ETV Bharat / state

15 ಶಾಲೆಗಳನ್ನು ದತ್ತು ಪಡೆಯಲಿದೆ ಮಹದೇಶ್ವರನ ಬೆಟ್ಟ ಪ್ರಾಧಿಕಾರ: ಸಿಎಂ ಬಿಎಸ್​​ವೈ

author img

By

Published : Nov 25, 2020, 8:12 PM IST

Updated : Nov 25, 2020, 10:21 PM IST

ಇಂದು ಅಸಮಾಧಾನ ಹೊರಹಾಕಿದ್ದ ಶಾಸಕ ಹರ್ಷವರ್ಧನ್ ಕುರಿತು ವಿ.ಶ್ರೀನಿವಾಸಪ್ರಸಾದ್ ಅವರೊಂದಿಗೆ ಮಾತನಾಡಿದ್ದೇನೆ. ಯಾವುದೇ ಸಮಸ್ಯೆ ಇಲ್ಲ..

cm bs yadiyurappa
ಸಿಎಂ ಬಿಎಸ್​​ವೈ

ಚಾಮರಾಜನಗರ : ಮಲೆಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರವು ಶ್ರೀ ಕ್ಷೇತ್ರ ಸುತ್ತಮುತ್ತಲಿನ 15 ಸರ್ಕಾರಿ ಶಾಲೆಗಳನ್ನು ದತ್ತು ಪಡೆಯಲಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದರು.

ಸಿಎಂ ಬಿಎಸ್​​ವೈ

ಮಲೆಮಹದೇಶ್ವರ ಬೆಟ್ಟದಲ್ಲಿ ಪ್ರಾಧಿಕಾರದ ಸಭೆ ನಡೆಸಿ ಮಾತನಾಡಿದ ಅವರು, ಸರ್ಕಾರಿ ಶಾಲೆಗಳ ಸಮಗ್ರ ಅಭಿವೃದ್ಧಿಗಾಗಿ ಪ್ರಾಧಿಕಾರ ದತ್ತು ತೆಗೆದುಕೊಳ್ಳಲಿದೆ. ಹಣಕ್ಕೆ ಎಷ್ಟೇ ಕಷ್ಟವಾದ್ರೂ ಸರಿಯೇ ಶ್ರೀಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದರು.

ಶಂಕು ಸ್ಥಾಪನೆಯಾಗುತ್ತಿರುವ ಕಾಮಗಾರಿಗಳಿಗೆ ಟೆಂಡರ್ ಆಗಿಲ್ಲದಿರುವ ಕುರಿತು ಪ್ರತಿಕ್ರಿಯಿಸಿ, ಕೂಡಲೇ ಆ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು, ಯಾವುದೇ ಸಮಸ್ಯೆ ಇಲ್ಲ ಎಂದರು‌. ಇದೇ ವೇಳೆ, ಚಾಮರಾಜನಗರಕ್ಕೆ ಯಾವಾಗ ಬೇಕಾದರೂ ಬರುತ್ತೇನೆ ಎಂದು ಉತ್ತರಿಸಿದರು.

ಡೆಲ್ಲಿಗೆ ಪಟ್ಟಿ ರವಾನೆ : ಇದಕ್ಕೂ ಮುನ್ನ ಹೆಲಿಪ್ಯಾಡ್‌ಗೆ ಬಂದಿಳಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡೆಲ್ಲಿ ಹೈಕಮಾಂಡ್‌ಗೆ ಆಕಾಂಕ್ಷಿಗಳ ಪಟ್ಟಿ ರವಾನಿಸಿದ್ದು, ಇನ್ನೆರಡು ದಿನಗಳಲ್ಲಿ ಸಂಪುಟ ವಿಸ್ತರಣೆ ಆಗಲಿದೆ ಎಂದರು.

ಇಂದು ಅಸಮಾಧಾನ ಹೊರಹಾಕಿದ್ದ ಶಾಸಕ ಹರ್ಷವರ್ಧನ್ ಕುರಿತು ವಿ.ಶ್ರೀನಿವಾಸಪ್ರಸಾದ್ ಅವರೊಂದಿಗೆ ಮಾತನಾಡಿದ್ದೇನೆ. ಯಾವುದೇ ಸಮಸ್ಯೆ ಇಲ್ಲ ಎಂದು ಪ್ರಶ್ನೆಯೊಂದಕ್ಕೆ ಸ್ಪಷ್ಣನೆ ನೀಡಿದರು.

