ETV Bharat / state

ಚಾಮರಾಜನಗರ ಜಿಲ್ಲೆಗೆ ಮೊದಲ ಬಾರಿಗೆ ಸಿಎಂ: ವಿಶೇಷ ಅನುದಾನದ ನೀರಿಕ್ಷೆಯಲ್ಲಿ ಜಿಲ್ಲೆಯ ಜನತೆ

author img

By

Published : Nov 25, 2020, 9:47 AM IST

ಇಂದು ಸಂಜೆ ಹೆಲಿಕಾಪ್ಟರ್ ಮೂಲಕ ಸಂಜೆ 4 ಕ್ಕೆ ಮಲೆಮಹದೇಶ್ವರ ಬೆಟ್ಟಕ್ಕೆ ಬರಲಿರುವ ಸಿಎಂ ಮೊದಲು ಮಹದೇಶ್ವರನ ದರ್ಶನ ಪಡೆದು ಬಳಿಕ ಶ್ರೀಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ನಡೆಸಲಿದ್ದಾರೆ.

CM BS Yeddyurappa visits Chamarajanagar district
ಚಾಮರಾಜನಗರ ಜಿಲ್ಲೆಗೆ ಮೊದಲ ಬಾರಿಗೆ ಸಿಎಂ

ಚಾಮರಾಜನಗರ: ಮುಖ್ಯಮಂತ್ರಿ ಆದ ಬಳಿಕ ಮೊದಲ ಬಾರಿಗೆ ಜಿಲ್ಲೆಗೆ ಇಂದು ಬಿ.ಎಸ್.ಯಡಿಯೂರಪ್ಪ ಆಗಮಿಸುತ್ತಿದ್ದು, ಜಿಲ್ಲಾ ಕೇಂದ್ರಕ್ಕೆ ಬಾರದಿದ್ದರೂ ವಿಶೇಷ ಅನುದಾನ ಘೋಷಿಸುವ ನೀರಿಕ್ಷೆಯಲ್ಲಿ ಜನರಿದ್ದಾರೆ.

ಹೌದು ಪ್ರವಾಸೋದ್ಯಮ ಅಭಿವೃದ್ಧಿ, ಕೈಗಾರಿಕೋದ್ಯಮಿಗಳ ಆಕರ್ಷಣೆ, ರೇಷ್ಮೆಗೆ ಉತ್ತೇಜನ, ಕಾಡಂಚಿನ ಜನರಿಗೆ ಮೂಲಸೌಕರ್ಯ ಕಲ್ಪಿಸಲು ವಿಶೇಷ ಯೋಜನೆ ಇಲ್ಲವೇ ಅನುದಾನವನ್ನು ಘೋಷಿಸಲಿದ್ದಾರೆ ಎಂಬ ನಿರೀಕ್ಷೆ ಜನರು ಹೊಂದಿದ್ದು, ಬಿಎಸ್​​ವೈ ಭಾಷಣದತ್ತ ಜಿಲ್ಲೆಯ ಜನರ ಚಿತ್ತ ನೆಟ್ಟಿದೆ‌.

ಜಿಲ್ಲೆಯ ಜನತೆಯ ವಲಸೆ ತಪ್ಪಿಸುವ ಸಲುವಾಗಿ ಬಹು ನಿರೀಕ್ಷೆಯಿಂದ ಆರಂಭಿಸಲಾದ ಚಾಮರಾಜನಗರ ತಾಲೂಕಿನ ಬದನಗುಪ್ಪೆ - ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಬಂಡವಾಳ ಹೂಡಿಕೆ ಮಾಡಲು ಉದ್ಯಮಿಗಳು ಮುಂದೆ ಬಂದಿಲ್ಲ. ಕೈಗಾರಿಕಾ ಪ್ರದೇಶ ಅಭಿವೃದ್ಧಿಯಾದರೂ ಇದುವರೆಗೂ ಈ ಪ್ರದೇಶದಲ್ಲಿ ಕೈಗಾರಿಕೆಗಳು ತಲೆ ಎತ್ತಿಲ್ಲ. ಈಗಾಗಲೇ ಕೈಗಾರಿಕಾ ಪ್ರದೇಶ ಚಾಲನೆ ಸಂದರ್ಭರ್ದಲ್ಲಿ ನಿವೇಶನ ಕೋರಿ ಅರ್ಜಿ ಸಲ್ಲಿಸಿದ್ದವರೂ ಇದೀಗ ಬಂಡವಾಳ ಹೂಡಲು ಹಿಂದೇಟು ಹಾಕುತ್ತಿರುವುದರಿಂದ ಕೈಗಾರಿಕೋದ್ಯಮಿಗಳನ್ನು ಕರೆತರುವ ನಿಟ್ಟಿನಲ್ಲಿ ಯಡಿಯೂರಪ್ಪ ಭರವಸೆಯ ಮಾತುಗಳನ್ನಾಡಲಿದ್ದಾರೆ ಎಂಬ ನಿರೀಕ್ಷೆ ಗರಿಗೆದರಿದೆ.

