ETV Bharat / state

ಚಾಮರಾಜನಗರ: ಅಂಧ ವ್ಯಕ್ತಿಯ ಮೇಲೆ ಕಾಡಾನೆ ದಾಳಿ.. ಕೈಕಾಲು ಮುರಿತ

author img

By

Published : Dec 25, 2022, 10:32 PM IST

Updated : Dec 25, 2022, 10:40 PM IST

ಅಂಧನ ಮೇಲೆ ಕಾಡಾನೆ ಅಟ್ಟಹಾಸ- ಕೈ ಕಾಲು ಮುರಿತ- ಸಮಯ ಪ್ರಜ್ಞೆ ಮೆರೆದ ಅರಣ್ಯ ಇಲಾಖೆ ಸಿಬ್ಬಂದಿ- ಜಿಲ್ಲಾಸ್ಪತ್ರೆಯಲ್ಲಿ ವ್ಯಕ್ತಿ ಚಿಕಿತ್ಸೆ

chamarajanagar-elephant-attack-on-a-blind-man
ಚಾಮರಾಜನಗರ: ಅಂಧವ್ಯಕ್ತಿಯ ಮೇಲೆ ಕಾಡಾನೆ ದಾಳಿ

ಚಾಮರಾಜನಗರ: ಅಂಧ ವ್ಯಕ್ತಿಯೋರ್ವನ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಹನೂರು ತಾಲೂಕಿನ ಕತ್ತೆಕಾಲು ಪೋಡಿನಲ್ಲಿ ಭಾನುವಾರ ನಡೆದಿದೆ. ಹನೂರು ತಾಲೂಕಿನ ಹುತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕತ್ತೆಕಾಲುಪೊಡು ಗ್ರಾಮದ ನಿವಾಸಿ ಮಾದೇಶ(45) ಕಾಡಾನೆ ದಾಳಿಗೆ ಒಳಗಾದವರು.

ಅಂಧ ವ್ಯಕ್ತಿಯಾಗಿರುವ ಮಾದೇಶ ಮಧ್ಯಾಹ್ನ ಹೊತ್ತಿಗೆ ಜಮೀನಿನಲ್ಲಿದ್ದಾಗ ಏಕಾಎಕಿ ಕಾಡಾನೆ ದಾಳಿ ಮಾಡಿದೆ. ಪರಿಣಾಮ ಕೈ ಹಾಗೂ ಕಾಲು ಮುರಿದಿದೆ. ಸಂಜೆ ಹೊತ್ತಿಗೆ ದನಗಾಹಿ ಯುವಕರಿಂದ ಆನೆದಾಳಿ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯ, ಅಂಧ ವ್ಯಕ್ತಿಯನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಗಂಭೀರವಾಗಿ ಗಾಯಗೊಂಡಿರುವುದಾಗಿ ತಿಳಿದುಬಂದಿದೆ.

ಆಂಬ್ಯುಲೆನ್ಸ್ ಇಲ್ಲದೇ ಪರದಾಟ: ಪಿ ಜಿ ಪಾಳ್ಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತುರ್ತು ವಾಹನವಿದ್ದರೂ ಖಾಯಂ ಚಾಲಕನನ್ನು ನೇಮಕ ಮಾಡದಿರುವ ಪರಿಣಾಮ ಪದೇಪದೇ ರೋಗಿಗಳು ತೊಂದರೆ ಅನುಭವಿಸಬೇಕಾಗಿದೆ. ಆಸ್ಪತ್ರೆಗೆ ಸೇರಿಸಲು ಸಮಯಕ್ಕೆ ಸರಿಯಾಗಿ ತುರ್ತು ವಾಹನ ಬಾರದ ಹಿನ್ನೆಲೆ ಅರಣ್ಯ ಇಲಾಖೆಯ ಸಿಬ್ಬಂದಿ ಇಲಾಖೆ ವಾಹನವನ್ನು ಕೊಟ್ಟು ಸಮಯ ಪ್ರಜ್ಞೆ ಮೆರೆದಿದ್ದಾರೆ.

