ಚಾಮರಾಜನಗರ: ತಾಲೂಕಿನ ಮಾದಪುರದಲ್ಲಿರುವ ಕೇಂದ್ರಿಯ ವಿದ್ಯಾಲಯದ ಇಬ್ಬರು ಬೋಧಕೇತರ ಸಿಬ್ಬಂದಿಗೆ ಸೋಂಕು ತಗುಲಿದ್ದು, ಸದ್ಯ ಶಾಲೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಇಬ್ಬರು ಶಿಕ್ಷಕೇತರ ಸಿಬ್ಬಂದಿ ಹಾಗೂ ಅವರಿಬ್ಬರ ಸಂಪರ್ಕಿತರಿಗೆ ಇಂದು ಸೋಂಕು ದೃಢಪಟ್ಟಿದೆ. ವಿದ್ಯಾಲಯದಲ್ಲಿ 2021-22ನೇ ಸಾಲಿನ ಶೈಕ್ಷಣಿಕ ಶಾಲಾ ದಾಖಲಾತಿ ಆರಂಭವಾಗಿದ್ದು, ಮಕ್ಕಳನ್ನು ದಾಖಲಾತಿ ಮಾಡಲು ಬಂದ ಪೋಷಕರಲ್ಲೂ ಭೀತಿ ಆವರಿಸಿದೆ.
ಶಾಲೆಗೆ 10ನೇ ತರಗತಿ ವಿದ್ಯಾರ್ಥಿಗಳು ಮಾತ್ರ ಆಗಮಿಸುತ್ತಿದ್ದು, ಅವರ ಗಂಟಲು ದ್ರವ ಪರೀಕ್ಷೆ ನಡೆಸಲು ಆರೋಗ್ಯ ಇಲಾಖೆ ಮುಂದಾಗಿದೆ.
ಇದನ್ನೂ ಓದಿ: ರಾಜ್ಯದಲ್ಲಿ ಲಾಕ್ಡೌನ್ ಇಲ್ಲ; ಏ.18 ರಂದು ಸರ್ವಪಕ್ಷ ಸಭೆ ಬಳಿಕ ಮುಂದಿನ ನಿರ್ಧಾರ: ಸಿಎಂ