ಓದಿ:ಸಚಿವಾಕಾಂಕ್ಷಿಗಳ ಒತ್ತಡ ನಿವಾರಣೆಗೆ ನಿಗಮ ಮಂಡಳಿಯಲ್ಲಿ ಕಾಯಕಲ್ಪ; ಫಲ ಕೊಡುತ್ತಾ ಸಿಎಂ ಕಾರ್ಯತಂತ್ರ?!

ಜೊತೆಗೆ, ಜಿಲ್ಲೆಯ ಎಲ್ಲ ಕೆರೆಗಳಿಗೆ ನೀರು ತುಂಬಿಸಬೇಕೆನ್ನುವ ಆಗ್ರಹ ಕೂಡ ಇದ್ದು ರೈತರು ತಮ್ಮ ವಿವಿಧ ಬೇಡಿಕೆಗಳ ಮನವಿ ಸಲ್ಲಿಸಲು ಈಗಾಗಲೇ ಪಾದಯಾತ್ರೆ ಮೂಲಕ ಮಾದಪ್ಪನ ಬೆಟ್ಟ ತಲುಪಿದ್ದಾರೆ.

ಸಿಎಂ ಕಾರ್ಯಕ್ರಮ: ಇಂದು ಸಂಜೆ ಹೆಲಿಕಾಪ್ಟರ್ ಮೂಲಕ ಸಂಜೆ 4ಕ್ಕೆ ಮಲೆಮಹದೇಶ್ವರ ಬೆಟ್ಟಕ್ಕೆ ಬರಲಿರುವ ಸಿಎಂ ಮೊದಲು ಮಹದೇಶ್ವರನ ದರ್ಶನ ಪಡೆದು ಬಳಿಕ ಶ್ರೀಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ನಡೆಸಲಿದ್ದಾರೆ.

ಗುರುವಾರ ಬೆಳಗ್ಗೆ ₹123.74 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ ಹಲವು ಯೋಜನೆಗಳನ್ನು ಅವರು ಉದ್ಘಾಟಿಸಲಿದ್ದು, ಹಲವು ಯೋಜನೆಗಳಿಗೆ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ. ಬಳಿಕ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಸುತ್ತೂರು ಶ್ರೀಗಳು, ಸಾಲೂರು ಮಠದ ಸ್ವಾಮೀಜಿ, ಡಿಸಿಎಂ ಗೋವಿಂದ ಕಾರಜೋಳ, ಮುಜರಾಯಿ ಸಚಿವ ಕೋಟಾ ಶ್ರೀನಿವಾಸಪೂಜಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ಭಾಗಿಯಾಗಲಿದ್ದಾರೆ.

ಚಾಮರಾಜನಗರ: ಮುಖ್ಯಮಂತ್ರಿ ಆದ ಬಳಿಕ ಮೊದಲ ಬಾರಿಗೆ ಜಿಲ್ಲೆಗೆ ಇಂದು ಬಿ.ಎಸ್.ಯಡಿಯೂರಪ್ಪ ಆಗಮಿಸುತ್ತಿದ್ದು, ಜಿಲ್ಲಾ ಕೇಂದ್ರಕ್ಕೆ ಬಾರದಿದ್ದರೂ ವಿಶೇಷ ಅನುದಾನ ಘೋಷಿಸುವ ನೀರಿಕ್ಷೆಯಲ್ಲಿ ಜನರಿದ್ದಾರೆ.

ಹೌದು ಪ್ರವಾಸೋದ್ಯಮ ಅಭಿವೃದ್ಧಿ, ಕೈಗಾರಿಕೋದ್ಯಮಿಗಳ ಆಕರ್ಷಣೆ, ರೇಷ್ಮೆಗೆ ಉತ್ತೇಜನ, ಕಾಡಂಚಿನ ಜನರಿಗೆ ಮೂಲಸೌಕರ್ಯ ಕಲ್ಪಿಸಲು ವಿಶೇಷ ಯೋಜನೆ ಇಲ್ಲವೇ ಅನುದಾನವನ್ನು ಘೋಷಿಸಲಿದ್ದಾರೆ ಎಂಬ ನಿರೀಕ್ಷೆ ಜನರು ಹೊಂದಿದ್ದು, ಬಿಎಸ್​​ವೈ ಭಾಷಣದತ್ತ ಜಿಲ್ಲೆಯ ಜನರ ಚಿತ್ತ ನೆಟ್ಟಿದೆ‌.

