೆಯನ್ನು ಬೇಟೆಯಾಡಿದ್ದ ಆರೋಪಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿ ನ್ಯಾಯಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಆರೋಪಿ ಮಹೇಶ್​ ಆಲಿಯಾಸ್ ಮುತ್ತಪ್ಪಿಯನ್ನು ಅರಣ್ಯಾಧಿಕಾರಿ ಡಾ. ಲೋಕೇಶ್ ಮತ್ತು ತಂಡ ಸೋಮವಾರ ಬಂಧಿಸಿದೆ. ಏಪ್ರಿಲ್​ 28ರಂದು ಜಿಂಕೆಯನ್ನು ಬೇಟೆಯಾಡುವ ಸಂದರ್ಭದಲ್ಲಿ ದಾಳಿ ಮಾಡಿದ್ದರು. ಆದರೆ ಆ ವೇಳೆ ತಪ್ಪಿಸಿಕೊಂಡಿದ್ದ ಖದೀಮನನ್ನು ಖಚಿತ ಮಾಹಿತಿ ಮೇರೆಗೆ ಅಣ್ಣೂರು ಕೇರಿಯಲ್ಲಿ ಬಂಧಿಸಿದ್ದಾರೆ. ಬಳಿಕ ಆತನ ಬಳಿ ಇದ್ದ ನಾಡ ಬಂದೂಕನ್ನು ವಶಪಡಿಸಿಕೊಂಡಿದ್ದಾರೆ. ಎಸ್​ಟಿಪಿಎಫ್​ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಚಾಮರಾಜನಗರ (ಗುಂಡ್ಲುಪೇಟೆ): ಅರಣ್ಯ ಇಲಾಖೆಯ ಬಫರ್ ಝೋನ್ ವ್ಯಾಪ್ತಿಯ ಪಾರ್ವತಿ ಬೆಟ್ಟದಲ್ಲಿ ಜಿಂಕೆಯನ್ನು ಬೇಟೆಯಾಡಿದ್ದ ಆರೋಪಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿ ನ್ಯಾಯಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಆರೋಪಿ ಮಹೇಶ್​ ಆಲಿಯಾಸ್ ಮುತ್ತಪ್ಪಿಯನ್ನು ಅರಣ್ಯಾಧಿಕಾರಿ ಡಾ. ಲೋಕೇಶ್ ಮತ್ತು ತಂಡ ಸೋಮವಾರ ಬಂಧಿಸಿದೆ. ಏಪ್ರಿಲ್​ 28ರಂದು ಜಿಂಕೆಯನ್ನು ಬೇಟೆಯಾಡುವ ಸಂದರ್ಭದಲ್ಲಿ ದಾಳಿ ಮಾಡಿದ್ದರು. ಆದರೆ ಆ ವೇಳೆ ತಪ್ಪಿಸಿಕೊಂಡಿದ್ದ ಖದೀಮನನ್ನು ಖಚಿತ ಮಾಹಿತಿ ಮೇರೆಗೆ ಅಣ್ಣೂರು ಕೇರಿಯಲ್ಲಿ ಬಂಧಿಸಿದ್ದಾರೆ. ಬಳಿಕ ಆತನ ಬಳಿ ಇದ್ದ ನಾಡ ಬಂದೂಕನ್ನು ವಶಪಡಿಸಿಕೊಂಡಿದ್ದಾರೆ. ಎಸ್​ಟಿಪಿಎಫ್​ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Last Updated : May 27, 2020, 1:35 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.