ETV Bharat / state

ಚಾಮರಾಜನಗರ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ: ಆಡಳಿತಕ್ಕೆ ಚುರುಕು ಮುಟ್ಟಿಸಿದ ಸಿದ್ದರಾಮಯ್ಯ

author img

By ETV Bharat Karnataka Team

Published : Sep 27, 2023, 9:21 PM IST

Updated : Sep 27, 2023, 10:31 PM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಚಾಮರಾಜನಗರದ ಜಿಪಂ ಸಭಾಂಗಣದಲ್ಲಿ ಮೂರುವರೆ ತಾಸು ಜಿಲ್ಲೆಯ ಪ್ರಗತಿ ಪರಿಶೀಲನೆ ಸಭೆ ನಡೆಸಿದರು. ಈ ವೇಳೆ ಸಿಎಂ ಅವರು ಕೇಳಿದ ಹಲವಾರು ಪ್ರಶ್ನೆಗಳಿಗೆ ಅಧಿಕಾರಿಗಳು ಉತ್ತರಿಸಲು ತಡವರಿಸಿದರು.

CM Siddaramaiah attended the meeting in Chamarajanagar.
ಚಾಮರಾಜನಗರದಲ್ಲಿ ಪರಿಶೀಲನಾ ಸಭೆಯನ್ನು ಸಿಎಂ ಸಿದ್ದರಾಮಯ್ಯ ನಡೆಸಿದರು.
ಚಾಮರಾಜನಗರದಲ್ಲಿ ಪರಿಶೀಲನಾ ಸಭೆಯನ್ನು ಸಿಎಂ ಸಿದ್ದರಾಮಯ್ಯ ನಡೆಸಿದರು.

ಚಾಮರಾಜನಗರ: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಚಾಮರಾಜನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮೂರುವರೆ ತಾಸು ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದರು.

ಸಭೆಯ ಆರಂಭದಲ್ಲಿ ಗ್ಯಾರಂಟಿ ಯೋಜನೆಗಳನ್ನು ಪ್ರಸ್ತಾಪಿಸಿದ ಸಿಎಂ, ಅನ್ನಭಾಗ್ಯ ಯೋಜನೆಯಡಿ ಡಿಬಿಟಿ ಮೂಲಕ ಹಣ ಪಾವತಿ ಮಾಡಲು ಬ್ಯಾಂಕ್ ಖಾತೆಯ ಸಮಸ್ಯೆಯಿಂದ ಹಲವರಿಗೆ ತಲುಪಿಸಿಲ್ಲ ಎಂದು ಉತ್ತರ ಕೊಟ್ಟ ಅಧಿಕಾರಿ ಯೋಗಾನಂದಗೆ, ಮೂರು ತಿಂಗಳು ನಿಮಗೆ‌ ಬೇಕಾ ಎಂದು ಕ್ಲಾಸ್ ತೆಗೆದುಕೊಂಡು ಗದರಿದರು.

ಇನ್ನು, ಶಕ್ತಿ ಯೋಜನೆ ಆರಂಭಗೊಂಡ ಬಳಿಕ ಮಹಿಳಾ ಪ್ರಯಾಣಿಕರ ಸಂಖ್ಯೆ ಪಡೆದ ಮುಖ್ಯಮಂತ್ರಿ ಅವರು, ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸಬೇಕು, ಗ್ರಾಮೀಣ ಪ್ರದೇಶಗಳಿಗೆ ಸೂಕ್ತ ಸಮಯದಲ್ಲಿ ಬಸ್​ಗಳು ತೆರಳಬೇಕು ಎಂದು ಸೂಚಿಸಿದರು.‌ ಚಾಮರಾಜನಗರ ಜಿಲ್ಲೆಯ ಜನರ ಸರಾಸರಿ ವಿದ್ಯುತ್ ಬಳಕೆ ಮಾಹಿತಿ ಕೊಡಲು ತಡವರಿಸಿದ ಸೆಸ್ಕ್ ಅಧಿಕಾರಿಗೆ ಖಡಕ್​ ಸೂಚನೆಯನ್ನು ಸಿದ್ದರಾಮಯ್ಯ ನೀಡಿದ್ರು.

ಜೂನ್‌ನಿಂದ ಆಗಸ್ಟ್‌ವರೆಗೂ ಅಗತ್ಯವಾದಷ್ಟು ಮಳೆ ಆಗದ ಕಾರಣದಿಂದ ಬರದ ಮತ್ತು ಸಂಕಷ್ಟದ ಪರಿಸ್ಥಿತಿ ಇದೆ. 161 ತೀವ್ರ ಬರಗಾಲ, 34 ತಾಲೂಕುಗಳು ಸಾಧಾರಣ ಬರಗಾಲದ ಸ್ಥಿತಿ ಇದೆ. ಇದಕ್ಕೆ ಇನ್ನಷ್ಟು ತಾಲೂಕುಗಳು ಸೇರಬಹುದು, ಕುಡಿಯುವ ನೀರಿನ ಸಮಸ್ಯೆ ಆಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಬರ ಇದೆ ಆದರೆ ದುಡ್ಡಿಗೆ ಬರವಿಲ್ಲ, ಕುಡಿಯುವ ನೀರಿಗೆ ಕೊರತೆ ಆಗಬಾರದು. ಸಾರ್ವಜನಿಕರಿಂದ ದೂರುಗಳು ಬರಬಾರದು ಎಂದರು.