ಇದನ್ನೂ ಓದಿ: ಬ್ರಹ್ಮೋಸ್​ಗೆ ಭಾರೀ ಬೇಡಿಕೆ: ರಕ್ಷಣಾತ್ಮಕ ಆವೃತ್ತಿಯನ್ನು ಮಾತ್ರ ಮಾರಾಟಕ್ಕಿಟ್ಟ ಭಾರತ!

ಚಾಮರಾಜನಗರ : ಮಲೆಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರವು ಶ್ರೀ ಕ್ಷೇತ್ರ ಸುತ್ತಮುತ್ತಲಿನ 15 ಸರ್ಕಾರಿ ಶಾಲೆಗಳನ್ನು ದತ್ತು ಪಡೆಯಲಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದರು.

ಸಿಎಂ ಬಿಎಸ್​​ವೈ

ಮಲೆಮಹದೇಶ್ವರ ಬೆಟ್ಟದಲ್ಲಿ ಪ್ರಾಧಿಕಾರದ ಸಭೆ ನಡೆಸಿ ಮಾತನಾಡಿದ ಅವರು, ಸರ್ಕಾರಿ ಶಾಲೆಗಳ ಸಮಗ್ರ ಅಭಿವೃದ್ಧಿಗಾಗಿ ಪ್ರಾಧಿಕಾರ ದತ್ತು ತೆಗೆದುಕೊಳ್ಳಲಿದೆ. ಹಣಕ್ಕೆ ಎಷ್ಟೇ ಕಷ್ಟವಾದ್ರೂ ಸರಿಯೇ ಶ್ರೀಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದರು.

ಶಂಕು ಸ್ಥಾಪನೆಯಾಗುತ್ತಿರುವ ಕಾಮಗಾರಿಗಳಿಗೆ ಟೆಂಡರ್ ಆಗಿಲ್ಲದಿರುವ ಕುರಿತು ಪ್ರತಿಕ್ರಿಯಿಸಿ, ಕೂಡಲೇ ಆ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು, ಯಾವುದೇ ಸಮಸ್ಯೆ ಇಲ್ಲ ಎಂದರು‌. ಇದೇ ವೇಳೆ, ಚಾಮರಾಜನಗರಕ್ಕೆ ಯಾವಾಗ ಬೇಕಾದರೂ ಬರುತ್ತೇನೆ ಎಂದು ಉತ್ತರಿಸಿದರು.

ಡೆಲ್ಲಿಗೆ ಪಟ್ಟಿ ರವಾನೆ : ಇದಕ್ಕೂ ಮುನ್ನ ಹೆಲಿಪ್ಯಾಡ್‌ಗೆ ಬಂದಿಳಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡೆಲ್ಲಿ ಹೈಕಮಾಂಡ್‌ಗೆ ಆಕಾಂಕ್ಷಿಗಳ ಪಟ್ಟಿ ರವಾನಿಸಿದ್ದು, ಇನ್ನೆರಡು ದಿನಗಳಲ್ಲಿ ಸಂಪುಟ ವಿಸ್ತರಣೆ ಆಗಲಿದೆ ಎಂದರು.

ಇಂದು ಅಸಮಾಧಾನ ಹೊರಹಾಕಿದ್ದ ಶಾಸಕ ಹರ್ಷವರ್ಧನ್ ಕುರಿತು ವಿ.ಶ್ರೀನಿವಾಸಪ್ರಸಾದ್ ಅವರೊಂದಿಗೆ ಮಾತನಾಡಿದ್ದೇನೆ. ಯಾವುದೇ ಸಮಸ್ಯೆ ಇಲ್ಲ ಎಂದು ಪ್ರಶ್ನೆಯೊಂದಕ್ಕೆ ಸ್ಪಷ್ಣನೆ ನೀಡಿದರು.

ಇದನ್ನೂ ಓದಿ: ಬ್ರಹ್ಮೋಸ್​ಗೆ ಭಾರೀ ಬೇಡಿಕೆ: ರಕ್ಷಣಾತ್ಮಕ ಆವೃತ್ತಿಯನ್ನು ಮಾತ್ರ ಮಾರಾಟಕ್ಕಿಟ್ಟ ಭಾರತ!

Last Updated : Nov 25, 2020, 10:21 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.