ಇದನ್ನೂ ಓದಿ: ಕಾಡಾನೆ ದಾಳಿಗೆ ಚಿಕ್ಕಮಗಳೂರಲ್ಲಿ ರೈತ ಬಲಿ.. ಭೈರನ ಸೆರೆಯಿಂದ ನಿಟ್ಟುಸಿರು ಬಿಟ್ಟ ಜನರಿಗೆ ಮತ್ತೆ ಆತಂಕ

ಚಾಮರಾಜನಗರ: ಅಂಧ ವ್ಯಕ್ತಿಯೋರ್ವನ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಹನೂರು ತಾಲೂಕಿನ ಕತ್ತೆಕಾಲು ಪೋಡಿನಲ್ಲಿ ಭಾನುವಾರ ನಡೆದಿದೆ. ಹನೂರು ತಾಲೂಕಿನ ಹುತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕತ್ತೆಕಾಲುಪೊಡು ಗ್ರಾಮದ ನಿವಾಸಿ ಮಾದೇಶ(45) ಕಾಡಾನೆ ದಾಳಿಗೆ ಒಳಗಾದವರು.

ಅಂಧ ವ್ಯಕ್ತಿಯಾಗಿರುವ ಮಾದೇಶ ಮಧ್ಯಾಹ್ನ ಹೊತ್ತಿಗೆ ಜಮೀನಿನಲ್ಲಿದ್ದಾಗ ಏಕಾಎಕಿ ಕಾಡಾನೆ ದಾಳಿ ಮಾಡಿದೆ. ಪರಿಣಾಮ ಕೈ ಹಾಗೂ ಕಾಲು ಮುರಿದಿದೆ. ಸಂಜೆ ಹೊತ್ತಿಗೆ ದನಗಾಹಿ ಯುವಕರಿಂದ ಆನೆದಾಳಿ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯ, ಅಂಧ ವ್ಯಕ್ತಿಯನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಗಂಭೀರವಾಗಿ ಗಾಯಗೊಂಡಿರುವುದಾಗಿ ತಿಳಿದುಬಂದಿದೆ.

ಆಂಬ್ಯುಲೆನ್ಸ್ ಇಲ್ಲದೇ ಪರದಾಟ: ಪಿ ಜಿ ಪಾಳ್ಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತುರ್ತು ವಾಹನವಿದ್ದರೂ ಖಾಯಂ ಚಾಲಕನನ್ನು ನೇಮಕ ಮಾಡದಿರುವ ಪರಿಣಾಮ ಪದೇಪದೇ ರೋಗಿಗಳು ತೊಂದರೆ ಅನುಭವಿಸಬೇಕಾಗಿದೆ. ಆಸ್ಪತ್ರೆಗೆ ಸೇರಿಸಲು ಸಮಯಕ್ಕೆ ಸರಿಯಾಗಿ ತುರ್ತು ವಾಹನ ಬಾರದ ಹಿನ್ನೆಲೆ ಅರಣ್ಯ ಇಲಾಖೆಯ ಸಿಬ್ಬಂದಿ ಇಲಾಖೆ ವಾಹನವನ್ನು ಕೊಟ್ಟು ಸಮಯ ಪ್ರಜ್ಞೆ ಮೆರೆದಿದ್ದಾರೆ.

ಇದನ್ನೂ ಓದಿ: ಕಾಡಾನೆ ದಾಳಿಗೆ ಚಿಕ್ಕಮಗಳೂರಲ್ಲಿ ರೈತ ಬಲಿ.. ಭೈರನ ಸೆರೆಯಿಂದ ನಿಟ್ಟುಸಿರು ಬಿಟ್ಟ ಜನರಿಗೆ ಮತ್ತೆ ಆತಂಕ

Last Updated : Dec 25, 2022, 10:40 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.