ETV Bharat / state

ಲಸಿಕೆ ಹಾಕಿಸಿಕೊಳ್ಳಿ ಅಂದ್ರೆ ಆತ್ಮಹತ್ಯೆ ಮಾಡ್ಕೊತೀವಿ ಅಂತಾರೆ ಸರ್: ಆಶಾ ಕಾರ್ಯಕರ್ತೆಯ ಅಳಲು..! - Asha activist problem in chamarajanagara

ಗುಂಡ್ಲುಪೇಟೆ ತಾಲೂಕಿನ ಬಾಚಹಳ್ಳಿ ಗ್ರಾಮದಲ್ಲಿ ಸಚಿವ ಸುರೇಶ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಕೊರೊನಾ ಟಾಸ್ಕ್ ಫೋರ್ಸ್ ಸಭೆಯಲ್ಲಿ ಆಶಾ ಕಾರ್ಯಕರ್ತೆಯೊಬ್ಬರು ಮಾತನಾಡಿ, ಲಸಿಕೆ ಹಾಕಿಸಿಕೊಳ್ಳಿ ಎಂದು ಬಲವಂತ ಮಾಡಿದರೆ ನಿಮಗೇನೋ ಇದರಲ್ಲಿ ಪ್ರಾಫಿಟ್ ಇರಬೇಕು ಅದಕ್ಕೆ ಬಲವಂತ ಮಾಡ್ತೀರಿ ಎಂದು ಕೆಲವರು ಹೇಳುತ್ತಾರೆ. ಇನ್ನೂ ಕೆಲವರು ಹೆಚ್ಚು ಒತ್ತಡ ಹೇರಿದರೆ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ ಹಾಕುತ್ತಾರೆ ಎಂದು ಅಳಲು ತೋಡಿಕೊಂಡಿದ್ದಾರೆ.

asha-activist
ಆಶಾ ಕಾರ್ಯಕರ್ತೆ
author img

By

Published : Jun 8, 2021, 7:48 PM IST

ಚಾಮರಾಜನಗರ: ಲಸಿಕೆ ಹಾಕಿಸಿಕೊಳ್ಳಿ ಅಂದರೆ ಕಾಡಿಗೆ ಓಡುವ ಗಿರಿಜನರು, ಮಚ್ಚು ತೋರಿಸುವ ವಿಶೇಷ ಚೇತನರ ನಂತರ ಇದೀಗ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ಆಶಾಕಾರ್ಯಕರ್ತೆಯರಿಗೆ ಬೆದರಿಕೆ ಹಾಕುತ್ತಿದ್ದಾರಂತೆ.

ಆಶಾ ಕಾರ್ಯಕರ್ತೆ ಮಾತನಾಡಿದ್ದಾರೆ

ಇಂದು ಗುಂಡ್ಲುಪೇಟೆ ತಾಲೂಕಿನ ಬಾಚಹಳ್ಳಿ ಗ್ರಾಮದಲ್ಲಿ ಸಚಿವ ಸುರೇಶ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಕೊರೊನಾ ಟಾಸ್ಕ್ ಫೋರ್ಸ್ ಸಭೆಯಲ್ಲಿ ಆಶಾ ಕಾರ್ಯಕರ್ತೆಯೊಬ್ಬರು ಮಾತನಾಡಿ, ಲಸಿಕೆ ಹಾಕಿಸಿಕೊಳ್ಳಿ ಎಂದು ಬಲವಂತ ಮಾಡಿದರೆ ನಿಮಗೇನೋ ಇದರಲ್ಲಿ ಪ್ರಾಫಿಟ್ ಇರಬೇಕು ಅದಕ್ಕೆ ಬಲವಂತ ಮಾಡ್ತೀರಿ ಎಂದು ಕೆಲವರು ಹೇಳುತ್ತಾರೆ. ಇನ್ನೂ ಕೆಲವರು ಹೆಚ್ಚು ಒತ್ತಡ ಹೇರಿದರೆ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ ಹಾಕುತ್ತಾರೆ. ಮತ್ತಿತ್ತರರು ಲಸಿಕೆಯಿಂದ ಅಡ್ಡ ಪರಿಣಾಮ ಉಂಟಾದರೆ ಜವಾಬ್ದಾರಿ ಹೊರುತ್ತೇವೆ ಎಂದು ಬಾಂಡ್ ಪೇಪರ್​ನಲ್ಲಿ ಬರೆದುಕೊಡಿ ಎನ್ನುತ್ತಾರೆಂದು ಅಳಲು ತೋಡಿಕೊಂಡರು.

