ETV Bharat / state

ಕಾಂಗ್ರೆಸ್ ಓಲೈಕೆ ರಾಜಕಾರಣದಿಂದ ಗಲಭೆ, ಭಯೋತ್ಪಾದನೆ : ಮುತಾಲಿಕ್ ಆರೋಪ

ಭಯೋತ್ಪಾದಕ ಮನಸ್ಥಿತಿ ವಿರುದ್ಧ ರಾಜ್ಯದ ಎಲ್ಲ ದೇವಾಲಯಗಳಲ್ಲಿ ಹಿಂದೂಯೇತರರಿಗೆ ವ್ಯಾಪಾರ ನಿರ್ಬಂಧ ಇರಬೇಕು ಎಂದು ಪ್ರಮೋದ್ ಮುತಾಲಿಕ್ ಒತ್ತಾಯಿಸಿದ್ದಾರೆ.

author img

By

Published : Nov 24, 2022, 3:34 PM IST

Updated : Nov 24, 2022, 8:11 PM IST

pramod muthalik
ಪ್ರಮೋದ್ ಮುತಾಲಿಕ್

ಚಾಮರಾಜನಗರ: ಕಾಂಗ್ರೆಸ್ ಪಕ್ಷದವರ ಓಲೈಕೆ ರಾಜಕಾರಣದಿಂದಾಗಿ ಗಲಭೆ, ಭಯೋತ್ಪಾದನೆಗಳಂಥ ದೇಶದ್ರೋಹಿ ಚಟುವಟಿಕೆ ಶುರುವಾಗಿವೆ ಎಂದು ಶ್ರೀರಾಮಸೇನೆ ರಾಷ್ಟೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದರು.

ಚಾಮರಾಜನಗರದಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಕಾಂಗ್ರೆಸ್ ಒಲೈಕೆ ರಾಜಕಾರಣದಿಂದ ಭಯೋತ್ಪಾದಕತೆ ಅಗಾಧವಾಗಿ ಬೆಳೆದಿದೆ. ಬೇಕಾದರೆ ದಾಖಲೆ ಸಮೇತ ಸಾಬೀತು ಪಡಿಸುವೆ. ದೇಶದ್ರೋಹಿ ಚಟುವಟಿಕೆಗೆ ಮೈಸೂರು ಪ್ರಯೋಗಶಾಲೆಯಾಗಿ ಬದಲಾಗಿದೆ. ಪಿಎಫ್ಐ ನಿಷೇಧವಿದ್ದರೂ, ಅದೇ ಮಾನಸಿಕ ಸ್ಥಿತಿಯಲ್ಲಿ ಸಾವಿರಾರು ಮಂದಿ ಇನ್ನೂ ಇದ್ದಾರೆ ಎಂದು ಕಿಡಿಕಾರಿದರು.

ಹಿಂದೂಯೇತರರಿಗೆ ವ್ಯಾಪಾರಕ್ಕೆ ಅನುಮತಿ ಬೇಡ : ಸುಬ್ರಹ್ಮಣ್ಯ ದೇವಾಲಯ ಆವರಣದಲ್ಲಿ ಹಿಂದೂಯೇತರರಿಗೆ ವ್ಯಾಪಾರಕ್ಕೆ ಅವಕಾಶ ಕೊಡದಿರುವ ನಿರ್ಧಾರ ಸ್ವಾಗತಾರ್ಹ. ಈ ದೇಶದಲ್ಲಿದ್ದು ಇಲ್ಲಿನ ಸವಲತ್ತು ಪಡೆದು ದೇಶದ್ರೋಹಿ ಚಟುವಟಿಕೆ ನಡೆಸುವ ಕಿಡಿಗೇಡಿಗಳು, ಭಯೋತ್ಪಾದಕರಿಂದಾಗಿ ಈ ನಿರ್ಬಂಧ ತರುವುದು ಸೂಕ್ತ ಎನ್ನುವುದನ್ನು ಮೌಲ್ವಿಗಳು, ಮುಲ್ಲಾಗಳು ಅರಿಯಬೇಕು‌. ಭಯೋತ್ಪಾದಕ ಮನಸ್ಥಿತಿ ವಿರುದ್ಧ ರಾಜ್ಯದ ಎಲ್ಲ ದೇವಾಲಯಗಳಲ್ಲಿ ಹಿಂದೂಯೇತರರಿಗೆ ವ್ಯಾಪಾರ, ಪ್ರವೇಶ ನಿರ್ಬಂಧಿಸಬೇಕು ಎಂದು ಒತ್ತಾಯಿಸಿದರು.

