ETV Bharat / state

ಕಸ, ಕಸದ ಬುಟ್ಟಿಗೆ ಸೇರಿದೆ: ಶಾಸಕ ಮಹೇಶ್ ಬಿಜೆಪಿ ಸೇರ್ಪಡೆಗೆ ಬಿಎಸ್​ಪಿ ಟಾಂಗ್..!

author img

By

Published : Aug 3, 2021, 4:24 PM IST

ಬಿಜೆಪಿ ಪಕ್ಷ ಸೇರುತ್ತಿರುವ ಶಾಸಕ ಎನ್​. ಮಹೇಶ್​ ನಡೆಗೆ ಬಿಎಸ್​​ಪಿ ಪಕ್ಷದಲ್ಲಿ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಕಸ, ಕಸದ ಬುಟ್ಟಿಗೆ ಸೇರುತ್ತಿದೆ ಎಂದು ಹೇಳುವ ಮೂಲಕ ಎನ್.ಮಹೇಶ್ ಅವರ ನಡೆಗೆ ಬಹುಜನ ಸಮಾಜವಾದಿ ಪಕ್ಷ ವಿರೋಧ ವ್ಯಕ್ತಪಡಿಸಿದೆ.

bsp-opposes-for-mla-n-mahesh-joining-bjp
ಶಾಸಕ ಮಹೇಶ್ ಬಿಜೆಪಿ ಸೇರ್ಪಡೆ

ಚಾಮರಾಜನಗರ: ಕೊಳ್ಳೇಗಾಲ ಶಾಸಕ ಎನ್​. ಮಹೇಶ್​​ ಬಿಜೆಪಿ ಸೇರ್ಪಡೆ ವಿಚಾರವಾಗಿ ಬಹುಜನ ಸಮಾಜವಾದಿ ಪಕ್ಷದಲ್ಲಿ ಪರ ವಿರೋಧ ಅಭಿಪ್ರಾಯಗಳು ಕೇಳಿ ಬರುತ್ತಿವೆ. ಇದರ ಬೆನ್ನಲ್ಲೆ ಕಸ, ಕಸದ ಬುಟ್ಟಿಗೆ ಸೇರುತ್ತಿದೆ ಹೇಳುವ ಮೂಲಕ ಎನ್.ಮಹೇಶ್ ಅವರ ನಡೆಯನ್ನು ಬಿಎಸ್​ಪಿ ರಾಜ್ಯಾಧ್ಯಕ್ಷ ಕೃಷ್ಣಮೂರ್ತಿ ಕಟುವಾಗಿ ಟೀಕಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪಕ್ಷದಿಂದ ಯಾರೇ ಹೊರ ಹೋದರೂ ಕಸ, ಕಸದ ಬುಟ್ಟಿಗೆ ಸೇರಿದೆ ಎಂಬ ಕಾನ್ಷಿರಾಂ ಅವರ ವಾಕ್ಯವನ್ನು ಮಹೇಶ್​ ಅವರು ಉದ್ಧರಿಸುತ್ತಿದ್ದರು, ಈಗ ಅವರೇ ಆ ವಾಕ್ಯಕ್ಕೆ ಉದಾಹರಣೆಯಾಗಿ ನಿಂತಿರುವುದು ದೊಡ್ಡ ದುರಂತ ಎಂದು ವ್ಯಂಗ್ಯವಾಡಿದರು.

ಶಾಸಕ ಮಹೇಶ್ ಬಿಜೆಪಿ ಸೇರ್ಪಡೆಗೆ ಬಿಎಸ್​ಪಿ ಟಾಂಗ್

ತಾಪಂ ಸದಸ್ಯರೊಬ್ಬರು ಕಾಂಗ್ರೆಸ್​ಗೆ ಪಕ್ಷಾಂತರಗೊಂಡಿದ್ದ ವೇಳೆ ಆತನಿಗೆ ಇದೇ ಎನ್.ಮಹೇಶ್ ಅವರು ಸವಾಲು ಹಾಕಿ ರಾಜೀನಾಮೆ ಕೊಟ್ಟು ಸೇರಿಕೊಂಡ ಪಕ್ಷದಡಿ ಚುನಾವಣೆ ಎದುರಿಸಲಿ ಎಂದು ಹೇಳಿದ್ದರು. ಈಗ ಅವರೇ ಈ ಚಾಲೆಂಜ್ ಸ್ವೀಕರಿಸಬೇಕು, ರಾಜೀನಾಮೆ ಕೊಟ್ಟು ಬಿಜೆಪಿಯಿಂದ ಗೆಲ್ಲಲಿ ಎಂದು ಸವಾಲು​​ ಹಾಕಿದರು.