ಮತ್ತೋರ್ವ ಆಶಾ ಕಾರ್ಯಕರ್ತೆ ಮಾತನಾಡಿ, ಲಸಿಕೆ ಅಭಿಯಾನದಲ್ಲಿ ಗ್ರಾಪಂ ಅಧ್ಯಕ್ಷರು, ಸದಸ್ಯರು ಬಂದರೆ ಜನರ ಮನವೊಲಿಸಬಹುದು. ಮುಖ್ಯವಾಗಿ ಗ್ರಾಪಂ ಸದಸ್ಯರು ಲಸಿಕೆ ಹಾಕಿಸಿಕೊಳ್ಳಬೇಕೆಂದು ಅಭಿಪ್ರಾಯಪಟ್ಟರು.

ಓದಿ: ಉದಾಸಿ ಕಳೆದುಕೊಂಡು ತಬ್ಬಲಿಯಾಗಿದ್ದೇವೆ: ರಾಜಕೀಯ ಗಣ್ಯರ ಸಂತಾಪ

ಚಾಮರಾಜನಗರ: ಲಸಿಕೆ ಹಾಕಿಸಿಕೊಳ್ಳಿ ಅಂದರೆ ಕಾಡಿಗೆ ಓಡುವ ಗಿರಿಜನರು, ಮಚ್ಚು ತೋರಿಸುವ ವಿಶೇಷ ಚೇತನರ ನಂತರ ಇದೀಗ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ಆಶಾಕಾರ್ಯಕರ್ತೆಯರಿಗೆ ಬೆದರಿಕೆ ಹಾಕುತ್ತಿದ್ದಾರಂತೆ.

ಆಶಾ ಕಾರ್ಯಕರ್ತೆ ಮಾತನಾಡಿದ್ದಾರೆ

ಇಂದು ಗುಂಡ್ಲುಪೇಟೆ ತಾಲೂಕಿನ ಬಾಚಹಳ್ಳಿ ಗ್ರಾಮದಲ್ಲಿ ಸಚಿವ ಸುರೇಶ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಕೊರೊನಾ ಟಾಸ್ಕ್ ಫೋರ್ಸ್ ಸಭೆಯಲ್ಲಿ ಆಶಾ ಕಾರ್ಯಕರ್ತೆಯೊಬ್ಬರು ಮಾತನಾಡಿ, ಲಸಿಕೆ ಹಾಕಿಸಿಕೊಳ್ಳಿ ಎಂದು ಬಲವಂತ ಮಾಡಿದರೆ ನಿಮಗೇನೋ ಇದರಲ್ಲಿ ಪ್ರಾಫಿಟ್ ಇರಬೇಕು ಅದಕ್ಕೆ ಬಲವಂತ ಮಾಡ್ತೀರಿ ಎಂದು ಕೆಲವರು ಹೇಳುತ್ತಾರೆ. ಇನ್ನೂ ಕೆಲವರು ಹೆಚ್ಚು ಒತ್ತಡ ಹೇರಿದರೆ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ ಹಾಕುತ್ತಾರೆ. ಮತ್ತಿತ್ತರರು ಲಸಿಕೆಯಿಂದ ಅಡ್ಡ ಪರಿಣಾಮ ಉಂಟಾದರೆ ಜವಾಬ್ದಾರಿ ಹೊರುತ್ತೇವೆ ಎಂದು ಬಾಂಡ್ ಪೇಪರ್​ನಲ್ಲಿ ಬರೆದುಕೊಡಿ ಎನ್ನುತ್ತಾರೆಂದು ಅಳಲು ತೋಡಿಕೊಂಡರು.

ಮತ್ತೋರ್ವ ಆಶಾ ಕಾರ್ಯಕರ್ತೆ ಮಾತನಾಡಿ, ಲಸಿಕೆ ಅಭಿಯಾನದಲ್ಲಿ ಗ್ರಾಪಂ ಅಧ್ಯಕ್ಷರು, ಸದಸ್ಯರು ಬಂದರೆ ಜನರ ಮನವೊಲಿಸಬಹುದು. ಮುಖ್ಯವಾಗಿ ಗ್ರಾಪಂ ಸದಸ್ಯರು ಲಸಿಕೆ ಹಾಕಿಸಿಕೊಳ್ಳಬೇಕೆಂದು ಅಭಿಪ್ರಾಯಪಟ್ಟರು.

ಓದಿ: ಉದಾಸಿ ಕಳೆದುಕೊಂಡು ತಬ್ಬಲಿಯಾಗಿದ್ದೇವೆ: ರಾಜಕೀಯ ಗಣ್ಯರ ಸಂತಾಪ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.