ಗುಳೆ ತಪ್ಪಿಸಲು ನರೇಗಾದಡಿ 150 ದಿನ ಉದ್ಯೋಗ ಒದಗಿಸಿ: ಕೆಲಸ ಹುಡುಕಿಕೊಂಡು ವಲಸೆ ಹೋಗುವ, ಗುಳೆ ತೆರಳುವ ಸ್ಥಿತಿ ಬಾರದಂತೆ, ನರೇಗಾ ಯೋಜನೆಯನ್ನು ಗರಿಷ್ಠ ಪ್ರಮಾಣದಲ್ಲಿ ಬಳಸಿಕೊಳ್ಳಬೇಕು. 150 ದಿನ ಕೆಲಸ ಕೊಡಬೇಕು. ಉದ್ಯೋಗ ಸೃಷ್ಟಿಯ ಇತರೆ ಸಾಧ್ಯತೆಗಳನ್ನು ಪರಿಣಾಮಕಾರಿಯಾಗಿ ಅಳವಡಿಸಿಕೊಳ್ಳಬೇಕು. ಅಧಿಕಾರಿಗಳ ನಡುವೆ ಸಮನ್ವಯ ಇರಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಮೇವು, ಕುಡಿಯುವ ನೀರು, ಉದ್ಯೋಗ ಸಮಸ್ಯೆ ನಿವಾರಣೆಗೆ ಎಲ್ಲವನ್ನೂ ಕಟ್ಟುನಿಟ್ಟಾಗಿ ಪಾಲಿಸಬೇಕು, ಅವುಗಳ ಬಗ್ಗೆ ಸಾರ್ವಜನಿಕರಿಂದ ಯಾವುದೇ ರೀತಿಯ ದೂರುಗಳು ಬಂದರೆ ಸಂಬಂಧಪಟ್ಟವರ ವಿರುದ್ಧ ಕ್ರಮ ಖಚಿತ ಎಂದು ಸಿಎಂ ಎಚ್ಚರಿಕೆ ನೀಡಿದರು.

ಒಟ್ಟಿನಲ್ಲಿ ಚಾಮರಾಜನಗರಕ್ಕೆ ಬಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದರು. ಸಭೆಯಲ್ಲಿ ಸಚಿವರುಗಳಾದ ಕೆ.ವೆಂಕಟೇಶ್, ಎಚ್‌.ಸಿ. ಮಹಾದೇವಪ್ಪ, ಶಾಸಕರು, ಉನ್ನತಾಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

ಇದನ್ನೂ ಓದಿ:ನಾಡು, ನುಡಿಗೆ ಧಕ್ಕೆಯಾದಾಗ ಹೇಗೆ ಹೋರಾಟ ಮಾಡಬೇಕು ಎನ್ನುವುದನ್ನು ತಮಿಳು ಭಾಷಿಕರನ್ನು ನೋಡಿ ಕಲಿಯಬೇಕು: ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು

ಚಾಮರಾಜನಗರದಲ್ಲಿ ಪರಿಶೀಲನಾ ಸಭೆಯನ್ನು ಸಿಎಂ ಸಿದ್ದರಾಮಯ್ಯ ನಡೆಸಿದರು.

ಚಾಮರಾಜನಗರ: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಚಾಮರಾಜನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮೂರುವರೆ ತಾಸು ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದರು.

ಸಭೆಯ ಆರಂಭದಲ್ಲಿ ಗ್ಯಾರಂಟಿ ಯೋಜನೆಗಳನ್ನು ಪ್ರಸ್ತಾಪಿಸಿದ ಸಿಎಂ, ಅನ್ನಭಾಗ್ಯ ಯೋಜನೆಯಡಿ ಡಿಬಿಟಿ ಮೂಲಕ ಹಣ ಪಾವತಿ ಮಾಡಲು ಬ್ಯಾಂಕ್ ಖಾತೆಯ ಸಮಸ್ಯೆಯಿಂದ ಹಲವರಿಗೆ ತಲುಪಿಸಿಲ್ಲ ಎಂದು ಉತ್ತರ ಕೊಟ್ಟ ಅಧಿಕಾರಿ ಯೋಗಾನಂದಗೆ, ಮೂರು ತಿಂಗಳು ನಿಮಗೆ‌ ಬೇಕಾ ಎಂದು ಕ್ಲಾಸ್ ತೆಗೆದುಕೊಂಡು ಗದರಿದರು.