ಮಹೇಶ್ ಪಕ್ಷ ಬದಲಾವಣೆಯಿಂದ ಬಿಎಸ್​ಪಿ ಶಕ್ತಿ ಕುಂದುವುದಿಲ್ಲ. ಅವರಿಲ್ಲದಿದ್ದಾಗಲೇ ಗ್ರಾಪಂ ಚುನಾವಣೆಯಲ್ಲಿ ಹೆಚ್ಚು ಮಂದಿ ಗೆದ್ದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತಿಗತವಾದ ಟೀಕೆ ಮಾಡುತ್ತಿರುವವರು ನಮ್ಮ ಪಕ್ಷದ ಕಾರ್ಯಕರ್ತರಲ್ಲ. ಕಳೆದ ವರ್ಷವೇ ವ್ಯಕ್ತಿಗತ ಟೀಕೆ ಮಾಡಬಾರದೆಂದು ಕಾರ್ಯಕರ್ತರಿಗೆ ಸೂಚಿಸಿದ್ದೇನೆ ಎಂದು ತಿಳಿಸಿದರು.

ಬಿಜೆಪಿಯಲ್ಲಾದರೂ ಪಕ್ಷ ನಿಷ್ಠೆ ತೋರಿಸಲಿ: ಎನ್‌. ಮಹೇಶ್ ಅವರು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಪಕ್ಷ ನಿಷ್ಠೆ, ಹೈ ಕಮಾಂಡ್ ಆದೇಶ ಪಾಲನೆಯನ್ನು ನೋಡಿ ಕಲಿಯಲಿ. ಅವರು ಹೈ ಕಮಾಂಡ್ ಸೂಚನೆ ಪಾಲಿಸಿದ್ದರೇ ಪಕ್ಷ ಬಿಡುವ ಅಗತ್ಯವೇ ಇರಲಿಲ್ಲ. ಮಠಾಧೀಶರು, ಇಡೀ ಸಮುದಾಯ ಅವರ ಬೆಂಬಲಕ್ಕೆ ನಿಂತರು ಬಿಎಸ್​ವೈ ರಾಜೀನಾಮೆ ಕೊಟ್ಟರು. ಈ ಪಕ್ಷ ನಿಷ್ಟೆಯನ್ನು ಮಹೇಶ್ ಅವರು ಬಿಜೆಪಿಯಲ್ಲಾದರೂ ತೋರಿಸಲಿ ಎಂದು ವ್ಯಂಗ್ಯವಾಡಿದರು.

ಚಾಮರಾಜನಗರ: ಕೊಳ್ಳೇಗಾಲ ಶಾಸಕ ಎನ್​. ಮಹೇಶ್​​ ಬಿಜೆಪಿ ಸೇರ್ಪಡೆ ವಿಚಾರವಾಗಿ ಬಹುಜನ ಸಮಾಜವಾದಿ ಪಕ್ಷದಲ್ಲಿ ಪರ ವಿರೋಧ ಅಭಿಪ್ರಾಯಗಳು ಕೇಳಿ ಬರುತ್ತಿವೆ. ಇದರ ಬೆನ್ನಲ್ಲೆ ಕಸ, ಕಸದ ಬುಟ್ಟಿಗೆ ಸೇರುತ್ತಿದೆ ಹೇಳುವ ಮೂಲಕ ಎನ್.ಮಹೇಶ್ ಅವರ ನಡೆಯನ್ನು ಬಿಎಸ್​ಪಿ ರಾಜ್ಯಾಧ್ಯಕ್ಷ ಕೃಷ್ಣಮೂರ್ತಿ ಕಟುವಾಗಿ ಟೀಕಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪಕ್ಷದಿಂದ ಯಾರೇ ಹೊರ ಹೋದರೂ ಕಸ, ಕಸದ ಬುಟ್ಟಿಗೆ ಸೇರಿದೆ ಎಂಬ ಕಾನ್ಷಿರಾಂ ಅವರ ವಾಕ್ಯವನ್ನು ಮಹೇಶ್​ ಅವರು ಉದ್ಧರಿಸುತ್ತಿದ್ದರು, ಈಗ ಅವರೇ ಆ ವಾಕ್ಯಕ್ಕೆ ಉದಾಹರಣೆಯಾಗಿ ನಿಂತಿರುವುದು ದೊಡ್ಡ ದುರಂತ ಎಂದು ವ್ಯಂಗ್ಯವಾಡಿದರು.