ಜಿಲ್ಲೆಯ ಜನತೆಯ ವಲಸೆ ತಪ್ಪಿಸುವ ಸಲುವಾಗಿ ಬಹು ನಿರೀಕ್ಷೆಯಿಂದ ಆರಂಭಿಸಲಾದ ಚಾಮರಾಜನಗರ ತಾಲೂಕಿನ ಬದನಗುಪ್ಪೆ - ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಬಂಡವಾಳ ಹೂಡಿಕೆ ಮಾಡಲು ಉದ್ಯಮಿಗಳು ಮುಂದೆ ಬಂದಿಲ್ಲ. ಕೈಗಾರಿಕಾ ಪ್ರದೇಶ ಅಭಿವೃದ್ಧಿಯಾದರೂ ಇದುವರೆಗೂ ಈ ಪ್ರದೇಶದಲ್ಲಿ ಕೈಗಾರಿಕೆಗಳು ತಲೆ ಎತ್ತಿಲ್ಲ. ಈಗಾಗಲೇ ಕೈಗಾರಿಕಾ ಪ್ರದೇಶ ಚಾಲನೆ ಸಂದರ್ಭರ್ದಲ್ಲಿ ನಿವೇಶನ ಕೋರಿ ಅರ್ಜಿ ಸಲ್ಲಿಸಿದ್ದವರೂ ಇದೀಗ ಬಂಡವಾಳ ಹೂಡಲು ಹಿಂದೇಟು ಹಾಕುತ್ತಿರುವುದರಿಂದ ಕೈಗಾರಿಕೋದ್ಯಮಿಗಳನ್ನು ಕರೆತರುವ ನಿಟ್ಟಿನಲ್ಲಿ ಯಡಿಯೂರಪ್ಪ ಭರವಸೆಯ ಮಾತುಗಳನ್ನಾಡಲಿದ್ದಾರೆ ಎಂಬ ನಿರೀಕ್ಷೆ ಗರಿಗೆದರಿದೆ.

ಓದಿ:ಸಚಿವಾಕಾಂಕ್ಷಿಗಳ ಒತ್ತಡ ನಿವಾರಣೆಗೆ ನಿಗಮ ಮಂಡಳಿಯಲ್ಲಿ ಕಾಯಕಲ್ಪ; ಫಲ ಕೊಡುತ್ತಾ ಸಿಎಂ ಕಾರ್ಯತಂತ್ರ?!

ಜೊತೆಗೆ, ಜಿಲ್ಲೆಯ ಎಲ್ಲ ಕೆರೆಗಳಿಗೆ ನೀರು ತುಂಬಿಸಬೇಕೆನ್ನುವ ಆಗ್ರಹ ಕೂಡ ಇದ್ದು ರೈತರು ತಮ್ಮ ವಿವಿಧ ಬೇಡಿಕೆಗಳ ಮನವಿ ಸಲ್ಲಿಸಲು ಈಗಾಗಲೇ ಪಾದಯಾತ್ರೆ ಮೂಲಕ ಮಾದಪ್ಪನ ಬೆಟ್ಟ ತಲುಪಿದ್ದಾರೆ.

ಸಿಎಂ ಕಾರ್ಯಕ್ರಮ: ಇಂದು ಸಂಜೆ ಹೆಲಿಕಾಪ್ಟರ್ ಮೂಲಕ ಸಂಜೆ 4ಕ್ಕೆ ಮಲೆಮಹದೇಶ್ವರ ಬೆಟ್ಟಕ್ಕೆ ಬರಲಿರುವ ಸಿಎಂ ಮೊದಲು ಮಹದೇಶ್ವರನ ದರ್ಶನ ಪಡೆದು ಬಳಿಕ ಶ್ರೀಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ನಡೆಸಲಿದ್ದಾರೆ.

ಗುರುವಾರ ಬೆಳಗ್ಗೆ ₹123.74 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ ಹಲವು ಯೋಜನೆಗಳನ್ನು ಅವರು ಉದ್ಘಾಟಿಸಲಿದ್ದು, ಹಲವು ಯೋಜನೆಗಳಿಗೆ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ. ಬಳಿಕ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಸುತ್ತೂರು ಶ್ರೀಗಳು, ಸಾಲೂರು ಮಠದ ಸ್ವಾಮೀಜಿ, ಡಿಸಿಎಂ ಗೋವಿಂದ ಕಾರಜೋಳ, ಮುಜರಾಯಿ ಸಚಿವ ಕೋಟಾ ಶ್ರೀನಿವಾಸಪೂಜಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ಭಾಗಿಯಾಗಲಿದ್ದಾರೆ.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.