ಇನ್ನು, ಶಕ್ತಿ ಯೋಜನೆ ಆರಂಭಗೊಂಡ ಬಳಿಕ ಮಹಿಳಾ ಪ್ರಯಾಣಿಕರ ಸಂಖ್ಯೆ ಪಡೆದ ಮುಖ್ಯಮಂತ್ರಿ ಅವರು, ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸಬೇಕು, ಗ್ರಾಮೀಣ ಪ್ರದೇಶಗಳಿಗೆ ಸೂಕ್ತ ಸಮಯದಲ್ಲಿ ಬಸ್​ಗಳು ತೆರಳಬೇಕು ಎಂದು ಸೂಚಿಸಿದರು.‌ ಚಾಮರಾಜನಗರ ಜಿಲ್ಲೆಯ ಜನರ ಸರಾಸರಿ ವಿದ್ಯುತ್ ಬಳಕೆ ಮಾಹಿತಿ ಕೊಡಲು ತಡವರಿಸಿದ ಸೆಸ್ಕ್ ಅಧಿಕಾರಿಗೆ ಖಡಕ್​ ಸೂಚನೆಯನ್ನು ಸಿದ್ದರಾಮಯ್ಯ ನೀಡಿದ್ರು.

ಜೂನ್‌ನಿಂದ ಆಗಸ್ಟ್‌ವರೆಗೂ ಅಗತ್ಯವಾದಷ್ಟು ಮಳೆ ಆಗದ ಕಾರಣದಿಂದ ಬರದ ಮತ್ತು ಸಂಕಷ್ಟದ ಪರಿಸ್ಥಿತಿ ಇದೆ. 161 ತೀವ್ರ ಬರಗಾಲ, 34 ತಾಲೂಕುಗಳು ಸಾಧಾರಣ ಬರಗಾಲದ ಸ್ಥಿತಿ ಇದೆ. ಇದಕ್ಕೆ ಇನ್ನಷ್ಟು ತಾಲೂಕುಗಳು ಸೇರಬಹುದು, ಕುಡಿಯುವ ನೀರಿನ ಸಮಸ್ಯೆ ಆಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಬರ ಇದೆ ಆದರೆ ದುಡ್ಡಿಗೆ ಬರವಿಲ್ಲ, ಕುಡಿಯುವ ನೀರಿಗೆ ಕೊರತೆ ಆಗಬಾರದು. ಸಾರ್ವಜನಿಕರಿಂದ ದೂರುಗಳು ಬರಬಾರದು ಎಂದರು.

ಗುಳೆ ತಪ್ಪಿಸಲು ನರೇಗಾದಡಿ 150 ದಿನ ಉದ್ಯೋಗ ಒದಗಿಸಿ: ಕೆಲಸ ಹುಡುಕಿಕೊಂಡು ವಲಸೆ ಹೋಗುವ, ಗುಳೆ ತೆರಳುವ ಸ್ಥಿತಿ ಬಾರದಂತೆ, ನರೇಗಾ ಯೋಜನೆಯನ್ನು ಗರಿಷ್ಠ ಪ್ರಮಾಣದಲ್ಲಿ ಬಳಸಿಕೊಳ್ಳಬೇಕು. 150 ದಿನ ಕೆಲಸ ಕೊಡಬೇಕು. ಉದ್ಯೋಗ ಸೃಷ್ಟಿಯ ಇತರೆ ಸಾಧ್ಯತೆಗಳನ್ನು ಪರಿಣಾಮಕಾರಿಯಾಗಿ ಅಳವಡಿಸಿಕೊಳ್ಳಬೇಕು. ಅಧಿಕಾರಿಗಳ ನಡುವೆ ಸಮನ್ವಯ ಇರಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಮೇವು, ಕುಡಿಯುವ ನೀರು, ಉದ್ಯೋಗ ಸಮಸ್ಯೆ ನಿವಾರಣೆಗೆ ಎಲ್ಲವನ್ನೂ ಕಟ್ಟುನಿಟ್ಟಾಗಿ ಪಾಲಿಸಬೇಕು, ಅವುಗಳ ಬಗ್ಗೆ ಸಾರ್ವಜನಿಕರಿಂದ ಯಾವುದೇ ರೀತಿಯ ದೂರುಗಳು ಬಂದರೆ ಸಂಬಂಧಪಟ್ಟವರ ವಿರುದ್ಧ ಕ್ರಮ ಖಚಿತ ಎಂದು ಸಿಎಂ ಎಚ್ಚರಿಕೆ ನೀಡಿದರು.

ಒಟ್ಟಿನಲ್ಲಿ ಚಾಮರಾಜನಗರಕ್ಕೆ ಬಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದರು. ಸಭೆಯಲ್ಲಿ ಸಚಿವರುಗಳಾದ ಕೆ.ವೆಂಕಟೇಶ್, ಎಚ್‌.ಸಿ. ಮಹಾದೇವಪ್ಪ, ಶಾಸಕರು, ಉನ್ನತಾಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

ಇದನ್ನೂ ಓದಿ:ನಾಡು, ನುಡಿಗೆ ಧಕ್ಕೆಯಾದಾಗ ಹೇಗೆ ಹೋರಾಟ ಮಾಡಬೇಕು ಎನ್ನುವುದನ್ನು ತಮಿಳು ಭಾಷಿಕರನ್ನು ನೋಡಿ ಕಲಿಯಬೇಕು: ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು

Last Updated : Sep 27, 2023, 10:31 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.