ಶಾಸಕ ಮಹೇಶ್ ಬಿಜೆಪಿ ಸೇರ್ಪಡೆಗೆ ಬಿಎಸ್​ಪಿ ಟಾಂಗ್

ತಾಪಂ ಸದಸ್ಯರೊಬ್ಬರು ಕಾಂಗ್ರೆಸ್​ಗೆ ಪಕ್ಷಾಂತರಗೊಂಡಿದ್ದ ವೇಳೆ ಆತನಿಗೆ ಇದೇ ಎನ್.ಮಹೇಶ್ ಅವರು ಸವಾಲು ಹಾಕಿ ರಾಜೀನಾಮೆ ಕೊಟ್ಟು ಸೇರಿಕೊಂಡ ಪಕ್ಷದಡಿ ಚುನಾವಣೆ ಎದುರಿಸಲಿ ಎಂದು ಹೇಳಿದ್ದರು. ಈಗ ಅವರೇ ಈ ಚಾಲೆಂಜ್ ಸ್ವೀಕರಿಸಬೇಕು, ರಾಜೀನಾಮೆ ಕೊಟ್ಟು ಬಿಜೆಪಿಯಿಂದ ಗೆಲ್ಲಲಿ ಎಂದು ಸವಾಲು​​ ಹಾಕಿದರು.

ಮಹೇಶ್ ಪಕ್ಷ ಬದಲಾವಣೆಯಿಂದ ಬಿಎಸ್​ಪಿ ಶಕ್ತಿ ಕುಂದುವುದಿಲ್ಲ. ಅವರಿಲ್ಲದಿದ್ದಾಗಲೇ ಗ್ರಾಪಂ ಚುನಾವಣೆಯಲ್ಲಿ ಹೆಚ್ಚು ಮಂದಿ ಗೆದ್ದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತಿಗತವಾದ ಟೀಕೆ ಮಾಡುತ್ತಿರುವವರು ನಮ್ಮ ಪಕ್ಷದ ಕಾರ್ಯಕರ್ತರಲ್ಲ. ಕಳೆದ ವರ್ಷವೇ ವ್ಯಕ್ತಿಗತ ಟೀಕೆ ಮಾಡಬಾರದೆಂದು ಕಾರ್ಯಕರ್ತರಿಗೆ ಸೂಚಿಸಿದ್ದೇನೆ ಎಂದು ತಿಳಿಸಿದರು.

ಬಿಜೆಪಿಯಲ್ಲಾದರೂ ಪಕ್ಷ ನಿಷ್ಠೆ ತೋರಿಸಲಿ: ಎನ್‌. ಮಹೇಶ್ ಅವರು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಪಕ್ಷ ನಿಷ್ಠೆ, ಹೈ ಕಮಾಂಡ್ ಆದೇಶ ಪಾಲನೆಯನ್ನು ನೋಡಿ ಕಲಿಯಲಿ. ಅವರು ಹೈ ಕಮಾಂಡ್ ಸೂಚನೆ ಪಾಲಿಸಿದ್ದರೇ ಪಕ್ಷ ಬಿಡುವ ಅಗತ್ಯವೇ ಇರಲಿಲ್ಲ. ಮಠಾಧೀಶರು, ಇಡೀ ಸಮುದಾಯ ಅವರ ಬೆಂಬಲಕ್ಕೆ ನಿಂತರು ಬಿಎಸ್​ವೈ ರಾಜೀನಾಮೆ ಕೊಟ್ಟರು. ಈ ಪಕ್ಷ ನಿಷ್ಟೆಯನ್ನು ಮಹೇಶ್ ಅವರು ಬಿಜೆಪಿಯಲ್ಲಾದರೂ ತೋರಿಸಲಿ ಎಂದು ವ್ಯಂಗ್ಯವಾಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.