ETV Bharat / state

ಆಸ್ಪತ್ರೆಗೆ ಬಂದಿದ್ದ ಕೊರೊನಾ ಶಂಕಿತೆ: ಮುನ್ನೆಚ್ಚರಿಕೆಯಿಂದ ಚಾಮರಾಜನಗರದ ಬಸವರಾಜೇಂದ್ರ ಆಸ್ಪತ್ರೆ ಬಂದ್..!

author img

By

Published : Jun 21, 2020, 10:33 PM IST

ಶಂಕಿತ ಮಹಿಳೆಯೋರ್ವಳು ನಗರದ ಬಸವರಾಜೇಂದ್ರ ಆಸ್ಪತ್ರೆಗೆ ಬಂದಿದ್ದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಆಸ್ಪತ್ರೆಯನ್ನು ಬಂದ್ ಮಾಡಿ ಔಷಧ ಸಿಂಪಡಿಸಿ ಪುನಃ ಆರಂಭಿಸಲಾಗಿದೆ.

Chamarajanagara
Chamarajanagara

ಚಾಮರಾಜನಗರ: ಕೊರೊನಾ ಶಂಕಿತ ಮಹಿಳೆಯೋರ್ವಳು ನಗರದ ಬಸವರಾಜೇಂದ್ರ ಆಸ್ಪತ್ರೆಗೆ ಬಂದಿದ್ದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಆಸ್ಪತ್ರೆಯನ್ನು ಬಂದ್ ಮಾಡಲಾಗಿದೆ ಎಂದು ಆಡಳಿತ ಮಂಡಳಿ ಮೂಲಗಳು ತಿಳಿಸಿವೆ‌.

ಕೆಮ್ಮಿನಿಂದ ಬಳಲುತ್ತಿದ್ದ ನಗರದ ಮಹಿಳೆಯೋರ್ವಳು ಇಂದು ಆಸ್ಪತ್ರೆಗೆ ಬಂದಿದ್ದ ವೇಳೆ ಆಕೆಗೆ ಉಸಿರಾಟದ ಸಮಸ್ಯೆ ಇರುವುದು ಗೊತ್ತಾಗಿದೆ. ಕೂಡಲೇ ಜಿಲ್ಲಾಸ್ಪತ್ರೆಗೆ ಮಾಹಿತಿ ನೀಡಿ ಆಸ್ಪತ್ರೆಯನ್ನು ಬಂದ್ ಮಾಡಲಾಗಿದೆ. ಆಸ್ಪತ್ರೆಗೆ ಸಂಪೂರ್ಣ ಸೋಂಕು ನಿವಾರಕ ದ್ರಾವಣ ಸಿಂಪಡಿಸಿದ ಬಳಿಕ ಆಸ್ಪತ್ರೆ ತೆರೆಯಲಾಗುವುದು ಎಂದು ತಿಳಿದು ಬಂದಿದೆ.

ಇನ್ನು ಏಕಾಏಕಿ ಆಸ್ಪತ್ರೆಯನ್ನು ಬಂದ್ ಮಾಡಿದ್ದರಿಂದ ಸ್ಥಳೀಯರಲ್ಲಿ ಕೊರೊನಾ ಆತಂಕ ಮನೆ ಮಾಡಿತ್ತು. ಬಳಿಕ ಆಸ್ಪತ್ರೆ ಸಿಬ್ಬಂದಿ ಜನರಿಗೆ ಮಾಹಿತಿ ನೀಡಿದ್ದರಿಂದ ವಾತಾವರಣ ತಿಳಿಯಾಯಿತು.

ಚಾಮರಾಜನಗರ: ಕೊರೊನಾ ಶಂಕಿತ ಮಹಿಳೆಯೋರ್ವಳು ನಗರದ ಬಸವರಾಜೇಂದ್ರ ಆಸ್ಪತ್ರೆಗೆ ಬಂದಿದ್ದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಆಸ್ಪತ್ರೆಯನ್ನು ಬಂದ್ ಮಾಡಲಾಗಿದೆ ಎಂದು ಆಡಳಿತ ಮಂಡಳಿ ಮೂಲಗಳು ತಿಳಿಸಿವೆ‌.

ಕೆಮ್ಮಿನಿಂದ ಬಳಲುತ್ತಿದ್ದ ನಗರದ ಮಹಿಳೆಯೋರ್ವಳು ಇಂದು ಆಸ್ಪತ್ರೆಗೆ ಬಂದಿದ್ದ ವೇಳೆ ಆಕೆಗೆ ಉಸಿರಾಟದ ಸಮಸ್ಯೆ ಇರುವುದು ಗೊತ್ತಾಗಿದೆ. ಕೂಡಲೇ ಜಿಲ್ಲಾಸ್ಪತ್ರೆಗೆ ಮಾಹಿತಿ ನೀಡಿ ಆಸ್ಪತ್ರೆಯನ್ನು ಬಂದ್ ಮಾಡಲಾಗಿದೆ. ಆಸ್ಪತ್ರೆಗೆ ಸಂಪೂರ್ಣ ಸೋಂಕು ನಿವಾರಕ ದ್ರಾವಣ ಸಿಂಪಡಿಸಿದ ಬಳಿಕ ಆಸ್ಪತ್ರೆ ತೆರೆಯಲಾಗುವುದು ಎಂದು ತಿಳಿದು ಬಂದಿದೆ.

ಇನ್ನು ಏಕಾಏಕಿ ಆಸ್ಪತ್ರೆಯನ್ನು ಬಂದ್ ಮಾಡಿದ್ದರಿಂದ ಸ್ಥಳೀಯರಲ್ಲಿ ಕೊರೊನಾ ಆತಂಕ ಮನೆ ಮಾಡಿತ್ತು. ಬಳಿಕ ಆಸ್ಪತ್ರೆ ಸಿಬ್ಬಂದಿ ಜನರಿಗೆ ಮಾಹಿತಿ ನೀಡಿದ್ದರಿಂದ ವಾತಾವರಣ ತಿಳಿಯಾಯಿತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.