ಪ್ರಮೋದ್ ಮುತಾಲಿಕ್


ಪೊಲೀಸ​ರ ವೈಫಲ್ಯ: ಪೊಲೀಸ್ ಇಲಾಖೆ ವೈಫಲ್ಯದಿಂದ ಶಾರೀಕ್ ಅಂಥವರು ಬಾಂಬ್ ಹಾಕುತ್ತಿದ್ದಾರೆ. ಯೋಗಿ ಮಾದರಿ ರೀತಿ ಸರ್ಕಾರ ತರಲು ನಮ್ಮಲ್ಲಿ ತರಲೇಕೆ ಸಾಧ್ಯವಿಲ್ಲ. ಸಿದ್ದರಾಮಯ್ಯ ಹಿಂಪಡೆದ 200 ಕ್ಕೂ ಕೇಸ್ ಗಳನ್ನು ಸರ್ಕಾರ ಏಕೆ ಇನ್ನೂ ರೀ ಓಪನ್ ಮಾಡಿಲ್ಲ. ಚುನಾವಣೆ ಬೆನ್ನೆತ್ತಿ ರಾಜ್ಯದ ಸುರಕ್ಷತೆ ಬಗ್ಗೆ ನಿರ್ಲಕ್ಷ ತೋರಿದ್ದಾರೆ. ಶಾರೀಕ್ ಲಿಂಕ್ ಈಗ ತೀರ್ಥಹಳ್ಳಿಗೆ ಬಂದಿದೆ. ಬಿಜೆಪಿಯವರ ಈ ವರ್ತನೆ ಸರಿಯಲ್ಲ ಎಂದು ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದರು.


ಈ ಬಾರಿಯೂ ಚುನಾವಣೆಗೆ ರೆಡಿ: ಹಿಂದುತ್ವಕ್ಕಾಗಿ ಹಿಂದೂಗಳ ಕಷ್ಟ ಆಲಿಸಲು, ಹಿಂದುವಿನ ಧ್ವನಿಯನ್ನು ವಿಧಾನಸಭೆಯಲ್ಲಿ ಮೊಳಗಿಸಲು ಈ ಬಾರಿ ಚುನಾವಣೆಗೆ ನಿಲ್ಲುವ ನಿರ್ಧಾರ ಅಚಲವಾಗಿದೆ. 24 ಮಂದಿ ಪ್ರಖರ ಹಿಂದುತ್ವವಾದಿಗಳು ಚುನಾವಣೆಗೆ ನಿಲ್ಲಲ್ಲಿದ್ದು, ಸ್ವತಂತ್ರವಾಗಿ ಸ್ಪರ್ಧಿಸುತ್ತೇವೆ. ಡಿಸೆಂಬರ್ 2 ಇಲ್ಲವೇ 3 ನೇ ವಾರ ಕ್ಷೇತ್ರ ಘೋಷಿಸಲಾಗುವುದು ಎಂದು ಹೇಳಿದರು.

ಇದನ್ನೂಓದಿ:ರಾಜ್ಯ ಸರ್ಕಾರಿ ಗೋಶಾಲೆಗಳಿಂದ 31 ಗೋವುಗಳನ್ನು ದತ್ತು ಪಡೆಯಲಿರುವ ಕಿಚ್ಚ ಸುದೀಪ್

ಚಾಮರಾಜನಗರ: ಕಾಂಗ್ರೆಸ್ ಪಕ್ಷದವರ ಓಲೈಕೆ ರಾಜಕಾರಣದಿಂದಾಗಿ ಗಲಭೆ, ಭಯೋತ್ಪಾದನೆಗಳಂಥ ದೇಶದ್ರೋಹಿ ಚಟುವಟಿಕೆ ಶುರುವಾಗಿವೆ ಎಂದು ಶ್ರೀರಾಮಸೇನೆ ರಾಷ್ಟೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದರು.

ಚಾಮರಾಜನಗರದಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಕಾಂಗ್ರೆಸ್ ಒಲೈಕೆ ರಾಜಕಾರಣದಿಂದ ಭಯೋತ್ಪಾದಕತೆ ಅಗಾಧವಾಗಿ ಬೆಳೆದಿದೆ. ಬೇಕಾದರೆ ದಾಖಲೆ ಸಮೇತ ಸಾಬೀತು ಪಡಿಸುವೆ. ದೇಶದ್ರೋಹಿ ಚಟುವಟಿಕೆಗೆ ಮೈಸೂರು ಪ್ರಯೋಗಶಾಲೆಯಾಗಿ ಬದಲಾಗಿದೆ. ಪಿಎಫ್ಐ ನಿಷೇಧವಿದ್ದರೂ, ಅದೇ ಮಾನಸಿಕ ಸ್ಥಿತಿಯಲ್ಲಿ ಸಾವಿರಾರು ಮಂದಿ ಇನ್ನೂ ಇದ್ದಾರೆ ಎಂದು ಕಿಡಿಕಾರಿದರು.

ಹಿಂದೂಯೇತರರಿಗೆ ವ್ಯಾಪಾರಕ್ಕೆ ಅನುಮತಿ ಬೇಡ : ಸುಬ್ರಹ್ಮಣ್ಯ ದೇವಾಲಯ ಆವರಣದಲ್ಲಿ ಹಿಂದೂಯೇತರರಿಗೆ ವ್ಯಾಪಾರಕ್ಕೆ ಅವಕಾಶ ಕೊಡದಿರುವ ನಿರ್ಧಾರ ಸ್ವಾಗತಾರ್ಹ. ಈ ದೇಶದಲ್ಲಿದ್ದು ಇಲ್ಲಿನ ಸವಲತ್ತು ಪಡೆದು ದೇಶದ್ರೋಹಿ ಚಟುವಟಿಕೆ ನಡೆಸುವ ಕಿಡಿಗೇಡಿಗಳು, ಭಯೋತ್ಪಾದಕರಿಂದಾಗಿ ಈ ನಿರ್ಬಂಧ ತರುವುದು ಸೂಕ್ತ ಎನ್ನುವುದನ್ನು ಮೌಲ್ವಿಗಳು, ಮುಲ್ಲಾಗಳು ಅರಿಯಬೇಕು‌. ಭಯೋತ್ಪಾದಕ ಮನಸ್ಥಿತಿ ವಿರುದ್ಧ ರಾಜ್ಯದ ಎಲ್ಲ ದೇವಾಲಯಗಳಲ್ಲಿ ಹಿಂದೂಯೇತರರಿಗೆ ವ್ಯಾಪಾರ, ಪ್ರವೇಶ ನಿರ್ಬಂಧಿಸಬೇಕು ಎಂದು ಒತ್ತಾಯಿಸಿದರು.

ಪ್ರಮೋದ್ ಮುತಾಲಿಕ್


ಪೊಲೀಸ​ರ ವೈಫಲ್ಯ: ಪೊಲೀಸ್ ಇಲಾಖೆ ವೈಫಲ್ಯದಿಂದ ಶಾರೀಕ್ ಅಂಥವರು ಬಾಂಬ್ ಹಾಕುತ್ತಿದ್ದಾರೆ. ಯೋಗಿ ಮಾದರಿ ರೀತಿ ಸರ್ಕಾರ ತರಲು ನಮ್ಮಲ್ಲಿ ತರಲೇಕೆ ಸಾಧ್ಯವಿಲ್ಲ. ಸಿದ್ದರಾಮಯ್ಯ ಹಿಂಪಡೆದ 200 ಕ್ಕೂ ಕೇಸ್ ಗಳನ್ನು ಸರ್ಕಾರ ಏಕೆ ಇನ್ನೂ ರೀ ಓಪನ್ ಮಾಡಿಲ್ಲ. ಚುನಾವಣೆ ಬೆನ್ನೆತ್ತಿ ರಾಜ್ಯದ ಸುರಕ್ಷತೆ ಬಗ್ಗೆ ನಿರ್ಲಕ್ಷ ತೋರಿದ್ದಾರೆ. ಶಾರೀಕ್ ಲಿಂಕ್ ಈಗ ತೀರ್ಥಹಳ್ಳಿಗೆ ಬಂದಿದೆ. ಬಿಜೆಪಿಯವರ ಈ ವರ್ತನೆ ಸರಿಯಲ್ಲ ಎಂದು ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದರು.


ಈ ಬಾರಿಯೂ ಚುನಾವಣೆಗೆ ರೆಡಿ: ಹಿಂದುತ್ವಕ್ಕಾಗಿ ಹಿಂದೂಗಳ ಕಷ್ಟ ಆಲಿಸಲು, ಹಿಂದುವಿನ ಧ್ವನಿಯನ್ನು ವಿಧಾನಸಭೆಯಲ್ಲಿ ಮೊಳಗಿಸಲು ಈ ಬಾರಿ ಚುನಾವಣೆಗೆ ನಿಲ್ಲುವ ನಿರ್ಧಾರ ಅಚಲವಾಗಿದೆ. 24 ಮಂದಿ ಪ್ರಖರ ಹಿಂದುತ್ವವಾದಿಗಳು ಚುನಾವಣೆಗೆ ನಿಲ್ಲಲ್ಲಿದ್ದು, ಸ್ವತಂತ್ರವಾಗಿ ಸ್ಪರ್ಧಿಸುತ್ತೇವೆ. ಡಿಸೆಂಬರ್ 2 ಇಲ್ಲವೇ 3 ನೇ ವಾರ ಕ್ಷೇತ್ರ ಘೋಷಿಸಲಾಗುವುದು ಎಂದು ಹೇಳಿದರು.

ಇದನ್ನೂಓದಿ:ರಾಜ್ಯ ಸರ್ಕಾರಿ ಗೋಶಾಲೆಗಳಿಂದ 31 ಗೋವುಗಳನ್ನು ದತ್ತು ಪಡೆಯಲಿರುವ ಕಿಚ್ಚ ಸುದೀಪ್

Last Updated : Nov 24, 2022, 8:11 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.